Yuvavahini

ಉಡುಪಿ

SSLC ಯಲ್ಲಿ ಶ್ರೇಷ್ಠ ಸಾಧನೆಯ ಕು| ರಕ್ಷಾ ಡಿ. ಅಂಚನ್

ವಿದ್ಯಾರ್ಥಿಯೊಬ್ಬರ ಸತತ ಪರಿಶ್ರಮದ ಸಾಧನೆಯ ಮಾನದಂಡ ಆತ/ ಆಕೆ ಗಳಿಸುವ ಶೇಕಡಾವಾರು ಅಂಕ. ಈ ನಿಟ್ಟಿನಲ್ಲಿ ಈ ಬಾರಿ SSLC ಪರೀಕ್ಷೆಯಲ್ಲಿ 625 ಕ್ಕೆ 622 ಅಂಕಗಳಸಿ ಶೇ. 99.52 % ಸಾಧನೆ ಮಾಡಿದ ಕು| ರಕ್ಷಾ ಡಿ ಅಂಚನ್ ನೋಡುವವರು ನಿಬ್ಬೆರಗಾಗುವಂತೆ ಮಾಡಿದ್ದಾರೆ. ಶ್ರೀ ದೇವಿಪ್ರಸಾದ್ ಹಾಗೂ ಶ್ರೀಮತಿ ವಿನೋದಾ ದಂಪತಿಗಳ ಈ ಹೆಮ್ಮೆಯ ಕುವರಿ. ಉಚ್ಚಿಲದ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತಿದ್ದಾಳೆ. ಕನ್ನಡದಲ್ಲಿ 125 ಕ್ಕೆ 125, ಹಿಂದಿ, ಗಣಿತ ಹಾಗೂ ವಿಜ್ಞಾನದಲ್ಲಿ 100 ಕ್ಕೆ 100 […]

Read More

ಪ್ರತಿಭಾ ಕಾರಂಜಿ-ಹೃತ್ವಿಕ್ ಕುಮಾರ್

2015-16 ರ ಸಾಲಿನ CBSE 10 ೦ನೇ ತರಗತಿ ಪರೀಕ್ಷೆಯಲ್ಲಿ ಉದ್ಯಾವರ ಪ್ರತಾಪ್ ಕುಮಾರ್ 10 ಕ್ಕೆ 10 ಗ್ರೇಡ್ ಅಂಕ ಗಳಿಸಿರುತ್ತಾನೆ. ವಿಜ್ಞಾನ ಮಾದರಿಯಲ್ಲಿ ರಾಜ್ಯ ಮಟ್ಟದ ಪ್ರದರ್ಶನ, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯ ಜೂನಿಯರ್ ಹಾಗೂ ಸೀನಿಯರ್ ಗ್ರೇಡ್‌ನಲ್ಲಿ ವಿಶಿಷ್ಟ ಶ್ರೇಣಿ, ಅಂತರ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ, ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿದ ಈತ ಕಾಲ್ಚೆಂಡು ಆಟಗಾರ ಕೂಡ. ಶಾಲೆಯಲ್ಲಿ ಪ್ರಬಂಧ, ಭಾಷಣ, ಹಾಡುಗಾರಿಕೆ, ಛದ್ಮವೇಷ, ವಿಜ್ಞಾನ ಮಾದರಿ, ಗೂಡುದೀಪ ತಯಾರಿಕೆ, […]

