Yuvavahini

ಮಂಗಳೂರು ಮಹಿಳಾ

ಭಜನೆ ಆತ್ಮ ಶುದ್ಧೀಕರಣದ ಸನ್ಮಾರ್ಗ : ವೇದವ್ಯಾಸ ಕಾಮತ್

ಮಂಗಳೂರು : ಭಜನೆಯಿಂದ ಪ್ರಗತಿ, ಕ್ಷಮತೆ, ಶಿಸ್ತು, ಕ್ರಿಯಾಶೀಲತೆ, ಕೌಶಲ, ಸಾಧನೆ ಹೆಚ್ಚಾಗುತ್ತದೆ. ಭಕ್ತಿಯ ಅಂತರಗಂಗೆ ಭಜನೆ ಮೂಲಕ ಜಲಪಾತವಾಗಿ ಧುಮುಕುತ್ತದೆ. ನಿಷ್ಕಲ್ಮಶ ಪ್ರೀತಿಯಿಂದ, ಮುಗ್ದ ಭಕ್ತಿಯಿಂದ ಭಜನೆ ಹಾಡಿದರೆ ಪರಮಾತ್ಮನ ಸಾಕ್ಷಾತ್ಕಾರವಾಗುತ್ತದೆ. ಭಜನಾ ಸಂಸ್ಕೃತಿಯ ಪುನರುತ್ಥಾನದೊಂದಿಗೆ ಭಜಕರು ನವಭಾರತ ನಿರ್ಮಾಣದ ಶಿಲ್ಪಿಗಳಾಗಬೇಕು , ಭಜನೆ ಆತ್ಮ ಶುದ್ಧೀಕರಣದ ಸನ್ಮಾರ್ಗ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು. ಅವರು ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ […]

Read More

ಯುವಸಿಂಚನ : ಸೆಪ್ಟೆಂಬರ್ ಸಂಚಿಕೆ ಬಿಡುಗಡೆ

ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಸೆಪ್ಟೆಂಬರ್ ಮಾಸಿಕ‌ ಪತ್ರಿಕೆಯನ್ನು ದಿನಾಂಕ 15.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ‌ನಡೆದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕ ಜಯಂತ್ ನಡುಬೈಲು, ಸಂಪಾದಕ ರಾಜೇಶ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್, ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ, ಜಿತೇಂದ್ರ ಜೆ.ಸುವರ್ಣ. ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ.ಸಿ.ಕರ್ಕೇರ, […]

Read More

ಆಚರಣೆ ಆರಾಧನೆಗಳಲ್ಲಿ ಮನುಷ್ಯ ಸಂಬಂಧವನ್ನು ಕಾಪಾಡುವ, ನಿಸರ್ಗವನ್ನು ಗೌರವಿಸುವ ಜೀವನಾದರ್ಶಗಳಿವೆ : ಮಧುಮಾಲ

ಮಂಗಳೂರು : ಜಾಗತೀಕರಣದ ಪ್ರಭಾವ ಇಂದು ಎಲ್ಲೆಡೆ ವ್ಯಾಪಿಸುತ್ತಿದೆ. ಬದಲಾವಣೆ ಎಂಬುದು ಜೀವಂತ ಸಮಾಜದ ಲಕ್ಷಣ ಎಂಬುದನ್ನು ನಾವೆಲ್ಲಾ ಒಪ್ಪಿಕೊಳ್ಳಬೇಕು ಆದರೆ ಈ ಬದಲಾವಣೆಯ ಗತಿ ನಮ್ಮ ದೇಸಿ ನುಡಿ-ಸಂಸ್ಕೃತಿಯ ಬುಡ ಅಲುಗಾಡಿಸುವಂತಾಗಬಾರದು ಹೊಸತನ್ನು ಸ್ವೀಕರಿಸುತ್ತಲೇ ಈ ನೆಲದ ಜೀವನಮೌಲ್ಯ-ಕಲಾಮೌಲ್ಯಗಳು ಉಳಿಯುವಂತಾಗಬೇಕು. ತುಳುನಾಡಿನ ಹಬ್ಬ, ಆಚರಣೆ ಆರಾಧನೆಗಳಲ್ಲಿ ಮನುಷ್ಯ ಸಂಬಂಧವನ್ನು ಕಾಪಾಡುವ, ನಿಸರ್ಗವನ್ನು ಗೌರವಿಸುವ ಜೀವನಾದರ್ಶಗಳಿವೆ. ಎಂದು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ತಿಳಿಸಿದರು. ಅವರು ದಿನಾಂಕ 15.09.2018 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ […]

