Yuvavahini

ಕಟಪಾಡಿ

ನಾರಾಯಣ ಗುರು ಜಯಂತಿ ಆಚರಣೆ

ತಾ 08, 09 ,2019 ರಂದು ಶ್ರೀ ಬ್ರಹ್ಮ ಶ್ರೀ ನಾರಾಯಣ ಗುರು ಗಳ ಜನ್ಮ ದಿನದ ಪ್ರಯುಕ್ತ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಯುವಾಹಿನಿ ಕಟಪಾಡಿ ಘಟಕದ ಸದಸ್ಯರೆಲ್ಲರ ಸಹಕಾರದಿಂದ ನೆರವೇರಿಸಲಾಯಿತು ಯುವವಾಹಿನಿ ಕಟಪಾಡಿ ಘಟಕದ ಸದಸ್ಯರಿಂದ ಶ್ರೀ ವಿಶ್ವನಾಥ ಕ್ಷೇತದಲ್ಲಿ ನಾರಾಯಣ ಗುರು ಜಯಂತಿ ಪ್ರಯುಕ್ತ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು

Read More

ಪದಗ್ರಹಣ ಸಮಾರಂಭ – 2019

ಯುವವಾಹಿನಿ (ರಿ) ಕಟಪಾಡಿ ಘಟಕದ ಪದಗ್ರಹಣ ಸಮಾರಂಭವು ಆಗಸ್ಟ್ 28 ರಂದು ಶ್ರೀ ವಿಶ್ವನಾಥ ಕ್ಷೇತ್ರದ ಗುರುಪ್ರಸಾದ್ ಸಭಾಂಗಣದಲ್ಲಿ ಜರಗಿತು.ಉದ್ಯಮಿ ಕಾಪು ಪ್ರಭಾಕರ್ ಪೂಜಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಪದ ಪ್ರಧಾನ ವನ್ನು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ನರೇಶ್ ಸಶಿಹಿತ್ಳು ನೆರವೇರಿಸಿದರು, ಮುಖ್ಯ  ಅತಿಥಿಗಳಾಗಿ ಕೇಂದ್ರ ಸಮಿತಿಯ ನಮ್ಮ ಘಟಕದ ಸಲಹೆಗರರಾದ ರವಿರಾಜ್ ಮತ್ತು ಉಡುಪಿ ವಲಯ ಸಂಘಟಕರಾದ ರಮೇಶ್ ಕೋಟಿಯಾನ್ ಹಾಗೂ ಕ್ಷೇತ್ರದ ಅಧ್ಯಕ್ಷರಾದ ಬಿ ಎನ್ ಶಂಕರ್ ಪೂಜಾರಿ ಉಪಸ್ಥಿತರಿದ್ದರು. 2018-19 ರ ಅಧ್ಯಕ್ಷರಾದ […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ರಕ್ತದಾನ ಶಿಬಿರ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ, ಜೇಸಿಐ ಕಟಪಾಡಿ, ವಜ್ರ ಜಿಮ್‌ ಕಟಪಾಡಿ ಮತ್ತು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಹಾಗೂ ಉಡುಪಿ ಜಿಲ್ಲಾಸ್ಪತ್ರೆ ಇವರ ಸಹಯೋಗದಲ್ಲಿ ದಿನಾಂಕ ಜ.13ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಬೃಹತ್‌ ರಕ್ತದಾನ ಶಿಬಿರವು ಜರಗಿತು. ಶ್ರೀ ಕ್ಷೇತ್ರದ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್‌ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆಸ್ಪತ್ರೆಯ ರಕ್ತದಾನ ವಿಭಾಗದ ಮುಖ್ಯಸ್ಥೆ ವೀಣಾ ಕುಮಾರಿ, ಯುವವಾಹಿನಿ ಕೇಂದ್ರ ಸಮಿತಿಯ ರಮೇಶ್‌ ಕೋಟ್ಯಾನ್‌, ಶ್ರೀ […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ಜೀವನೋತ್ಸಾಹ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 26.11.2018ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಜೀವನೋತ್ಸಾಹ ವ್ಯಕ್ತಿತ್ವ ವಿಕಸನ ಹಾಗೂ ಉದ್ಯೋಗ ಮಾಹಿತಿ ತರಬೇತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಧಾಕರ್ ಕಾರ್ಕಳ ಕಾರ್ಯಾಗಾರ ನಡೆಸಿಕೊಟ್ಟರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಗೌ| ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್ ಕಾರ್ಯಾಗಾರ ಉದ್ಘಾಟಿಸಿದರು. ಯುವವಾಹಿನಿ(ರಿ) ಕಟಪಾಡಿ ಘಟಕದ ಅಧ್ಯಕ್ಷ ರಿತೇಶ್ ಬಿ.ಕೋಟ್ಯಾನ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ಗೂಡುದೀಪ ಸ್ಪರ್ಧೆ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ದಿನಾಂಕ 19.11.2018 ರಂದು ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ದೀಪಾವಳಿ ಮತ್ತು ಕ್ಷೇತ್ರದ ಭಜನಾ ಸಪ್ತಾಹದ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಿತೇಶ್ ಬಿ. ಕೋಟ್ಯಾನ್ ವಹಿಸಿದರು. ಶ್ರೀ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಉಪಾಧ್ಯಕ್ಷ ರತ್ನಾಕರ್ ಆಂಚನ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಅಶೋಕ್ ಎಮ್. ಸುವರ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್, ಹಾಗೂ ಸದಸ್ಯರು, […]

