Yuvavahini

ಉಡುಪಿ

ರಜತ ಸಂಭ್ರಮ ಯಶಸ್ವಿಯಾಗಲಿದೆ : ಬಿ.ಜನಾರ್ದನ ಪೂಜಾರಿ

ಬಂಟ್ವಾಳ : ಫೆಬ್ರವರಿ 28 ಹಾಗೂ ಮಾರ್ಚ್ 01ರಂದು ನಡೆಯಲಿರುವ ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮ ಸಮಾರಂಭದ ಆಮಂತ್ರಣ ಪತ್ರವನ್ನು ಬಂಟ್ವಾಳದಲ್ಲಿ ಭಾರತ ಸರ್ಕಾರದ ಮಾಜಿ ವಿತ್ತ ಸಚಿವರಾದ ಬಿ ಜನಾರ್ದನ ಪೂಜಾರಿ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಲ್ಲಿ ಯುವವಾಹಿನಿ ಉಡುಪಿ ಘಟಕವು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸಿದ್ದು, ಅಶಕ್ತ ಕುಟುಂಬಗಳ ಮನೆ ನಿರ್ಮಾಣದಂತಹ ಮಹತ್ವದ ಸಮಾಜಮುಖಿ ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಂಡಿರುವುದು […]

Read More

ನಾರಾಯಣ ಗುರುಗಳ ತತ್ವಾದರ್ಶಗಳನ್ನು ಪಾಲಿಸುತ್ತಿರುವ ಯುವ ವಾಹಿನಿಯ ಕಾರ್ಯ ಸುತ್ಯರ್ಹ : ಬನ್ನಂಜೆ ಬಾಬು ಅಮೀನ್

ಉಡುಪಿ: ನಾರಾಯಣ ಗುರುಗಳು ವಿಶ್ವಕ್ಕೆ ಸಾರ್ವಕಾಲಿಕ ಸಂದೇಶ ನೀಡಿದ ಜಗದ್ಗುರುಗಳು. ಅವರ ಚಿಂತನೆಗಳು ಪ್ರಸ್ತುತ ಯುವ ಜನತೆಗೆ ಹೆಚ್ಚು ಪ್ರೇರಣೆಯಾಗಬೇಕು. ಜಾತಿ ಮತ ಧರ್ಮಗಳ ಸಾಮರಸ್ಯ ಸಾರಿದ ನಾರಾಯಣ ಗುರುಗಳ ತತ್ವಾದರ್ಶಗಳನ್ನು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತರ ಸಂಘಟಿಸುವ ಮೂಲಕ ಯುವವಾಹಿನಿ ಉಡುಪಿ ಘಟಕವು ಗುರುತಿಸಿಕೊಂಡಿರುವುದು ಸ್ತುತ್ಯರ್ಹವೆಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಅಭಿಪ್ರಾಯಪಟ್ಟರು. ಶ್ರೀಯುತರು ಯುವವಾಹಿನಿ ಉಡುಪಿ ಘಟಕವು ಬನ್ನಂಜೆ ಬಿಲ್ಲವರ ಸೇವಾ ಸಂಘದ […]

Read More

ಸಾಮಾಜಿಕ ಬಂಧನಗಳಿಂದ ಮುಕ್ತಿಗೆ ಗುರುತತ್ವವೇ ಮಾರ್ಗ – ವಿದ್ದು ಉಚ್ಚಿಲ್

ಉಡುಪಿ: ವಿವಿಧ ರೂಪದ ಸಾಮಾಜಿಕ ಕಟ್ಟುಪಾಡುಗಳ ಕಾರಣದಿಂದ ಗಂಭೀರ ಶೋಷಣೆಗೆ ಗುರಿಯಾಗಿದ್ದ ಸಮಾಜಕ್ಕೆ ಬೆಳಕು ತೋರಿದ ಮಹಾನ್ ಚಿಂತಕ ನಾರಾಯಣ ಗುರು ಆಗಿದ್ದಾರೆ. ಸಮಾನ ಮನಸ್ಕ ಅನುಯಾಯಿಗಳ ಮೂಲಕ ತ್ಯಾಗ ಹಾಗೂ ಸೇವೆಯ ಮೌನ ಕ್ರಾಂತಿಯನ್ನು ಸಂಘಟಿಸಿದ ಗುರುಗಳಲ್ಲಿ ಬದ್ದತೆಯ ಅನನ್ಯ ಆದರ್ಶಗಳು ಅಡಗಿವೆ ಎಂದು ರಂಗನಿರ್ದೇಶಕ ವಿದ್ದು ಉಚ್ಚಿಲ್ ತಿಳಿಸಿದರು. ಪ್ರಸ್ತುತ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಡಿ ಸಾಮಾನ್ಯರ ಬದುಕನ್ನು ದುಸ್ತರಗೊಳಿಸುತ್ತಿರುವ ಎಲ್ಲಾ ತರದ ಸಾಮಾಜಿಕ ಬಂಧನಗಳಿಂದ ಬಿಡುಗಡೆಯು ಗುರುತತ್ವಗಳ ಪಾಲನೆಯಿಂದ ಮಾತ್ರ ಸಾಧ್ಯವಿದೆ ಎಂದು ಅವರು […]

