ಯುವವಾಹಿನಿ (ರಿ) ಮುಲ್ಕಿ ಘಟಕ

ಮಕ್ಕಳ ಆಂತರಿಕ ಪ್ರತಿಭೆ ಅನಾವರಣಗೊಳ್ಳಲಿ : ಯಶವಂತ ಪೂಜಾರಿ

ಮಕ್ಕಳಲ್ಲಿ ಕಲಿಕೆಯ ಜೊತೆಗೆ ಆವರಲ್ಲಿನ ಆಂತರಿಕ ಪ್ರತಿಭೆಗಳು ಅನಾವರಣಗೊಂಡಾಗ ಅವರು ಸಹ ಭವಿಷ್ಯದಲ್ಲಿ ಕಲಾವಿದರಾಗಿ ಅಥವ ಅಸಾಧಾರಣ ಪ್ರತಿಭೆಗಳಾಗಿ ಬೆಳಗಲು ಸಾಧ್ಯವಿದೆ. ಮಕ್ಕಳಲ್ಲಿ ಎಂದಿಗೂ ಅನಾಥ ಪ್ರಜ್ಞೆಯನ್ನು ಮೂಡಿಸಬೇಡಿ, ಅವರನ್ನು ಸಮಾಜದ ಆಸ್ತಿಯನ್ನಾಗಿ ಅವರನ್ನು ರೂಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿ, ಮೂಲ್ಕಿ ಯುವವಾಹಿನಿ ಘಟಕದ ಪ್ರತಿಯೊಂದು ಕಾರ್ಯಕ್ರಮವೂ ಸಹ ಮಾದರಿ ಕಾರ್ಯಕ್ರಮವಾಗಿರುತ್ತದೆ ಎಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ಹೇಳಿದರು.
ಮೂಲ್ಕಿ ಯುವವಾಹಿನಿ ಘಟಕದಿಂದ ಮೂಲ್ಕಿ ಸಿಎಸ್‌ಐ ಬಾಲಿಕಾಶ್ರಮದಲ್ಲಿ ದಿನಾಂಕ 01.11.2017 ರಂದು ನಡೆದ ಮಕ್ಕಳ ದಿನಾಚರಣೆಯ ವಿಶೇಷ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಮೂಲ್ಕಿ ಯುವವಾಹಿನಿ ಘಟಕದ ಆಧ್ಯಕ್ಷೆ ರಕ್ಷಿತಾ ಯೋಗೀಶ್ ಕೋಟ್ಯಾನ್ ಚಿತ್ರಾಪು ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು.  ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಮೂಲ್ಕಿ ಘಟಕದ ಸಲಹೆಗಾರರಾದ ಪರಮೇಶ್ವರ ಪೂಜಾರಿ ಮಾತನಾಡಿ, ಸುಪ್ತ ಪ್ರತಿಭೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶದಲ್ಲಿದ್ದಾರೆ. ಸಂಘ ಸಂಸ್ಥೆಗಳು ಅವರಲ್ಲಿರುವ ಕಲಾ ಕೌಶಲ್ಯವನ್ನು ಅರಿತು ಮುನ್ನಡೆಸಬೇಕು, ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರುರವರ ದೂರದೃಷ್ಟಿತ್ವದ ಚಿಂತನೆಯಿಂದ ಮಕ್ಕಳ ಬಗ್ಗೆ ಕಾಳಜಿ ನಮ್ಮಲ್ಲಿ ಹೆಚ್ಚಾಗಿದೆ ಎಂದರು. ಬಾಲಿಕಾಶ್ರಮದ ವಾರ್ಡನ್ ರೆ.ಶಶಿಕಲ ಅಂಚನ್ ಶುಭ ಹಾರೈಸಿದರು.
ವೇದಿಕೆಯಲ್ಲಿ ಮೂಲ್ಕಿ ಘಟಕದ ಸಹ ಕಾರ್ಯದರ್ಶಿ ದಿವಾಕರ ಕೋಟ್ಯಾನ್, ಕಾರ್ಯಕ್ರಮದ ನಿರ್ದೇಶಕರಾದ ವಾಣಿ ಮಧುಕರ್ ಸುವರ್ಣ, ರಾಹುಲ್ ಜಿ. ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು, ಮಾಜಿ ಅಧ್ಯಕ್ಷ ನರೇಂದ್ರ ಕೆರೆಕಾಡು ನಿರೂಪಿಸಿದರು.
ಈ ಸಂದರ್ಭದಲ್ಲಿ ಮಕ್ಕಳಿಗಾಗಿ ಘಟಕದ ಮಾಜಿ ಅಧ್ಯಕ್ಷರಾದ ಜಯಕುಮಾರ್ ಕುಬೆವೂರು ಅವರ ನೇತೃತ್ವದಲ್ಲಿ ಮಾಜಿ ಅಧ್ಯಕ್ಷರುಗಳಾದ ಚಂದ್ರಶೇಖರ ಸುವರ್ಣ, ಯೋಗೀಶ್ ಕೋಟ್ಯಾನ್, ರಾಮಚಂದ್ರ ಟಿ. ಕೋಟ್ಯಾನ್, ಪ್ರಕಾಶ್ ಸುವಣ€, ಚೇತನ್‌ಕುಮಾರ್, ಹಿರಿಯ ಸದಸ್ಯರಾದ ಮಧುಕರ ಸುವರ್ಣ, ಭಾಸ್ಕರ್, ರಮಾನಾಥ್, ಪ್ರವೀದ್ ಮತ್ತಿತರರ ಸಹಕಾರದಲ್ಲಿ ಮಕ್ಕಳಿಗೆ ವಿವಿಧ ಮನರಂಜನಾತ್ಮಕ ಕ್ರೀಡೆಗಳನ್ನು ಸಂಯೋಜಿಸಿ ಬಹುಮನವನ್ನು ವಿತರಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!