06-03-2026, 9:00 PM
ಸುರತ್ಕಲ್: ಸಸಿಹಿತ್ಲುವಿನ ಪವಿತ್ರ ಕ್ಷೇತ್ರವಾದ ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪುಣ್ಯ ಸಂದರ್ಭದಲ್ಲಿ, ಯುವವಾಹಿನಿ (ರಿ.) ಸುರತ್ಕಲ್ ಘಟಕದ ಸದಸ್ಯರು ದಿನಾಂಕ 06-03-2026 ರಂದು ಸಕ್ರಿಯವಾಗಿ ಸ್ವಯಂಸೇವಕರಾಗಿ ಪಾಲ್ಗೊಂಡು ಭಕ್ತಿಪೂರ್ವಕ ಸೇವೆ ಸಲ್ಲಿಸಿದರು.
Read More
01-03-2026, 8:00 PM
ಸುರತ್ಕಲ್: ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಕುಟುಂಬ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ “ಸ್ನೇಹ ಸಮ್ಮಿಲನ–2026” ಕಾರ್ಯಕ್ರಮವನ್ನು ದಿನಾಂಕ 01-03-2026 ರಂದು ಸದಾಶಿವನಗರ 1ನೇ ಅಡ್ಡರಸ್ತೆ, ಸುರತ್ಕಲ್ನಲ್ಲಿರುವ ಘಟಕದ ಸದಸ್ಯೆಯಾದ ನೇಹಾ ಅವರ ಮನೆಯಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ರೇವತಿ ನವೀನ್, ಮೊದಲ ಉಪಾಧ್ಯಕ್ಷರಾದ ಸುಲತಾ ಪೂಜಾರಿ ಹಾಗೂ ಕಾರ್ಯದರ್ಶಿ ಸನೀಶ್ ಎಸ್. ಅಂಚನ್ ಉಪಸ್ಥಿತರಿದ್ದರು. ಅಧ್ಯಕ್ಷರಾದ ರೇವತಿ ನವೀನ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಸದಸ್ಯರು ಹಾಗೂ ಅವರ ಕುಟುಂಬಸ್ಥರನ್ನು ಸ್ವಾಗತಿಸಿದರು.ಕಾರ್ಯಕ್ರಮದ ಸಂಚಾಲಕರಾದ ಸ್ವಾತಿ […]
Read More
27-02-2026, 11:25 AM
ಸುರತ್ಕಲ್: ಸತ್ಯಧರ್ಮದ ತವರೂರು, ದೇಯಿ ಬೈದ್ಯೆತಿ ಹಾಗೂ ಕೋಟಿ-ಚೆನ್ನಯರ ಮೂಲಸ್ಥಾನವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದಿನಾಂಕ 27-02-2026ರಂದು ನಡೆದ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಸುರತ್ಕಲ್ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು. ಈ ಪುಣ್ಯ ಸಂದರ್ಭದಲ್ಲಿ ಸುರತ್ಕಲ್ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಘಟಕದ ಸದಸ್ಯರು ಒಟ್ಟಾಗಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೈವ-ದೇವರುಗಳ ದರ್ಶನ ಪಡೆದರು. ಕ್ಷೇತ್ರದ ವತಿಯಿಂದ ನೀಡಲಾದ ಬ್ರಹ್ಮ ಬೈದರುಗಳ ಗಂಧ ಪ್ರಸಾದವನ್ನು ಸ್ವೀಕರಿಸಿ ಧನ್ಯತೆ ಮೆರೆದರು. ವಾರ್ಷಿಕ ಜಾತ್ರೆಯ […]
Read More
18-01-2026, 1:00 PM
ಸುರತ್ಕಲ್ : ಯುವವಾಹಿನಿ ಸಂಸ್ಥೆಯು ಸ್ಥಾನಮಾನ, ಹಣಬಲ ಅಥವಾ ಹಿನ್ನಲೆ ನೋಡದೆ ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಯಲ್ಲೂ ಅಡಗಿರುವ ನಾಯಕತ್ವದ ಶಕ್ತಿಯನ್ನು ಗುರುತಿಸಿ ಅದನ್ನು ಸಮಾಜಮುಖಿಯಾಗಿ ಅರಳಿಸುವ ಮಹತ್ತಾದ ಸಂಕಲ್ಪವನ್ನು ಹೊಂದಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಹೇಳಿದರು. ಸಂಸ್ಥೆಯು ಸದಸ್ಯರಲ್ಲಿ ಆತ್ಮವಿಶ್ವಾಸ, ಸೇವಾಭಾವ ಮತ್ತು ಜವಾಬ್ದಾರಿಯ ಅರಿವು ಮೂಡಿಸುವ ಮೂಲಕ ಅವರನ್ನು ಉತ್ತಮ ನಾಯಕರೆಂದು ರೂಪಿಸುತ್ತದೆ. ಸಮಾಜದ ಅಭಿವೃದ್ಧಿಗೆ ಸಾಮಾನ್ಯ ವ್ಯಕ್ತಿಯ ಪಾತ್ರವೇ ಅತ್ಯಂತ ಪ್ರಮುಖವಾಗಿದ್ದು, ಅಂಥ ವ್ಯಕ್ತಿಗಳಿಗೆ ಅವಕಾಶ ನೀಡುವುದು […]
Read More
