Yuvavahini

ಸುರತ್ಕಲ್

ಸಾಪ್ತಾಹಿಕ ಸಂಕೀರ್ತನೆ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 05-08-2024ರ ಸೋಮವಾರದಂದು ಸಂಜೆ 5 ಗಂಟೆಯಿಂದ 7 ಗಂಟೆಯವರೆಗೆ ವಿಜಯ್ .ಎಸ್. ಕುಕ್ಯಾನ್ ರವರ ಸಂಚಾಲಕತ್ವದಲ್ಲಿ ಯುವವಾಹಿನಿ ಸಾಪ್ತಾಹಿಕ ಸಂಕೀರ್ತನಾ ಸರಣಿ ಕಾರ್ಯಕ್ರಮ ನಡೆಯಿತು. ಯುವವಾಹಿನಿ (ರಿ) ಸುರತ್ಕಲ್ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಸಾಪ್ತಾಹಿಕ ಸಂಕೀರ್ತನಾ ಸರಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು. ಹಾರ್ಮೋನಿಯಂ ಶ್ರೀ ಯುವರಾಜ್ ಬೊಳ್ಳಾಜೆ ನುಡಿಸಿದರು. ಮಂಗಳೂರು ಘಟಕದ ಅಧ್ಯಕ್ಷರಾದ ನಾಗೇಶ್ ರವರು ಸಾಪ್ತಾಹಿಕ ಸಂಕೀರ್ತನೆಯಲ್ಲಿ ಪಾಲ್ಗೊಂಡ ಎಲ್ಲಾ ಸದಸ್ಯರನ್ನು ಅಭಿನಂದಿಸಿದರು. ದೇವರ ಆಶೀರ್ವಾದ […]

Read More

ಕಿರು ಪ್ರವಾಸ

ಮಂಗಳೂರು: ಯುವವಾಹಿನಿ(ರಿ.) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 12-05-2024 ರಂದು ಭಾನುವಾರ ಒಂದು ದಿನದ ಕಿರು ಪ್ರವಾಸವನ್ನು ಬ್ರಹ್ಮವರದ ರಿಲ್ಯಾಕ್ಸ್ ಲೇಸರ್ ಪಾರ್ಕ್ ಗೆ ಹಮ್ಮಿಕೊಳ್ಳ ಲಾಗಿತ್ತು. ಬಿಡುವಿಲ್ಲದ ಜೀವನದಲ್ಲಿ ಸ್ವಲ್ಪ ಬಿಡುವು ಮಾಡಿಕೊಂಡು ರಿಲ್ಯಾಕ್ಸ್ ಲೇಸರ್ ಪಾರ್ಕಿನಲ್ಲಿ ರೋಮಾಂಚನಕಾರಿಯಾಗಿ ಸಮಯ ಕಳೆಯಲು, ಮುಂಜಾನೆ 6 ಗಂಟೆಗೆ ಸುರತ್ಕಲ್ ನಿಂದ ಬಸ್ಸು ತೆರಳಿತು. ಸದಸ್ಯರೆಲ್ಲರ ಪರಿಚಯದೊಂದಿಗೆ ಪ್ರಯಾಣ ಶುರು ಮಾಡಿ, ಮೊದಲಿಗೆ ಕಾಪು ಮಾರಿಯಮ್ಮ ದೇಗುಲ ದರ್ಶನದೊಂದಿಗೆ ಪಯಣ ಮುಂದುವರೆಸಿ, ಉಡುಪಿ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವರ […]

