21-06-2026, 11:00 PM
ಹೆಜಮಾಡಿ, ಜೂನ್ 21 : ಹಿರಿಯ ಸಾಹಿತಿ, ನಾಟಕಕಾರ, ಗೀತಾ ಸಾಹಿತ್ಯ ರಚನಾಕಾರ ಹಾಗೂ ಪತ್ರಕರ್ತರಾದ ಪರಮಾನಂದ ವಿ. ಸಾಲ್ಯಾನ್ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಯುವವಾಹಿನಿ (ರಿ.) ಹೆಜಮಾಡಿ ಘಟಕವು ಮಾನವೀಯ ಕಾಳಜಿಯಿಂದ ನೆರವಿನ ಹಸ್ತ ಚಾಚಿದೆ. ಮೂಲತಃ ಹೆಜಮಾಡಿ ಗ್ರಾಮದವರಾದ ಪರಮಾನಂದ ವಿ. ಸಾಲ್ಯಾನ್ ಅವರು ಹೆಜಮಾಡಿ ಬಿಲ್ಲವರ ಸಂಘ ಹಾಗೂ ಯುವವಾಹಿನಿಯ ವಿವಿಧ ಚಟುವಟಿಕೆಗಳಿಗೆ ಹಲವು ವರ್ಷಗಳಿಂದ ಅಮೂಲ್ಯ […]
Read More
07-06-2026, 7:00 PM
ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಜೂನ್ 7ರಂದು 51 ಸದಸ್ಯರೊಂದಿಗೆ ಕುಂದಾಪುರದ UVA ಮೆರಿಡಿಯನ್ ವಾಟರ್ ಪಾರ್ಕ್ಗೆ ಒಂದು ದಿನದ ಸೌಹಾರ್ದಯುತ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಪ್ರವಾಸವು ಗುರುಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸದಸ್ಯರೆಲ್ಲರೂ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಅನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಹಾಗೂ ದರ್ಶನದಲ್ಲಿ ಭಾಗವಹಿಸಿದರು. ಪ್ರವಾಸದ ಮಧ್ಯೆ ಸದಸ್ಯರಿಗಾಗಿ ಉಪಹಾರದ ವ್ಯವಸ್ಥೆ […]
Read More
09-05-2026, 9:00 PM
ಹೆಜಮಾಡಿ: ಯುವವಾಹಿನಿ (ರಿ.) ಹೆಜಮಾಡಿ ಘಟಕ ಹಾಗೂ ಹೆಜಮಾಡಿ ಬಿಲ್ಲವರ ಸಂಘದ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕ ಶನಿಪೂಜೆ ಹಾಗೂ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಭಕ್ತಿಭಾವ ಮತ್ತು ಸಾಂಸ್ಕೃತಿಕ ವೈಭವದೊಂದಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಹಾಗೂ ಕೋಶಾಧಿಕಾರಿಯಾದ ಸತೀಶ್ ಕಿಲ್ಪಾಡಿ ಅವರು ಭಾಗವಹಿಸಿ ಶುಭ ಹಾರೈಸಿದರು. ಸಮಾಜದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಂಘಟನಾ ಚಟುವಟಿಕೆಗಳನ್ನು ಬಲಪಡಿಸುವಲ್ಲಿ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ಅವರು ತಮ್ಮ ಸಂದೇಶದಲ್ಲಿ ತಿಳಿಸಿದರು. ಸಾರ್ವಜನಿಕ ಶನಿಪೂಜೆಯಲ್ಲಿ […]
Read More
09-05-2026, 8:00 PM
ಹೆಜಮಾಡಿ : ಯುವವಾಹಿನಿ(ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಹರೀಶ್ ಶಾಂತಿ ಹೆಜಮಾಡಿ ಇವರ ಪೌರೋಹಿತ್ಯದಲ್ಲಿ 28 ನೇ ವರ್ಷದ ಸಾರ್ವಜನಿಕ ಶನಿಪೂಜೆ ಮತ್ತು ಭಾಸ್ಕರ್. ಕೆ. ಪಡುಬಿದ್ರಿ ಇವರ ಬಳಗದವರಿಂದ ಯಕ್ಷಗಾನ ತಾಳಮದ್ದಳೆ ಹೆಜಮಾಡಿ ನಾರಾಯಣಗುರು ಮಂದಿರದಲ್ಲಿ ದಿನಾಂಕ:09-05-2026 ರಂದು ಆದಿತ್ಯವಾರ ಜರಗಿತು.ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಮತ್ತು ಕೋಶಾಧಿಕಾರಿ ಸತೀಶ್ ಕಿಲ್ಪಾಡಿ ಉಪಸ್ಥಿತರಿದ್ದರು.
