Yuvavahini

ಪಡುಬಿದ್ರೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ತುಳುನಾಡಿನ ಆಚರಣೆಯಲ್ಲಿ ನಂಬಿಕೆ – ಮೂಢನಂಬಿಕೆಗಳು ವಿಚಾರಗೋಷ್ಠಿ

ಪಡುಬಿದ್ರಿ : ಇಂದಿನ ಯುವಪೀಳಿಗೆಗೆ ನಮ್ಮ‌ ಹಿರಿಯರು ಮೂಲ ನಂಬಿಕೆಗಳನ್ನು ತಿಳಿಸುವ ಅನಿವಾರ್ಯತೆಯಿದೆ. ಮೂಲ ನಂಬಿಕೆಗಳು ಮೂಢನಂಬಿಕೆಗಳಾಗದಂತೆ ಗಮನಹರಿಸಬೇಕಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಾ| ವೈ.ಎನ್. ಶೆಟ್ಟಿ ಹೇಳಿದರು. ಪಡುಬಿದ್ರಿ ಬಿಲ್ಲವ ಸಂಘದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಮತ್ತು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ದಿನಾಂಕ 21.09.2018 ರಂದು ಬ್ರಹ್ಮಶ್ರೀ ನಾರಾಯಣಗುರುಗಳ 90ನೇ ಪುಣ್ಯತಿಥಿಯ ಅಂಗವಾಗಿ ತುಳುನಾಡಿನ ಆಚರಣೆಯಲ್ಲಿ ನಂಬಿಕೆ- ಮೂಢನಂಬಿಕೆಗಳು ಎಂಬ ವಿಚಾರಗೋಷ್ಠಿಯಲ್ಲಿ ಸಮನ್ವಯಕಾರರಾಗಿ ಅವರು […]

Read More

ಪಡುಬಿದ್ರಿ : ಬ್ರಹ್ಮಶ್ರೀ ನಾರಾಯಣ ಗುರುವರ್ಯರ 164ನೇ ಜನ್ಮದಿನೋತ್ಸವ

ಪಡುಬಿದ್ರಿ : ಬ್ರಹ್ಮಶ್ರೀ ನಾರಾಯಣ ಗುರುವರ್ಯರ 164ನೇ ಜನ್ಮದಿನೋತ್ಸವವು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ 27-08-2018 ರಂದು ನಡೆಯಿತು. ಶ್ರೀ ನಾರಾಯಣ ಗುರುಮೂರ್ತಿಯ ಶೋಭಾಯಾತ್ರೆಯು ಯುವವಾಹಿನಿ (ರಿ) ಘಟಕದ ಮಾಜಿ ಕಾರ್ಯದರ್ಶಿ ಹಾಗೂ ಪ್ರಸ್ತುತ ಮಹಿಳಾ ಸಂಘಟನಾ ನಿರ್ದೇಶಕರಾದ ಶ್ರೀಮತಿ ಚಿತ್ರಾಕ್ಷಿ ಕೆ ಕೋಟ್ಯಾನ್ ಇವರ ಮನೆಯಿಂದ ಹೊರಡಿತು. ಮಹಾಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪಡುಬಿದ್ರಿ ಘಟಕದ ಸದಸ್ಯೆ ರಾಷ್ಟ್ರ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ ಕುಮಾರಿ ಶ್ರಾವ್ಯ ರವಿರಾಜ್ ಇವರನ್ನು ಸನ್ಮಾನಿಸಲಾಯಿತು. ಈ […]

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಧನ ಸಹಾಯ ಹಸ್ತಾಂತರ

ಪಡುಬಿದ್ರಿ : ಆರ್ಥಿಕವಾಗಿ ಸಂಕಷ್ಟದಲ್ಲಿದ್ದು ಅನಾರೋಗ್ಯದಿಂದ ಬಳಲುತ್ತಿರುವ, ನಮ್ಮ ಘಟಕದ ಸದಸ್ಯರಾದ ನಂದಿಕೂರಿನ ಹೇಮಂತ್ ರವರ ತಾಯಿ ಜಯಂತಿಯವರಿಗೆ ಯುವವಾಹಿನಿ (ರಿ.) ಪಡುಬಿದ್ರಿ ಘಟಕದಿಂದದಿನಾಂಕ 13.08.2018 ರಂದು   ರೂ.10,600 ಧನಸಹಾಯ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿಯ ಅಧ್ಯಕ್ಷರಾದ ದೀಪಕ್ ಕೆ. ಬೀರ, ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಎಸ್. ಪೂಜಾರಿ, ಮಾಜಿ ಅಧ್ಯಕ್ಷರಾದ ಅಶೋಕ್ ಪಾದೆಬೆಟ್ಟು, ಕಾರ್ಯದರ್ಶಿ ಶೈಲಜ, ಪಡುಬಿದ್ರಿ ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಅರುಣ್ ನಂದಿಕೂರು ಉಪಸ್ಥಿತರಿದ್ದರು.

