Yuvavahini

ಉಡುಪಿ

ಸಮುದಾಯದ ಪಾಲಿಗೆ ಯುವವಾಹಿನಿಯು ಸೇವಾ ಸಂಜೀವಿನಿಯಂತಿದೆ: -ಕೃಷ್ಣಮೂರ್ತಿ ಹೆಚ್.ಕೆ

ಶ್ರೀಯುತರು ಉಡುಪಿ ಯುವವಾಹಿನಿಯ ರಜತ ಸಂಭ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಗಳು ಕರಮುಕ್ಕು ದೇಗುಲದಲ್ಲಿ ಪ್ರತಿಷ್ಠಾಪಿಸಿದ ದೀಪದ ಮಾದರಿಯನ್ನು ಪ್ರಜ್ವಲಿಸಿ ಸಂಸ್ಥೆಯು ನಡೆಸಿದ ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿಶೇಷ ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ದಯಾನಂದ ಕರ್ಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಜತ ಸಂಭ್ರಮ ಸಂಚಾಲಕರಾದ ರಘುನಾಥ್ ಮಾಬಿಯಾನ್ ಗೌರವ ಉಪಸ್ಥಿತರಿದ್ದರು. ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಅರವಿಂದ ಕೋಟ್ಯಾನ್ ಕಲ್ಲುಗುಡ್ಡೆ ಸಂಗ್ರಹಿಸಿದ ‘ಗುರುವಾಣಿ’ ಕೃತಿಯನ್ನು ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ […]

Read More

ಯುವವಾಹಿನಿಯಿಂದ ಸೃಜನಶೀಲತೆಯ ಸದ್ವಿನಿಯೋಗವಾಗುತ್ತಿದೆ -ಮುದ್ರಾಡಿ ಮಂಜುನಾಥ ಪೂಜಾರಿ

ಉಡುಪಿ : ಸಮುದಾಯದ ಉನ್ನತಿಗೆ ಭೌದ್ದಿಕ ವಿಕಸನದೊಂದಿಗೆ ಸಾಂಸ್ಕೃತಿಕ ವಿಚಾರಧಾರೆಗಳು ಅವಶ್ಯಕ. ಈ ನಿಟ್ಟಿನಲ್ಲಿ ಯುವವಾಹಿನಿಯು ಯುವ ಮನಸ್ಸುಗಳಿಗೆ ಸೂಕ್ತ ಪ್ರೋತ್ಸಾಹ ನೀಡಿ ಸೃಜನಶೀಲತೆಯನ್ನು ಸದ್ವಿನಿಯೋಗಪಡಿಸುತ್ತಿದೆ ಎಂದು ನಾರಾಯಣಗುರು ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀ ಮುದ್ರಾಡಿ ಮಂಜುನಾಥ ಪೂಜಾರಿ ಅಭಿಪ್ರಾಯಪಟ್ಟರು. ಸಾಂಸ್ಕೃತಿಕ ಪ್ರಜ್ಞೆಗಳು ವ್ಯಕ್ತಿಗಳಲ್ಲಿ ಸೃಜನಶೀಲತೆಯನ್ನು ಸೃಷ್ಟಿಸುತ್ತಿದ್ದು, ಉತ್ತಮ ವಿಚಾರಧಾರೆಗಳು, ನೈಜ್ಯ ಇತಿಹಾಸಗಳ ಸಂದೇಶವನ್ನು ಬಿತ್ತರಿಸುವಲ್ಲಿ ನಿರಂತರ ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಯುವವಾಹಿನಿಯ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶ್ರೀಯತರು ದಿನಾಂಕ 28-02-2062,ಶನಿವಾರ ,ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ […]

Read More

ಸಾಂಸ್ಕೃತಿಕ ಅಭಿರುಚಿಯಿಂದ ಸಂಘಟನೆಗೆ ಶಕ್ತಿ: ಬನ್ನಂಜೆ ಬಾಬು ಅಮೀನ್.

