ಸಂವೇದನೆ - ಮಹಿಳಾ ಸ್ವಾವಲಂಬನೆಯ ಸವಾಲುಗಳು

ಸ್ತ್ರೀ.. ಸಹನೆ, ತಾಳ್ಮೆ, ಸಂಯಮದ ರಾಯಭಾರಿ: ಕುಸುಮಾ ಅಜಯ್

ಮಂಗಳೂರು: ಸ್ತ್ರೀ.. ಸಹನೆ, ತಾಳ್ಮೆ, ಸಂಯಮದಿಂದ ಜೀವನದುದ್ದಕ್ಕೂ ಅದೆಷ್ಟೋ ಪಾತ್ರ ನಿರ್ವಹಿಸುವ ಯಶಸ್ವಿ ರಾಯಭಾರಿ. ಹೆಣ್ಣು ಅಗತ್ಯವಾಗಿ ಸ್ವಾವಲಂಬಿ.. ಶಿಕ್ಷಿತ.. ಉದ್ಯೋಗಸ್ಥ.. ಸಬಲೆ.. ಸಂಘಟಿತಳಾಗಿ ಸಂಸಾರದಲ್ಲಿ, ಸಮಾಜದಲ್ಲಿ ನಾನಾ ರೀತಿಯ ಸಂಬಂಧ ನಿಭಾಯಿಸಿಕೊಂಡು.. ಹೇಗೆ.. ಏಕೆ.. ಹೊಂದಾಣಿಕೆಯಿಂದ ಸಂಸಾರದ ಗುಟ್ಟು ಕಾಪಾಡಬೇಕು. ಪುರುಷ ಸಮಾಜವ ಜರಿಯದೆ.. ಅವರೊಟ್ಟಿಗೆ ಹೇಗೆ ಒಗ್ಗೂಡಬೇಕು.. ಪ್ರಸ್ತುತ ಸಮಾಜಕ್ಕೆ ಇದರ.. ಅಗತ್ಯತೆ ಏನು? ಕೂಡು ಕುಟುಂಬ, ಅವಿಭಕ್ತ ಕುಟುಂಬ ಎರಡಕ್ಕೂ ಸಮಾನತೆಯ ಅಗತ್ಯವಿದೆ.. ಮಹಿಳೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಬಗ್ಗೆಲ್ಲ ಒತ್ತು ಕೊಟ್ಟು ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬ ಮಹಿಳೆಯರಿಗೂ ಜೀವವಿಮೆ, ಆರೋಗ್ಯ ವಿಮೆ ಮಾಡಿಸುವ ಬಗ್ಗೆ ಜಾಗೃತಿ ಮೂಡಿಸಿದರು. ಹಾಗೇ ಕ್ರಿಯಾತ್ಮಕ, ಧನಾತ್ಮಕ ವಿಚಾರಧಾರೆ ಮೂಡಿಸುವ ಮುಖಾಂತರ ಮುಕ್ತ ಸಂವಾದದ ಮೂಲಕ ಮಹಿಳಾಮಣಿಯರನ್ನು ಮನರಂಜಿಸಿ ಸಂವೇದನೆ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಜೆ. ಪಿ ನಾರಾಯಣಸ್ವಾಮಿ ಪ್ರತಿಷ್ಠಾನ, ಬೆಂಗಳೂರಿನ ಕೋಶಾಧಿಕಾರಿ ಕುಸುಮ ಅಜಯ್ ಪ್ರೇರಣಾತ್ಮಕವಾಗಿ ಮನಸೂರೆಗೊಳ್ಳುವಂತೆ ನಡೆಸಿಕೊಟ್ಟರು.

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಸಂವೇದನೆ ಮಾಹಿತಿ ಕಾರ್ಯಾಗಾರ ದಿನಾಂಕ 17-03-2024 ರಂದು ರವಿವಾರ ಶ್ರೀಮತಿ ಚೆನ್ನಮ್ಮ ಜಾರಪ್ಪ ಮೆಮೋರಿಯಲ್ ಹಾಲ್, ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರಿನಲ್ಲಿ ಜರುಗಿತು.

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ ಸಮಾರಂಭದ ಉದ್ಘಾಟಕರಾಗಿ ಶ್ರೀ ಗೋಕರ್ಣನಾಥೇಶ್ವರ ಕಾಲೇಜು, ಮಂಗಳೂರು, ಆಡಳಿತ ಮಂಡಳಿ ಅಧ್ಯಕ್ಷರಾದ ವಸಂತ ಕಾರಂದೂರು ದೀಪ ಪ್ರಜ್ವಲನೆಗೈದು ಶುಭ ಹಾರೈಸಿದರು.