Read More

ಮಾತು ಕೃತಿಯೊಡನೆ ಸೇರಿದಾಗ ಮಾತ್ರ ಆಡಿದ ಮಾತಿಗೆ ಬೆಲೆ : ನಡುಬೈಲು

ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭವು ದಿನಾಂಕ 19.08.2018 ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಅಶೋಕ್ ಎಮ್.ಸುವರ್ಣ ಸಮಾರಂಭ ಉದ್ಘಾಟಿಸಿದರು. 2018-19 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದ ಯುವವಾಹಿನಿ ಕೇಂದ್ರ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ ಮನುಷ್ಯರಲ್ಲಿ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರ ಸಮಯ ಪ್ರಜ್ಞೆ ,ಪರೋಪಕಾರ ದಂತಹ ಗುಣಗಳು ಮೇಳೈಸಿದಾಗ ಸ್ವಸ್ಥ ಸಮಾಜದ ನಿರ್ಮಾಣ […]

Read More

ಅಧ್ಯಕ್ಷರಾಗಿ ರಿತೇಶ್ ಬಿ.ಕೋಟ್ಯಾನ್ ಆಯ್ಕೆ

ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಿತೇಶ್.ಬಿ.ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಕಾರ್ತಿಕ್.ಡಿ.ಕೆ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ರಿತೇಶ್ ಬಿ ಕೋಟ್ಯಾನ್ ಉಪಾಧ್ಯಕ್ಷರು : ಮಧುಕರ್ ಅಂಚನ್ ಕಾರ್ಯದರ್ಶಿ : ಕಾರ್ತಿಕ್ ಡಿ.ಕೆ ಜೊತೆ ಕಾರ್ಯದರ್ಶಿ : ಜೀವನ್ ವಿ.ಎಸ್ ಕೋಶಾಧಿಕಾರಿ : ಕಮಲಾಕ್ಷ ಅಂಬಾಡಿ ಜೊತೆ ಕೋಶಾಧಿಕಾರಿ : ಭಾಸ್ಕರ್ ಪೂಜಾರಿ   ನಿರ್ದೇಶಕರು ಕ್ರೀಡೆ : ನಿತಿನ್ ಸುವರ್ಣ ನಾರಾಯಣಗುರು ತತ್ವಪ್ರಚಾರ ಅನುಷ್ಠಾನ   : […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಬಡ ಕುಟುಂಬಕ್ಕೆ ಸಹಾಯ ಹಸ್ತ

ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಬಡ ಕುಟುಂಬದ ಮನೆಯನ್ನು ವಾಸ ಮಾಡಲು ಯೋಗ್ಯವಾಗುವಂತೆ ಮಾಡಲಾಯಿತು. ಕಟಪಾಡಿ ಮೂಡಬೆಟ್ಟು ಗ್ರಾಮದ ಶ್ಯಾಮಲ‌ ಪುರಾಣಿಕ್ ಎಂಬವರ ಮನೆ ವಾಸಿಸಲು‌ ಅನಾನುಕೂಲತೆಯಿಂದ ಕೂಡಿದ್ದು, , ಯುವವಾಹಿನಿ ಕಟಪಾಡಿ ಘಟಕವು ರೂ 25,000/- ವೆಚ್ಚದಲ್ಲಿ ಶೌಚಾಲಯ ನಿರ್ಮಾಣದೊಂದಿಗೆ ಮನೆಯನ್ನು ವಾಸಿಸಲು ಯೋಗ್ಯವಾಗುವಂತೆ ಮಾಡಲಾಯಿತು. ಕಾಪು ಪೋಲೀಸ್ ಠಾಣಾ ಉಪನಿರೀಕ್ಷಕ ನಿತ್ಯಾನಂದ ಗೌಡ, ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸಹಕಾರ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕಟಪಾಡಿ ಘಟಕದ ಅಧ್ಯಕ್ಷ […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!