Yuvavahini

ಬಂಟ್ವಾಳ

ನಾರಾಯಣ ಗುರುಗಳ ಚಿಂತನೆ ಹಾಗೂ ತತ್ವಾದರ್ಶ ಸಾರ್ವಕಲಿಕ ಸತ್ಯ : ಸಂದೀಪ್

ಬಂಟ್ವಾಳ: ಶೋಷಿತ ಕುಟುಂಬದಲ್ಲಿ ಹುಟ್ಟಿ ತನ್ನ ಪರಿಶ್ರಮದಿಂದಲೇ ಸಂತನಾಗಿ ಬೆಳೆದು ಸಮಾಜzಲ್ಲಿ ಬೇರೂರಿದ್ದ ಎಲ್ಲಾ ಅನಿಷ್ಠ ಪದ್ದತಿಗಳ ವಿರುದ್ದ ಅಹಿಂಸಾ ಮಾರ್ಗದಲ್ಲೇ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಹಾಗೂ ತತ್ವಾದರ್ಶ ಸಾರ್ವಕಲಿಕ ಸತ್ಯ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು. ಅವರು ದಿನಾಂಕ 27.08.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರುವರ್ಯರ 164 ನೇ ಜನ್ಮದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಆಚರಣೆಗಳು‌ ಬದುಕನ್ನು ಶ್ರೀಮಂತವಾಗಿಸುತ್ತದೆ : ಸ್ಮಿತೇಶ್ ಬಾರ್ಯ

ಬಂಟ್ವಾಳ : ನೆಲ ಮೂಲ ಸಂಸ್ಕೃತಿಯನ್ನು ನಂಬಿಕೊಂಡು ಬಂದವರು ತುಳುವರು, ಅವರ ಪ್ರತಿಯೊಂದು ಆಚರಣೆಗಳು ಮೂಲ ನಂಬಿಕೆಯಿಂದ ಕೂಡಿತ್ತು, ಇದಕ್ಕೆ ವೈಜ್ಞಾನಿಕ ಹಿನ್ನಲೆ ಇರುವುದು ವಿಶೇಷ. ಎಲ್ಲರೂ ಕೂಡಿ ಆಚರಿಸುವ ಆಟಿಡೊಂಜಿ‌ ಕೂಟ ಎನ್ನುವ ಇಂತಹ ಕಾರ್ಯಕ್ರಮಗಳು ಇಂದಿನ‌ ಯುವ ಪೀಳಿಗೆಗೆ ತುಳುನಾಡಿನ ಗತವೈಭವವನ್ನು‌ ನೆನಪಿಸುತ್ತದೆ. ಇಂತಹ ಸಂಸ್ಕೃತಿ, ಸಂಸ್ಕಾರಯುತ ಆಚರಣೆಗಳು ಬದುಕನ್ನು ಶ್ರೀಮಂತವಾಗಿಸುತ್ತದೆ ಎಂದು ಎಸ್.ಡಿ.ಎಮ್ ಕಾಲೇಜಿನ‌ ಉಪನ್ಯಾಸಕ ಸ್ಮಿತೇಶ್. ಎಸ್.ಬಾರ್ಯ ತಿಳಿಸಿದರು ಅವರು ದಿನಾಂಕ 22.07.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]

Read More

ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯ : ಮರೋಳಿ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯವಾದುದು, ಕಳೆದ 29 ವರ್ಷಗಳಿಂದ ನಿರಂತರ ಸಮಾಜಮುಖಿ ‌ಕಾರ್ಯದಲ್ಲಿ‌ ತೊಡಗಿಸಿಕೊಂಡ ಯುವವಾಹಿನಿ ಬಂಟ್ವಾಳ ಘಟಕವು ಕೇಂದ್ರ ಸಮಿತಿಯಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಿದೆ, ಯುವಬಿಲ್ಲವ ಸಮಾವೇಶ, ಡೆನ್ನಾನ ಡೆನ್ನನ ದಂತಹ ದಾಖಲೆಯ ಕಾರ್ಯಕ್ರಮದ ಮೂಲಕ ಬಂಟ್ವಾಳ ಯುವವಾಹಿನಿ ಜನಮಾನಸದಲ್ಲಿ ನೆಲೆನಿಂತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ‌ ತಿಳಿಸಿದರು. ಅವರು ದಿನಾಂಕ‌ 10.06.2018 ರಂದು ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ 2018-19 […]