Read More
17-03-2026, 9:00 PM
ಹೆಜಮಾಡಿ: ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ “ಸ್ತ್ರೀ ಸ್ಪೂರ್ತಿ–2026” ಕಾರ್ಯಕ್ರಮವು ಮಾರ್ಚ್ 17 ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ವೇತ ಪಳ್ಳಿ ಮಾತನಾಡಿ, “ಮಹಿಳೆಯರು ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿಕೊಳ್ಳಬೇಕು. ಅದಕ್ಕಾಗಿ ದೃಢ ಮನೋಬಲ ಅತ್ಯಂತ ಅಗತ್ಯ” ಎಂದು ಅಭಿಪ್ರಾಯಪಟ್ಟರು. “ನನ್ನ ಸಾಧನೆಗೆ ಯುವವಾಹಿನಿಯೇ ಸ್ಪೂರ್ತಿ. ಯುವಜನತೆ ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸಬೇಕು” ಎಂದೂ ಅವರು ತಿಳಿಸಿದರು. ಕಾರ್ಯಕ್ರಮವು ಹೆಜಮಾಡಿ […]
Read More
07-02-2026, 11:00 AM
ಹೆಜಮಾಡಿ : ವಿದ್ಯೆಯೇ ಯುವವಾಹಿನಿಯ ಪ್ರಮುಖ ಧ್ಯೇಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ಜ್ಞಾನದ ಬೆಳಕಿನಲ್ಲಿ ತೊಡಗಿಸಿಕೊಂಡರೆ ಭವಿಷ್ಯವು ಸುಂದರವಾಗಿ ಅರಳುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿಧ್ಯಾ ರಾಕೇಶ್ ಹೇಳಿದರು. ಹೆಜಮಾಡಿ ಘಟಕವು ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಈ ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿರುವುದು ಸಂತೋಷದ ವಿಷಯವಾಗಿದ್ದು, ಮುಂದೆಯೂ ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಅವರು ಯುವವಾಹಿನಿ(ರಿ.) ಹೆಜಮಾಡಿ ಘಟಕ ಹಾಗೂ ಸ್ವರ್ಣ ಸೌಹಾರ್ದ ಸಹಕಾರಿ […]
Read More
04-01-2026, 1:55 PM
ಹೆಜಮಾಡಿ: ಯುವ ಸಂಘಟನೆಗಳು ಮನೋರಂಜನಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿದಾಗ ಸಂಘಟನೆಗಳು ಇನ್ನಷ್ಟು ಸದೃಢವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ಹೇಳಿದರು. ಅವರು ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಆಯೋಜಿಸಲಾದ ತುಳು ಹಾಸ್ಯಮಯ ನಾಟಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ದಿನಾಂಕ 04-01-2026ರಂದು ಡಾ. ದೇವದಾಸ್ ಕಾಪಿಕಾಡ್ ಅವರ “ಎನ್ನನೇ ಕಥೆ” ತುಳು ಹಾಸ್ಯಮಯ […]
Read More
01-12-2025, 2:27 PM
ಘಟಕದ ಆಶ್ರಯದಲ್ಲಿ ದಿನಾಂಕ:02-11-2025 ಆದಿತ್ಯವಾರದಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಜರಗಿತು. * ತುಳಸಿ ಪೂಜೆಯ ವಿಧಿ ವಿಧಾನಗಳನ್ನು ಗುರು ಮಂದಿರದ ಅರ್ಚಕರಾದ ಹರೀಶ್ ಶಾಂತಿ ಮುಂಬೈ ಇವರ ನೇತೃತ್ವದಲ್ಲಿ ಗುರು ಮಂದಿರದಲ್ಲಿ ನೆರವೇರಿಸಲಾಹಿತು. * ನಂತರ ಸಭಾ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದ ವಠಾರದಲ್ಲಿ ಪ್ರಾಥನೆಯೊಂದಿಗೆ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ನಿಶಾಂಕ್.ಎಸ್.ಕೋಟ್ಯಾನ್ ರವರು ವಹಿಸಿದ್ದು ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ […]
Read More
21-10-2025, 3:33 PM
2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಗಸ್ಟ್ 10, 2025ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಜರಗಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕಾರ್ಯದರ್ಶಿ ಪ್ರಥಮೇಶ್ ರವರು ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ ಉದ್ಘಾಟಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು.ಪ್ರಬೋಧ್ ಚಂದ್ರ ಹೆಜಮಾಡಿ ಪ್ರಸ್ತಾಪಿಸಿದರು.ಜೊತೆ ಕಾರ್ಯದರ್ಶಿ ಕು. ಪ್ರಾಪ್ತಿ ಆರ್ ಸುವರ್ಣ ರವರು ಗತ ಸಾಲಿನ ಕಾರ್ಯ ಚಟುವಟಿಕೆಗಳ ವರದಿ ಮಂಡಿಸಿದರು.ಈ ಸಮಾರಂಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ […]
Read More
21-10-2025, 3:28 PM
ದಿನಾಂಕ 15-08-2025 ರಂದು ಸ್ವಾತಂತ್ರ್ಯೋತ್ಸವದ ಅಂಗವಾಗಿ ಹೆಜಮಾಡಿ ಬಿಲ್ಲವರ ಸಂಘದಲ್ಲಿ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು ನಂತರ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮವವು ನಡೆದಿದ್ದು, ಈ ಸಂದರ್ಭದಲ್ಲಿ ನಮ್ಮ ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು
Read More