Yuvavahini

ಮಂಗಳೂರು ಮಹಿಳಾ

ಆತ್ಮವಿಶ್ವಾಸ, ಛಲ ಹಾಗೂ ಸೂಕ್ತ ಮಾಹಿತಿ ಯಶಸ್ವಿ ಉದ್ಯಮಕ್ಕೆ ಅಡಿಪಾಯ : ಅಶೋಕ್ ಕುಮಾರ್ ಪಡ್ಪು

ಮಂಗಳೂರು, ಜುಲೈ 20 : “ನಮಗೆ ಕನಸುಗಳಿರಬೇಕು. ಹಾಗೆಯೇ ದೂರದೃಷ್ಟಿಯೂ ಇರಬೇಕು. ನೀವು ಯಾವ ಕ್ಷೇತ್ರದಲ್ಲಿ ಉದ್ಯಮ ಆರಂಭಿಸಬೇಕೆಂದು ಬಯಸುತ್ತೀರೋ, ಆ ಕ್ಷೇತ್ರವನ್ನು ‘ನಾನು ಸಾಧಿಸಬಲ್ಲೆ’ ಎಂಬ ಆತ್ಮವಿಶ್ವಾಸದಿಂದ ಆಯ್ಕೆ ಮಾಡಿಕೊಂಡು, ಅದರ ಬಗ್ಗೆ ಸೂಕ್ತ ಮಾಹಿತಿಯನ್ನು ಪಡೆದುಕೊಳ್ಳಬೇಕು. ಹಿಂಜರಿಕೆಯಿಂದ ಸಮಯವನ್ನು ವ್ಯರ್ಥ ಮಾಡಿದರೆ, ಕಳೆದ ಸಮಯ ಮತ್ತೆ ಮರಳಿ ಸಿಗುವುದಿಲ್ಲ” ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಹೇಳಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, […]

Read More

ಫ್ಯಾಬ್ರಿಕ್ ಬ್ಯಾಗ್ ತರಬೇತಿ ಮಹಿಳೆಯರ ಸ್ವಾವಲಂಬನೆಗೆ ನೆರವಾಗಲಿ: ಕಸ್ತೂರಿ ಮಹೇಶ್

ಮಂಗಳೂರು, ಜುಲೈ 11: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಹಾಗೂ ಭಾರತಿ ಟ್ರೈನಿಂಗ್ ಸೆಂಟರ್‌ನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಐದು ದಿನಗಳ ಫ್ಯಾಬ್ರಿಕ್ ಬ್ಯಾಗ್ ತರಬೇತಿಯ ಸಮಾರೋಪ ಸಮಾರಂಭವು ಜುಲೈ 11ರಂದು ಕೊಟ್ಟಾರ ಚೌಕಿಯ ಭಾರತಿ ಟ್ರೈನಿಂಗ್ ಸೆಂಟರ್‌ನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್, ಯಾವುದೇ ವಿಷಯವನ್ನು ಕಲಿಯಲು ಮತ್ತು ಸಾಧಿಸಲು ಆಸಕ್ತಿ ಅತ್ಯಗತ್ಯ. ಆರಂಭದಲ್ಲಿ ಹಿಂಜರಿಕೆ ಸಹಜವಾದರೂ ಧೈರ್ಯದಿಂದ ಮುಂದುವರಿದರೆ ಯಶಸ್ಸು […]

Read More

ಮಹಿಳೆಯರಿಗಾಗಿ ಉದ್ಯಮಶೀಲತಾ ತರಬೇತಿ ಶಿಬಿರ

ಮಂಗಳೂರು, ಜೂನ್ 30: ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಸಿಡಾಕ್ ಮಂಗಳೂರು ವತಿಯಿಂದ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಸಹಕಾರದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಕೌಶಲ್ಯ ಮಿಷನ್, ಯುವವಾಹಿನಿ (ರಿ.) ಸುರತ್ಕಲ್ ಘಟಕ, ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಹಾಗೂ ಮಹಿಳಾ ಮಂಡಲ (ರಿ.) ಕುಳಾಯಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಅಭ್ಯರ್ಥಿಗಳಿಗಾಗಿ ಒಂದು ದಿನದ ಉದ್ಯಮಶೀಲತಾ ತರಬೇತಿ ಶಿಬಿರ ಕುಳಾಯಿಯ ಮಹಿಳಾ ಮಂಡಲ ಸಭಾಂಗಣದಲ್ಲಿ […]

