ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ

ಉಪ್ಪಿನಂಗಡಿ ಯುವವಾಹಿನಿ : ಪದಗ್ರಹಣ 2016-17

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕಿಗೊಂದು ಅರ್ಥ ಬರಲು ಸಾಧ್ಯ ಮತ್ತು ನಾವು ಸಮುದಾಯ ಅಭಿವೃದ್ಧಿಯ ಜತೆಗೆ ಸಮಾಜದ ಅಭಿವೃದ್ಧಿಯ ಕಡೆಗೂ ದೃಷ್ಟ ಹಾಯಿಸಬೇಕು ಎಂದು ಪುತ್ತೂರು ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಜಯಂತ ನಡುಬೈಲು ತಿಳಿಸಿದರು.

ಉಪ್ಪಿನಂಗಡಿ ಸ.ಮಾ.ಹಿ.ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಜರಗಿದ ಉಪ್ಪಿನಂಗಡಿ ಯುವವಾಹಿನಿಯ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಹಾಗೂ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಅಸಮಾನ ಸಾಮಾಜಿಕ ವ್ಯವಸ್ಥೆಯ ಕಾಲಘಟ್ಟದಲ್ಲಿ ಸಮಾನ ನಾಗರಿಕ ತತ್ವವನ್ನು ಪ್ರತಿಪಾದಿಸಿ ಸರ್ವರಿಗೂ ಮಾದರಿ ಸಂದೇಶ ನೀಡುವ ಮೂಲಕ ಬ್ರಹ್ಮಶ್ರೀ ನಾರಾಯಣಗುರು ಸಾಮಾಜಿಕ ಪರಿವರ್ತನೆಗೆ ಕಾರಣರಾಗಿದ್ದಾರೆ. ಸಮುದಾಯದವರು ಅವರ ತತ್ವ ಚಿಂತನೆಗಳನ್ನು ಅಳವಡಿಸಿಕೊಂಡು ಸ್ವಾಭಿಮಾನದ ಬದುಕಿನ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಯುವವಾಹಿನಿ ಕೇಂದ್ರ ಸಮಿತಿ ಅದ್ಯಕ್ಷ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಉಪನ್ಯಾಸಕ ನವೀನ್ ಕುಮಾರ್ ಮರಿಕೆ ದಿಕ್ಸೂಚಿ ಭಾಷಣ ಮಾಡಿ ಬಿಲ್ಲವ ಸಂಘಟನೆಗಳು ಹತ್ತು ಹಲವು ಸಮಾಜಮುಖಿ ಕಾರ್ಯಗಳೊಂದಿಗೆ ವ್ಯವಸ್ಥಿತವಾಗಿ ಮುನ್ನಡೆದು ಸಮಾಜಕ್ಕೆ ಮಾದರಿಯಾಗಿ ಕಲೆ ಸಂಸ್ಕೃತಿಯ ಉಳವಿಗಾಗಿ ಕೊಡುಗೆ ನೀಡಿದೆ ಎಂದರು

2016-17 ನೇ ಸಾಲಿನ ನೂತನ ಅಧ್ಯಕ್ಷರಾಗಿದ್ದ ಅಶೋಕ್ ಕುಮಾರ್ ಪಾಲೇರಿ, ಕಾರ್ಯದರ್ಶಿಯಾಗಿ ಮನೋಜ್ ಎನ್. ಸಾಲ್ಯಾನ್ ಸುಣ್ಣಾಜೆ,ಜತೆ ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ದಡ್ಡು, ಕೋಶಾಧಿಕಾರಿಯಾಗಿ ಅನಿಲ್ ಕುಮಾರ್ ದಡ್ಡು ಮತ್ತಿತರರು ಪ್ರಮಾಣ ವಚನ ಸ್ವೀಕರಿಸಿದರು

ನಿಕಟಪೂರ್ವ ಅದ್ಯಕ್ಷ ನವೀನ್ ಪಡ್ಪು ಸ್ವಾಗತಿಸಿದರು, ಮಾಜಿ ಅದ್ಯಕ್ಷ ಲೋಕೇಶ್ ಬೆತ್ತೋಡಿ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ಮನೋಜ್ ಎನ್. ಸಾಲ್ಯಾನ್ ಸುಣ್ಣಾಜೆ ಧನ್ಯವಾದ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!