Read More

ಅಧ್ಯಕ್ಷರಾಗಿ ಶಿವಾನಂದ ಎಮ್. ಆಯ್ಕೆ

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶಿವಾನಂದ ಎಮ್. ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಶಿವಾನಂದ ಎಮ್ ಉಪಾಧ್ಯಕ್ಷರು : ನಾಗೇಶ್ ಎಮ್, ಸತೀಶ್ ಪೂಜಾರಿ ಬಾಯಿಲ ಕಾರ್ಯದರ್ಶಿ : ಕಿರಣ್ ರಾಜ್ ಪೂಂಜರೆಕೋಡಿ ಜತೆ ಕಾರ್ಯದರ್ಶಿ : ರಚನಾ ಕರ್ಕೇರ ಕೋಶಾಧಿಕಾರಿ : ಗಣೇಶ್ ಪೂಜಾರಿ ಮಣಿ ಸಂಘಟನಾ ಕಾರ್ಯದರ್ಶಿ : ಸುಂದರ ಪೂಜಾರಿ ಬೋಳಂಗಡಿ, ಪ್ರವೀಣ್ ಸುವರ್ಣ ತುಂಬೆ, ದೇವಪ್ಪ‌ ಕರ್ಕೇರ ರಾಯಿ, ಸ್ನೇಹಾ ಸುರೇಶ್, […]

Read More

ಬಡ ಕುಟುಂಬದ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ

ವರುಷಕ್ಕೊಂದು ಮನೆ ಹರುಷಕ್ಕೊಂದು ನೆಲೆ ಎಂಬ ಘೋಷ ವಾಕ್ಯದ ಮೂಲಕ ಕಳೆದ ವರ್ಷ ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜಕಳ‌ ನಿವಾಸಿ ಅಕ್ಕಮ್ಮ ಎಂಬ ಬಡ ಕುಟುಂಬಕ್ಕೆ ಸುಮಾರು ಐದು ಲಕ್ಷ ವೆಚ್ಚದ ಮನೆ ನಿರ್ಮಿಸಿ ಹಸ್ತಾಂತರ ಮಾಡಿದೆ. ಈ ಸಾಲಿನಲ್ಲಿ ಬಂಟ್ವಾಳ ಮೂಡ ಗ್ರಾಮದ ನಂದಬೆಟ್ಟು ಎಂಬಲ್ಲಿನ‌ ಪ್ರೇಮ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣದ ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ದಿನಾಂಕ 18.03.2018 ರಂದು ನಾಟಿ ಕೇಶವ ಶಾಂತಿ […]

Read More

ಬಂಟ್ವಾಳದಲ್ಲಿ ‘ಡೆನ್ನಾನ… ಡೆನ್ನನ’ದ ಇಂಪು

ತುಳು ನಾಡ ವೀರ ಪುರುಷರ ಕಥೆಗಳು ಇಂದಿಗೂ ಜೀವಂತವಾಗಿದೆ ಎಂದರೆ ಅದು ತುಳುನಾಡ ಪಾಡ್ದನದ ಮೂಲಕ. ಅದು ನಮ್ಮ ಹಿರಿಯರ ಸಂಸ್ಕೃತಿಯ ಮೂಲಕ , ತುಳುನಾಡ ಸಂಸ್ಕೃತಿಯಲ್ಲಿ ಬೆರೆತು ಹೋದ ವೀರ ಪುರುಷರ, ಮಾತೆಯರ ಕಥೆಗಳು ಪ್ರಾರಂಭವಾಗುವುದೇ ಪಾಡ್ದನದ ಮೊದಲ ಎರಡು ಪದಗಳಾದ ಡೆನ್ನಾನ ಡೆನ್ನಾನದಿಂದ ಬಿ.ಸಿ ರೋಡಿನ ನಾರಾಯಣ ಗುರು ವೃತದ ಬಳಿಯಿರುವ ಸ್ಪರ್ಶ ಕಲಾಮಂದಿರದಲ್ಲಿ , ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಆತಿಥ್ಯದಲ್ಲಿ . ಡೆನ್ನಾನ ಡೆನ್ನಾನ […]