Read More

ಉದ್ಯಮಶೀಲತೆಯಿಂದ ಮಹಿಳೆಯರು ಸ್ವಾವಲಂಬಿಗಳಾಗಬೇಕು : ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ

ಮಂಗಳೂರು, ಜೂನ್ 30: ಮಹಿಳೆಯರು ಸ್ವಂತ ಉದ್ಯಮ ಆರಂಭಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ದಿಟ್ಟ ನಿರ್ಧಾರ ಮತ್ತು ಆತ್ಮವಿಶ್ವಾಸದಿಂದ ಯಾವುದೇ ಕ್ಷೇತ್ರದಲ್ಲಿಯೂ ಯಶಸ್ಸು ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ ಹೇಳಿದರು. ಅವರು ಮಹಿಳಾ ಮಂಡಲ (ರಿ.) ಕುಳಾಯಿ, ಮಂಗಳೂರಿನಲ್ಲಿ ನಡೆದ “ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಮಾತನಾಡಿ, ಮಹಿಳೆಯರು ಸಣ್ಣ-ಪುಟ್ಟ […]

Read More

ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು, ಜೂನ್ 20 : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 20ರಂದು ಸಂಜೆ 4 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅವರು ಯೋಗ ತರಬೇತಿ ನೀಡಲು ಆಗಮಿಸಿದ ಯೋಗಗುರು ಶೈಲಜಾ ನವೀನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶೈಲಜಾ ನವೀನ್ ಅವರು, ಯೋಗವು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೇ ಪ್ರತಿದಿನದ ಜೀವನದ ಅವಿಭಾಜ್ಯ […]

Read More

ಯುವಸಿಂಚನ ಜೂನ್ ಸಂಚಿಕೆಯ ಅಂಚೆ ರವಾನೆ ಕಾರ್ಯ

ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯ ಅಂಚೆ ರವಾನೆ ಪೂರ್ವ ಸಿದ್ಧತಾ ಕಾರ್ಯವು ಇಂದು ಯಶಸ್ವಿಯಾಗಿ ನಡೆಯಿತು. ಚಂದಾದಾರರು ಹಾಗೂ ಹಿತೈಷಿಗಳಿಗೆ ಯುವಸಿಂಚನ ಪತ್ರಿಕೆಯನ್ನು ತಲುಪಿಸುವ ಉದ್ದೇಶದಿಂದ ಸುಮಾರು 4,000 ಪತ್ರಿಕೆಗಳಿಗೆ ವಿಳಾಸ ಅಂಟಿಸುವ ಕಾರ್ಯವನ್ನು ಕೈಗೊಳ್ಳಲಾಯಿತು. ಈ ಕಾರ್ಯದಲ್ಲಿ ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಂಗಳೂರು ಮಹಿಳಾ ಘಟಕ ಹಾಗೂ ಯುವಸಿಂಚನ ಸಂಪಾದಕೀಯ ಮಂಡಳಿಯ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಸಹಕಾರ ನೀಡಿದರು.

Read More

ಮಹಿಳಾ ಆರೋಗ್ಯ ಮತ್ತು ಕ್ಯಾನ್ಸರ್ ತಡೆ ಅರಿವು ಕಾರ್ಯಕ್ರಮ

ಮಂಗಳೂರು : ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಮಹಿಳಾ ಆರೋಗ್ಯ, ಋತುಬಂಧ ಮತ್ತು ಕ್ಯಾನ್ಸರ್ ತಡೆ ಅರಿವು ಕಾರ್ಯಕ್ರಮದಲ್ಲಿ, ಋತುಬಂಧದ ಸಂದರ್ಭದಲ್ಲಿ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ಕ್ಯಾನ್ಸರ್ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು, ನಿಯಮಿತ ತಪಾಸಣೆಯ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಅಗತ್ಯತೆಯ ಕುರಿತು ಸಂಪನ್ಮೂಲ ವ್ಯಕ್ತಿ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಮಾಹಿತಿ ನೀಡಿದರು. 40 ವರ್ಷಗಳ ಬಳಿಕ […]

