Yuvavahini

ಉಪ್ಪಿನಂಗಡಿ

‘ಯುವಬಾಂಧವ್ಯ’ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ

ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಮಹತ್ವಾಕಾಂಕ್ಷಿ ಯೋಜನೆ ಯುವಬಾಂಧವ್ಯ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 29 ರಂದು ಘಟಕದ ಸಂಘಟನಾ ಕಾರ್ಯದರ್ಶಿ ಅಭಿನಂದನ್ ಅವರ ನಿವಾಸದಲ್ಲಿ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನು ಮನೆಯ ಹಿರಿಯರಾದ ಡೀಕಯ್ಯ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಘಟಕದ ಅಧ್ಯಕ್ಷರಾದ ಮನೋಜ್ ಎನ್. ಸಾಲ್ಯಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಘಟಕ ವ್ಯಾಪ್ತಿಯ ಸದಸ್ಯರ ಮನೆಗಳಲ್ಲಿ ‘ಯುವ ಬಾಂಧವ್ಯ’ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸದಸ್ಯರ ನಡುವೆ ಆತ್ಮೀಯ ಸಂಬಂಧವನ್ನು ವೃದ್ಧಿಸುವುದು ಸಂಘಟನೆಯ […]

Read More

ಯುವವಾಹಿನಿ ಉಪ್ಪಿನಂಗಡಿ ಘಟಕದಿಂದ ರಕ್ತದಾನ ಶಿಬಿರ

ಉಪ್ಪಿನಂಗಡಿ : ಸೂರ್ಯ ಆಸ್ಪತ್ರೆ ಉಪ್ಪಿನಂಗಡಿ ಇದರ ಪ್ರಥಮ ವರ್ಷಾಚರಣೆಯ ಅಂಗವಾಗಿ, ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಜೆಸಿಐ ಉಪ್ಪಿನಂಗಡಿ, ರೋಟರಿ ಕ್ಲಬ್ ಉಪ್ಪಿನಂಗಡಿ, ಹವ್ಯಕ ವಲಯ ಉಪ್ಪಿನಂಗಡಿ, ಇಂಡಿಯನ್ ಕ್ಯಾಥೋಲಿಕ್ ಯೂತ್ ಮೆಂಬರ್ಸ್ (ICYM), ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 22/03/2026 ರಂದು ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಡಾ. ಕೆ.ಜಿ. ಭಟ್ ಹಾಗೂ ಖ್ಯಾತ ದಂತ ವೈದ್ಯರಾದ […]

Read More

ಯುವ ಸಂದೇಶ–2026 : ರಸ್ತೆ ಸುರಕ್ಷತಾ ಜಾಥಾ ಯಶಸ್ವಿ

ಉಪ್ಪಿನಂಗಡಿ : ಯುವಜನರ ನಿರ್ಲಕ್ಷ್ಯ ಮನೋಭಾವದಿಂದ ರಸ್ತೆ ಅಪಘಾತಗಳು ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ನಮ್ಮನ್ನು ಮಾತ್ರವಲ್ಲದೆ ನಮ್ಮನ್ನು ನಿರೀಕ್ಷಿಸುತ್ತಿರುವ ಮನೆಯವರನ್ನೂ ರಕ್ಷಿಸುತ್ತದೆ. ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಯುವಜನತೆ ತಮ್ಮ ಹೆತ್ತವರಿಗೆ ನೀಡುವ ಅತಿ ದೊಡ್ಡ ಕೊಡುಗೆ ಎಂದು ಬಂಟ್ವಾಳ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಅಧಿಕಾರಿ ಚರಣ್ ಕೆ.ಎಸ್ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 15.02.2026 […]