ಉಡುಪಿ : ಸದಭಿರುಚಿಯ ಚಟುವಟಿಕೆಗಳು ಪ್ರತಿಭಾ ಪರಿಶೋಧದ ಜೊತೆಗೆ ಸ್ನೇಹ,ಸೌಹಾರ್ದ ಸಂಬಂಧವನ್ನೂ ಸಾಧ್ಯವಾಗಿಸುತ್ತದೆ. ಸಂಸ್ಕೃತಿ,ಸಂಸ್ಕಾರಗಳನ್ನು ಪ್ರಸ್ತುತಪಡಿಸುವುದರಿಂದ ಸಮುದಾಯದ ಸಂವರ್ಧನೆಗೂ ಕಾರಣವಾಗುತ್ತದೆ. ವಿವಿಧ ಆಸಕ್ತಿಗಳ ಜೊತೆಗೆ ಸಜ್ಜುಗೊಳ್ಳುವ ಸಾಂಸ್ಕೃತಿಕ ಪ್ರಕಾರಗಳು ಅನ್ಯೋನ್ಯತೆಯ ಪ್ರತೀಕವಾಗಿ ಸಂಘಟನೆಗೆ ಶಕ್ತಿ ತುಂಬುತ್ತದೆ ಎಂದು ಹಿರಿಯ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಅಭಿಪ್ರಾಯಪಟ್ಟರು. ಶ್ರೀಯುತರು ದಿನಾಂಕ 28-02-2026,ಶನಿವಾರದಂದು ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ಜರಗಿದ ಉಡುಪಿ ಘಟಕದ ರಜತ ಸಂಭ್ರಮ ಪ್ರಯುಕ್ತ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಸಂಘಗಳಿಗೆ ಆಯೋಜಿಸಲಾದ ಸಾಂಸ್ಕೃತಿಕ ಸ್ಪರ್ಧಾ […]

Read More

ರಜತ ಸಂಭ್ರಮ ಯಶಸ್ವಿಯಾಗಲಿದೆ : ಬಿ.ಜನಾರ್ದನ ಪೂಜಾರಿ

ಬಂಟ್ವಾಳ : ಫೆಬ್ರವರಿ 28 ಹಾಗೂ ಮಾರ್ಚ್ 01ರಂದು ನಡೆಯಲಿರುವ ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮ ಸಮಾರಂಭದ ಆಮಂತ್ರಣ ಪತ್ರವನ್ನು ಬಂಟ್ವಾಳದಲ್ಲಿ ಭಾರತ ಸರ್ಕಾರದ ಮಾಜಿ ವಿತ್ತ ಸಚಿವರಾದ ಬಿ ಜನಾರ್ದನ ಪೂಜಾರಿ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಲ್ಲಿ ಯುವವಾಹಿನಿ ಉಡುಪಿ ಘಟಕವು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸಿದ್ದು, ಅಶಕ್ತ ಕುಟುಂಬಗಳ ಮನೆ ನಿರ್ಮಾಣದಂತಹ ಮಹತ್ವದ ಸಮಾಜಮುಖಿ ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಂಡಿರುವುದು […]

Read More

ನಾರಾಯಣ ಗುರುಗಳ ತತ್ವಾದರ್ಶಗಳನ್ನು ಪಾಲಿಸುತ್ತಿರುವ ಯುವ ವಾಹಿನಿಯ ಕಾರ್ಯ ಸುತ್ಯರ್ಹ : ಬನ್ನಂಜೆ ಬಾಬು ಅಮೀನ್

ಉಡುಪಿ: ನಾರಾಯಣ ಗುರುಗಳು ವಿಶ್ವಕ್ಕೆ ಸಾರ್ವಕಾಲಿಕ ಸಂದೇಶ ನೀಡಿದ ಜಗದ್ಗುರುಗಳು. ಅವರ ಚಿಂತನೆಗಳು ಪ್ರಸ್ತುತ ಯುವ ಜನತೆಗೆ ಹೆಚ್ಚು ಪ್ರೇರಣೆಯಾಗಬೇಕು. ಜಾತಿ ಮತ ಧರ್ಮಗಳ ಸಾಮರಸ್ಯ ಸಾರಿದ ನಾರಾಯಣ ಗುರುಗಳ ತತ್ವಾದರ್ಶಗಳನ್ನು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತರ ಸಂಘಟಿಸುವ ಮೂಲಕ ಯುವವಾಹಿನಿ ಉಡುಪಿ ಘಟಕವು ಗುರುತಿಸಿಕೊಂಡಿರುವುದು ಸ್ತುತ್ಯರ್ಹವೆಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಅಭಿಪ್ರಾಯಪಟ್ಟರು. ಶ್ರೀಯುತರು ಯುವವಾಹಿನಿ ಉಡುಪಿ ಘಟಕವು ಬನ್ನಂಜೆ ಬಿಲ್ಲವರ ಸೇವಾ ಸಂಘದ […]

