ಯುವವಾಹಿನಿ (ರಿ) ಕೂಳೂರು ಘಟಕ

ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾಗಿ ಪುಷ್ಪರಾಜ್

 

ನಾನು ನನ್ನದು,ನನ್ನಿಂದ ಎನ್ನುವ ಮಾತಿನಿಂದ ಸ್ವಲ್ಪ ಹೊರಗೆ ಬಂದು ನಾವು ನಮ್ಮದು, ನಮ್ಮೆಲ್ಲರ ಎನ್ನುವ ವಿಶಾಲ ಮನೋಭಾವ ಬೆಳೆಸಿಕೊಂಡರೆ ಆತ್ಮವಿಶ್ವಾಸ ಒಂದನ್ನುಳಿದು ಮಿಕ್ಕೆಲ್ಲವನ್ನೂ ಕಳೆದುಕೊಂಡರೂ ಚಿಂತೆ ಇಲ್ಲ ಎನ್ನುವ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಮುಂದಿಟ್ಟುಕೊಂಡು ಮುನ್ನಡೆದರೆ ನಾವು ಖಂಡಿತಾ ಯಶಸ್ವಿಯಾಗುತ್ತೇವೆ.ಗುರುಗಳ ತತ್ವದಡಿಯಲ್ಲಿ ಹಿರಿಯ ಸದಸ್ಯರ ಮಾರ್ಗದರ್ಶನ ಪಡೆದು ಯುವವಾಹಿನಿ ಕೂಳೂರು ಘಟಕದಿಂದ ಇನ್ನೂ ಉತ್ತಮ ಕಾರ್ಯಕ್ರಮ ನಡೆಸುವಲ್ಲಿ ಶ್ರಮವಹಿಸುತ್ತೇನೆ ಎಂದು ಯುವವಾಹಿನಿ (ರಿ) ಕೂಳೂರು ಘಟಕದ. 2017-18 ನೇ ಸಾಲಿನ ನೂತನ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಕೂಳೂರು ಅಭಿಪ್ರಾಯ ಪಟ್ಟರು.
ಅವರು ದಿನಾಂಕ 25.06.2017 ನೇ ಆದಿತ್ಯವಾರ ಕೂಳೂರು ಚರ್ಚ್ ಹಾಲ್ ನಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕದ 2017-18 ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು

ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸುಜಿತ್’ರಾಜ್’ಇವರಿಗೆ ಅಭಿನಂದನೆ

ಗುರುಹಿರಿಯರ ಆಶೀರ್ವಾದ ,ಸಮಾಜಬಾಂಧವರ ಸಹಕಾರ, ಮಾತಿನಲ್ಲಿ ಹೇಳಿದನ್ನು ತಲೆಯಲ್ಲಿ ಹೊತ್ತುಕೊಂಡು ದುಡಿಯುವ ಯುವವಾಹಿನಿ ಕೂಳೂರು ಘಟಕದ ಸದಸ್ಯರ ಶ್ರಮ ಇವೇ ನಮ್ಮ ಸಾಧನೆಯ ಹಿಂದಿರುವ ಶಕ್ತಿ ಎಂದು ಯುವವಾಹಿನಿ ಕೂಳೂರು ಘಟಕದ ಸ್ಥಾಪಕ ಅಧ್ಯಕ್ಷರಾದ ಸುಜಿತ್ ರಾಜ್ ತಿಳಿಸಿದರು

ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಗೌರವಾಧ್ಯಕ್ಷರಾದ ರಾಘವೇಂದ್ರ ಕೂಳೂರು, ಅಧ್ಯಕ್ಷರಾದ ಜಯಾನಂದ ಅಮೀನ್ ಪುನ್ಕೆಮಾರ್,ಕಾರ್ಯದರ್ಶಿ ಸದಾಶಿವ ಬಿ.ಸುವರ್ಣ, ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕರಾದ ಡಾ.ಗಣೇಶ್ ಅಮೀನ್ ಸಂಕಮಾರ್,ರಾಜ್ಯ ಬಿ.ಜೆ.ಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಶ್ರೀಮತಿ ಗೀತಾಂಜಲಿ ಸುವರ್ಣ , ಸಂಕಮಾರ್,ಪಂಜಿಮೊಗರು ಉರುಂದಾಡಿ ಗೋಪಾಲಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾದ ಗಿರಿಧರ್ ಸನಿಲ್, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಅಧ್ಯಕ್ಷರಾದ ಸಂಜೀವ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಮಂಗಳೂರು ತಾಲೂಕುಬಲ ಸಂಘಟನಾ ಕಾರ್ಯದರ್ಶಿ ಹರೀಶ್ ಕೆ.ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು..

             ಯುವವಾಹಿನಿ (ರಿ) ಕೂಳೂರು ಘಟಕದ 2017-18 ನೇ ಸಾಲಿನ ಪದಾಧಿಕಾರಿಗಳು

2017-18 ನೇ ಸಾಲಿನ ಪದಾಧಿಕಾರಿಗಳು

ಅಧ್ಯಕ್ಷರು : ಪುಷ್ಪರಾಜ್ ಕುಮಾರ್
ಉಪಾಧ್ಯಕ್ಷರು : ಲೋಕೇಶ್ ಕೋಟ್ಯಾನ್
ಕಾರ್ಯದರ್ಶಿ : ವಿನೀತ್ ಪೂಜಾರಿ
ಕೋಶಾಧಿಕಾರಿ : ದೀಕ್ಷಿತ್ ಸಿ.ಎಸ್.ಪೂಜಾರಿ
ಸಂಘಟನಾ ಕಾರ್ಯದರ್ಶಿ : ಭಾಸ್ಕರ್ ಕೊಟ್ಯಾನ್

ನಿರ್ದೇಶಕರು
ವ್ಯಕ್ತಿತ್ವ ವಿಕಸನ :  ಪವಿತ್ರಾ ಅಂಚನ್
ಕ್ರೀಡೆ ಮತ್ತು ಸಮಾಜ ಸೇವೆ :  ಪವಿತ್ರಾ ಕೆ.ಸುವರ್ಣ
ಸಾಂಸ್ಕೃತಿಕ ಮತ್ತು ಸಾಹಿತ್ಯ : ಶಿವಪ್ರಸಾದ್
ಆರೋಗ್ಯ :  ಪವಿತ್ರಾ ಯು.ಅಮೀನ್
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ :  ರೇಣುಕಾ ಕೂಳೂರು
ವಾರ್ತಾ ಮತ್ತು ಪ್ರಚಾರ : ಅಕ್ಷಿತ್ ಸಿ.ಎಸ್.ಪೂಜಾರಿ
ಕುಟುಂಬ ಸಂಪರ್ಕ :  ರೋಹಿಣಿ ಜಗದೀಶ್ ಸನಿಲ್
ನಾರಾಯಣಗುರು ತತ್ವ ಪ್ರಚಾರ : ಲತೀಶ್ ಪೂಜಾರಿ
ಮಹಿಳಾ ಸಂಘಟನೆ :  ತುಳಸಿ ಸುಜೀರ್
ವಿದ್ಯಾನಿಧಿ : ಲೋಕೇಶ್ ಪೂಜಾರಿ
ವಿದ್ಯಾರ್ಥಿ ಸಂಘಟನೆ : ನಿಶಿತ್

ವರದಿ : ವಿನೀತ್ ಪೂಜಾರಿ ಕಾರ್ಯದರ್ಶಿ,ಯುವವಾಹಿನಿ (ರಿ) ಕೂಳೂರು ಘಟಕ

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!