Read More

ಜವಾಬ್ದಾರಿಯ ಅರಿವೇ ಸಂಘಟನೆಯ ಶಕ್ತಿ : ಜಗದೀಶ್‌ಚಂದ್ರ ಡಿ.ಕೆ

ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಪದಾಧಿಕಾರಿಗಳು, ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳಿಗೆ ತಮ್ಮ ಜವಾಬ್ದಾರಿ ಮತ್ತು ಕರ್ತವ್ಯಗಳ ಅರಿವು ಮೂಡಿಸುವ ಉದ್ದೇಶದಿಂದ “ಮಾಹಿತಿ ಕಾರ್ಯಾಗಾರ – 2k26” ಕಾರ್ಯಕ್ರಮವನ್ನು ದಿನಾಂಕ 25.01.2026ರ ಆದಿತ್ಯವಾರ ಉಪ್ಪಿನಂಗಡಿ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ಆಯೋಜಿಸಲಾಯಿತು.ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ.ಕೆ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಯುವವಾಹಿನಿ ಸಂಘಟನೆಯ ಹಿನ್ನೆಲೆ, ಉದ್ದೇಶ, ಘಟಕಗಳ ಪದಾಧಿಕಾರಿಗಳು, ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳ ಜವಾಬ್ದಾರಿ–ಕರ್ತವ್ಯಗಳು […]

Read More

“ಗುರು ಸ್ಮರಣೆ – 2026”

ಉಪ್ಪಿನಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ನಕ್ಷತ್ರ ಶತಭಿಷ ದಿನವಾದ 22.01.2026ರ ಗುರುವಾರದಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಹಾಗೂ ಬಜತ್ತೂರು ಬಿಲ್ಲವ ಗ್ರಾಮ ಸಮಿತಿಯ ಸಂಯುಕ್ತ ಆಶ್ರಯದಲ್ಲಿ “ಗುರು ಸ್ಮರಣೆ – 2026” ಭಜನಾ–ಸಂಕೀರ್ತನಾ ಕಾರ್ಯಕ್ರಮ ನಡೆಯಿತು ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಹಾಗೂ ಗ್ರಾಮ ಸಮಿತಿಯ ಸದಸ್ಯರು ಸೇರಿದಂತೆ ಒಟ್ಟು 65 ಮಂದಿ ಭಕ್ತಿಯಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಗುರು ಮಂದಿರದ ಸಂಚಾಲಕರಾದ ಅಶೋಕ್ ಕುಮಾರ್ ಪಡ್ಪು, […]

Read More

ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು ಆಯ್ಕೆ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್ 21ರಂದು ಮಂಗಳೂರು ಪುರಭವನದಲ್ಲಿ ನಡೆದ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶದ ಸಂದರ್ಭದಲ್ಲಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಯುವವಾಹಿನಿಯ 38 ನೇ ವಾರ್ಷಿಕ ಸಮಾವೇಶದಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಣೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ರೇಖಾಗೋಪಾಲ್, ಪ್ರಥಮ ಉಪಾಧ್ಯಕ್ಷರಾಗಿ ವಿದ್ಯಾ ರಾಕೇಶ್, ದ್ವಿತೀಯ ಉಪಾಧ್ಯಕ್ಷರಾಗಿ ಸುರೇಶ್ ಪೂಜಾರಿ, ಕೋಶಾಧಿಕಾರಿಯಾಗಿ ಸತೀಶ್ ಕಿಲ್ಪಾಡಿ ಮೂಲ್ಕಿ, ಜತೆ ಕಾರ್ಯದರ್ಶಿಯಾಗಿ ಹರೀಶ್ ಕೋಟ್ಯಾನ್ […]

Read More

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್. ಸಾಲ್ಯಾನ್ ಆಯ್ಕೆ

ಉಪ್ಪಿನಂಗಡಿ: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಮನೋಜ್ ಎನ್. ಸಾಲ್ಯಾನ್ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು: ಮನೋಜ್ ಎನ್. ಸಾಲ್ಯಾನ್ – ಸುಣ್ಣಾಜೆ ಪ್ರಥಮ ಉಪಾಧ್ಯಕ್ಷರು: ಅಂಕಿತ್ ಎಂ.ಜೆ. ದ್ವಿತೀಯ ಉಪಾಧ್ಯಕ್ಷರು: ಲಕ್ಷ್ಮೀಶ – ನಿಡ್ಡೆಂಕಿ ಕಾರ್ಯದರ್ಶಿ: ರಮೇಶ್ ಎಸ್. ಸಾಂತ್ಯ ಜೊತೆ ಕಾರ್ಯದರ್ಶಿ: ನಯನಾ ಮನೋಹರ್ ಕೋಶಾಧಿಕಾರಿ: ಸದಾಶಿವ ಬಂಗೇರ – ಎಲಿಯ ವ್ಯಕ್ತಿತ್ವ ವಿಕಸನ ನಿರ್ದೇಶಕರು: ವನಿತಾ ಕೃಷ್ಣಪ್ಪ […]

