Yuvavahini

ಮಂಗಳೂರು ಮಹಿಳಾ

ಆರ್ಥಿಕವಾಗಿ ಸ್ವಾವಲಂಬಿಗಳಾದ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಅಗತ್ಯವಿದೆ – ಬಿ.ಎಂ. ಭಾರತಿ

ಮಂಗಳೂರು : ದಿನಾಂಕ 03.04.2022 ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಸಾರಥ್ಯದಲ್ಲಿ ಯುವವಾಹಿನಿ(ರಿ.) ಕಂಕನಾಡಿ ಹಾಗೂ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರು ವುಡ್ ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ “ಹೊಂಬೆಳಕು – 2022″ಮಹಿಳಾ ಆರ್ಥಿಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದೊಂದಿಗೆ (ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ) ಕಾರ್ಯಕ್ರಮ ಜರಗಿತು. ಲಯನ್ಸ್ ಜಿಲ್ಲಾ ಗವರ್ನರ್ ರವರ ಜಿಲ್ಲಾ ಸಂಯೋಜಕಿ ಲಯನ್ ಭಾರತಿ ಬಿ .ಎಮ್ . ಮಹಿಳಾ ದಿನಾಚರಣೆ ಪ್ರಯುಕ್ತ […]

Read More

ಬೃಹತ್ ರಕ್ತದಾನ ಶಿಬಿರ

  ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ರಜತ ಮಹೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮಂಗಳೂರು ಹಾಗೂ ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ದಿನಾಂಕ 06-02- 2022 ರಂದು ಮಂಗಳೂರಿನ ತುಳು ಭವನದಲ್ಲಿ ಜರುಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ .ಜಿ. ಕತ್ತಲಸಾರ್ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿ ಮಹಾನಗರ ಪಾಲಿಕೆಯ […]

Read More

IAS KAS ಮಾಹಿತಿ ಶಿಬಿರ

  ದಿನಾಂಕ 20/11/2019ರಂದು ಶ್ರೀ ಗೋಕರ್ಣ ನಾಥ ಪಿ ಯು ಕಾಲೇಜಿನಲ್ಲಿ ಮಕ್ಕಳಿಗೆ IAS, KA S ಮಾಹಿತಿ ಶಿಬಿರವನ್ನು ಸರ್ವಜ್ಞ IAS KAS ಅಕಾಡಮಿಯ ನಿರ್ದೇಶಕರಾದ ಸುರೇಶ್ ಇವರು ನಡೆಸಿಕೊಟ್ಟರು.

Read More

ವ್ಯಕ್ತಿತ್ವ ವಿಕಸನ ಮಾಹಿತಿ ಶಿಬಿರ

  ದಿನಾಂಕ 2/11/2019 ರಂದು ಶ್ರೀ ಗೋಕರ್ಣನಾಥ ಬಿ ಎಡ್ ಕಾಲೇಜು ಗಾಂಧಿನಗರ ಇಲ್ಲಿ ಬಿ ಎಡ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಮಾಹಿತಿ ಶಿಬಿರ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷರಾದ ಉಮಾಶ್ರೀಕಾಂತ್ ಸ್ವಾಗತಿಸಿದರು. ನಂತರ ಸಂಪನ್ಮೂಲ ವ್ಯಕ್ತಿಯಾದ ಅಲೋಸಿಯಸ್ ಕಾಲೇಜಿನ assistant professor, ಎಂ ಸಿ ಎ department ಹಾಗೂ ಮಾಜಿ ಅಧ್ಯಕ್ಷರು ಮಂಗಳೂರು ಘಟಕದ ರಾಕೇಶ್ ಕುಮಾರ್ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ವಿವಿಧ ಕಥೆಗಳನ್ನು , ಚಟುವಟಿಕೆಗಳನ್ನು ನೀಡುತ್ತಾ […]

Read More

ಶಿವಗಿರಿ ಯಾತ್ರೆ

  ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.

Read More

ನಾರಾಯಣ ಗುರು ಜಯಂತಿ : ಭಜನಾ ಕಾರ್ಯಕ್ರಮ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕವು ನಾರಾಯಣ ಗುರು ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಮಹಿಳಾ ಮಂಡಳಿಗಳನ್ನು ಜೊತೆಗೂಡಿಸಿ ಬೆಳಗ್ಗೆ12ರಿಂದ ಸಂಜೆ 7 ಘಂಟೆಯವರೆಗೆ ಭಜನಾ ಕಾರ್ಯಕ್ರಮವನ್ನು ನಡೆಯಸಿತು. ಕಾರ್ಯಕ್ರಮಕ್ಕೆಗುರುಸ್ತೋತ್ರ ಹಾಗೂ ಭಜನೆ ಮೂಲಕ ಮಂಗಳೂರು ಮಹಿಳಾ ಘಟಕವು ಚಾಲನೆ ನೀಡಿ ನಂತರ ವಿವಿಧ ಮಹಿಳಾ ಮಂಡಳಿಗಳಿಗೆ ಅವಕಾಶಕೊಟ್ಟು ನಂತರ ಕೊನೆಯ ಹಂತವನ್ನು ಮಂಗಳೂರುಘಟಕದವರೊಂದಿಗೆ ಸೇರಿ ಮುಕ್ತಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಉಮಾಶ್ರೀಕಾಂತ್, ನೈನವಿಶ್ವನಾಥ್,ರವಿಕಲ,  ನಾರಾಯನಗುರು ತತ್ವ […]