Read More

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಪದಗ್ರಹಣ ಸಮಾರಂಭವು 24-11-2024 ರಂದು ಘಟಕದ ಸಭಾಂಗಣದಲ್ಲಿ ನೆರವೇರಿತು. ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಆದ ಶ್ರೀ ಮಹಾಬಲ ಅಮೀನ್ವಾಚಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಯಾನಂದ ಕರ್ಕೇರಾ ಹಾಗೂತಂಡದವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಹೆಚ್ ಹೊಳೆಯಪ್ಪ. ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು, ಉಡುಪಿ, ಇವರು ಶುಭ ಹಾರೈಸಿದರು. ಬಿಲ್ಲವ ಸೇವಾ […]

Read More

ತಲೆಗೊಂದು ಸೂರು

ಉಡುಪಿ: ಯುವವಾಹಿನಿ (ರಿ) ಉಡುಪಿ ಘಟಕದ ಅತ್ಯಂತ ಪ್ರಶಂಸನೀಯ ಯೋಜನೆಗಳಲ್ಲಿ ಒಂದಾದ ತಲೆಗೊಂದು ಸೂರು ಯೋಜನೆಯಡಿ ನಿರ್ಮಾಣಗೊಂಡ ಅಂದಾಜು ಹತ್ತು ಲಕ್ಷ ವೆಚ್ಚದ ಮನೆಯನ್ನು ದಿನಾಂಕ 23-11-2024 ರಂದು ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್.ಕೆ.ಪೂಜಾರಿಯವರ ಗೌರವ ಉಪಸ್ಥಿತಿಯಲ್ಲಿ ಫಲಾಕಾಂಕ್ಷಿಗೆ ಹಸ್ತಾಂತರಿಸಲಾಯಿತು. ಉದ್ಯಾವರ ಸಂಪಿಗೆ ನಗರದ ನಿವಾಸಿ, ಇಬ್ಬರು ಹೆಣ್ಣು ಮಕ್ಕಳ ತಾಯಿ ಶ್ರೀಮತಿ ಲತಾ ಸುರೇಶ್ ಈ ಬಾರಿಯ ಫಲಾಕಾಂಕ್ಷಿ. ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಶ್ರೀ ಪ್ರವೀಣ್.ಎಂ.ಪೂಜಾರಿಯವರು ಗಣ್ಯಾತಿ ಗಣ್ಯರ, ದಾನಿಗಳ, ಯುವವಾಹಿನಿ ಕೇಂದ್ರ […]

Read More

ವಿಜಿಲೆನ್ಸ್ ಜಾಗೃತಿ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿಜಿಲೆನ್ಸ್ ಜಾಗೃತಿ ದಿನದ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 28-10-2024 ರಂದು ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಸ.ಪ.ಪೂ. ಕಾಲೇಜು ಉದ್ಯಾವರದಲ್ಲಿ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಾಗಾರವು ನಡೆಯಿತು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೂಕಾಂಬಿಕಾ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ಅಧ್ಯಕ್ಷೆ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವವಾಹಿನಿ (ರಿ) […]

Read More

ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಯುವವಾಹಿನಿ (ರಿ) ಉಡುಪಿ ಘಟಕವು ಸ್ಥಳೀಯ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ದಿನಾಂಕ 20-10-2024 ರಂದು ಆದಿತ್ಯವಾರ ಒಂದು ದಿನದ ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಬೈಲೂರು ಶ್ರೀ ವಾಸುದೇವ ಕೃಪಾ ವಿದ್ಯಾ ಮಂದಿರ ಶಾಲೆಯಲ್ಲಿ ಆಯೋಜಿಸಿತ್ತು. ಉಡುಪಿಯ ಖ್ಯಾತ ವಕೀಲರಾದ ಮಟ್ಟಾರ್ ರತ್ನಾಕರ್ ಹೆಗ್ಡೆಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಲೂರು ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಾರಾಯಣ […]

Read More

ವಿದ್ಯಾನಿಧಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಸಭಾಂಗಣದಲ್ಲಿ ಘಟಕದ ಅಧ್ಯಕ್ಷರು ಶ್ರೀಮತಿ ಅಮಿತಾಂಜಲಿ ಕಿರಣ್ ರವರ ಅಧ್ಯಕ್ಷತೆಯಲ್ಲಿ ದಿನಾಂಕ 29-09-2024 ರಂದು ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳ ಭುವನೇಂದ್ರ ಕಾಲೇಜಿನ ಉಪನ್ಯಾಸಕರು ಶ್ರೀಮತಿ ಸುಲೋಚನಾ ಪಚ್ಚಿನಡ್ಕ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಪಡೆದು ಮುಂದಿನ ದಿನಗಳಲ್ಲಿ ಸಂಘಟನೆಗಳೊಂದಿಗೆ ಬೆರೆತು ಸಮಾಜಮುಖಿ ಕೆಲಸ ಮಾಡುವಂತೆ ಸಲಹೆ ನೀಡಿದರು. ಹನ್ನೊಂದು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!