Read More

ಸಾಮಾಜಿಕ ಬಂಧನಗಳಿಂದ ಮುಕ್ತಿಗೆ ಗುರುತತ್ವವೇ ಮಾರ್ಗ – ವಿದ್ದು ಉಚ್ಚಿಲ್

ಉಡುಪಿ: ವಿವಿಧ ರೂಪದ ಸಾಮಾಜಿಕ ಕಟ್ಟುಪಾಡುಗಳ ಕಾರಣದಿಂದ ಗಂಭೀರ ಶೋಷಣೆಗೆ ಗುರಿಯಾಗಿದ್ದ ಸಮಾಜಕ್ಕೆ ಬೆಳಕು ತೋರಿದ ಮಹಾನ್ ಚಿಂತಕ ನಾರಾಯಣ ಗುರು ಆಗಿದ್ದಾರೆ. ಸಮಾನ ಮನಸ್ಕ ಅನುಯಾಯಿಗಳ ಮೂಲಕ ತ್ಯಾಗ ಹಾಗೂ ಸೇವೆಯ ಮೌನ ಕ್ರಾಂತಿಯನ್ನು ಸಂಘಟಿಸಿದ ಗುರುಗಳಲ್ಲಿ ಬದ್ದತೆಯ ಅನನ್ಯ ಆದರ್ಶಗಳು ಅಡಗಿವೆ ಎಂದು ರಂಗನಿರ್ದೇಶಕ ವಿದ್ದು ಉಚ್ಚಿಲ್ ತಿಳಿಸಿದರು. ಪ್ರಸ್ತುತ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಡಿ ಸಾಮಾನ್ಯರ ಬದುಕನ್ನು ದುಸ್ತರಗೊಳಿಸುತ್ತಿರುವ ಎಲ್ಲಾ ತರದ ಸಾಮಾಜಿಕ ಬಂಧನಗಳಿಂದ ಬಿಡುಗಡೆಯು ಗುರುತತ್ವಗಳ ಪಾಲನೆಯಿಂದ ಮಾತ್ರ ಸಾಧ್ಯವಿದೆ ಎಂದು ಅವರು […]

Read More

ತಲೆಗೊಂದು ಸೂರು’ ಯೋಜನೆಗೆ ಮತ್ತೊಂದು ಮೈಲುಗಲ್ಲು

ಬ್ರಹ್ಮಾವರ: ಯುವವಾಹಿನಿ (ರಿ.) ಉಡುಪಿ ಘಟಕದ ಮಹತ್ವಾಕಾಂಕ್ಷೆಯ ‘ತಲೆಗೊಂದು ಸೂರು’ ಯೋಜನೆಯಡಿ ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದ ಅಂಜಾಲು ನಿವಾಸಿ ಸುಮಿತ್ರಾ ಪೂಜಾರಿ ಅವರಿಗೆ 19.10.2025ರಂದು ನೂತನವಾಗಿ ನಿರ್ಮಿಸಿದ ಮನೆ ‘ಶ್ರೀ ಗುರು ನಿಲಯ’ವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರವನ್ನು ನೀಡಿ, ಮನೆ ಹಸ್ತಾಂತರ ಕಾರ್ಯಕ್ರಮವನ್ನು ಗೌರವಪೂರ್ಣವಾಗಿ ನೆರವೇರಿಸಲಾಯಿತು. ಸಮಾಜಸೇವೆಯ ಪರಂಪರೆಯನ್ನು ಮುಂದುವರಿಸುತ್ತಿರುವ ಯುವವಾಹಿನಿ ಉಡುಪಿ ಘಟಕವು ಇದುವರೆಗೆ ಒಟ್ಟು 7 ಮನೆಗಳನ್ನು ನಿರ್ಮಿಸಿ, 3 ಮನೆಗಳನ್ನು ಸಂಪೂರ್ಣ ದುರಸ್ತಿ ಮಾಡಿ ಫಲಾನುಭವಿಗಳಿಗೆ ಹಸ್ತಾಂತರಿಸಿರುವುದು […]

Read More

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಪದಗ್ರಹಣ ಸಮಾರಂಭವು 24-11-2024 ರಂದು ಘಟಕದ ಸಭಾಂಗಣದಲ್ಲಿ ನೆರವೇರಿತು. ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಆದ ಶ್ರೀ ಮಹಾಬಲ ಅಮೀನ್ವಾಚಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಯಾನಂದ ಕರ್ಕೇರಾ ಹಾಗೂತಂಡದವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಹೆಚ್ ಹೊಳೆಯಪ್ಪ. ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು, ಉಡುಪಿ, ಇವರು ಶುಭ ಹಾರೈಸಿದರು. ಬಿಲ್ಲವ ಸೇವಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!