Yuvavahini

ಉಡುಪಿ

ಬದುಕಿನ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ : ಸುಮತಿ

 ಉಡುಪಿ :  ಬದುಕಿನ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ ಹಾಗೂ ತನ್ನ ಸಾಧನೆಯ ಹಿಂದೆ ಕಷ್ಟದ ದಿನಗಳಿದ್ದವು ಅವೆಲ್ಲವನ್ನು ಸವಾಲಾಗಿ ಸ್ವೀಕರಿಸಿ ಬದುಕಿನಲ್ಲಿ ಯಶಸ್ವೀಯಾಗಿದ್ದೇನೆ ಎಂದು ಶಾಲಾ ಮಕ್ಕಳ ಮಹಿಳಾ ವಾಹನ ಚಾಲಕಿ ಸುಮತಿ ತಿಳಿಸಿದರು. ಅವರು ದಿನಾಂಕ 08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ಜರುಗಿದ ತೊಟ್ಟಿಲು ತೂಗಿದ ಕೈ ಎಲ್ಲದಕ್ಕೂ ಸೈ ಎಂದು ತೋರಿಸಿಕೊಟ್ಟ ಸಾಧಕಿಯರೊಂದಿಗೆ ಸಖೀ […]

Read More

ಜೀವನ ಮೌಲ್ಯ ಅಳವಡಿಸಿ : ಯಶವಂತ ಪೂಜಾರಿ

 ಉಡುಪಿ: ಪ್ರಸ್ತುತ ಇರುವ ಸ್ಥಿತಿಯಿಂದ ಉತ್ತಮ ಸ್ಥಿತಿಯತ್ತ ಕೊಂಡೋಯ್ಯುವುದೇ ಸಂಸ್ಕಾರ, ಮಾನವ ಅರಿಷಡ್ವರ್ಗಗಳನ್ನು ತ್ಯಜಿಸಿದಾಗ ಮಾಧವನಾಗುತ್ತಾನೆ, ಇದಕ್ಕೆ ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ ಇಂತಹ ಕಾರ್ಯಾಗಾರವನ್ನು ನಿರಂತರ ನಡೆಸುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 18.02.2018 ನೇ ಆದಿತ್ಯವಾರ ಉಡುಪಿ ಬಲೈಪಾದೆ ನಿತ್ಯಾನಂದ ಆರ್ಕೆಡ್ ನಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಬಹು […]

Read More

ಸೂಪರ್ ಸ್ಪಷ್ಯಾಲಿಟಿ ಆರೋಗ್ಯ ಶಿಬಿರ

ಯುವವಾಹಿನಿ (ರಿ) ಉಡುಪಿ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಕೆಮ್ತೂರು,ಸಾಧನಾ ಯುವಕ ಮಂಡಲ ಹಾಗೂ ಸಾಧನಾ ಯುವತಿ ಮಂಡಲ ಇದರ ಜಂಟಿ ಆಶ್ರಯದಲ್ಲಿ, ದಿನಾಂಕ 12.11.2017 ರಂದು ಸೂಪರ್ ಸ್ಪೆಷ್ಯಾಲಿಟಿ ಆರೋಗ್ಯ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಕೆಮ್ತೂರು, ಉಡುಪಿ ಇಲ್ಲಿ ಜರುಗಿತು . ಯುವವಾಹಿನಿ(ರಿ) ಉಡುಪಿ ಘಟಕವು ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಶಿಬಿರವನ್ನು ದೀಪ ಬೆಳಗುವುದರ ಮೂಲಕ […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ಉತ್ತರ ಕರ್ನಾಟಕ ಪ್ರವಾಸ

ಯುವವಾಹಿನಿ (ರಿ) ಉಡುಪಿ ಘಟಕದ ಸದಸ್ಯರ ಹಾಗೂ ಕುಟುಂಬಸ್ಥರ ಉತ್ತರ ಕರ್ನಾಟಕದ ಜಗತ್ಪ್ರಸಿದ್ಧ ಐತಿಹಾಸಿಕ ಸ್ಥಳಗಳಿಗೆ ದಿನಾಂಕ 30.09.2017 ರಿಂದ 03.10.2017 ರ ವರಗೆ ಪ್ರವಾಸ ಜರುಗಿತು. ಬಿಜಾಪುರದ ಗೊಲ್ ಗುಂಬಜ಼್ , ಆಲಮಟ್ಟಿ ಅಣೆಕಟ್ಟು, , ಕೂಡಲ ಸಂಗಮ, ಬಾದಾಮಿ, ಐಹೊಳೆ, ಪಟ್ಟದಕಲ್ಲು ಮುಂತಾದ ಐತಿಹಾಸಿಕ ಸ್ಥಳಗಳಿಗೆ 49 ಯುವವಾಹಿನಿ ಕುಟುಂಬಸ್ಥರ ಪ್ರವಾಸವು ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ರಮೇಶ್ ಕುಮಾರ್, ಉಪಾಧ್ಯಕ್ಷರಾದ ಅಶೋಕ್ ಕೋಟ್ಯಾನ್, ಸಂಚಾಲಕರಾದ ಜಗದೀಶ್ ಕೋಟ್ಯಾನ್ ಪ್ರವಾಸದ ನೇತ್ರತ್ವ […]

