ಅಧ್ಯಕ್ಷರಾಗಿ ಅಶೋಕ್ ಸುವರ್ಣ ಆಯ್ಕೆ
26-01-2018, 3:38 PM
ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಶೋಕ್ ಸುವರ್ಣ ಹಾಗೂ ಕಾರ್ಯದರ್ಶಿಯಾಗಿ ರಂಜಿತ್ ಕುಮಾರ್ ಆಯ್ಕೆಯಾಗಿದ್ದಾರೆ
26-01-2018, 3:38 PM
ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಶೋಕ್ ಸುವರ್ಣ ಹಾಗೂ ಕಾರ್ಯದರ್ಶಿಯಾಗಿ ರಂಜಿತ್ ಕುಮಾರ್ ಆಯ್ಕೆಯಾಗಿದ್ದಾರೆ
01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
30-09-2017, 3:15 AM
ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]
10-09-2017, 12:15 PM
ಬ್ರಹ್ಮಶ್ರೀ ನಾರಾಯಣಗುರುಗಳು ತಾನು ಸಮಾಜಕ್ಕೆ ನೀಡಿದ್ದ ಪ್ರತಿ ಸಂದೇಶವನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಮಾನವತಾವಾದದ ಪ್ರತಿಪಾದಕರಾಗಿದ್ದರು, ಮನುಕುಲಕ್ಕೆ ಜ್ಞಾನದ ಬೆಳಕು ತೋರಿದ ಗುರುಗಳ ಸಂದೇಶದ ಅನುಷ್ಠಾನದ ಜತೆ ಅವರು ತೋರಿಸಿದ ದಾರಿಯಲ್ಲಿ ಸಂಘಟಿತ ಸಮಾಜ ನಿರ್ಮಾಣಕ್ಕೆ ಯತ್ನಿಸಬೇಕು ಎಂದು ಅಗತ್ತಾಡಿ ಗರೋಡಿಯ ಶೈಲು ಬಿರ್ವ ತಿಳಿಸಿದರು ಅವರು ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜಯಂತಿ ಪ್ರಯುಕ್ತ ಯುವವಾಹಿನಿ(ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 10.09.2017 ರಂದು ಇಡ್ಯಾ ಸುರತ್ಕಲ್ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ಗುರುಸ್ಮರಣೆ ಕಾರ್ಯಕ್ರಮದಲ್ಲಿ […]
30-07-2017, 7:18 AM
ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 30.07.2017 ರಂದು ಸುರತ್ಕಲ್ ಮಹಿಳಾ ಕೇಂದ್ರದ ಸಭಾಂಗಣದಲ್ಲಿ ಉಚಿತ ಹೃದಯ ರೋಗ ,ಮಧುಮೇಹ ತಪಾಸಣೆ, ಹಾಗೂ ಮಾಹಿತಿ ಶಿಬಿರ ಜರಗಿತು. ಒಮೇಗಾ ಆಸ್ಪತ್ರೆ ಮಂಗಳೂರು, ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಮಂಗಳೂರು, ಅಪದ್ಬಾಂದವ ಸಮಾಜ ಸೇವಾ ಸಂಘ ಸುರತ್ಕಲ್, ಮಹಿಳಾ ಕೇಂದ್ರ ಸುರತ್ಕಲ್ ಸಂಸ್ಥೆಗಳ ಸಹಯೋಗದೊಂದಿಗೆ ಈ ಶಿಬಿರ ಯಶಸ್ವಿಯಾಗಿ ಜರುಗಿತು. ಈ ಶಿಬಿರದಲ್ಲಿ ಇಸಿಜಿ, ರಕ್ತದೊತ್ತಡ, ಮಧುಮೇಹ ಪರೀಕ್ಷೆ, ಹೃದಯದ ಸ್ಕ್ಯಾನಿಂಗ್, ಹೃದಯ ತಜ್ಞರಿಂದ ಪರೀಕ್ಷೆ ಹಾಗೂ ಸಲಹೆ, ಡಯಾಬಿಟಿಸ್ […]
24-06-2017, 9:02 AM
ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 24.06.2017ರಂದು ಜರುಗಿದ ವಾರದ ಸಭೆಯಲ್ಲಿ ಬೆಳ್ತಂಗಡಿ DKRDS ಯೋಜನಾಧಿಕಾರಿ ಶೈಲು ಬಿರ್ವ ಅಗತ್ತಾಡಿ ಇವರು ಬಿಲ್ಲವ ಸಮಾಜದ ಕಟ್ಟುಪಾಡು ಎಂಬ ವಿಚಾರದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಯುವವಾಹಿನಿ (ರಿ) ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ರಾಕೇಶ್ ಕುಮಾರ್, ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ರವೀಂದ್ರ ಎಸ್.ಕೋಟ್ಯಾನ್, ಕಾರ್ಯದರ್ಶಿ ರಿತೇಶ್ ಕೆ.ನಿಕಟಪೂರ್ವ ಅಧ್ಯಕ್ಷರಾದ ಭಾಸ್ಕರ್ ಸಾಲ್ಯಾನ್ ಅಗರಮೇಲು ಹಾಗೂ ಸುರತ್ಕಲ್ ಯುವವಾಹಿನಿ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
