Yuvavahini

ಉಪ್ಪಿನಂಗಡಿ

ವೈದ್ಯರಿಗೆ ಯುವವಾಹಿನಿಯಿಂದ ಗೌರವಾರ್ಪಣೆ

ಉಪ್ಪಿನಂಗಡಿ, ಜುಲೈ 16: ವಿಶ್ವ ವೈದ್ಯರ ದಿನಾಚರಣೆ-2026ರ ಅಂಗವಾಗಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಉಪ್ಪಿನಂಗಡಿಯ ವಿವಿಧ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳಿಗೆ ಭೇಟಿ ನೀಡಿ ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಾ. ರಾಜಾರಾಮ್ ಕೆ.ಬಿ., ಡಾ. ರಮ್ಯಾ ರಾಜಾರಾಮ್, ಡಾ. ಎಂ.ಆರ್. ಶೆಣೈ, ಡಾ. ಕೆ.ಜಿ. ಭಟ್, ಡಾ. ಎಂ.ಎನ್. ಭಟ್, ಡಾ. ರಘು, ಡಾ. ಸದಾನಂದ ಕುಂದರ್, ಡಾ. ಆಶಿತ್ ಎಂ.ವಿ., ಡಾ. ಶ್ವೇತಾ ಆಶಿತ್, […]

Read More

ಮಂಜ ಬೈದ್ಯರ ಹೆಸರನ್ನು ಉಪ್ಪಿನಂಗಡಿ ಸರ್ಕಲ್‌ಗೆ ನಾಮಕರಣ ಮಾಡಲು ಯುವವಾಹಿನಿ ಮನವಿ

ಉಪ್ಪಿನಂಗಡಿ, ಜುಲೈ 16: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ, ಉಪ್ಪಿನಂಗಡಿ ಸರ್ಕಲ್‌ಗೆ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯ ಅವರ ಹೆಸರನ್ನು ನಾಮಕರಣ ಮಾಡುವುದರ ಜೊತೆಗೆ, ಅವರ ಪ್ರತಿಮೆಯನ್ನು ನಿರ್ಮಿಸಿ ಮುಂದಿನ ಪೀಳಿಗೆಗೆ ಅವರ ದೇಶಸೇವೆ ಹಾಗೂ ತ್ಯಾಗವನ್ನು ಶಾಶ್ವತವಾಗಿ ಪರಿಚಯಿಸುವಂತೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು ವಿಷಯವನ್ನು ಸಕಾರಾತ್ಮಕವಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ […]

Read More

ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

ಉಪ್ಪಿನಂಗಡಿ, ಜು. 12: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಶಿಬಿರವನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಉಪಯುಕ್ತವಾಗಿದ್ದು, […]

Read More

ಅಧ್ಯಕ್ಷರ ಮಾತು : ಅಶೋಕ್ ಕುಮಾರ್ ಪಡ್ಪು

ಯುವವಾಹಿನಿ ಕುಟುಂಬದ ಅತ್ಮೀಯ ಸದಸ್ಯರೆ, ‘ಯುವಸಿಂಚನ’ದ ಚೊಚ್ಚಲ ಸಂಚಿಕೆಗೆ ನೀವು ತೋರಿದ ಅತೀವ ಪ್ರೀತಿ, ಪ್ರೋತ್ಸಾಹ ಮತ್ತು ಮೆಚ್ಚುಗೆಯ ಮಾತುಗಳು ನಮ್ಮಲ್ಲಿ ಹೊಸ ಚೈತನ್ಯವನ್ನು ತುಂಬಿವೆ. ಅದೇ ಲವಲವಿಕೆ ಮತ್ತು ಆತ್ಮವಿಶ್ವಾಸದೊಂದಿಗೆ, ಮಲೆನಾಡ ಮಳೆಯ ಸಿಂಚನದಂತೆ ಹಿತ ನೀಡುವ ಈ ದ್ವಿತೀಯ ಸಂಚಿಕೆಯನ್ನು ನಿಮ್ಮ ಕೈಗಿಡಲು ಹೆಮ್ಮೆ ಎನಿಸುತ್ತಿದೆ. ಯುವವಾಹಿನಿಯ ಪಯಣವು ಕೇವಲ ಕಾರ್ಯಕ್ರಮಗಳ ಸರಮಾಲೆಯಲ್ಲ; ಅದು ವ್ಯಕ್ತಿತ್ವವನ್ನು ಪಳಗಿಸುವ, ಸಮಾಜವನ್ನು ಭಾವನಾತ್ಮಕವಾಗಿ ಬೆಸೆಯುವ ಮತ್ತು ಹೊಸ ಭರವಸೆಯ ಹಾದಿಗಳನ್ನು ಸೃಷ್ಟಿಸುವ ಒಂದು ನಿರಂತರ ಜ್ಞಾನಯಜ್ಞ. ಬಂಟ್ವಾಳ […]

