ಯುವವಾಹಿನಿ (ರಿ) ಮೂಡಬಿದಿರೆ‌ ಘಟಕ

ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆಯನ್ನು ಶ್ರೀಮತಿ ಲಲಿತಾ ಹಾಗೂ ಓಬಯ್ಯ ಪೂಜಾರಿ ದಂಪತಿಗಳ ಬಡಕುಟುಂಬವೊಂದು ತನ್ನ 4 ಮಕ್ಕಳೊಂದಿಗೆ ಬೆಳ್ತಂಗಡಿ ತಾಲೂಕಿನ ಪೆರಿಂಜೆಯಲ್ಲಿ ವಾಸವಾಗಿದ್ದು ಹಿಂದಿನಿಂದಲೂ ಕೂಲಿ ಕೆಲಸ ಹಾಗೂ ಬೀಡಿ ಕಟ್ಟುತ್ತಾ ತುಂಬಾ ಕಷ್ಟಕರ ಜೀವನವನ್ನು ನಡೆಸುತ್ತಾ ತನ್ನ ಮಕ್ಕಳಿಗೆ ತಮಗೇ ಸಾಧ್ಯವಿದ್ದಷ್ಟು ವಿದ್ಯಾಭ್ಯಾಸ ಕೊಟ್ಟು ಹಿರಿಮಗಳಿಗೆ ಸಾಲ ಸೋಲ ಮಾಡಿ ಮದುವೆ ಮಾಡಿ ವರ್ಷ ಒಂದು ಆಗುವಷ್ಟರಲ್ಲಿ ಸಾಕಿ ಸಲಹಿದ ಕುಟುಂಬದ ಯಜಮಾನ ಓಬಯ್ಯ ಪೂಜಾರಿ ಅಪಘಾತ ಒಂದರಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾರೆ.ಮುಂದೆ ಮಕ್ಕಳನ್ನು ಸಾಕಿ ಬೆಳೆಸುವ ಜವಾಬ್ದಾರಿ ತಾಯಿಯ ಮೇಲೆ ಬಿದ್ದಾಗ ಒಬ್ಬಾಕೆಯ ಸಂಪಾದನೆಯಲ್ಲಿ ಕುಟುಂಬದ ನಿರ್ವಹಣೆ ಕಷ್ಟವಾಗಿ ಮಕ್ಕಳ ವಿದ್ಯಾಭ್ಯಾಸವನ್ನು ಮೊಟಕು ಗೊಳಿಸಿ ಬೀಡಿ ಕಟ್ಟುತ್ತಾ ಜೀವನ ನಡೆಸುತ್ತಿದ್ದರು. ಎರಡನೇ ಮಗಳು ಸುಚಿತ್ರ ಳನ್ನು ಮತ್ತೆ ಅದೇ ಸಾಲದ ಸುಳಿಯಲ್ಲಿದ್ದುಕೊಂಡು ಬೆಳ್ತಂಗಡಿಯ ಸಂತೋಷ್ ಪೂಜಾರಿ ಎಂಬ ಯುವಕನಿಗೆ ಮಗಳನ್ನು ಮದುವೆ ಮಾಡಿಸಿ ಕೊಡುತ್ತಾರೆ. ಮದುವೆಯಾಗಿ ತಿಂಗಳು 10 ಕಳೆದಿದೆ. ತಮ್ಮ ದಾಂಪತ್ಯ ಜೀವನದ ಫಲವಾಗಿ ಹೊಟ್ಟೆಯಲ್ಲಿ 6 ತಿಂಗಳ ಕೂಸೊಂದು ಬೆಳೆಯುವಸ್ಟರಲ್ಲಿ ಹೆಣ್ಣು ಮಗಳು ಸುಚಿತ್ರ ವಿಧಿಯ ವಕ್ರದೃಷ್ಠಿಗೆ ಬೀಳುತ್ತಾಳೆ.ಮೆದುಳು ಸಂಬಂಧಿತ ಮಾರಕ ಕಾಯಿಲೆ ಒಂದು ಆಕೆಯನ್ನು ಆವರಿಸಿ ಹಾಸಿಗೆ ಹಿಡಿದಿದ್ದಾಳೆ.ಮಂಗಳೂರಿನ A J ಆಸ್ಪತ್ರೆಯಲ್ಲಿ ಕೋಮಾವಸ್ಥೆಯಲ್ಲಿ ಸುಮಾರು ದಿನಗಳು ಕಳೆದು ಹೋಗಿದೆ.ತೀರಾ ಬಡತನದಿಂದಿರುವ ಈ ಕುಟುಂಬಕ್ಕೆ ಅಷ್ಟೊಂದು ದೊಡ್ಡ ಮೊತ್ತದ ಹಣವನ್ನು ಹೊಂದಿಸಿಕೊಳ್ಳಲಾಗದೆ *ಇವರು ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು. ಆದ್ದರಿಂದ ಇವರ ಕುಟುಂಬಕ್ಕೆ ರೂ.5000/- ಚೆಕ್ ನ್ನು 5.9.2019 ರಂದು ಹಸ್ತಾಂತರಿಸಿದರು ಈ ಸಂದರ್ಭದಲ್ಲಿ ಯುವವಾಹಿನಿ ರಿ. ಮೂಡಬಿದಿರೆ‌ ಘಟಕ ಅಧ್ಯಕ್ಷರಾದ ಜಗದೀಶ್ಚಂದ್ರ ಡಿ ಕೆ, ಉಪಾಧ್ಯಕ್ಷರಾದ ಹರಿಪ್ರಸಾದ್ ಪಿ ಹೊಸಂಗಡಿ, ಘಟಕದ ಸಲಹೆಗಾರರಾದ ಸುಶಾಂತ್ ಕರ್ಕೆರ ಸದಸ್ಯರಾದ ಭರತ್  ಕರ್ಕೇರ ಮತ್ತು ಪೆರಿಂಜೆ ಫ್ರೆಂಡ್ಸ್ ಕ್ಲಬ್ ನ  ಅಧ್ಯಕ್ಷರಾದ ಸಚ್ಚಿದಾನಂದ  ಇವರಗಳು ಉಪಸ್ಥಿತರಿದ್ದರು ಇವರುಗಳಿಗೆ ಯುವ ಸ್ಪಂದನ ಸೇವಾ ಯೋಜನೆಯ ಸರ್ವ ಸದಸ್ಯರ ಪರವಾಗಿ ಧನ್ಯವಾದಗಳು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!