ಯುವಜನರ ಗುರು ಮತ್ತು ಗುರಿ ನಾರಾಯಣಗುರು : ನಾರಾಯಣಗುರು ವಿಚಾರ ಕಮ್ಮಟ (ನಾವಿಕ)

ಯುವ ಜನತೆಗೆ ನಾರಾಯಣಗುರುಗಳ ಚಿಂತನೆ ಪ್ರೇರಣೆಯಾಗಲಿ : ಮಟ್ಟು

ದೇಶವನ್ನು ಕಾಡುತ್ತಿರುವ ನಿರುದ್ಯೋಗ, ಬಡತನ, ಕಂದಾಚಾರ, ಮೂಢನಂಬಿಕೆ, ಹಾಗೂ ದುಂದುವೆಚ್ಚದ ಸಮಾರಂಭ ಮುಂತಾದ ಸಮಸ್ಯೆಗಳಿಂದ ಮುಕ್ತವಾದ ಸಮಾಜವೊಂದರ ನಿರ್ಮಾಣದ ಗುರುತರ ಹೊಣೆಗಾರಿಕೆ ಯುವ ಸಮುದಾಯದ ಮೇಲಿದ್ದು ಈ ಕಾರ್ಯಕ್ಕೆ ಶ್ರೀ ನಾರಾಯಣಗುರುಗಳ ಚಿಂತನೆಗಳನ್ನು ಪ್ರೇರಣೆಯಾಗಿ ಸ್ವೀಕರಿಸಿಕೊಂಡು ಕಾರ್ಯೋನ್ಮುಖರಾಗಬೇಕು ಎಂದು ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ಅವರು ಹೇಳಿದರು
ನಾರಾಯಣಗುರು ವಿಚಾರ ಕಮ್ಮಟ (ನಾವಿಕ) ಮಂಗಳೂರು ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜನ್ಮದಿನಾಚರಣೆ ಅಂಗವಾಗಿ ಯುವಜನರ ಗುರು ಮತ್ತು ಗುರಿ – ನಾರಾಯಣಗುರು ವಿಷಯದ ಕುರಿತು ಮಂಗಳೂರು ಸಂತ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ದಿನಾಂಕ 24.09.2017 ರಂದು ಆಯೋಜಿಸಿದ್ದ ದ.ಕ.ಜಿಲ್ಲಾ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಕೇರಳ ರಾಜ್ಯ ಇಂದು ಸಾಕ್ಷರತೆ ,ಉದ್ಯೋಗಶೀಲತೆ ಹಾಗೂ ಅಭಿವೃದ್ಧಿಯಲ್ಲಿ ಸಾಧಿಸಿದ ಪ್ರಗತಿಯ ಹಿಂದೆ ಶ್ರೀ ನಾರಾಯಣಗುರುಗಳು ಹುಟ್ಟು ಹಾಕಿರುವ ಸಾಮಾಜಿಕ ಚಳುವಳಿಯ ಕೊಡುಗೆ ಬಹಳ ಮಹತ್ವದ್ದಾಗಿದೆ ಎಂದವರು ಹೇಳಿದರು.
ಚಿತ್ರ ನಿರ್ಮಾಪಕ ಡಾ.ರಾಜಶೇಖರ್ ಕೋಟ್ಯಾನ್ ಅವರು ಮಾತನಾಡಿ ಬ್ರಹ್ಮಶ್ರೀ ನಾರಾಯಣಗುರುಗಳ ಚಿಂತನೆ ಸಂದೇಶಗಳಿಗೆ ಬದ್ದರಾಗಿ ನಡೆದಾಗ ಎಂದೂ ಸೋಲು ಕಾಣಲು ಸಾದ್ಯವಿಲ್ಲ ಎಂದರು.
ಕೆಎಂಸಿ ಪ್ರಾಧ್ಯಾಪಕ ಪ್ರೊ.ಎಂ.ಎಸ್.ಕೋಟ್ಯಾನ್ ಅವರು ವಿಚಾರ ಮಂಡನೆ ಮಾಡಿದರು. ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕ ಡಾ.ಗಣೇಶ್ ಅಮೀನ್ ಸಂಕಮಾರ್ ಹಾಗೂ ಮಂಗಳೂರು ವಿ.ವಿ.ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಪ್ರತಿಕ್ರಿಯಿಸಿದರು. ನಾವಿಕದ ಗೌರವಾಧ್ಯಕ್ಷರಾದ ಯಶವಂತ ಮರೋಳಿ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು, ಎಚ್.ರತೀಂದ್ರನಾಥ್, ರವಿ ಪೂಜಾರಿ ಚಿಲಿಂಬಿ ಉಪಸ್ಥಿತರಿದ್ದರು.

ಪೂಜಾರಿ ರಾಜಕೀಯ ತೊರೆದು ಸಮಾಜ ಸುಧಾರಣೆ ಮಾಡಲಿ:
ಶ್ರೀ ನಾರಾಯಣಗುರುಗಳ ಚಿಂತನೆ ಸಂದೇಶದ ಅಡಿಯಲ್ಲಿ ಸಾಮಾಜಿಕ ಸುಧಾರಣೆ ಕಾರ್ಯದ ನೇತ್ರತ್ವವನ್ನು ಜನಾರ್ದನ ಪೂಜಾರಿ ಅವರು ವಹಿಸಿಕೊಳ್ಳಬೇಕು ಅವರಿಗೆ ನಾನು ಸದಾ ಅತ್ಯಂತ ಗೌರವ ಕೊಡುತ್ತೇನೆ. ಕೆಲವು ಬಾರಿ ವಿರುದ್ದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಅಭಿಪ್ರಾಯ ಬೇಧಗಳಿದ್ದರೆ ಅದನ್ನು ವ್ಯಕ್ತಪಡಿಸುವುದು ಮೊದಲಿನಿಂದಲೂ ನಾನು ಅನುಸರಿಸಿಕೊಂಡು ಬಂದಿರುವ ಧೋರಣೆ , ಪೂಜಾರಿ ಅವರು ರಾಜಕೀಯದಿಂದ ವಿಮುಖರಾಗಿ ಸಮಾಜ ಸುಧಾರಣೆಯತ್ತ ಗಮನ ಹರಿಸಬೇಕು, ಈ ಕಾರ್ಯಕ್ಕೆ ಎಲ್ಲಾ ಯುವಜನತೆ ಅವರೊಂದಿಗೆ ಕೈ ಜೋಡಿಸಬೇಕು. ನಾನು ಕೂಡ ಅವರಿಗೆ ಜತೆ ನೀಡಲು ಸಿದ್ದ ಎಂದು ದಿನೇಶ್ ಅಮೀನ್ ಮಟ್ಟು ಹೇಳಿದರು
ಸಲಹೆಗಾರರಾದ ದೀಪಕ್ ಕೋಟ್ಯಾನ್ ಸ್ವಾಗತಿಸಿದರು, ಸುನೀಲ್ ಕುಮಾರ್ ಬಜಾಲ್ ಪ್ರಸ್ತಾವನೆಗೈದರು, ರಾಜೇಂದ್ರ ಚಿಲಿಂಬಿ ವಂದಿಸಿದರು, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು

One thought on “ಯುವ ಜನತೆಗೆ ನಾರಾಯಣಗುರುಗಳ ಚಿಂತನೆ ಪ್ರೇರಣೆಯಾಗಲಿ : ಮಟ್ಟು

Leave a Reply to Brijesh Kumar Cancel reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!