Yuvavahini

ಸುರತ್ಕಲ್

ಯುವವಾಹಿನಿ ಸುರತ್ಕಲ್ ಘಟಕದಿಂದ ಸ್ವಯಂಸೇವಕ ಸೇವೆ

ಸುರತ್ಕಲ್: ಸಸಿಹಿತ್ಲುವಿನ ಪವಿತ್ರ ಕ್ಷೇತ್ರವಾದ ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪುಣ್ಯ ಸಂದರ್ಭದಲ್ಲಿ, ಯುವವಾಹಿನಿ (ರಿ.) ಸುರತ್ಕಲ್ ಘಟಕದ ಸದಸ್ಯರು ದಿನಾಂಕ 06-03-2026 ರಂದು ಸಕ್ರಿಯವಾಗಿ ಸ್ವಯಂಸೇವಕರಾಗಿ ಪಾಲ್ಗೊಂಡು ಭಕ್ತಿಪೂರ್ವಕ ಸೇವೆ ಸಲ್ಲಿಸಿದರು.

Read More

ಯುವವಾಹಿನಿ ಸುರತ್ಕಲ್ ಘಟಕದ ಸ್ನೇಹ ಸಮ್ಮಿಲನ

ಸುರತ್ಕಲ್: ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಕುಟುಂಬ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ “ಸ್ನೇಹ ಸಮ್ಮಿಲನ–2026” ಕಾರ್ಯಕ್ರಮವನ್ನು ದಿನಾಂಕ 01-03-2026 ರಂದು ಸದಾಶಿವನಗರ 1ನೇ ಅಡ್ಡರಸ್ತೆ, ಸುರತ್ಕಲ್‌ನಲ್ಲಿರುವ ಘಟಕದ ಸದಸ್ಯೆಯಾದ ನೇಹಾ ಅವರ ಮನೆಯಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ರೇವತಿ ನವೀನ್, ಮೊದಲ ಉಪಾಧ್ಯಕ್ಷರಾದ ಸುಲತಾ ಪೂಜಾರಿ ಹಾಗೂ ಕಾರ್ಯದರ್ಶಿ ಸನೀಶ್ ಎಸ್. ಅಂಚನ್ ಉಪಸ್ಥಿತರಿದ್ದರು. ಅಧ್ಯಕ್ಷರಾದ ರೇವತಿ ನವೀನ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಸದಸ್ಯರು ಹಾಗೂ ಅವರ ಕುಟುಂಬಸ್ಥರನ್ನು ಸ್ವಾಗತಿಸಿದರು.ಕಾರ್ಯಕ್ರಮದ ಸಂಚಾಲಕರಾದ ಸ್ವಾತಿ […]

Read More

ಗೆಜ್ಜೆಗಿರಿ ಜಾತ್ರೋತ್ಸವದಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಸದಸ್ಯರಿಂದ ಗಂಧ ಪ್ರಸಾದ ಸ್ವೀಕಾರ

ಸುರತ್ಕಲ್: ಸತ್ಯಧರ್ಮದ ತವರೂರು, ದೇಯಿ ಬೈದ್ಯೆತಿ ಹಾಗೂ ಕೋಟಿ-ಚೆನ್ನಯರ ಮೂಲಸ್ಥಾನವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದಿನಾಂಕ 27-02-2026ರಂದು ನಡೆದ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಸುರತ್ಕಲ್ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು. ಈ ಪುಣ್ಯ ಸಂದರ್ಭದಲ್ಲಿ ಸುರತ್ಕಲ್ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಘಟಕದ ಸದಸ್ಯರು ಒಟ್ಟಾಗಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೈವ-ದೇವರುಗಳ ದರ್ಶನ ಪಡೆದರು. ಕ್ಷೇತ್ರದ ವತಿಯಿಂದ ನೀಡಲಾದ ಬ್ರಹ್ಮ ಬೈದರುಗಳ ಗಂಧ ಪ್ರಸಾದವನ್ನು ಸ್ವೀಕರಿಸಿ ಧನ್ಯತೆ ಮೆರೆದರು. ವಾರ್ಷಿಕ ಜಾತ್ರೆಯ […]

