ಯುವವಾಹಿನಿ (ರಿ) ಸುಳ್ಯ ಘಟಕ

ಸುಳ್ಯ ಯುವವಾಹಿನಿ ಅಸ್ತಿತ್ವಕ್ಕೆ

ಯುವವಾಹಿನಿಯು ಕೇವಲ ಸಾಮಾಜಿಕ ಸಂಘಟನೆಯಲ್ಲ ಪ್ರೀತಿ,ವಿಶ್ವಾಸ, ಮಾನವೀಯತೆಯನ್ನು ಪರಸ್ಪರ ಬೆಸೆಯುವ ಸಂಸ್ಥೆ, ಯುವವಾಹಿನಿಯು ನಾಯಕತ್ವ, ವ್ಯಕ್ತಿತ್ವವನ್ನು ಪರಿಣಾಮಕಾರಿಯಾಗಿ
ರೂಪಿಸಿ ಬಿಲ್ಲವ ಸಮಾಜದಲ್ಲಿ ಆದರ್ಶ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅದ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು

ದಿನಾಂಕ 30.04.2017 ಆದಿತ್ಯವಾರ  ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಸುಳ್ಯ ಘಟಕದ
ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಗಿ ಭಾಗವಹಿಸಿ ಮಾತನಾಡಿದರು

ಸುಳ್ಯ ತಾಲೂಕು ಬ್ರಹ್ಮಶ್ರೀ ಗುರುನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ ಬಿ.ಶೀನ ಪೂಜಾರಿಯವರು ಯುವವಾಹಿನಿಯ 25ನೇ ಘಟಕ ಯುವವಾಹಿನಿ (ರಿ) ಸುಳ್ಯ ಘಟಕವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.

ತತ್ವ,ನಿಷ್ಠೆ, ಪ್ರೀತಿ,ವಿಶ್ವಾಸ ಇದ್ದಾಗ ಮಾತ್ರ ಸಂಘಟನೆ ಬೆಳೆಯಲು ಸಾಧ್ಯ ಎಂದು ಸಮಾರಂಭದ ಅದ್ಯಕ್ಷತೆ ವಹಿಸಿದ್ದ
ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷರಾದ ಪದ್ಮನಾಭ ಮರೋಳಿ
ಅಭಿಪ್ರಾಯ ಪಟ್ಟರು.ಮತ್ತು ಪದಪ್ರದಾನ ನೆರವೇರಿಸಿದರು

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅಚ್ಚುತ ಪೂಜಾರಿ.ಕೆ, ಸುಳ್ಯ ಬಿಲ್ಲವ ಮಹಿಳಾ ಘಟಕದ ಅದ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸುಳ್ಯ ತಾಲೂಕು ಸಂಘಟನಾ ಕಾರ್ಯದರ್ಶಿ ಮಹೇಶ್ಚಂದ್ರ ಬಿ.ಟಿ. ಸುಳ್ಯ ಯುವವಾಹಿನಿಯ 2017-18 ನೇ ಸಾಲಿನ ಪದಾದಿಕಾರಿಗಳ ಆಯ್ಕೆ ಪ್ರಕಟಿಸಿದರು.

ಶಿವಪ್ರಸಾದ್.ಕೆ.ವಿ. ನೇತ್ರತ್ವದ ತಂಡವು ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಗುರು ಹಿರಿಯರ ಸಲಹೆ ಸಹರಾರದೊಂದಿಗೆ ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವುದಾಗಿ ನೂತನ ಅದ್ಯಕ್ಷ ಶಿವಪ್ರಸಾದ್ ತಿಳಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಎಪಿಎಂಸಿ ಗೆ  ನಿರ್ದೇಶಕರಾಗಿ ಆಯ್ಕೆಗೊಂಡ ಸುಳ್ಯ ಯುವವಾಹಿನಿಯ ನೂತನ ಉಪಾಧ್ಯಕ್ಷ ನವೀನ್ ಕುಮಾರ್ ಸಾರಕೆರೆ ಇವರನ್ನು ಅಭಿನಂದಿಸಲಾಯಿತು.

ಯುವವಾಹಿನಿ ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ, ಕಂಕನಾಡಿ, ಪಣಂಬೂರು,ಕೂಳೂರು, ಮಂಗಳೂರು ಘಟಕಗಳ ಪದಾದಿಕಾರಿಗಳು ಶುಭ ಹಾರೈಕೆ ಮಾಡಿದರು

ಯುವವಾಹಿನಿ ಕೇಂದ್ರ ಸಮಿತಿಯ ಜತೆ ಕಾರ್ಯದರ್ಶಿ ಶಶಿಧರ ಕಿನ್ನಿಮಜಲು ಪ್ರಸ್ತಾವಿತ ಮಾತನಾಡಿದರು .
ಸುಳ್ಯ ತಾಲೂಕು ಬಿಲ್ಲವ ಸಂಘದ ಕಾರ್ಯದರ್ಶಿ ಸೋಮನಾಥ ಪೂಜಾರಿ ಸ್ವಾಗತಿಸಿದರು. ಯುವವಾಹಿನಿಯ ನೂತನ ಕಾರ್ಯದರ್ಶಿ ರವೀಂದ್ರ ಎಚ್ ವಂದಿಸಿದರು
ಚಂದ್ರಶೇಖರ ಎಚ್,ಶಶಿಧರ ಕಿನ್ನಿಮಜಲು ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!