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಶ್ರಮದಾನ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ 29.07.2018 ರಂದು ಪಡುಬಿದ್ರಿ ಬಿಲ್ಲವ ಸಂಘದ ಪರಿಸರದಲ್ಲಿ ಶ್ರಮದಾನವು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ದೀಪಕ್ ಕೆ. ಬೀರ, ಕಾರ್ಯದರ್ಶಿ ಶೈಲಜಾ, ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ ೧೨. ೦೭. ೨೦೧೮ ಪಡುಬಿದ್ರಿ ನಾರಾಯಣಗುರು ಮಂದಿರದಲ್ಲಿ ವಾರದ ಭಜನೆಯು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು, ಬಿಲ್ಲವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.

Read More

ಯುವವಾಹಿನಿಯಿಂದ ಯುವಜನತೆಗೆ ಜಾಗೃತಿ : ರಮೇಶ್ ಅಂಚನ್

ಪಡುಬಿದ್ರಿ : ಸಮಾಜದಲ್ಲಿ ಯುವಜನಾಂಗವು ದಾರಿ ತಪ್ಪುತ್ತಿರುವ ಸಂದರ್ಭದಲ್ಲಿ ಸಂಘಟನೆಗಳ ಮೂಲಕ ಜಾಗೃತಿ ಮೂಡಿಸುವುದು ಅನಿವಾರ್ಯ. ಹಲವಾರು ಸಮಸ್ಯೆಗಳ ನಿವಾರಣೆಗೆ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಬಿಲ್ಲವರ ಯೂನಿಯನ್, ಕುದ್ರೊಟ್ಟು, ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳ್ ಬಡಾದ ಕಾರ್ಯದರ್ಶಿ ರಮೇಶ್ ಅಂಚನ್ ತಿಳಿಸಿದರು.   ಅವರು ಪಡುಬಿದ್ರಿ ಬಿಲ್ಲವ ಸಂಘದ ಸಭಾ ಭವನದಲ್ಲಿ ಜರಗಿದ ಯುವವಾಹಿನಿ ಪಡುಬಿದ್ರಿ ಘಟಕದ 2018 ನೇ ಸಾಲಿನ ಪದಗ್ರಹಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು […]

Read More

ಅಧ್ಯಕ್ಷರಾಗಿ ದೀಪಕ್ ಕೆ.ಬೀರ ಆಯ್ಕೆ

ಪಡುಬಿದ್ರೆ : ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ದೀಪಕ್ ಕೆ.ಬೀರ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ದೀಪಕ್. ಕೆ. ಬೀರ ಉಪಾಧ್ಯಕ್ಷರು : ಯೋಗೀಶ್ ಪೂಜಾರಿ ಕಾರ್ಯದರ್ಶಿ : ಶೈಲಜಾ ಜೊತೆ ಕಾರ್ಯದರ್ಶಿ : ಶಾಶ್ವತ್ ಕೋಶಾಧಿಕಾರಿ : ಅಶ್ವಥ್ ಪಾದೆಬೆಟ್ಟು ಸಂಘಟನಾ ಕಾರ್ಯದರ್ಶಿ : ಸುಧೀರ್ ನಿರ್ದೇಶಕರು: ನಾರಾಯಣ ಗುರು ತತ್ವ ಪ್ರಚಾರ : ನಿಶ್ಮಿತಾ ಪಿ.ಎಚ್ ಸಮಾಜಸೇವೆ : ಅಕ್ಷಯ್ ಕುಮಾರ್ ವ್ಯಕ್ತಿತ್ವ ವಿಕಸನ : ಪ್ರಜ್ವಲ್ ಉದ್ಯೋಗ ಮತ್ತು ಭವಿಷ್ಯ […]

Read More

ಮಕ್ಕಳ ಹಬ್ಬ- 2017

ಮಕ್ಕಳಿಗೆ ಸಣ್ಣ ಪ್ರಾಯದಲ್ಲಿ ಅವರ ಪ್ರತಿಭೆಗಳನ್ನು ಗುರುತಿಸಲು ಸಾಂಸ್ಕೃತಿಕ ವೇದಿಕೆಗಳು ಅನಿವಾರ್ಯ. ಇಂತಹ ವೇದಿಕೆಗಳ ಮೂಲಕ ಪ್ರತಿಭೆಯ ಜೊತೆಗೆ, ಆತ್ಮವಿಶ್ವಾಸ ಮೂಡಲು ಸಹಕಾರಿಯಾಗಿದೆ. ಇಂದು ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೆ ಹೆತ್ತವರು ಮತ್ತು ಶಿಕ್ಷಕರು ಗಮನಹರಿಸುತ್ತಿರುವುದು ಅನಿವಾರ್ಯವಾಗಿದೆ ಎಂದು ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿತೇಂದ್ರ ಪುರ್ಟಾಡೋ ಹೇಳಿದರು. ಅವರು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ದಿನಾಂಕ 19.11.2017 ರಂದು ನಂದಿಕೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!