Read More

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಮಹತ್ವಾಕಾಂಕ್ಷಿ ಸರಣಿ ಕಾರ್ಯಕ್ರಮ “ಯುವ ಬಾಂಧವ್ಯ–2026”

ಉಪ್ಪಿನಂಗಡಿ, ಜೂನ್ 21: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವು “ಮನೆ ಮನಗಳಲ್ಲಿ ಯುವವಾಹಿನಿ” ಎಂಬ ಧ್ಯೇಯದೊಂದಿಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷಿ ಸರಣಿ ಕಾರ್ಯಕ್ರಮ “ಯುವ ಬಾಂಧವ್ಯ–2026”ರ ಅಂಗವಾಗಿ ಘಟಕದ ಮಾಜಿ ಅಧ್ಯಕ್ಷ ಹರೀಶ್ ಪಾಲೆತ್ತಡಿ ಅವರ ಮನೆಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್, ಘಟಕ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಯುವವಾಹಿನಿಯ ಧ್ಯೇಯೋದ್ದೇಶಗಳನ್ನು ತಲುಪಿಸುವ ಮೂಲಕ ಯುವ ಸಮುದಾಯವನ್ನು ಸಂಘಟನೆಯೊಂದಿಗೆ ಬೆಸೆದು, ಸಮಗ್ರ ಹಾಗೂ ಸದೃಢ ಘಟಕವನ್ನು ನಿರ್ಮಿಸುವುದು […]

Read More

“ಮರ ಬೆಳೆಸಿ – ಭವಿಷ್ಯ ಉಳಿಸಿ” ಅಭಿಯಾನ

ಉಪ್ಪಿನಂಗಡಿ, ಜೂನ್ 21: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೇತೃತ್ವದಲ್ಲಿ, ಸರಕಾರಿ ಪ್ರೌಢಶಾಲೆ ಹಿರೇಬಂಡಾಡಿಯ ಮುಖ್ಯೋಪಾಧ್ಯಾಯರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಸಹಭಾಗಿತ್ವದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ “ಮರ ಬೆಳೆಸಿ – ಭವಿಷ್ಯ ಉಳಿಸಿ” ಅಭಿಯಾನವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲೆಯ ಕ್ರೀಡಾಂಗಣದ ಸುತ್ತಮುತ್ತ ವಿವಿಧ ಬೆಲೆಬಾಳುವ ಮರಗಳು ಹಾಗೂ ಹಣ್ಣಿನ ಗಿಡಗಳನ್ನು ನೆಟ್ಟು, ಅವುಗಳ ಪೋಷಣೆಯ ಜವಾಬ್ದಾರಿಯನ್ನು ಶಾಲಾಭಿವೃದ್ಧಿ ಸಮಿತಿಗೆ ಹಸ್ತಾಂತರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಘಟಕದ ಗೌರವ ಸಲಹೆಗಾರ ವರದರಾಜ್ ಎಂ. ಅವರು ಪರಿಸರ […]

Read More

ಯುವ ಬಾಂಧವ್ಯ : 2026 ಸರಣಿ ಕಾರ್ಯಕ್ರಮ.

ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಮಹತ್ವಾಕಾಂಕ್ಷಿ ಕಾರ್ಯಕ್ರಮ “ಯುವಬಾಂಧವ್ಯ..2026” ದಿನಾಂಕ 25-04-2026 ನೇ ಶನಿವಾರದಂದು ಬಿಳಿಯೂರು ಗ್ರಾಮದ ಪೂಜಾರಿಪಾಲು ಹೊಸಮನೆಯಲ್ಲಿ ಸಂಜೆ 6.30ಕ್ಕೆ ನಡೆಯಿತು.ಗುರುಸ್ತುತಿಯೊಂದಿಗೆ ಪ್ರಾರಂಭವಾದ ಯುವ ಬಾಂಧವ್ಯದ ಸಭಾಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷರಾದ ಮನೋಜ್ ಸಾಲ್ಯಾನ್ ಸ್ವಾಗತಿಸಿದರು, ಘಟಕದ ಕಾರ್ಯಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಆತಿಥ್ಯ ವಹಿಸಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯರೂ , ಸಮಾಜಸೇವಕರಾದ ತನಿಯಪ್ಪ ಪೂಜಾರಿಯವರು ಯುವಬಾಂಧವ್ಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಮ್ಮ ಸಮಾಜದ ಸಂಘಟನೆಗಳು ಯಾವುದೇ ಇದ್ದರೂ ಸೇವಾ […]

Read More

ಪ್ರೇಕ್ಷಕರ ಮನಸೂರೆಗೊಂಡ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಕಲಾ ಪ್ರದರ್ಶನ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಉಪ್ಪಿನಂಗಡಿ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.

Read More

‘ಯುವಬಾಂಧವ್ಯ’ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ

ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಮಹತ್ವಾಕಾಂಕ್ಷಿ ಯೋಜನೆ ಯುವಬಾಂಧವ್ಯ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 29 ರಂದು ಘಟಕದ ಸಂಘಟನಾ ಕಾರ್ಯದರ್ಶಿ ಅಭಿನಂದನ್ ಅವರ ನಿವಾಸದಲ್ಲಿ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನು ಮನೆಯ ಹಿರಿಯರಾದ ಡೀಕಯ್ಯ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಘಟಕದ ಅಧ್ಯಕ್ಷರಾದ ಮನೋಜ್ ಎನ್. ಸಾಲ್ಯಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಘಟಕ ವ್ಯಾಪ್ತಿಯ ಸದಸ್ಯರ ಮನೆಗಳಲ್ಲಿ ‘ಯುವ ಬಾಂಧವ್ಯ’ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸದಸ್ಯರ ನಡುವೆ ಆತ್ಮೀಯ ಸಂಬಂಧವನ್ನು ವೃದ್ಧಿಸುವುದು ಸಂಘಟನೆಯ […]

Read More

ಯುವವಾಹಿನಿ ಉಪ್ಪಿನಂಗಡಿ ಘಟಕದಿಂದ ರಕ್ತದಾನ ಶಿಬಿರ

ಉಪ್ಪಿನಂಗಡಿ : ಸೂರ್ಯ ಆಸ್ಪತ್ರೆ ಉಪ್ಪಿನಂಗಡಿ ಇದರ ಪ್ರಥಮ ವರ್ಷಾಚರಣೆಯ ಅಂಗವಾಗಿ, ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಜೆಸಿಐ ಉಪ್ಪಿನಂಗಡಿ, ರೋಟರಿ ಕ್ಲಬ್ ಉಪ್ಪಿನಂಗಡಿ, ಹವ್ಯಕ ವಲಯ ಉಪ್ಪಿನಂಗಡಿ, ಇಂಡಿಯನ್ ಕ್ಯಾಥೋಲಿಕ್ ಯೂತ್ ಮೆಂಬರ್ಸ್ (ICYM), ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 22/03/2026 ರಂದು ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಡಾ. ಕೆ.ಜಿ. ಭಟ್ ಹಾಗೂ ಖ್ಯಾತ ದಂತ ವೈದ್ಯರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!