Read More

ನಾಗರಿಕ ಸೇವಾ ಹುದ್ದೆಗಳಿಗೆ ಒಲವು ತೋರಿಸಿ : ಶಂಕರ ಪೂಜಾರಿ

IAS, IPS ಮುಂತಾದ ಉನ್ನತ ಹುದ್ದೆಗಳ ಬಗ್ಗೆ ಆಸಕ್ತಿ ತೋರಿಸಿ, ಕೇವಲ ಡಾಕ್ಟರ್ ,ಇಂಜಿನಿಯರಿಂಗ್ ನಂತಹ ಹುದ್ದೆಗಳಿಗೆ ಮಾತ್ರ ಪ್ರಾಮುಖ್ಯತೆ ನೀಡದೆ, ಈ ದೇಶದ ಉನ್ನತ ಅಧಿಕಾರಿಗಳಾಗಿ ಸಮಾಜದ ಋಣ ತೀರಿಸಿ ಎಂದು ಉದ್ಯಮಿ, ಬಿಲ್ಲವ ಸಮಾಜದ ಮುಖಂಡರಾದ ಶ್ರೀ ಬಿ.ಎನ್.ಶಂಕರ ಪೂಜಾರಿ ತಿಳಿಸಿದರು. ಅವರು ದಿನಾಂಕ 02.07.2017 ನೇ ಆದಿತ್ಯವಾರ ಉಡುಪಿಯ ಕುತ್ಪಾಡಿ ,ಬಲಾಯಿಪಾದೆ ನಿತ್ಯಾನಂದ ಆರ್ಕೆಡ್ ಇಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ಜರುಗಿದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. SSLC […]

Read More

ಹಗ್ಗಜಗ್ಗಾಟ : ಕಟಪಾಡಿ ಹಾಗೂ ಮಂಗಳೂರು ಮಹಿಳಾ ತಂಡಗಳಿಗೆ ಪ್ರಶಸ್ತಿಯ ಗರಿ

ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ  ಯುವವಾಹಿನಿ ಅಂತರ್ ಘಟಕ ಹಗ್ಗಜಗ್ಗಾಟ ಸ್ಪರ್ಧೆ ಜರುಗಿತು. ಈ ಕ್ರೀಡಾಕೂಟದಲ್ಲಿ ಒಟ್ಟು  16 ಯುವವಾಹಿನಿ ತಂಡಗಳು ಭಾಗವಹಿಸಿದ್ದವು ಪುರುಷರ ವಿಭಾಗದಲ್ಲಿ ಯುವವಾಹಿನಿ ಕಟಪಾಡಿ ಪ್ರಥಮ, ಬಂಟ್ವಾಳ ದ್ವಿತೀಯ, ಪುತ್ತೂರು ತೃತೀಯ   ಹಾಗೂ ಮಹಿಳಾ ವಿಭಾಗದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಪ್ರಥಮ, ಉಡುಪಿ ದ್ವಿತೀಯ, ಬಂಟ್ವಾಳ ತೃತೀಯ  ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಬಹುಮಾನ ವಿಜೇತ ತಂಡಗಳು […]

Read More

ಯುವವಾಹಿನಿ ಬಿಲ್ಲವ ಸಮಾಜದ ಕಣ್ಣುಗಳು – ಡಾ. ರಾಜಶೇಖರ ಕೋಟ್ಯಾನ್

ಯುವವಾಹಿನಿಯು ಬಿಲ್ಲವ ಸಮಾಜದ ಕಣ್ಣುಗಳು,  ವಜ್ರದಂತೆ ಬಲಿಷ್ಠವಾಗಿರುವ   ಬಿಲ್ಲವ ಸಮಾಜವನ್ನು ಪರಸ್ಪರ ಪ್ರೀತಿ, ವಿಶ್ವಾಸ, ಸಂಪರ್ಕದ ಮೂಲಕ ಹೊಳಪು ನೀಡುವ ಕಾರ್ಯವನ್ನು ಯುವವಾಹಿನಿ ಮಾಡುತ್ತಿದೆ ಎಂದು ರಾಜ್ಯಪ್ರಶಸ್ತಿ ಪುರಸ್ಕ್ರತ ಚಲನಚಿತ್ರ ನಟ,ನಿರ್ಮಾಪಕ ರಾಜಶೇಖರ ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಯುವಕ್ರೀಡಾ ಸಂಗಮ 2017 […]

Read More

ಯುವವಾಹಿನಿಯ ಯುವಕ್ರೀಡಾ ಸಂಗಮ -2017 ಉದ್ಘಾಟನೆ

  ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ,ನೆಮ್ಮದಿಯನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ಮಹತ್ತರವಾದುದು, ಈ ನಿಟ್ಟಿನಲ್ಲಿ ಯುವಕರನ್ನು ಕ್ರೀಡೆಯ ಮೂಲಕ ಸಂಘಟಿಸುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾದುದು ಎಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅದ್ಯಕ್ಷರಾದ ಶ್ರೀ ಅಶೋಕ್ ಎಂ.ಸುವರ್ಣ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ […]

Read More

ಉಡುಪಿ ಯುವವಾಹಿನಿಯ 2017-18ನೇ ಸಾಲಿನ ಪದಗ್ರಹಣ ಸಮಾರಂಭ

ಯುವವಾಹಿನಿಯ 29 ನೇ ವಾರ್ಷಿಕ ಸಮಾವೇಶ ದಾಖಲೆಯ ಪುಟ ಸೇರುವ ಮೂಲಕ ಉಡುಪಿ ಯುವವಾಹಿನಿಯ ಶಕ್ತಿ ಅನಾವರಣಗೊಂಡಿದೆ. ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಮೂಲಕ ಉಡುಪಿ ಯುವವಾಹಿನಿ ಪುಣ್ಯದ ಕಾರ್ಯ ಮಾಡುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 23.042017 ನೇ ಆದಿತ್ಯವಾರ ಉಡುಪಿಯ ಜಗನ್ನಾಥ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಉಡುಪಿ ಘಟಕದ 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ನೆರವೇರಿಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!