Read More

ಮಹಾಸಭೆ ಮತ್ತು ಯುವ ಬಾಂಧವ್ಯ 2025 ಸಮಾರೋಪ-ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ಯುವ ಸಮುದಾಯ ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು” .. ನ್ಯಾಯವಾದಿ ಸಂತೋಷ್ ಕುಮಾರ್. ಯುವಕರು ಸಮಾಜದ ಸಮಸ್ಯೆ, ನೋವುಗಳಿಗೆ ಸ್ಪಂದಿಸುವ ಹಾಗೂ ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಿಕೊಂಡಾಗ ಆವರ ಮೂಲಕ ಸಂಘಟನೆಗಳ ಉದ್ದೇಶ ಸಾರ್ಥಕವಾಗಬಲ್ಲುದು. ಯುವವಾಹಿನಿ ಸಂಘಟನೆ ತನ್ನ ಸಾಧನೆಗಾಗಿ ರಾಜ್ಯ ಪ್ರಶಸ್ತಿ ಪಡೆದಿರುವುದು ಅಭಿನಂದನಾರ್ಹ ಎಂದು ಉಪ್ಪಿನಂಗಡಿಯ ಖ್ಯಾತ ನ್ಯಾಯವಾದಿ ಶ್ರೀ ಸಂತೋಷ್ ಕುಮಾರ್ ತಿಳಿಸಿದರು. ಅವರು ದಿ.22.11.25 ರಂದು ಬೆಳ್ಳಿಪ್ಪಾಡಿ ಶ್ರೀ ಚಂದ್ರಶೇಖರ ಕೆ ಸನಿಲ್ ರವರ ಮನೆ “ಯಮುನಾ” ದಲ್ಲಿ ನಡೆದ ಘಟಕದ ಮಹಾಸಭೆ […]

Read More

ಯುವ ಬಾಂಧವ್ಯ 2025-ಯುವವಾಹಿನಿ(ರಿ.)ಉಪ್ಪಿನಂಗಡಿ ಘಟಕ

ಯುವವಾಹಿನಿ ಸಂಸ್ಥೆಯ ಅನೇಕ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿದ್ದು, ಇದರ ಸದಸ್ಯರ ಶಿಸ್ತುಬದ್ದ ಸೇವಾ ಚಟುವಟಿಕೆ, ಬದ್ಧತೆಯಿಂದಾಗಿ ಯುವಕರು ಯುವವಾಹಿನಿಯತ್ತ ಒಲವು ತೋರಿಸುತ್ತಿದ್ದಾರೆ, ಅಲ್ಲದೆ ಇತರ ಸೇವಾ ಸಂಸ್ಥೆಗಳಿಗೆ ಮಾದರಿಯಾಗಿ ಕೆಲಸ ಮಾಡುತ್ತಿದೆ ಎಂದು ಪೆರ್ನೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಪೆರ್ನೆ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ತನಿಯಪ್ಪ ಪೂಜಾರಿ ತಿಳಿಸಿದರು. ಅವರು ಘಟಕದ ವತಿಯಿಂದ ಲೀಲಾವತಿ ಕೊರಗಪ್ಪ ಪೂಜಾರಿ ಹತ್ತು ಕಳಸೆ ಇವರ ಮನೆಯಲ್ಲಿ ನಡೆದ “ಯುವ ಭಾಂದವ್ಯ.. 2025” ಅಕ್ಟೋಬರ್ ತಿಂಗಳ […]

Read More

ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವೆ -ಯುವವಾಹಿನಿ(ರಿ.) ಉಪ್ಪಿನಂಗಡಿ ಘಟಕ

ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಸ್ವಯಂ ಸೇವೆ ನಡೆಯಿತು. ಘಟಕದ ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಇವರ ನೇತೃತ್ವದಲ್ಲಿ 100 ಕ್ಕೂ ಹೆಚ್ಚಿನ ಮಂದಿ ಸದಸ್ಯರು02.10.2025ರಂದು ಬೆಳಿಗ್ಗೆಯಿಂದ ಸಂಜೆ ತನಕ ಸೇವೆ ಸಲ್ಲಿಸಿದರು. ಸೇವೆಯಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್, ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!