Read More

ಪ್ರತಿ ಸಾಮಾನ್ಯ ವ್ಯಕ್ತಿಯಲ್ಲೂ ಅಡಗಿದ ನಾಯಕತ್ವವನ್ನು ಅರಳಿಸುವುದು ಯುವವಾಹಿನಿಯ ಸಂಕಲ್ಪ : ಅಶೋಕ್ ಕುಮಾರ್ ಪಡ್ಪು

ಸುರತ್ಕಲ್ : ಯುವವಾಹಿನಿ ಸಂಸ್ಥೆಯು ಸ್ಥಾನಮಾನ, ಹಣಬಲ ಅಥವಾ ಹಿನ್ನಲೆ ನೋಡದೆ ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಯಲ್ಲೂ ಅಡಗಿರುವ ನಾಯಕತ್ವದ ಶಕ್ತಿಯನ್ನು ಗುರುತಿಸಿ ಅದನ್ನು ಸಮಾಜಮುಖಿಯಾಗಿ ಅರಳಿಸುವ ಮಹತ್ತಾದ ಸಂಕಲ್ಪವನ್ನು ಹೊಂದಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಹೇಳಿದರು. ಸಂಸ್ಥೆಯು ಸದಸ್ಯರಲ್ಲಿ ಆತ್ಮವಿಶ್ವಾಸ, ಸೇವಾಭಾವ ಮತ್ತು ಜವಾಬ್ದಾರಿಯ ಅರಿವು ಮೂಡಿಸುವ ಮೂಲಕ ಅವರನ್ನು ಉತ್ತಮ ನಾಯಕರೆಂದು ರೂಪಿಸುತ್ತದೆ. ಸಮಾಜದ ಅಭಿವೃದ್ಧಿಗೆ ಸಾಮಾನ್ಯ ವ್ಯಕ್ತಿಯ ಪಾತ್ರವೇ ಅತ್ಯಂತ ಪ್ರಮುಖವಾಗಿದ್ದು, ಅಂಥ ವ್ಯಕ್ತಿಗಳಿಗೆ ಅವಕಾಶ ನೀಡುವುದು […]

Read More

ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾಗಿ ರೇವತಿ ನವೀನ್ ಆಯ್ಕೆ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೇವತಿ ನವೀನ್ ಆಯ್ಕೆಯಾಗಿದ್ದಾರೆ ಅಧ್ಯಕ್ಷರು : ರೇವತಿ ನವೀನ್ಪ್ರಥಮ ಉಪಾಧ್ಯಕ್ಷರು : ಸುಲತ ಪೂಜಾರಿದ್ವಿತೀಯ ಉಪಾಧ್ಯಕ್ಷರು : ದಿವಿತ್ ಕುಮಾರ್ಕಾರ್ಯದರ್ಶಿ : ಸನೀಶ್ ಎಸ್ ಅಂಚನ್ಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿಕೋಶಾಧಿಕಾರಿ : ಅಮಿತ ದಿಲೀಪ್ವ್ಯಕ್ತಿತ್ವ ವಿಕಾಸನ ನಿರ್ದೇಶಕರು : ಶಶಾಂಕ್ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು : ಲಿಖಿತ್ ರಾಜ್ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ಶಿವಾನಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ […]

Read More

ಯುವವಾಹಿನಿ (ರಿ.) ಸುರತ್ಕಲ್ ಘಟಕದಿಂದ ಮನೆ–ಮನೆ ಭಜನಾ ಸೇವೆ

ಸುರತ್ಕಲ್ : ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 06-01-2026ರಂದು ಮನೆ–ಮನೆ ಭಜನಾ ಸೇವೆಯನ್ನು ಘಟಕದ ಅಧ್ಯಕ್ಷರಾದ ವಾಣಿ ಗಣೇಶ್ ಅವರ ಮನೆಯಲ್ಲಿ ಭಕ್ತಿಭಾವದಿಂದ ನಡೆಸಲಾಯಿತು. ಈ ಭಜನಾ ಸೇವೆಯಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ, ಧಾರ್ಮಿಕ ವಾತಾವರಣವನ್ನು ನಿರ್ಮಿಸಿದರು. ಕಾರ್ಯಕ್ರಮವು ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಚೈತನ್ಯವನ್ನು ಮೂಡಿಸುವ ಉದ್ದೇಶದಿಂದ ಯಶಸ್ವಿಯಾಗಿ ನೆರವೇರಿತು