Read More

ನಾರಾಯಣ ಗುರುವರ್ಯರ ಸಂದೇಶಗಳು ಯುವಜನತೆಗೆ ದಾರಿದೀಪ: ಉಮೇಶ್ ಎಂ. ಕರ್ಕೇರ

ಸುರತ್ಕಲ್: ಯುವಜನತೆಗೆ ದಿನನಿತ್ಯದ ಬದುಕಿನ ಬಾಳ ಬುಟ್ಟಿಯಲ್ಲಿ ನಾರಾಯಣ ಗುರುವರ್ಯರ ಜೀವನಚರಿತ್ರೆಯ ಆದರ್ಶ ಸಂದೇಶಗಳು ದಾರಿದೀಪವಾಗಿರಬೇಕು ಹಾಗೂ ಪರರಿಗೆ ಸದಾ ಒಳಿತನ್ನು ಬಯಸುವಂತಿರಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಪದವಿಪೂರ್ವ ಕಾಲೇಜು ಕಾಟಿಪಳ್ಳದ ಪ್ರಾಂಶುಪಾಲರಾದ ಉಮೇಶ್ ಎಂ. ಕರ್ಕೇರರರು ಹೇಳಿದರು. ಅವರು ಯುವವಾಹಿನಿ(ರಿ.) ಸುರತ್ಕಲ್ ಘಟಕದ 2023-2024ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ದಿನಾಂಕ 07-01-2024 ರಂದು ದೇವಾಡಿಗ ಸಭಾಭವನ ಹೊಸಬೆಟ್ಟುವಿನಲ್ಲಿ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ತಾರ ಅಶೋಕ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. […]

Read More

ನೇತ್ರ ತಪಾಸಣಾ ಉಚಿತ ಶಿಬಿರ

ಮಂಗಳೂರು:- ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್‌ ಲಿಮಿಟೆಡ್ (ಎಂಸಿಎಫ್), ಪಣಂಬೂರು ಸಾರಥ್ಯದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ ದೇರಳಕಟ್ಟೆ, ಧೂಮಾವತಿ ಫ್ರೆಂಡ್ಸ್ ಸರ್ಕಲ್ ಕೃಷ್ಣಾಪುರ ಮತ್ತು ಯುವವಾಹಿನಿ ಸುರತ್ಕಲ್ ಘಟಕದ ಸಹಯೋಗದಲ್ಲಿ ದಿನಾಂಕ 18 ಡಿಸೆಂಬರ್ ಭಾನುವಾರದಂದು ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಿತು. ಎಂಸಿಎಫ್‌ನ ಸಿಎಂ ಗಿರೀಶ್ ಅಧ್ಯಕ್ಷತೆ ವಹಿಸಿದ್ದರು. ಸಾರಾಳ ಧೂಮಾವತಿ ದೈವಸ್ಥಾನ ಅಧ್ಯಕ್ಷ ಹರೀಶ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು. ಧೂಮಾವತಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಅರುಣ್ ಅಂಚನ್, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ […]

Read More

ಹಾವು- ನಾವು- ಪರಿಸರ

ಸುರತ್ಕಲ್ :- ಯುವವಾಹಿನಿ ಸುರತ್ಕಲ್ ವತಿಯಿಂದ 27 ಜುಲೈ 2022 ರಂದು ‘ಹಾವು- ನಾವು- ಪರಿಸರ’ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಯಿತು. ಸ್ನೇಕ್‌ಕಿರಣ್ ಕಾರ್ಯಕ್ರಮ ನಡೆಸಿಕೊಟ್ಟರು. ಸ್ನೇಕ್‌ಕಿರಣ್‌ರವರು ಪರಿಸರದ ಬಗೆಗೆ ಅರಿವು ಮೂಡಿಸಿ, ಪರಿಸರದಲ್ಲಿ ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳ ಪಾತ್ರ, ಪರಿಸರವನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವ ಕ್ರಿಮಿಕೀಟಗಳು ಯಾವ ರೀತಿಯ ಪಾತ್ರವಹಿಸಿಕೊಂಡಿರುತ್ತದೆ ಎಂಬುವುದನ್ನು ತಿಳಿಸಿಕೊಟ್ಟರು. ಹಲವಾರು ವಿಧಗಳ ಹಾವುಗಳ ಬಗೆಗೆ ಪರಿಚಯ ಮಾಡಿಸಿ, ಅವುಗಳ ಸಂತಾನೋತ್ಪತ್ತಿ ಯಾವ ರೀತಿಯಾಗಿರುತ್ತದೆ ಮತ್ತು ಮನುಷ್ಯನಿಗೆ ಕಚ್ಚಿದಲ್ಲಿ ಯಾವ ರೀತಿಯ ಪರಿಣಾಮವಾಗಬಹುದು ಎಂಬುವುದನ್ನು […]