Read More

ಸಂಘಟನೆಯ ಯಶಸ್ಸಿಗೆ ಉಪನಿಬಂಧನೆಗಳ ಅರಿವು ಅಗತ್ಯ: ವಿದ್ಯಾ ರಾಕೇಶ್

ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಸದಸ್ಯೆಯರಿಗಾಗಿ ಆಯೋಜಿಸಲಾಗಿದ್ದ “ಉಪನಿಬಂಧನೆ (ಬೈಲಾ) ಮಾಹಿತಿ ಕಾರ್ಯಾಗಾರವು ಮೇ 23ರಂದು ಸಂಜೆ ಯುವವಾಹಿನಿ ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.​ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅವರು ಕಾರ್ಯಾಗಾರಕ್ಕೆ ಆಗಮಿಸಿದ್ದ ಸರ್ವರನ್ನೂ ಸ್ವಾಗತಿಸಿದರು. ಬಳಿಕ, ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಘಟಕದ ಮಾಜಿ ಅಧ್ಯಕ್ಷೆ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷೆ ವಿದ್ಯಾ ರಾಕೇಶ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ​ಮಹಿಳಾ ಸಬಲೀಕರಣಕ್ಕೆ ಪೂರಕ ಚಿಂತನೆ: […]

Read More

ಶಿವಗಿರಿ ಕ್ಷೇತ್ರ ದರ್ಶನ ಯಾತ್ರೆ

ಮಂಗಳೂರು : ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 04-05-2026 ರಿಂದ 07-05-2026 ರವರೆಗೆ ಆಯೋಜಿಸಲಾದ “ಶಿವಗಿರಿ ಕ್ಷೇತ್ರ ದರ್ಶನ ಯಾತ್ರೆ” ಭಕ್ತಿಭಾವದಿಂದ ಯಶಸ್ವಿಯಾಗಿ ನಡೆಯಿತು. ಈ ಯಾತ್ರೆಯಲ್ಲಿ ಒಟ್ಟು 35 ಮಂದಿ ಸದಸ್ಯರು ಭಾಗವಹಿಸಿದ್ದರು. ದಿನಾಂಕ 04-05-2026 ರಂದು ಸಂಜೆ 5:40ಕ್ಕೆ ಮಂಗಳೂರು ರೈಲ್ವೆ ನಿಲ್ದಾಣದಿಂದ ಭಕ್ತಾದಿಗಳು ರೈಲಿನಲ್ಲಿ ಪ್ರಯಾಣ ಆರಂಭಿಸಿದರು. ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್, ಕಾರ್ಯದರ್ಶಿ ಸೋನಿಯಾ ರಾಜ್, ಉಪಾಧ್ಯಕ್ಷೆ ದೀಪಿಕಾ ಮನೋಜ್ ಹಾಗೂ ಕೋಶಾಧಿಕಾರಿ ಜಯಲಕ್ಷ್ಮಿ ಉಪಸ್ಥಿತರಿದ್ದರು. ಕೇಂದ್ರ […]

Read More

ಆರ್ಗ್ಯಾನಿಕ್ ಕೋನ್ ತರಬೇತಿ ಕಾರ್ಯಗಾರ

ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆರ್ಗ್ಯಾನಿಕ್ ಕೋನ್ ತಯಾರಿಕಾ ತರಬೇತಿ ಕಾರ್ಯಗಾರವು ದಿನಾಂಕ 25-04-2026 ರಂದು ಸಂಜೆ 4 ಗಂಟೆಗೆ ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಮೆಹೆಂದಿ ಕೋನ್ ತಯಾರಿಸುವ ಸರಿಯಾದ ವಿಧಾನಗಳ ಕುರಿತು ತರಬೇತುದಾರರಾಗಿ ಆಗಮಿಸಿದ ಪ್ರಾರ್ಥನಾ ಅವರು ಸಮಗ್ರ ಮಾಹಿತಿ ನೀಡಿದರು. ಬಳಿಕ ಕೋನ್ ತಯಾರಿಸುವ ವಿಧಾನ ಹಾಗೂ ಕೋನ್ ಫಿಲ್ಲಿಂಗ್ ಮಾಡುವ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ತೋರಿಸಿ ಮಾರ್ಗದರ್ಶನ ನೀಡಿದರು. ಉತ್ತಮ ಹಾಗೂ ಉಪಯುಕ್ತ ತರಬೇತಿ ನೀಡಿದ ಪ್ರಾರ್ಥನಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!