Yuvavahini

ಪಣಂಬೂರು-ಕುಳಾಯಿ

ಗೆಜ್ಜೆಗಿರಿಯಲ್ಲಿ ಭಜನಾ ಕಾರ್ಯಕ್ರಮ

ಗೆಜ್ಜೆಗಿರಿ :- ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ 01 ಜುಲೈ 2022 ಶುಕ್ರವಾರದಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸೇವೆಯನ್ನು ನೀಡ ಲಾಯಿತು. ಈ ಸೇವಾ ಕಾರ್ಯವು ಘಟಕದ ಅಧ್ಯಕ್ಷರಾದ ರವಿ ಅಮೀನ್ ರವರ ನೇತೃತ್ವದಲ್ಲಿ ಘಟಕದ ಭಜನಾ ತಂಡದೊಂದಿಗೆ, ಘಟಕದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಹಾಗೂ ಒಟ್ಟು 59 ಸದಸ್ಯರುಗಳು ಪಾಲ್ಗೊಂಡರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್, ಕ್ಷೇತ್ರದ ಯಜಮಾನರಾದ ಶ್ರೀಧರ್ ಪೂಜಾರಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ […]

Read More

ಭಜನೆಯಿಂದ ಸುಸಂಸ್ಕೃತ ಸಮಾಜ ನಿರ್ಮಾಣ : ಡಾ. ಅರುಣ್ ಉಳ್ಳಾಲ್

ಮಂಗಳೂರು: ಭಜನೆ ಮೂಲಕ ಯುವಪೀಳಿಗೆ ಸುಸಂಸ್ಕೃತರಾಗುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಪನ್ಯಾಸಕ ಡಾ.ಅರುಣ್‌ ಉಳ್ಳಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ-2022” ಸಮರೋಪ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷರಾದ ರವಿ ಅಮೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ […]

Read More

ಯುವವಾಹಿನಿ ಬಜಪೆ ಘಟಕ ಪ್ರಥಮ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]

Read More

ಕುಟುಂಬ ಸಮ್ಮಿಲನ-2022

ದಿನಾಂಕ 01.05.2022 ರಂದು “ಯುವವಾಹಿನಿ ಕುಟುಂಬ ಸಮ್ಮಿಲನ 2022” ಕಾರ್ಯಕ್ರಮವನ್ನು ಕುಳಾಯಿ ವಿಷ್ಣು ಮೂರ್ತಿ ದೇವಸ್ಥಾನದ ಪರಿಸರದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪವರ್ ಲಿಫ್ಟ್ ರ್ ಹಾಗೂ ವೈಟ್ ಲಿಫ್ಟರ್ ಸುಪ್ರಿತಾ ಪೂಜಾರಿಯವರು ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಶ್ರೀ ರವಿ ಅಮೀನ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಘಟಕದ ಸದಸ್ಯರಾದ ಯಶಸ್ವಿನಿ, ಜಯಶ್ರೀ, ಕೀರ್ತಿ ಹಾಗೂ ಕುಮಾರಿ ಅಕ್ಷಿತಾ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಶುಭಾರಂಭಗೊಂಡಿತು. ಈ ಕಾರ್ಯಕ್ರಮದಲ್ಲಿ ಘಟಕದ […]

Read More

ಶಿವಗಿರಿ ಯಾತ್ರೆ

  ಯುವವಾಹಿನಿ (ರಿ) ಪಣಂಬೂರು -ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 2ರಿಂದ 5ರ ತನಕ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ಸ್ಥಳವಾದ ಕೇರಳದ ಶಿವಗಿರಿಗೆ  50   ಸದಸ್ಯರ ತಂಡ ದೊಂದಿಗೆ ಯಾತ್ರೆಯನ್ನು ಹಮ್ಮಿ ಕೊಂಡು  ಯಶಸ್ವಿಯಾಗಿದೆ

Read More

ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ

ಪಣಂಬೂರು-ಕುಳಾಯಿ : ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ, ಬಿಲ್ಲವ ಎಂಪ್ಲಾಯಿಸ್ ವೆಲ್ಫೇರ್ ಸೊಸೈಟಿ (ರಿ) ಹಾಗೂ ಹೀಲ್ಸ್ (ರಿ) ಮಂಗಳೂರು ಇವರ ಸಹಭಾಗಿತ್ವದಲ್ಲಿ, ಕೆ.ಎಂ.ಸಿ ಆಸ್ಪತ್ರೆ, ಅತ್ತಾವರ ಹಾಗೂ ಸಮುದಾಯ ದಂತ ವಿಭಾಗ, ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಮೈರ್ಪಾಡಿ ಕುಳಾಯಿ ಇಲ್ಲಿ ಜರಗಿದ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಆಸ್ಪತ್ರೆಯ […]

Read More

ಸುಂದರ ಭವಿಷ್ಯಕ್ಕಾಗಿ ಶಿಕ್ಷಣಕ್ಕೆ ಪ್ರೊತ್ಸಾಹ ಅಗತ್ಯ- ಪ್ರಭಾಕರ ನೀರುಮಾರ್ಗ

ಪಣಂಬೂರು : ನಾಳಿನ ಸುಂದರ ಭವಿಷ್ಯಕ್ಕಾಗಿ ವಿದ್ಯೆಗೆ ಪ್ರೊತ್ಸಾಹ ಅಗತ್ಯ. ಈ ಮೂಲಕ ಯುವವಾಹಿನಿ ಬ್ರಹತ್ ಶಕ್ತಿಯಾಗಿ ರೂಪುಗೊಂಡಿದೆ. ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕವು ಈ ನಿಟ್ಟಿನಲ್ಲಿ ಚೆನ್ನಾಗಿ ಕೆಲಸ ಮಾಡಿದೆ ಎಂದು ಮಂಗಳೂರು ವಿಶ್ವವಿಧ್ಯಾನಿಲಯದ ನಿವೃತ್ತ ಉಪಕುಲಸಚಿವ ಪ್ರಭಾಕರ ನೀರುಮಾರ್ಗ ಹೇಳಿದರು. ದಿನಾಂಕ 12.05.2019ರಂದು ನವ ಮಂಗಳೂರು ಬಂದರು ಮಂಡಳಿ, ಪಣಂಬೂರು ಇದರ ಸಭಾಂಗಣದಲ್ಲಿ ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]

Read More

ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಆಯ್ಕೆ

ಪಣಂಬೂರು ಕುಲಾಯಿ : ಯುವವಾಹಿನಿ (ರಿ) ಪಣಂಬೂರು ಕುಲಾಯಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ರಂಜನ್ ಕೆ.ಕೋಟ್ಯಾನ್ ಆಯ್ಕೆಯಾಗಿದ್ದಾರೆ

Read More

ಗುರು ಸಂದೇಶ ಪರಿಪಾಲನೆಯಿಂದ ಸಾರ್ಥಕ್ಯ: ಪ್ರೊ.ಹಿಲ್ಡಾ ರಾಯಪ್ಪನ್.

ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಸಾರ್ಥಕತೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಂಗಳೂರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ನ ನಿರ್ದೇಶಕಿ ಪ್ರೊ.ಹಿಲ್ಡಾ ರಾಯಪ್ಪನ್ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಹಾಗೂ ಯುವವಾಹಿನಿ(ರಿ) ಕೇಂದ್ರ ಸಮಿತಿ ಮತ್ತು ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರು ಪುರಭವನದಲ್ಲಿ ದಿನಾಂಕ 14. 2.2019 ರಂದು ಮಂಗಳೂರು ವಿ.ವಿ  ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜೀವನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!