Read More

ವೈವಿಧ್ಯಮಯ ಪ್ರತಿಭೆಯ ಕು| ನಿಧಿಶಾ

ಕು| ನಿಧಿಶಾ-ಕರ್ನಾಟಕದ ಪ್ರೌಢ ಶಿಕ್ಷಣ ಮಂಡಳಿ ಕಳೆದ 2016 ಮಾರ್ಚ್‌ನಲ್ಲಿ ನಡೆಸಿದ SSLC  ಪರೀಕ್ಷೆಯಲ್ಲಿ 625 ಕ್ಕೆ ನಂಬಲಸಾಧ್ಯವಾದ 620 ಅಂಕಗಳಿಂದ ಕಲಿತ ಶಾಲೆಯ ಅಧ್ಯಾಪಕರು, ಪೋಷಕರು ಮತ್ತು ಬಿಲ್ಲವ ಸಮುದಾಯವೇ ಹೆಮ್ಮೆ ಪಡುವ ಸಾಧನೆ ಮಾಡಿರುತ್ತಾರೆ. ಈ ಬೆಲೆ ಕಟ್ಟಲಾಗದ ನಿಧಿ ಬರೀ ಕಲಿಕೆಗೇ ಸೀಮಿತಗೊಂಡಿಲ್ಲ. ಸಾಮಾನ್ಯವಾಗಿ ಕಲಿಕೆಯಲ್ಲಿ ಮುಂಚೂಣಿಯಲ್ಲಿರಬೇಕಾದಲ್ಲಿ ಬರೀ, ಪುಸ್ತಕ-ಓದು ಇಷ್ಟಕ್ಕೆ ಸೀಮಿತವಿರಬೇಕೆಂಬ ತಪ್ಪು ಕಲ್ಪನೆ ಹೆಚ್ಚಿನವರಲ್ಲಿದೆ. ಆದರೆ ನಿಧಿಶಾಳ ಪೋಷಕ ಲೋಕನಾಥ್-ಚಿತ್ರಕಲಾ ದಂಪತಿಗಳು ತಮ್ಮ ಮಗಳು ಇತರ ಸಾಧನೆಯನ್ನು ಮಾಡಲೂ ಪ್ರೋತ್ಸಾಹಿಸಿರುವುದು ಸಂತಸದ ವಿಚಾರ. ಪ್ರಬಂಧ ಸ್ಪರ್ಧೆಯಲ್ಲಿ […]

Read More

ಭರತನಾಟ್ಯದಿಂದ ಏಕಾಗ್ರತೆ – ಕು| ರಿಶಿಕಾ

ಮೂಲ್ಕಿ ಚಿತ್ರಾಪಿನ ಶ್ರೀಮತಿ ಭಾರತಿ ಹಾಗೂ ಶ್ರೀ ಭಾಸ್ಕರ ಕೋಟ್ಯಾನ್ ದಂಪತಿಗಳು ತಮ್ಮ ಮಗಳು ಕು|ರಿಶಿಕಾ ಬೆಳೆದು ಶೈಕ್ಷಾಣಿಕ ಸಾಧನೆಯಿಂದ ಪಠ್ಯೇತರ ಸಾಧನೆಯಿಂದ ತಮಗೆ ಉತ್ತಮ ಹೆಸರು ತರಬಹುದೆಂದು ತಿಳಿದಿದ್ದರೋ ಇಲ್ಲವೋ ಗೊತ್ತಿಲ್ಲ. ಆದರೆ ಬಿಲ್ಲವಸಮುದಾಯದ ಇತ್ತೀಚಿನ ಸಮಾಜೋನ್ನತಿ ಕಾರ್ಯಗಳಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡು ಯುವವಾಹಿನಿ ಎಂಬ ಸಂಸ್ಥೆಯ ಕಣ್ಣಿಗೆ ಬಿದ್ದ ಈ ಪ್ರತಿಭೆ ಇದೀಗ ಕಲಿಕೆ ಮತ್ತು ಭಾರತೀಯ ಸಂಸ್ಕೃತಿಯ ವೈಶಿಷ್ಟ್ಯ ನೃತ್ಯ ಪ್ರಾಕಾರವಾದ ಭರತ ನಾಟ್ಯ ಹೀಗೆ ಎರಡರಲ್ಲೂ ಹೆಸರುಗಳಿಸಿದ್ದು ಉಲ್ಲೇಖನೀಯ ಅಂಶ. ಖ್ಯಾತ ತುಳುನಾಡ […]

Read More

ಬಹುಮುಖ ಪ್ರತಿಭೆಯ ವಿದ್ಯಾರ್ಥಿ ಕ್ಷಿಪ್ರಜ್ ಯು.

ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಧ್ಯಾಪಕ ಡಾ| ಉಮ್ಮಪ್ಪ ಪೂಜಾರಿ ಹಾಗೂ LIC ಉದ್ಯೋಗಿ ಶ್ರೀಮತಿ ರೇಖಾ ದಂಪತಿಗಳ ಪುತ್ರ ಕ್ಷಿಪ್ರಜ್ ಯು CBSE ಹತ್ತನೆಯ ತರಗತಿಯಲ್ಲಿ ಹತ್ತರಲ್ಲಿ ಹತ್ತು ಗ್ರೇಡ್ ಪಾಯಿಂಟ್ ಗಳಿಸಿರುತ್ತಾನೆ. ಪ್ರತಿಭಾವಂತ ವಿದ್ಯಾರ್ಥಿಯಾದ ಈತ ಕೇಂದ್ರಿಯ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ರಾಜ್ಯಕ್ಕೆ 21 ನೇ ಸ್ಥಾನ ಪಡೆದಿದ್ದು ದಕ್ಷಿಣ ಭಾರತ ಹಿಂದಿ ಪ್ರಚಾರ್ ಸಭಾ ಇವರು ನಡೆಸಿದ ರಾಷ್ಟ್ರ ಭಾಷಾ ಪ್ರವೀಣ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದಿದ್ದಾನೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಜೂನಿಯರ್ […]