Read More

ಪರಿಸರ ದಿನಾಚರಣೆ

ಸುರತ್ಕಲ್ :- ದಿನಾಂಕ 08 ಜುಲೈ 2022 ರಂದು ಘಟಕದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ನಮ್ಮ ಘಟಕದ ಸದಸ್ಯೆಯಾದ ಗಾಯತ್ರಿ ಸತೀಶ್ ರವರು ಪರಿಸರ ಉಳಿಸಿ ಗಿಡ ಬೆಳೆಸಿ ಎಂಬುದರ ಮೂಲಕ ಪರಿಸರ ದಿನಾಚರಣೆಯ ಬಗ್ಗೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷರಾದ ಶ್ರೀ ಯೋಗೀಶ್ ಸನಿಲ್ ರವರು ಸದಸ್ಯರೆಲ್ಲರಿಗೂ ಗಿಡಗಳನ್ನು ವಿತರಿಸಿ ಇನ್ನು ಮುಂದೆಯೂ ಇಂತಹ ಒಳ್ಳೊಳ್ಳೆ ಕಾರ್ಯಕ್ರಮಗಳನ್ನು […]

Read More

ಒಂದು ದಿನದ ಕರ ಸೇವೆ

ಸುರತ್ಕಲ್ :- ದಿನಾಂಕ 19 ಜೂನ್ 2022 ರಂದು ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ತೋಕೂರು ಸುಬ್ರಮಣ್ಯ ದೇವಸ್ಥಾನದ ಜೀರ್ಣೋದ್ದಾರದ ಪ್ರಯುಕ್ತ ಒಂದು ದಿನದ ಕರ ಸೇವೆಯನ್ನು ನೆರವೇರಿಸಲಾಯಿತು. ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಸೇರಿ ಒಟ್ಟು 18 ಮಂದಿ ಈ ಸೇವೆಯಲ್ಲಿ ಪಾಲ್ಗೊಂಡು ಸೇವೆಯನ್ನು ಸಲ್ಲಿಸಲಾಯಿತು.

Read More

ಯುವವಾಹಿನಿ ಬಜಪೆ ಘಟಕ ಪ್ರಥಮ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]

Read More

ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆ

ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ :  ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ :  ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು   ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ  ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ  ನಿರ್ದೇಶಕರು […]

Read More

ಏರ್ ಬಿರ್ಸೆರ್ ನಳಪರಿವಾರೊಡು ಹಾಗೂ ಸೌಂದರ್ಯ ಸ್ಪರ್ಧೆ

ಸುರತ್ಕಲ್ : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಅತಿಥ್ಯದಲ್ಲಿ ಫಾದರ್ಸ್ ಡೇ ಯ ಪ್ರಯುಕ್ತ ಯುವವಾಹಿನಿ ಅಂತರ್ ಘಟಕ ಪುರುಷರಿಗಾಗಿ ” ಏರ್ ಬಿರ್ಸೆರ್ ನಳ ಪಾರಿವಾರೊಡು” ಅಡುಗೆ ಸ್ಪರ್ಧೆಯನ್ನು ಹಾಗೂ ವಿವಿಧ ಘಟಕಗಳ ಮಹಿಳೆಯರಿಗಾಗಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಸೀರೆ ಮತ್ತು ಕೇಶವಿನ್ಯಾಸ ಸೌಂದರ್ಯ ಸ್ಪರ್ಧೆಯನ್ನು ಸುರತ್ಕಲ್ ತಾರಾ ಟವರ್ಸ್ ಸಭಾಂಗಣದಲ್ಲಿ ದಿನಾಂಕ 07.07.2019 ರಂದು ಅಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಪಡುಬಿದ್ರಿಯ ಹೋಟೆಲ್ ಉದ್ಯಮಿ ವೈ.ಸುಕುಮಾರ್ ಉದ್ಘಾಟಿಸಿದರು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!