18-01-2026, 1:00 PM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೇವತಿ ನವೀನ್ ಆಯ್ಕೆಯಾಗಿದ್ದಾರೆ ಅಧ್ಯಕ್ಷರು : ರೇವತಿ ನವೀನ್ಪ್ರಥಮ ಉಪಾಧ್ಯಕ್ಷರು : ಸುಲತ ಪೂಜಾರಿದ್ವಿತೀಯ ಉಪಾಧ್ಯಕ್ಷರು : ದಿವಿತ್ ಕುಮಾರ್ಕಾರ್ಯದರ್ಶಿ : ಸನೀಶ್ ಎಸ್ ಅಂಚನ್ಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿಕೋಶಾಧಿಕಾರಿ : ಅಮಿತ ದಿಲೀಪ್ವ್ಯಕ್ತಿತ್ವ ವಿಕಾಸನ ನಿರ್ದೇಶಕರು : ಶಶಾಂಕ್ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು : ಲಿಖಿತ್ ರಾಜ್ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ಶಿವಾನಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ […]
Read More
06-01-2026, 9:00 PM
ಸುರತ್ಕಲ್ : ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 06-01-2026ರಂದು ಮನೆ–ಮನೆ ಭಜನಾ ಸೇವೆಯನ್ನು ಘಟಕದ ಅಧ್ಯಕ್ಷರಾದ ವಾಣಿ ಗಣೇಶ್ ಅವರ ಮನೆಯಲ್ಲಿ ಭಕ್ತಿಭಾವದಿಂದ ನಡೆಸಲಾಯಿತು. ಈ ಭಜನಾ ಸೇವೆಯಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ, ಧಾರ್ಮಿಕ ವಾತಾವರಣವನ್ನು ನಿರ್ಮಿಸಿದರು. ಕಾರ್ಯಕ್ರಮವು ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಚೈತನ್ಯವನ್ನು ಮೂಡಿಸುವ ಉದ್ದೇಶದಿಂದ ಯಶಸ್ವಿಯಾಗಿ ನೆರವೇರಿತು
Read More
03-01-2026, 11:00 PM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಎರಡು ದಿನಗಳ ಸಂಘಟನಾ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ದಿನಾಂಕ 03.01.2026ರಂದು ಸುರತ್ಕಲ್ ಬಸ್ಸ್ಟ್ಯಾಂಡ್ನಿಂದ ಪ್ರಯಾಣ ಆರಂಭಿಸಿದ ತಂಡವು ಸೂರ್ಮನೆ ವಾಟರ್ಫಾಲ್, ಹೊರನಾಡು ದೇವಸ್ಥಾನ, ಕ್ಯಾತನಮಕ್ಕಿ ರೆಸಾರ್ಟ್ ಹಾಗೂ ಸನ್ಸೆಟ್ ಪಾಯಿಂಟ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿತು. ದಿನಪೂರ್ತಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದ ನಂತರ ತಂಡವು ರೆಸಾರ್ಟ್ನಲ್ಲಿ ವಿಶ್ರಾಂತಿ ಪಡೆದುಕೊಂಡಿತು. ಮರುದಿನ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟ ಮುಗಿಸಿ, ಹಿಂತಿರುಗುವ ಸಂದರ್ಭದಲ್ಲಿ ದಾರಿಮಧ್ಯೆ ಕಂಡುಬಂದ […]
Read More
13-12-2025, 11:51 AM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಇಡ್ಯಾ ವಿಠೋಬ–ರುಕುಮಾಯಿ ಮಂದಿರದ ಜೀರ್ಣೋದ್ಧಾರದ ಸಂಧರ್ಭದಲ್ಲಿ ದಿನಾಂಕ 13.12.2025ರಂದು ರೂ. 10,000 ಮೊತ್ತದ ನೆರವನ್ನು ಮಂದಿರದ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಮಾಜಿ ಅಧ್ಯಕ್ಷರುಗಳು ಉಪಸ್ಥಿತರಿದ್ದು, ಮಂದಿರದ ಆಡಳಿತ ಮಂಡಳಿ ಸದಸ್ಯರಿಗೆ ಸಹಾಯಧನವನ್ನು ಹಸ್ತಾಂತರಿಸಿದರು. ಸಮಾಜ ಸೇವೆಯ ಭಾಗವಾಗಿ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಕೈಜೋಡಿಸುವ ಉದ್ದೇಶದಿಂದ ಈ ನೆರವು ನೀಡಲಾಗಿದೆ ಎಂದು ತಿಳಿಸಲಾಯಿತು.
Read More
12-12-2025, 6:36 AM
ಮಕ್ಕಳ ದಿನಾಚರಣೆಯ ಪ್ರಯುಕ್ತ ದಿನಾಂಕ 14.11.2025 ರಂದು ಘಟಕದ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರುಗಳು KMC ಅತ್ತವರ ದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ 13 ವರ್ಷದ ಮಾಸ್ಟರ್ ಸನ್ವಿತ್ ಕೆ ಪೂಜಾರಿ ಯ ಅರೋಗ್ಯ ವಿಚಾರಿಸಿ ಅವರ ಕುಟುಂಬಕ್ಕೆ ಘಟಕದ ವತಿಯಿಂದ ವೈದ್ಯಕೀಯ ನೆರವಿನ ಚೆಕ್ಕ ನ್ನು ನೀಡಿ ಸನ್ವಿತ್ ಬೇಗನೆ ಗುಣಮುಖರಾಗಿ ಮನೆಗೆ ತೆರಳಲೆಂದು ಹಾರೈಸಿದರು.
Read More