Read More

ಸೇನೆಗೆ ಸೇರುವಂತೆ ಯುವಜನಾಂಗಕ್ಕೆ ಪ್ರೇರಣೆ ಅಗತ್ಯ : ಮಹಂತೇಶ್ ಗಡದ್

ಮಂಗಳೂರು : ಭಾರತೀಯ ಸೇನೆಗೆ ಸೇರುವಂತೆ ಇಂದಿನ ಯುವಜನಾಂಗಕ್ಕೆ ಪ್ರೇರಣೆ ನೀಡುವ ಕಾರ್ಯ ನಡೆಯಬೇಕಾಗಿದೆ. ಎಂದು ಅಭಿನಂದನೆ ಸ್ವೀಕರಿಸಿದ ಮಹಂತೇಶ್ ಗಡದ್ ತಿಳಿಸಿದರು ಮತ್ತು ಯುವವಾಹಿನಿಗೆ ಕೃತಜ್ಞತೆ ತಿಳಿಸಿದರು. ದಿನಾಂಕ‌ 18.08.2018 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಯುವವಾಹಿನಿ ಸಭಾಂಗಣದಲ್ಲಿ ಭಾರತೀಯ ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ‌ ಘಟಕದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಭಾರತೀಯ ಭೂಸೇನೆಯಲ್ಲಿ 17 ವರ್ಷಗಳ ಅಮೂಲ್ಯ ಸೇವೆ ಸಲ್ಲಿಸಿದ ಹವಾಲ್ದಾರ್ ಮಹಂತೇಶ್ ಗಡದ್ ಇವರ […]

Read More

ಬಡ ಕುಟುಂಬಕ್ಕೆ ಆರ್ಥಿಕ ಸಹಾಯ

ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 11-08-2018 ರಂದು ನಡೆದ ಸಾಪ್ತಾಹಿಕ ಸಭೆಯಲ್ಲಿ ನಮ್ಮ ಸಮಾಜದ ಆರ್ಥಿಕವಾಗಿ ಹಿಂದುಳಿದ ಕುಟುoಬದ ಕುಮಾರಿ ಪೂಜಾಳ ಮದುವೆಗೆ ರೂ 10,000/- ಧನಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ.ಸಿ.ಕರ್ಕೇರ , ಕಾರ್ಯದರ್ಶಿ ರವಿಕಲಾ , ಸಲಹೆಗಾರ ಪರಮೇಶ್ವರ ಪೂಜಾರಿ ಹಾಗು ಸದಸ್ಯರು ಉಪಸ್ಥಿತರಿದ್ದರು.

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ನಗರಕ್ಕೆ ಹಸಿರ ಮೆರುಗು ಶ್ಲಾಘನೀಯ : ಶಶಿಧರ ಹೆಗ್ಡೆ

ಮಂಗಳೂರು : ನಗರಕ್ಕೆ ಹಸಿರ ಮೆರುಗು ನೀಡುವ ಸಂಘಟನೆಗಳ ಕಾರ್ಯ ಶ್ಲಾಘನೀಯವಾದುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕರಾದ ಶಶಿಧರ ಹೆಗ್ಡೆ ತಿಳಿಸಿದರು. ಅವರು ದಿನಾಂಕ 29.07.2018 ರಂದು ಲಯನ್ಸ್ ಮತ್ತು ಲಯನೆಸ್ ಕ್ಲಬ್ ಹಾಗೂ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರಿನ ಉರ್ವಾಸ್ಟೋರ್ ನಿಂದ ಕೊಟ್ಟಾರದವರೆಗೆ ರಸ್ತೆ ವಿಭಜಕದಲ್ಲಿ ಹೂ ಗಿಡಗಳನ್ನು ನೆಡುವ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ನಾಗವೇಣಿ ,ಸ್ಥಾಯಿ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ, […]

