Yuvavahini

ಉಡುಪಿ

ಗುರು ಸತ್ಸಂಗ ಕಾರ್ಯಕ್ರಮ

ಉಡುಪಿ, ಜು. 16: ಯುವ ವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಗುರು ಸತ್ಸಂಗ ಕಾರ್ಯಕ್ರಮವು ಜುಲೈ 16ರಂದು ಗುರುವಾರ ಸಂಜೆ ಬಿಂದಿಯವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಮನೆಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಗುರು ಸತ್ಸಂಗ ಹಾಗೂ ಭಜನಾ ಕಾರ್ಯಕ್ರಮ ಭಕ್ತಿಪೂರ್ವಕವಾಗಿ ನೆರವೇರಿತು. ಮುಖ್ಯೋಪಾಧ್ಯಾಯರು ಹಾಗೂ ಕಾರ್ಯಕ್ರಮದ ನಿರೂಪಕರಾದ ರಘುರಾಮ್ ಕೋಟ್ಯಾನ್ ಅವರು ಗುರು ಸಂದೇಶ ನೀಡಿ, ಯುವ ವಾಹಿನಿಯು ಯುವಜನತೆಗೆ ಪ್ರೇರಣೆಯಾಗುವ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯವಾಗಿದ್ದು, ಸಮಾಜಕ್ಕೆ […]

Read More

ಗುರು ಸಂದೇಶ ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ವಿ ಬದುಕು ಸಾಧ್ಯ: ತೇಜೇಶ್ ಬಂಗೇರ

ಉಡುಪಿ, ಜೂನ್ 25: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಗುರು ಸತ್ಸಂಗ ಕಾರ್ಯಕ್ರಮವು ಗುರುವಾರ ಸಂಜೆ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಸಂದೇಶ್ ಕಟಪಾಡಿ ಅವರ ಆತಿಥ್ಯದಲ್ಲಿ ಕಟಪಾಡಿಯಲ್ಲಿರುವ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ದೀಪ ಪ್ರಜ್ವಲನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಭಜನಾ ಸಂಕೀರ್ತನೆ ನಡೆಸಿದರು. ಬಳಿಕ ಘಟಕದ ಮಾಜಿ ಅಧ್ಯಕ್ಷ ಭಾಸ್ಕರ್ ಸುವರ್ಣ ಅವರು ಗುರುಗಳಿಗೆ ಮಹಾಪೂಜೆ ನೆರವೇರಿಸಿ, ಎಲ್ಲರಿಗೂ ಮಹಾಪ್ರಸಾದ ವಿತರಿಸಿದರು. ಗುರು ಸಂದೇಶ ನೀಡಿದ ಖ್ಯಾತ ನಿರೂಪಕರು ಹಾಗೂ ಘಟಕದ […]

Read More

“ಮನೆಗೊಂದು ಮರ, ಊರಿಗೊಂದು ವನ” ಅಭಿಯಾನ

ಉಡುಪಿ, ಜೂನ್ 25: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ “ಮನೆಗೊಂದು ಮರ – ಊರಿಗೊಂದು ವನ” ಅಭಿಯಾನಕ್ಕೆ ಗುರುವಾರ ಸಂಜೆ ಕಟಪಾಡಿಯಲ್ಲಿರುವ ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಸಂದೇಶ್ ಕಟಪಾಡಿ ಅವರ ನಿವಾಸದ ಪರಿಸರದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ ಹಾಗೂ ಯುವವಾಹಿನಿ (ರಿ.) ಉಡುಪಿ ಘಟಕದ ಸಮಾಜ ಸೇವಾ ನಿರ್ದೇಶಕ ಸುಜಿತ್ ಮಟ್ಟು ಅವರು ಗಿಡಗಳನ್ನು ವಿತರಿಸುವ ಮೂಲಕ […]