Read More

ಸೋಣ ಸಂಭ್ರಮ

ದಿನಾಂಕ 08/09/2019 ರಂದು ಯುವವಾಹಿನಿ ಸಭಾಂಗಣದಲ್ಲಿ ಸೋಣ ಸಂಭ್ರಮ ಕಾರ್ಯಕ್ರಮವು ಬೆಳಗ್ಗೆ 9:30ರಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಮಾಶ್ರೀಕಾಂತ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗೋಕರ್ಣನಾಥೇಶ್ವರ ಬಿ ಎಡ್ ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಉದ್ಘಾಟಿಸಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ನಾನು ಕಲಿತೆ ಹಾಗೂ ಈ ಸಂಸ್ಕೃತಿ ಮುಂದಿನ ಪೀಳಿಗೆಗೆ ತಿಳಿಸಿವ ಕೆಲಸ ನಮ್ಮಿಂದ ಆಗಬೇಕು ಹಾಗಾಗಿ ಆದಷ್ಟು ಮಕ್ಕಳನ್ನು ಜೋಡಿಸಿಕೊಳ್ಳುವಂತೆ ತಿಳಿಸಿದರು.ನಂತರ  ಶಕ್ತಿ ಎಜುಕೇಶನ್ ಟ್ರಸ್ಟ್ ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ್  ಆಚಾರ್ಯ ಸೋಣದ ಮದಿಪನ್ನು ನೀಡಿ […]

Read More

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ವತಿಯಿಂದ ಸೇವಾಶ್ರಮಕ್ಕೆ ಕೊಡುಗೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ವತಿಯಿಂದ ದಿನಾಂಕ 15/08/2019ರಂದು ದೇರಳಕಟ್ಟೆ ಬೆಲ್ಮ ಸೇವಾಶ್ರಮಕ್ಕೆ ಭೇಟಿ ಕೊಡಲಾಯಿತು. ಅಲ್ಲಿಯ ವೃದ್ಧರೊಂದಿಗೆ ವಿವಿಧ ಆಟೋಟ, ಮನೋರಂಜನಾ ಕಾರ್ಯಕ್ರಮ, ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಮಂಗಳೂರು ಘಟಕದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಬೌದ್ಧಿಕ ನೀಡಿದರು. ಘಟಕದ ವತಿಯಿಂದ 50kg ಅಕ್ಕಿ ನೀಡಲಾಯಿತು.. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಉಮಾ ಶ್ರೀಕಾಂತ್, ಸಲಹೆಗಾರರಾದ ಜಿತೇಂದ್ರ ಜೆ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Read More

ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು ಮಂಗಳೂರು ಮಹಿಳಾ ಘಟಕದಿಂದ ಬ್ರಹತ್ ವೈದ್ಯಕೀಯ ಶಿಬಿರ

ಮಂಗಳೂರು : ದಿನಾಂಕ 28.07.2019 ರಂದು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ ನಲ್ಲಿ ಉಚಿತ ಬ್ರಹತ್ ವೈದ್ಯಕೀಯ ಶಿಬಿರ ಹಾಗೂ ಕ್ಯಾನ್ಸರ್ ಅರಿವು ,ಮಾಹಿತಿ ಮತ್ತು ತಪಾಸನಾ ಶಿಬಿರ ನಡೆಯಿತು. ಈ ಕಾರ್ಯಕ್ರಮವೂ ಲಯನ್ಸ್ ಕ್ಲಬ್ ಮಂಗಳೂರು ಕುಡ್ಲ ಹಾಗೂ ಸ್ವಾತಿ ಹೋಮಿಯೋಪತಿ ಕ್ಲಿನಿಕ್ ಇದರ ಸಹಯೋಗದಲ್ಲಿ ನಡೆದಿದ್ದು, ಓಂಕಾಲಜಿ ವಿಭಾಗ, ಯನೊಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಸಮುದಾಯ ದಂತ ವಿಭಾಗ, ಯನೊಪೋಯ […]

Read More

ನಗರಕ್ಕೆ ಹಸಿರು ಮೆರಗು ಶ್ಲಾಘನೀಯ : ಶಶಿಧರ್ ಹೆಗ್ಡೆ .

ಮಂಗಳೂರು : ನಗರಕ್ಕೆ ಹಸಿರು ಮೆರುಗು ನೀಡುವ ಸಂಘಟನೆಗಳ ಕಾರ್ಯ ಶ್ಲಾಘನೀಯವಾದುದು,ಇದೊಂದು ಸಮಾಜಮುಖಿ ಕಾರ್ಯಕ್ರಮ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕರಾದ ಶಶಿಧರ್ ಹೆಗ್ಡೆ ತಿಳಿಸಿದರು. ಅವರು ದಿನಾಂಕ 14/07/2019ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ಹಾಗೂ SPYSS ಕರ್ನಾಟಕ ನೇತ್ರಾವತಿ ವಲಯ ಮಂಗಳೂರು, ಮಹಾಲಿಂಗೇಶ್ವರ ಉಪವಲಯದ ಆಶ್ರಯದಲ್ಲಿ ಮಂಗಳೂರಿನ ಕೊಟ್ಟರಚೌಕಿಯಿಂದ ಕೊಟ್ಟಾರದವರೆಗೆ ರಸ್ತೆ ವಿಭಜಕದಲ್ಲಿ ಹೂ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜ್ಞಾನೋದಯ ಭಜನಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!