ಯುವವಾಹಿನಿ (ರಿ) ಹೆಜಮಾಡಿ ಘಟಕ

2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ

ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 11-08-2024 ನೇ ಆದಿತ್ಯವಾರ ಹೆಜಮಾಡಿ ಬಿಲ್ಲವರ ಸಂಘದ ರತ್ನಾಶಂಕರ್ ಸಭಾಗೃಹದಲ್ಲಿ ಜರಗಿತು. ಪ್ರಥಮವಾಗಿ ಅತಿಥಿ ಗಣ್ಯರೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಪೂಜೆಯನ್ನು ಸಲ್ಲಿಸಿ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ದೀಪಕ್ ವಿ ಕೋಟ್ಯಾನ್ ವಹಿಸಿದ್ದರು. ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಲು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ
ಶ್ರೀ ಹರೀಶ್ ಕೆ ಪೂಜಾರಿ ಉಧ್ಘಾಟಕರಾಗಿ ಶ್ರೀ ಮೋಹನ್ ದಾಸ್ ಹೆಜಮಾಡಿ ಅಧ್ಯಕ್ಷರು ಬಿಲ್ಲವರ ಸಂಘ (ರಿ) ಹೆಜಮಾಡಿ , ಮುಖ್ಯ ಅತಿಥಿಗಳಾಗಿ ಡಾ| ಶೇಷಪ್ಪ ಅಮೀನ್ ಸಹಪ್ರಾಧ್ಯಾಪಕರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು, ಶ್ರೀ ವಿವೇಕ್ ಬಿ ಕೋಟ್ಯಾನ್ ಸುರತ್ಕ್ ಲ್, ಸಂಘಟನಾ ಕಾರ್ಯದರ್ಶಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಉಪಸ್ಥಿತರಿದ್ದರು.

ಘಟಕದ ಮಹಿಳಾ ಸದಸ್ಯರ ಮಕ್ಕಳು ಪ್ರಾರ್ಥನೆ ಗೈದರು. ಅಧ್ಯಕ್ಷರಾದ ದೀಪಕ್ ವಿ ಕೋಟ್ಯಾನ್ ಗಣ್ಯರನ್ನು ಸ್ವಾಗತಿಸಿದರು. ಹೆಜಮಾಡಿ ಘಟಕದ ಮಾಜಿ ಅಧ್ಯಕ್ಷರಾದ ಪ್ರಭೋದ್ ಚಂದ್ರ ಹೆಜಮಾಡಿ ಪ್ರಸ್ತಾವನೆಗೈದರು. ಹೆಜಮಾಡಿ ಘಟಕದ ಪ್ರಧಾನ ಕಾರ್ಯದರ್ಶಿ ಕುಮಾರಿ ನಾಗವೇಣಿ ವಾರ್ಷಿಕ ವರದಿಯನ್ನು ಮಂಡಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ನೂತನ ತಂಡಕ್ಕೆ ಶುಭ ಹಾರೈಸಿದರು. ಯುವವಾಹಿನಿಯ ಧ್ಯೇಯೋದ್ದೇಶವಾದ ವಿಧ್ಯೆ, ಉದ್ಯೋಗ, ಸಂಪರ್ಕದ ನೆಲೆಯಲ್ಲಿ ಹೆಜಮಾಡಿ ಗ್ರಾಮದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಹೆಜಮಾಡಿ ಗ್ರಾಮದ ಕೀರ್ತಿಯನ್ನು ಎಲ್ಲೆಡೆ ಪಸರಿಸಿದ ಡಾ|| ಹರ್ಷಿತ ಎನ್ ಅಂಚನ್ ಇವರನ್ನು ಸನ್ಮಾನಿಸಲಾಯಿತು. ಹೆಜಮಾಡಿ ಬಿಲ್ಲವರ ಸಂಘದ ಸತತ 6 ವರ್ಷದ ಅಧ್ಯಕ್ಷತೆಯ ಅಧಿಕಾರವನ್ನು ಚುಕ್ಕಾಣಿಯಲ್ಲಿ ಹಿಡಿದು ಇಂದು ಮಾಜಿ ಅಧ್ಯಕ್ಷರ ಸಾಲಿಗೆ ಸೇರಿದ ಹಾಗೂ ಹೆಜಮಾಡಿ ಯುವವಾಹಿನಿಯ ಮಾಜಿ ಅಧ್ಯಕ್ಷರು ಅಜೀವ ಸದಸ್ಯರೂ ಆದ ಶ್ರೀ ಲೋಕೇಶ್ ಅಮೀನ್ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಹೆಜಮಾಡಿ ಬಿಲ್ಲವರ ಸಂಘದ ನೂತನ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಹೆಜಮಾಡಿ ಗ್ರಾಮದ ಅಂಗನವಾಡಿ ಶಾಲೆಗೆ ಫ್ಯಾನ್ ಕೊಡಗೆಯಾಗಿ ನೀಡಲಾಯಿತು.

ಘಟಕದ ಎಲ್ಲಾ ಕಾರ್ಯಕ್ರಮಗಳಿಗೆ ಸ್ಪಂದಿಸುವ ಹಾಗೂ ಸ್ಥಳಾವಕಾಶವನ್ನು ಒದಗಿಸುವ ಹೆಜಮಾಡಿ ಬಿಲ್ಲವರ ಸಂಘಕ್ಕೆ ನಾಮ ಫಲಕವನ್ನು ಕೊಡುಗೆಯಾಗಿ ನೀಡಲಾಯಿತು.

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ. ಪೂಜಾರಿಯವರು ದೀಪಕ್ ವಿ ಕೋಟ್ಯಾನ್ ತಂಡಕ್ಕೆ ಅಭಿನಂದನೆ ಸಲ್ಲಿಸಿ, 2024 -25 ಸಾಲಿನ ದೀಪಾ ದಿನೇಶ್ ತಂಡಕ್ಕೆ ಶುಭವನ್ನು ಹಾರೈಸಿ, ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.

ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪರಿಚಯವನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಚುನಾವಣಾ ಅಧಿಕಾರಿಯಾದ ಶ್ರೀ ಧನಂಜಯ ಪೂಜಾರಿಯವರು ಮಾಡಿದರು.

ಯುವವಾಹಿನಿ (ರಿ) ಕೇಂದ್ರ ಸಮಿತಿಯ ವತಿಯಿಂದ ಆಗಸ್ಟ್ 24 ರಂದು ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಬಿಡುಗಡೆಗೊಳ್ಳಲಿರುವ ಅರವಿಂದಪುರದಿಂದ ಓಂಕಾರೇಶ್ವರದ ವರೆಗೆ ಗ್ರಂಥ ಬಿಡುಗಡೆಯ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

2023-24ನೇ ಸಾಲಿನ ಅಧ್ಯಕ್ಷರಾದ ದೀಪಕ್ ವಿ ಕೋಟ್ಯಾನ್ ರವರನ್ನು ಈ ಸಮಯದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಶ್ರೀ ದೀರಜ್ ಹೆಜಮಾಡಿ ಕೋಡಿ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ಪ್ರಥಮೇಶ್ ವಂದಿಸಿದರು. ಕಾರ್ಯಕ್ರದಲ್ಲಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ಸ್ಥಳೀಯ ಘಟಕದ ಸದಸ್ಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!