Read More

ಗುರು ಸತ್ಸಂಗ ಕಾರ್ಯಕ್ರಮ

ಉಡುಪಿ : ಯುವವಾಹಿನಿ (ರಿ ) ಉಡುಪಿ ಘಟಕದ ಗುರು ಸತ್ಸಂಗ ಕಾರ್ಯ ಕ್ರಮವು ಘಟಕದ ಜೊತೆಕಾರ್ಯದರ್ಶಿ ಸಚೇಂದ್ರ ಅಂಬಾಗಿಲುರವರ ಅಥಿತ್ಯದಲ್ಲಿ ಅವರ ಮನೆಯಲ್ಲಿ ಅವರ ಮನೆಯವರು ಸೇರಿ ದೀಪ ಬೆಳಗಿಸಿ ಪ್ರಾರಂಭಗೊಂಡಿತು. ಘಟಕದ ಸದಸ್ಯರು ಸೇರಿ ಭಜನಾ ಕಾರ್ಯಕ್ರಮ ನೆರವೇರಿಸಿದರು. ಮಾಜಿ ಅಧ್ಯಕ್ಷರಾದ ಭಾಸ್ಕರ್ ಸುವರ್ಣರವರು ಗುರುಗಳಿಗೆ ಮಹಾಪೂಜೆ ನೆರವೇರಿಸಿ. ಆಗಮಿಸಿದ ಎಲ್ಲರಿಗೂ ಹಾಗೂ ಮನೆಯವರಿಗೂ ಗುರುಗಳು ಒಳಿತು ಮಾಡುವಂತೆ ಪ್ರಾರ್ಥಿಸಿ ಮಹಾ ಪ್ರಸಾದವನ್ನು ನೀಡಿದರು.ಗುರು ಸಂದೇಶವನ್ನು ಖ್ಯಾತ ನಿರೂಪಕರಾದ ರಾಜೇಂದ್ರ ಪ್ರಸಾದ್ ಎಕ್ಕರ್ ರವರು […]

Read More

ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ ಸಮಾರಂಭ

ಯುವವಾಹಿನಿ ಉಡುಪಿ ಘಟಕದ ವತಿಯಿಂದ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಮೇ 17/5/2026ರ ಭಾನುವಾರ ನಡೆಯಿತು. ಬದುಕಿನ ಅನುಭವ ಸಾಧನೆಗೆ ಪ್ರೇರಕ: ಡಾ| ಅಭಯ ಕುಮಾರ್ : ಬದುಕಿನ ಅನುಭವ ಮನುಷ್ಯನ ಸಾಧನೆಗೆ ಪ್ರೇರಕ. ಶಿಕ್ಷಣ ಮತ್ತು ಸಿಕ್ಕ ಅವಕಾಶಗಳನ್ನು ನಾವು ಬಳಸಿಕೊಳ್ಳುವುದರಿಂದ ವೃದ್ಧಿಯಾಗುತ್ತದೆ ವ್ಯಕ್ತಿತ್ವ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ, ಜಾನಪದ ಸಂಶೋಧಕ ಡಾ ಅಭಯ ಕುಮಾ‌ರ್ ಹೇಳಿದರು. ಯುವವಾಹಿನಿ ಉಡುಪಿ ಘಟಕದ ವತಿಯಿಂದ ರವಿವಾರ ಚಿಟ್ಟಾಡಿ ಲಕ್ಷ್ಮೀ ಟ್ರೇಡ್ ಸೆಂಟರ್ […]

Read More

ಗುರು ಸತ್ಸಂಗ ಹಾಗೂ ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ ಆಮಂತ್ರಣ ಬಿಡುಗಡೆ

ಉಡುಪಿ: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ‘ಗುರು ಸತ್ಸಂಗ’ ಕಾರ್ಯಕ್ರಮವು ಬಲಯಿಪಾದೆಯ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಯಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷರಾದ ಸುಪ್ರೀತ್ ಅವರ ನೇತೃತ್ವದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ಜರುಗಿತು. ದೀಪ ಪ್ರಜ್ವಲನೆ ಮತ್ತು ಗುರು ಸಂದೇಶ:ಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ವಿನೋದ್ ಮಂಚಿ ಅವರು ಜಂಟಿಯಾಗಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಭಕ್ತಿಪೂರ್ವಕ ‘ಗುರು ಸತ್ಸಂಗ […]

Read More

ಯುವವಾಹಿನಿ (ರಿ) ಉಡುಪಿ ಘಟಕ ದ್ವಿತೀಯ ರನ್ನರ್‌ಅಪ್ ಪ್ರಶಸ್ತಿ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಉಡುಪಿ ಘಟಕವು ಆಕರ್ಷಕ ಟ್ರೋಫಿಯೊಂದಿಗೆ ದ್ವಿತೀಯ ರನ್ನರ್‌ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

Read More

ಯುವವಾಹಿನಿ (ರಿ.) ಉಡುಪಿ ಘಟಕದ ಪದಗ್ರಹಣ ಸಮಾರಂಭ

ಉಡುಪಿ, ಮಾ.22: ಯುವವಾಹಿನಿ (ರಿ.) ಉಡುಪಿ ಘಟಕದ ಪದಗ್ರಹಣ ಸಮಾರಂಭವು ಮಾರ್ಚ್ 22, 2026ರಂದು ಉಡುಪಿ ಘಟಕದ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ನಮಸ್ಕರಿಸಿ ದೀಪ ಪ್ರಜ್ವಲಿಸುವ ಮೂಲಕ ಪ್ರಾರಂಭವಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ದಯಾನಂದ ಕರ್ಕೇರ ವಹಿಸಿದ್ದರು. ಕಾರ್ಯದರ್ಶಿ ಮಹೇಶ್ ಮಲ್ಪೆ ರಜತ ವರ್ಷದ ವರದಿಯನ್ನು ವಾಚಿಸಿದರು. ಆಯ್ಕೆ ಸಮಿತಿಯ ಸಂಚಾಲಕರು, ನಿಕಟಪೂರ್ವ ಅಧ್ಯಕ್ಷೆ ಅಮಿತಾಂಜಲಿ ಕಿರಣ್ ನೂತನ ಕಾರ್ಯಕಾರಿ ಸಮಿತಿಯನ್ನು ಪರಿಚಯವನ್ನು ಸಭೆಯ ಮುಂದೆ ಪ್ರಸ್ತುತಪಡಿಸಿದರು. ಕೇಂದ್ರ ಸಮಿತಿಯ […]

