ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ರಾಷ್ಟೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ನಿರ್ಮಾಣಕ್ಕೆ ಕಲಿಕೆಯ ಸಮಯದಲ್ಲಿ ಬುನಾದಿ ಹಾಕುವುದು ಸೂಕ್ತ : ಸುರೇಶ್ ಎಂ.ಎಸ್

ಕೊಲ್ಯ : ವಿದ್ಯಾರ್ಥಿಗಳು ಮುಂದಿನ ಭವಿಷ್ಯದ ನಿರ್ಮಾಣಕ್ಕೆ ಕಲಿಕೆಯ ಸಮಯದಲ್ಲೆ ಬುನಾದಿ ಹಾಕುವುದು ಸೂಕ್ತ ,ಐ.ಎ.ಎಸ್ ,ಐ.ಪಿ.ಎಸ್ ನಂತಹ ಪರೀಕ್ಷೆಗಳಿಗೆ ಇಂದಿನಿಂದಲೇ ಕಠಿಣ ಪರಿಶ್ರಮ ಪಟ್ಟು ಓದಿ ಅಭ್ಯಾಸ ಮಾಡಿಕೊಂಡು ಸರಕಾರಿ ಅಧಿಕಾರಿಯಾಗಿ ಮುಂದಿನ ಜೀವನವನ್ನು ಸಂತೋಷದಿಂದ ಕಳೆಯಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿಯಾಗಿ ಸರ್ವಜ್ಞ ಐ.ಎ.ಎಸ್.ಅಕಾಡೆಮಿ ಇದರ ನಿರ್ದೇಶಕರು, ಯುವವಾಹಿನಿ (ರಿ) ಕಂಕನಾಡಿ ಘಟಕದ ಉಪಾಧ್ಯಕ್ಷರಾಗಿರುವ ಸುರೇಶ್ ಎಂ.ಎಸ್ ರವರು ಮಾತನಾಡಿ ತಿಳಿಸಿದರು.

ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟೀಯ ಸೇವಾ ಯೋಜನೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇದರ ರಾಷ್ಟೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗಾಗಿ ” ಶೈಕ್ಷಣಿಕ ವೃತ್ತಿ ಮಾರ್ಗದರ್ಶನ “ಕಾರ್ಯಗಾರವು ದಿನಾಂಕ 28/12/2018 ನೇ ಶುಕ್ರವಾರದಂದು ಶ್ರೀ ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುರ್ನಾಡುವಿನಲ್ಲಿ ಜರಗಿತು.
ವಿದ್ಯಾರ್ಥಿ ದೆಸೆಯಲ್ಲೆ ಸೂಕ್ತ ವೃತ್ತಿಯ ಬಗ್ಗೆ ಆಯ್ಕೆ ಮಾಡಿ ಅದರ ಬಗ್ಗೆ ದೃಡ ವಿಶ್ವಾಸವಿದ್ದಲ್ಲಿ ಖಂಡಿತ ಯಶಸ್ಸು ಸಾಧ್ಯ ಎಂದು ಜೆ.ಕೆ ಎ ಪ್ರಿಂಟರ್ಸ್ನ ಮಾಲಕರು, ಯುವವಾಹಿನಿ (ರಿ) ಕೊಲ್ಯ ಘಟಕದ ಸದಸ್ಯರು ಆಗಿರುವ ಅಜಿತ್ ಪೂಜಾರಿ ಪಜೀರು ರವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಯುವವಾಹಿನಿಯು ಸುಮಾರು 33 ಘಟಕಗಳು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಉದ್ಯೋಗ ನಿರ್ಮಾಣದ ಕುರಿತು ಎಲ್ಲಾ ರೀತಿಯ ಮಾರ್ಗದರ್ಶನ ಸಲಹೆ, ಸೂಚನೆಗಳನ್ನು, ಸಹಕಾರವನ್ನು ನೀಡಿತ್ತದೆ. ಈ ರೀತಿಯ ಕಾರ್ಯಕ್ರಮ ಆಯೋಜಿಸಲು ತುಂಬ ಸಂತೋಷವಾಗುತ್ತದೆ, ವಿದ್ಯಾರ್ಥಿಗಳು ಈ “ಶೈಕ್ಷಣಿಕ ವೃತ್ತಿ ಮಾರ್ಗದರ್ಶನ” ಕಾರ್ಯಗಾರದ ಪ್ರಯೋಜನವನ್ನು ಪಡೆದು ಉನ್ನತ ಸರಕಾರಿ ಉದ್ಯೋಗಗಳನ್ನು ಅಲಂಕರಿಸಬೇಕೆಂದು ಎಂದು ಯುವವಾಹಿನಿ (ರಿ) ಕೊಲ್ಯ ಘಟಕದ ಅಧ್ಯಕ್ಷರಾದ ಕುಸುಮಾಕರ್ ಕುಂಪಲರವರು ಶುಭ ಹಾರೈಸಿದರು.
ವಿದ್ಯಾರ್ಥಿಗಳು ತಮ್ಮ ವಿಧ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು, ರಾಷ್ಟೀಯ ಸೇವಾ ಯೋಜನೆಯ ಮೂಲಕ ನಿಮ್ಮ ಭವಿಷ್ಯವು ಉಜ್ವಲವಾಗಲಿ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇದರ ಕಾಲೇಜು ಅಭಿವೃದ್ದಿ ಸಮಿತಿಯ ಸದಸ್ಯರು ನಿವೃತ್ತ ಹಿರಿಯ ಶಿಕ್ಷಕರಾಗಿರುವ ಕೆ.ಟಿ ಆಳ್ವ ರವರು ಶುಭಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ವಿಶೇಷ ಉಪನ್ಯಾಸಕಾರರಾಗಿ ಸುರೇಶ್ ಎಂ.ಎಸ್ ರವರು ಸುಮಾರು 1ಗಂಟೆಗಳ ಕಾಲ “ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ” ಕುರಿತು ರಾಷ್ಟೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಯುವವಾಹಿನಿ (ರಿ) ಕೊಲ್ಯ ಘಟಕದ ಪ್ರಧಾನ ಕಾರ್ಯದರ್ಶಿ ಲತೀಶ್ ಪಾಪುದಡಿ ಮಾಡೂರು, ಕೋಶಾಧಿಕಾರಿ ರಘುರಾಮ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಶಶಿಕಾಂತ್ ಪರ್ಯತ್ತೂರು, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾ ಅಧಿಕಾರಿ ಶೋಭಾಮಣಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇದರ ಪ್ರಾಧ್ಯಾಪಕರು ಹಾಗೂ ಶಿಬಿರಾಧಿಕಾರಿಗಳಾದ ಮೀನಾಕ್ಷಿ ಆಚಾರ್ಯ ಮತ್ತು ಪ್ರದೀಪ್ ಬಂಗೇರ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿ ವಿದ್ಯಾರ್ಥಿನಿ ಅಕ್ಷಿತಾ ಸ್ವಾಗತಿಸಿದರು, ವಿದ್ಯಾರ್ಥಿ ಯಕ್ಷಿತ್ ಕುಮಾರ್ ಪ್ರಾರ್ಥನೆಗೈದರು, ಯಶಸ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು, ಭವ್ಯಶ್ರೀ ರವರು ಧನ್ಯವಾದ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!