ಅಧ್ಯಕ್ಷರು, ಯುವವಾಹಿನಿ(ರಿ.) ಕಂಕನಾಡಿ ಘಟಕ ಲೋಕೇಶ್ ಅಮೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರು ಹರೀಶ್ ಕೆ. ಪೂಜಾರಿ, ಡಾ. ಸುಚಿತ್ರ ಸೊರಕೆ, ಪ್ರೊಫೆಸರ್ ಆಫ್ ಪ್ಯಾಥೊಲೊಜಿ ಮಂಗಳೂರು, ಜಯಾನಂದ. ಎಂ. ವಿಭಾಗೀಯ ಸಂಚಾಲಕರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಜೆ.ಪಿ ನಾರಾಯಣಸ್ವಾಮಿ ಪ್ರತಿಷ್ಠಾನ(ರಿ.) ಬೆಂಗಳೂರು, ಸಂಪನ್ಮೂಲ ವ್ಯಕ್ತಿಯಾಗಿ ಪೋಷಕರು ಜೆ.ಪಿ ನಾರಾಯಣ ಸ್ವಾಮಿ ಪ್ರತಿಷ್ಠಾನ(ರಿ.) ಬೆಂಗಳೂರು ಕೋಶಾಧಿಕಾರಿ ಕುಸುಮ ಅಜಯ್, ಜೆ.ಪಿ.ಎನ್ ಪ್ರತಿಷ್ಠಾನ ತುಮಕೂರು ಜಿಲ್ಲಾ ಮಹಿಳಾ ಘಟಕದ ಸಂಚಾಲಕಿ ಪ್ರಭಾ ವಸಂತ್, ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಮಹಿಳಾ ಸಂಘಟನಾ ನಿರ್ದೇಶಕಿ ನಯನಾ ಸುರೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳಾ ಸ್ವಾವಲಂಬನೆಯ ಸವಾಲುಗಳು ಮಾಹಿತಿ ಕಾರ್ಯಾಗಾರ ಸಮಾರೋಪ ಸಮಾರಂಭದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಹರೀಶ್ ಕೆ. ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶೈಲೇಂದ್ರ ವೈ. ಸುವರ್ಣ, ಆಡಳಿತ ನಿರ್ದೇಶಕರು ಎಸ್.ಆರ್.ಮಸಾಲಾ(ಪ್ರೈ.) ಲಿಮಿಟೆಡ್ ಮಂಗಳೂರು ಹಾಗೂ ಗೌರವಾಧ್ಯಕ್ಷರು ಜೆ.ಪಿ ನಾರಾಯಣ ಪ್ರತಿಷ್ಠಾನ(ರಿ.) ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಮಂಗಳೂರು ಅಧ್ಯಕ್ಷರು ಚಂಚಲ ತೇಜೋಮಯ, ಯುವವಾಹಿನಿ(ರಿ.) ಕಂಕನಾಡಿ ಅಧ್ಯಕ್ಷರು ಲೋಕೇಶ್ ಅಮೀನ್, ಮಹಿಳಾ ಸಂಘಟನಾ ನಿರ್ದೇಶಕಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ನಯನ ಸುರೇಶ್, ಕಾರ್ಯದರ್ಶಿ ಯುವವಾಹಿನಿ(ರಿ.) ಕಂಕನಾಡಿ ಘಟಕ ಮಮತಾ ತೇಜ್ ಪಾಲ್ ಉಪಸ್ಥಿತರಿದ್ದರು.

ಸನ್ಮಾನ ಸಮಾರಂಭ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆದರ್ಶ ವ್ಯಕ್ತಿತ್ವದಿ ಸಾಧನೆಗೈದ ಮೂವರು ಗುರುಶಿಷ್ಯ – ಶಿಕ್ಷಕಿ ಸಾಧಕರನ್ನು ಸನ್ಮಾನಿಸಲಾಯಿತು. ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲೆ ಡಾ. ಆಶಾಲತಾ, ಜನಮೆಚ್ಚಿದ ಶಿಕ್ಷಕಿ ರಮಣಿ ಉಮೇಶ್, ದೈಹಿಕ ಶಿಕ್ಷಕಿ – ಯೋಗ ಗುರು ಜಯಶ್ರೀರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ನಯನ ಸುರೇಶ್ ಕಾರ್ಯಕ್ರಮದ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಪ್ರಜ್ಞಾ ಓಡಿಲ್ನಾಳ ನಿರೂಪಿಸಿದರು. ಜಗದೀಶ್ಚಂದ್ರ ಚಂದ್ರ ಡಿ.ಕೆ ಧನ್ಯವಾದ ಸಮರ್ಪಣೆಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!