Read More

ಎಚ್ ಐ ವಿ ಜತೆ ಬದುಕುವ ಮಕ್ಕಳೊಂದಿಗೆ ಒಂದು ದಿನ

ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸದಸ್ಯೆಯರು ಎಚ್ ಐ ವಿ ಜತೆ ಬದುಕುವ ಮಕ್ಕಳ ಆಶ್ರಯ ತಾಣ ಸಂವೇದನಾಗೆ 17.06.2017 ರಂದು ಭೇಟಿ ನೀಡಿದರು ಆಶ್ರಯತಾಣದ ಮಕ್ಕಳೊಂದಿಗೆ ಬೆರೆತು ಅವರ ಯೋಗ ಕ್ಷೇಮ ವಿಚಾರಿಸಿದರು. ಮಕ್ಕಳಿಗೆ ಉಪಹಾರ,ಸಿಹಿತಿಂಡಿ, ದಿನಸಿ ಸಾಮಗ್ರಿ ಗಳನ್ನು ನೀಡಿ ನೊಂದ ಎಳೆ ಮನಸುಗಳಿಗೆ ಸಾಂತ್ವಾನ ನೀಡಿದರು ಯುವವಾಹಿನಿ ಮಂಗಳೂರು ಮ ಹಿಳಾ ಘಟಕದ ಅಧ್ಯಕ್ಷೆ ರಶ್ಮಿ ಸಿ .ಕರ್ಕೇರ , ಕಾರ್ಯದರ್ಶಿ ರವಿಕಲಾ , ಉಪಾದ್ಯಕ್ಷೆ ಉಮಾ ಶ್ರೀಕಾಂತ್ ,ಕೋಶಾಧಿಕಾರಿ […]

Read More

ಹಿರಿಯ ಸಾಹಿತಿ ಬಿ.ಎಮ್.ರೋಹಿಣಿ ಅವರಿಗೆ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ದಿನಾಂಕ 03.06.2018 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿ ವಿಮರ್ಶಕಿ ಬಿ.ಎಮ್.ರೋಹಿಣಿ ಅವರಿಗೆ 2017 ರ ವಿಶುಕುಮಾರ್ ಪ್ರಶಸ್ತಿ ಪ್ರದಾನಿಸಲಾಯಿತು. ಪ್ರಶಸ್ತಿ ಪ್ರದಾನಿಸಿದ ಹಿರಿಯ ಸಂಘಟಕಿ ಕೆ.ಎ.ರೋಹಿಣಿಯವರು ಮಾತನಾಡಿ ಬಿ.ಎಮ್.ರೋಹಿಣಿಯವರ ಸಾಧನೆಗೆ ಅರ್ಹವಾಗಿ ವಿಶುಕುಮಾರ್ ಪ್ರಶಸ್ತಿ ದೊರೆತಿದೆ ಎಂದರು. ಛಲವಾದಿಯಾಗಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡವರು. 74 […]

Read More

ಕೌಟುಂಬಿಕ ವಲಯದಲ್ಲಿ ಹೆಣ್ಣಿನ ಪಾತ್ರ ಅದ್ಭುತ , ವರ್ಣನಾತೀತ : ಶಹನಾಜ್

ಮಂಗಳೂರು : ಕೌಟುಂಬಿಕ ವಲಯದಲ್ಲಿರುವ ವ್ಯಕ್ತಿಗಳಿಗೆ ಹೆಣ್ಣು ಆಸಕ್ತಿಯ, ಆತ್ಮ ಸಂಗಾತದ ವಿಷಯ. ತಾಯಿಯಾಗಿ, ತಂಗಿಯಾಗಿ, ಅಕ್ಕನಾಗಿ, ಹೆಂಡತಿಯಾಗಿ, ನಾದಿನಿಯಾಗಿ, ಅತ್ತಿಗೆಯಾಗಿ, ಅತ್ತೆಯಾಗಿ, ಗೆಳತಿಯಾಗಿ, ಪ್ರೇಮಿಯಾಗಿ ಆಕೆ ನಿರ್ವಹಿಸುವ ಪಾತ್ರಗಳು ಅದ್ಬುತ, ವರ್ಣನಾತೀತ. ಏಕೆಂದರೆ ಸ್ತ್ರೀ ಒಂದು ಸಮುದಾಯವನ್ನು ಸಮರ್ಥವಾಗಿ ಪ್ರತಿನಿಧಿಸುವ ಸಾಮರ್ಥ್ಯ ಹೊಂದಿರುವಂತಹವಳು. ಕೌಟುಂಬಿಕ ವಲಯದ ಸ್ತ್ರೀ ಕುಟುಂಬದ ಕಟ್ಟುಪಾಡುಗಳಿಗೆ ಒಳಗಾಗಿ ಜೀವನ ನಡೆಸುತ್ತಿದ್ದಾಳೆ ಹಾಗೂ ಆಕೆ ತನ್ನ ಕುಟುಂಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದಳಾಗಿರುತ್ತಾಳೆ ಎಂದು ಅನುಪಮಾ ಮಹಿಳಾ ಮಾಸಿಕ ಪತ್ರಿಕೆಯ ಸಂಪಾದಕರು, ಹಾಗೂ ಸಾಹಿತಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!