22-04-2017, 9:28 AM
ಯುವವಾಹಿನಿ ಸುರತ್ಕಲ್ ಹಾಗೂ ಯುವವಾಹಿನಿ ಸಸಿಹಿತ್ಲು ಘಟಕಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಸಸಿಹಿತ್ಲು ಇದರ ಸಹಯೋಗದೊಂದಿಗೆ ದಿನಾಂಕ 22.04.2017ನೇ ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ,ಸಸಿಹಿತ್ಲು ಇಲ್ಲಿ ಸಂಚಾರಿ ನಿಯಮಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಜರುಗಿತು ಟ್ರಾಫಿಕ್ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಸಂಚಾರಿ ನಿಯಮಗಳು, ರಸ್ತೆ ಸುರಕ್ಷತೆ ಹಾಗೂ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸುರತ್ಕಲ್ […]
05-03-2017, 7:07 AM
ಸುರತ್ಕಲ್ ಯುವವಾಹಿನಿ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 05.03.2017 ನೇ ಆದಿತ್ಯವಾರ ಪ್ರಕೃತಿಯ ರಮಣೀಯ ಸ್ಥಳವಾದ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಜರುಗಿತು. ಯುವವಾಹಿನಿ ಸುರತ್ಕಲ್ ಘಟಕದ ಅದ್ಯಕ್ಷ ರವೀಂದ್ರ ಕೋಟ್ಯಾನ್, ನಿಕಟಪೂರ್ವ ಅದ್ಯಕ್ಷ ಭಾಸ್ಕರ್ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ ಮತ್ತಿತರ ಗಣ್ಯರು ಸೇರಿದಂತೆ 60ಕ್ಕೂ ಹೆಚ್ಚು ಕುಟುಂಬ ಸದಸ್ಯರು ಭಾಗವಹಿಸಿದ್ದರು ವಿವಿಧ ಆಟೋಟ ಸ್ಪರ್ಧೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಸಡೆಸಲಾಯುತು. ಸುರತ್ಕಲ್ ಯುವವಾಹಿನಿ ಕಾರ್ಯದರ್ಶಿ ರಿತೇಶ್ ಕುಮಾರ್ […]
22-01-2017, 12:22 PM
ದಿನಾಂಕ 22-01-2017 ರಂದು ಯುವವಾಹಿನಿ ಸುರತ್ಕಲ್ ಘಟಕದ ಪದಗ್ರಹಣ ಸಾರಥ್ಯ-2017 ಕಾರ್ಯಕ್ರಮವು ಸುರತ್ಕಲ್ನ ಲಯನ್ಸ್ಕ್ಲಬ್ ಸಭಾಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಗೌರವ ಪ್ರಧಾನ ಕಾರ್ಯದರ್ಶಿ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಬಿ. ತಮ್ಮಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಎಸ್.ಎಸ್. ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಪ್ರತಿಭಾ ಕುಳಾಯಿ ಮತ್ತು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ಭಾಸ್ಕರ […]
10-12-2016, 11:46 AM
ದಿನಾಂಕ 10-12-2016 ರಂದು ಸುರತ್ಕಲ್ ಘಟಕದ ಹೆಚ್ಚಿನ ಸದಸ್ಯರ ಸಹಕಾರದಿಂದ ಪೆರ್ಮುದೆ ಸರಕಾರಿ ಕೋಡಿಕೆರೆ ಶಾಲೆಗೆ ಒಂದು ಪೋಡಿಯಂನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಭಾಸ್ಕರ ಅಗರಮೇಲು, ಘಟಕದ ಮಾಜಿ ಅಧ್ಯಕ್ಷರುಗಳಾದ ಯೋಗೀಶ್ ಸನಿಲ್, ವಿಜಯಾ ಎಸ್. ಕುಕ್ಯಾನ್, ಸತೀಶ್ ಕೋಟ್ಯಾನ್ ಹಾಗೂ ಘಟಕದ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.