Read More

ಗುಪ್ತಗಾಮಿನಿ ಯುವವಾಹಿನಿ…….. ರಮ್ಯ ಸುಜೀರ್

ಬದುಕು ಆಧುನೀಕತೆಯತ್ತ ಹೊರಳುತ್ತಿದೆ. ಗತವೈಭವದ ಸಂದಿ ಪಾಡ್ದನಗಳು ನೇಪಥ್ಯಕ್ಕೆ ಸರಿಯುತ್ತಿದೆ. ತುಳುವ ಆಚಾರ-ವಿಚಾರ, ಹಿರಿಮೆ-ಗರಿಮೆಗಳು ಸದ್ದಡಗಿಸಿ ಮೂಕವಾಗಿದೆಯೆನೋ ಎನ್ನುವಂತಹ ದಿನಗಳಲ್ಲಿಯೇ, ಸಂದಿ ಹೋದ ಕಾಲವನ್ನು ಮರುಕಳಿಸುವಂತೆ ಮಾಡಿ, ಸತ್ಯದ ಹೊಳಪ ಲೇಪನವನ್ನು ನೀಡುತ್ತಾ, ನಿತ್ಯ-ನಿರಂತರ ಗುಪ್ತಗಾಮಿನಿಯಾಗಿ ಹರಿಯುತ್ತಾ, ತನ್ನೊಂದಿಗೆ ತುಳುವ ಮಣ್ಣಿನ ಸತ್ವ-ಸಾರ, ಬಿರುವ ಸಮುದಾಯದ ಯುವಜನತೆಯ ಪ್ರತಿಭಾ ಕೌಶಲ್ಯವನ್ನು ಒಗ್ಗೂಡಿಸಿಕೊಂಡು, ಎಲ್ಲೋ ಮರೆಯಾಗಿ ಹೋಗುತ್ತಿರುವ ಪ್ರತಿಭೆಗಳ ಮೇಲೆ ಬೆಳಕು ಚೆಲ್ಲಿ, ಅವರಿಗೆ ವೇದಿಕೆಯನ್ನು ಕಲ್ಪಿಸಿಕೊಟ್ಟು, ಸಾಧನಾಲೋಕಕ್ಕೆ ಪರಿಚಯಿಸಿಕೊಂಡು ಸಾಧನೆಯ ಮೇರುಶಿಖರದ ಅನಂತತೆಯ ಪಥದತ್ತ ಸಾಗಿಬರುತ್ತಿರುವ ಹೆಮ್ಮೆಯ […]

Read More

ಮುಗಿಲು ಮುಟ್ಟಿತು ಯುವವಾಹಿನಿಯ ಡೆನ್ನಾನ ಡೆನ್ನನ ….ಇಂಪು

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ 28-01-2018ನೇ ಆದಿತ್ಯವಾರದಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿಯ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿಯ 28 ಘಟಕ ಗಳನ್ನು ಪ್ರತಿನಿಧಿಸುವ 28 ವರ್ಣರಂಜಿತ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಿಸಿದ ಸ್ವಾಗತ ಗೋಪುರವು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಯಿತು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಧ್ವಜಾರೋಹಣ ಮಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ […]

Read More

ವಿಶ್ವವಿದ್ಯಾಲಯದ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಮುಖ್ಯ : ಯಶವಂತ ಪೂಜಾರಿ

ವಿಶ್ವವಿದ್ಯಾಲಯ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಮುಖ್ಯವಾದವು, ಈ ಪರೀಕ್ಷೆಯಲ್ಲಿ ಯಶಸ್ವೀಯಾಗುವುದರ ಮೂಲಕ ವಿದ್ಯಾರ್ಥಿ ಜೀವನ ಸಾರ್ಥಕತೆ ಪಡೆಯಬೇಕು. ಜೀವನದಲ್ಲಿ ಮಾತಿಗಿಂತ ಸಾಧನೆ ಮುಖ್ಯ, ಯಾವತ್ತೂ ಮಾತೇ ಸಾಧನೆಯಾಗಬಾರದು ಎಂದು ಕೇಂದ್ರ ಸಮಿತಿಯು ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 07.01.2017 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಸ್ಟೂಡೆಂಟ್ ವಿಂಗ್ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಲೋಕೇಶ್ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಲಹೆಗಾರರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!