Read More

ಅಧ್ಯಕ್ಷರಾಗಿ ವಿನೋದ್ ಮಂಚಿ ಆಯ್ಕೆ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ 2026-27 ನೇ ಸಾಲಿನ ನೂತನ‌ ಅಧ್ಯಕ್ಷರಾಗಿ ವಿನೋದ್ ಮಂಚಿ ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು:- ಸುಪ್ರೀತ್ ಸುವರ್ಣದ್ವಿತೀಯ ಉಪಾಧ್ಯಕ್ಷರು :- ಉಮೇಶ್ ಕರ್ಕೇರಾಕಾರ್ಯದರ್ಶಿ:- ವೀಕ್ಷಿತ್ಜೊತೆ ಕಾರ್ಯದರ್ಶಿ:- ಸಚ್ಚೇಂದ್ರ ಅಂಬಾಗಿಲುಕೋಶಾಧಿಕಾರಿ : ಪ್ರಕಾಶ್ ಚಂದ್ರಕ್ರೀಡೆ ಹಾಗೂ ಆರೋಗ್ಯ ನಿರ್ದೇಶಕರು:- ಸುಜಾತಾ ಪ್ರವೀಣ್ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು:- ಕುಶಾಲ್ ಜತ್ತನ್ನವ್ಯಕ್ತಿತ್ವ ವಿಕಸನ ನಿರ್ದೇಶಕರು :- ವಿಮಲ ಜಗದೀಶ್ಕಲೆ ಮತ್ತು ಸಾಹಿತ್ಯ ನಿರ್ದೇಶಕರು :- ಸಂದೇಶ್ ಕಟ್ಪಾಡಿಸಮಾಜ ಸೇವೆ ನಿರ್ದೇಶಕರು :- […]

Read More

ಸಂಘಟನಾ ಸಹಭಾಗಿತ್ವದಿಂದ ಸಕುಟುಂಬ ವ್ಯವಸ್ಥೆಗೆ ಬಲ-ಇರುವೈಲು ತಾರನಾಥ ಪೂಜಾರಿ

ಉಡುಪಿ : ಭಾರತೀಯ ಸಂಸ್ಕ್ರತಿಯಲ್ಲಿ ಕುಟುಂಬ ವ್ಯವಸ್ಥೆಯೆ ಪ್ರಧಾನವಾದುದು. ರಾಷ್ಟ್ರಭಕ್ತಿ, ಶ್ರದ್ಧೆ, ಒಕ್ಕೂಟ ವ್ಯವಸ್ಥೆ, ಸಾಮಾಜಿಕ ಮೌಲ್ಯಗಳಿಗೆ ಸದಾ ಪ್ರೇರಣೆಗಳಾಗುವುದು ಕುಟುಂಬ ವ್ಯವಸ್ಥೆಯಿಂದ. ಆಧುನಿಕ ದಿನಮಾನದಲ್ಲಿ ಎಲ್ಲಾ ಎಲ್ಲೆಗಳನ್ನು ಮೀರಿ ಕುಟುಂಬದ ಉಳಿವಿಗೆ ಹೆಚ್ಚು ಸಹಕಾರಿಯಾಗುವುದು ಸಂಘಟನಾ ಸಹಭಾಗಿತ್ವ ಎಂದು ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ತಾರಾನಾಥ ಪೂಜಾರಿ ಅಭಿಪ್ರಾಯಪಟ್ಟರು. ಯುವವಾಹಿನಿಯಂತಹ ಸಂಘಟನೆ ತತ್ವ ಸಿದ್ದಾಂತಗಳಿಗೆ ಬದ್ದವಾಗಿ ಮಾತೃವಾತ್ಸಲ್ಯದ ರೀತಿಯಲ್ಲಿ ಸದಸ್ಯರನ್ನು ಪ್ರೇರೇಪಿಸುತ್ತಾ ಸಂಘಟನೆ ಮತ್ತು ಸೇವಾ ಪ್ರಜ್ಞೆಯನ್ನು ಜಾಗೃತಗೊಳಿಸುತ್ತಿರುವುದು ಶ್ಲಾಘನೀಯ ಎಂದರು.ರಜತ ಮಹೋತ್ಸವದ ಸವಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!