ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಪದಪ್ರದಾನ

ಯುವವಾಹಿನಿಯ ಸಾಧನೆ ಬಿಳಿ ಹಾಳೆಯಂತಿದೆ : ನಿರ್ಮಲಾ ಸಂಜೀವ್

ಮಂಗಳೂರು : ಪ್ರೀತಿ, ಅಕ್ಕರೆ ಹಾಗೂ ಕೌಟುಂಬಿಕ ಚೌಕಟ್ಟಿನ ಮೂಲಕ ಯುವವಾಹಿನಿ ಯುವಕರಿಗೆ ಪ್ರೇರಣೆ ನೀಡಿದೆ. 30 ವರ್ಷಗಳ ಇತಿಹಾಸವಿರುವ ಯುವವಾಹಿನಿಯ ಸಾಧನೆ ಯಾವುದೇ ಕಲ್ಮಶವಿಲ್ಲದೆ ಬಿಳಿ ಹಾಳೆಯಂತಿದೆ. ಯುವವಾಹಿನಿಯ ಆರಂಭದ ದಿನಗಳಿಂದಲೂ ತೀರಾ ಹತ್ತಿರದಿಂದ ಯುವವಾಹಿನಿಯನ್ನು ಕಂಡ ತನಗೆ ಯುವವಾಹಿನಿಯೇ ತನ್ನ ಮೊದಲ ಮಗು ಎಂದು ಗೋಕರ್ಣನಾಥ ಕೊ ಅಪರೇಟಿವ್ ಬ್ಯಾಂಕ್ ನ ಶಾಖಾ ಪ್ರಬಂಧಕರಾದ ನಿರ್ಮಲಾ ಸಂಜೀವ್ ತಿಳಿಸಿದರು.

ಅವರು ದಿನಾಂಕ 11.04.2018 ರಂದು ಮಂಗಳೂರು ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಪದಪ್ರದಾನ ಸಮಾರಂಭ ಉದ್ಗಾಟಿಸಿ ಮಾತನಾಡಿದರು.

ಯುವ ಪ್ರತಿಭೆಗಳಿಗೆ ಯುವವಾಹಿನಿ ವೇದಿಕೆ ನಿರ್ಮಿಸಿದೆ, ಮುಂದಿನ ಪೀಳಿಗೆಗೆ ಸಂಸ್ಕೃತಿ ಸಂಸ್ಕಾರ ತಿಳಿಸುವ ಮೂಲಕ ಸದೃಡ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಜತೆಯಾಗಿ ಸಾಗೋಣ ಈ ನಿಟ್ಟಿನಲ್ಲಿ ಯುವವಾಹಿನಿಯ ಕಾರ್ಯ ಶ್ಲಾಘನೀಯ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಪತ್ರಕರ್ತರು ಹಾಗೂ ರಂಗ ನಿರ್ದೇಶಕರಾದ ಪರಮಾನಂದ ಸಾಲ್ಯಾನ್ ತಿಳಿಸಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ರಶ್ಮಿ ಕರ್ಕೇರಾ ನೇತ್ರತ್ವದ ನೂತನ ತಂಡಕ್ಕೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ನಿರ್ಗಮನ‌ ಅಧ್ಯಕ್ಷರಾದ ಸುಪ್ರೀತಾ ಪೂಜಾರಿಯವರು ಕಳೆದ ಒಂದು ವರ್ಷದಲ್ಲಿ ಯಶಸ್ವೀ ಕಾರ್ಯಕ್ರಮ ನೀಡಲು ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಗೌರವ ಅಭಿನಂದನೆ :

ಮಂಗಳೂರು ವಿಶ್ವವಿದ್ಯಾಲಯ ನಡೆಸಿದ 2017ನೇ ಸಾಲಿನ ಪಿ.ಜಿ.ಡಿಪ್ಲೊಮಾ ಇನ್ ಯೋಗಿಕ್ ಸೈನ್ಸ್ ಪರೀಕ್ಷೆಯಲ್ಲಿ ಪ್ರಥಮ ರಾಂಕ್ ಗಳಿಸಿದ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಕ್ರಿಯಾಶೀಲ ಸದಸ್ಯೆಯಾದ ಉಮಾವತಿ ಅವರ ಸಾಧನೆಯನ್ನು ಗುರುತಿಸಿ ಅಭಿನಂದಿಸಲಾಯಿತು.

ಹಿರಿಯರ ಸಲಹೆ ಮಾರ್ಗದರ್ಶನ ಮಹಿಳಾ ಘಟಕದ ಸರ್ವರ ಸಹಕಾರದ ಮೂಲಕ ಸಂಘಟನೆಯನ್ನು ಯಶಸ್ವಿಯಾಗಿ ಮುನ್ನಡೆಸುವುದಾಗಿ  2018-19 ನೇ ಸಾಲಿನ‌ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ರಶ್ಮೀ ಸಿ.ಕರ್ಕೇರಾ ತಿಳಿಸಿದರು .
ಮಂಗಳೂರು ವಿಕಾಸ್ ಕಾಲೇಜಿನ‌ ಟ್ರಸ್ಟೀ ಸೂರಜ್  ಕಲ್ಯ ಹಾಗೂ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಜಿ.ಪರಮೇಶ್ವರ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು
ಕಾರ್ಯದರ್ಶಿ ಸುನಿತಾ 2017-18 ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಸುಪ್ರೀತಾ ಪೂಜಾರಿ ಸ್ವಾಗತಿಸಿದರು . ಮಾಜಿ ಅಧ್ಯಕ್ಷರಾದ ಪಾರ್ವತಿ ಪ್ರಸ್ತಾವನೆ ಮಾಡಿದರು, ನೂತನ ಕಾರ್ಯದರ್ಶಿ ರವಿಕಲಾ ವಂದಿಸಿದರು. ಯುವಸಿಂಚನ ಪತ್ರಿಕೆಯ ಸಂಪಾದಕರಾದ ಶುಭಾರಾಜೇಂದ್ರ ಕಾರ್ಯಕ್ರಮ ನಿರೂಪಿಸಿದರು

One thought on “ಯುವವಾಹಿನಿಯ ಸಾಧನೆ ಬಿಳಿ ಹಾಳೆಯಂತಿದೆ : ನಿರ್ಮಲಾ ಸಂಜೀವ್

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!