Read More

ಯುವವಾಹಿನಿ (ರಿ) ಸುರತ್ಕಲ್ ಘಟಕದಿಂದ ಎರಡು ದಿನಗಳ ಪ್ರವಾಸ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಎರಡು ದಿನಗಳ ಸಂಘಟನಾ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ದಿನಾಂಕ 03.01.2026ರಂದು ಸುರತ್ಕಲ್ ಬಸ್‌ಸ್ಟ್ಯಾಂಡ್‌ನಿಂದ ಪ್ರಯಾಣ ಆರಂಭಿಸಿದ ತಂಡವು ಸೂರ್ಮನೆ ವಾಟರ್‌ಫಾಲ್, ಹೊರನಾಡು ದೇವಸ್ಥಾನ, ಕ್ಯಾತನಮಕ್ಕಿ ರೆಸಾರ್ಟ್ ಹಾಗೂ ಸನ್‌ಸೆಟ್ ಪಾಯಿಂಟ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿತು. ದಿನಪೂರ್ತಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದ ನಂತರ ತಂಡವು ರೆಸಾರ್ಟ್‌ನಲ್ಲಿ ವಿಶ್ರಾಂತಿ ಪಡೆದುಕೊಂಡಿತು. ಮರುದಿನ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟ ಮುಗಿಸಿ, ಹಿಂತಿರುಗುವ ಸಂದರ್ಭದಲ್ಲಿ ದಾರಿಮಧ್ಯೆ ಕಂಡುಬಂದ […]

Read More

ವಿಠೋಬ–ರುಕುಮಾಯಿ ಮಂದಿರ ಜೀರ್ಣೋದ್ಧಾರಕ್ಕೆ ಯುವವಾಹಿನಿ ನೆರವು

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಇಡ್ಯಾ ವಿಠೋಬ–ರುಕುಮಾಯಿ ಮಂದಿರದ ಜೀರ್ಣೋದ್ಧಾರದ ಸಂಧರ್ಭದಲ್ಲಿ ದಿನಾಂಕ 13.12.2025ರಂದು ರೂ. 10,000 ಮೊತ್ತದ ನೆರವನ್ನು ಮಂದಿರದ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಮಾಜಿ ಅಧ್ಯಕ್ಷರುಗಳು ಉಪಸ್ಥಿತರಿದ್ದು, ಮಂದಿರದ ಆಡಳಿತ ಮಂಡಳಿ ಸದಸ್ಯರಿಗೆ ಸಹಾಯಧನವನ್ನು ಹಸ್ತಾಂತರಿಸಿದರು. ಸಮಾಜ ಸೇವೆಯ ಭಾಗವಾಗಿ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಕೈಜೋಡಿಸುವ ಉದ್ದೇಶದಿಂದ ಈ ನೆರವು ನೀಡಲಾಗಿದೆ ಎಂದು ತಿಳಿಸಲಾಯಿತು.

Read More

ವೈದ್ಯಕೀಯ ನೆರವು-ಯುವವಾಹಿನಿ (ರಿ) ಸುರತ್ಕಲ್ ಘಟಕ

ಮಕ್ಕಳ ದಿನಾಚರಣೆಯ ಪ್ರಯುಕ್ತ ದಿನಾಂಕ 14.11.2025 ರಂದು ಘಟಕದ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರುಗಳು KMC ಅತ್ತವರ ದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ 13 ವರ್ಷದ ಮಾಸ್ಟರ್ ಸನ್ವಿತ್ ಕೆ ಪೂಜಾರಿ ಯ ಅರೋಗ್ಯ ವಿಚಾರಿಸಿ ಅವರ ಕುಟುಂಬಕ್ಕೆ ಘಟಕದ ವತಿಯಿಂದ ವೈದ್ಯಕೀಯ ನೆರವಿನ ಚೆಕ್ಕ ನ್ನು ನೀಡಿ ಸನ್ವಿತ್ ಬೇಗನೆ ಗುಣಮುಖರಾಗಿ ಮನೆಗೆ ತೆರಳಲೆಂದು ಹಾರೈಸಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!