Read More

ಶೈಕ್ಷಣಿಕ ಸಾಧನೆಯೊಂದಿಗೆ ಕ್ರೀಡಾ ಸಾಧನೆ – ಕು| ಶಮಿತಾ

ಭಾರತ ಸರಕಾರದ CBSE 10ನೆಯ ತರಗತಿಯಲ್ಲಿ ಈಕೆ 10 ಕ್ಕೆ 10 ಅಂಕ ಗಳಿಸಿ ತನ್ನ ಕಲಿಕಾ ಸಾಮರ್ಥ್ಯ ಯಾರಿಗೇನೂ ಕಡಿಮೆ ಇಲ್ಲ ಎಂದು ನಿರೂಪಿಸಿದ್ದಾಳೆ! ಶಹಬ್ಬಾಸ್! ಎನ್ನಬೇಕಲ್ಲ ನಾವು ನೀವೆಲ್ಲ? ತಂದೆ ಸತೀಶ್ ಮತ್ತು ತಾಯಿ ಅಮಿತಾ-ಪುತ್ರಿ ಶಮಿತಾ-ವಾಹ್! ದೈಹಿಕ ಕ್ಷಮತೆಯ ಪುರಾತನ ಆತ್ಮ ರಕ್ಷಣಾ ಕಲೆ ಕರಾಟೆಯಲ್ಲಿ ಹಲವು ಹತ್ತು ಪ್ರಶಸ್ತಿ ಗಳಿಸಿದ ಶಮಿತಾ ಬಿಲ್ಲವ ಸಮಾಜದ ಕರಾಟೆ ಕಿಡ್ ಎನಿಸುವುದು ನಿಸ್ಸಂಶಯ. ಕರಾಟೆ ಕಲೆಯಲ್ಲಿ ತನ್ನನ್ನು ಪರಿಪೂರ್ಣವಾಗಿ ಪಳಗಿಸಿಕೊಂಡು ಪಡೆದ ಯಶಸ್ಸಿನ ಸಾಕ್ಷಿ ಯುವವಾಹಿನಿ ಸಂಸ್ಥೆಗೆ […]

Read More

ಕಲಿಕೆಯಲ್ಲಿ ಕಷ್ಟವೆಂಬುದಿಲ್ಲ ಕು| ಶ್ರಾವ್ಯ ಕೆ.

BGS Institute Kavoor ಇಲ್ಲಿ C.B.S.E. ಪಠ್ಯಕ್ರಮದಲ್ಲಿ 10 ನೇಯ ತರಗತಿ ಕಲಿತು ಅತ್ಯುನ್ನತ CPGA Grade Point  10 ಅಂಕ ಗಳಿಸಿದ ಕು| ಶ್ರಾವ್ಯ ಕೆ. ಪಂಜಿಮೊಗರು ನಿವಾಸಿ ಶ್ರೀ ಶ್ರೀಧರ ಪೂಜಾರಿ- ಡಾ| ವಿದ್ಯಾ ಶ್ರೀಧರ್ ದಂಪತಿಗಳ ಸುಪುತ್ರಿ. ಸಾಮಾನ್ಯವಾಗಿ ಮಕ್ಕಳು ಕಲಿಕೆಯಲ್ಲಿ ಸಾಧನೆ ಮಾಡಬೇಕೆಂಬ ಕನಸು ಹೆತ್ತವರಿಗೆ ಸಹಜ. ಆದರೆ ಬೋಧನೇತರ ಚಟುವಟಿಕೆಗಳಲ್ಲಿ ಸಾಧಿಸುವುದೂ ಅಷ್ಟೇ ಮುಖ್ಯ ಎಂಬ ತಿಳಿವಳಿಕೆಯುಳ್ಳ ಪೋಷಕರು ಈಗ ಹೆಚ್ಚಾಗಿದ್ದಾರೆ ಅದೇನೇ ಇರಲಿ. ಶ್ರಾವ್ಯ ಕೆ. ಕಲಿಕೆ ಹೊರತು ಪಡಿಸಿ […]

Read More

ಯುವವಾಹಿನಿ ಅಕ್ಷರ ಪುರಸ್ಕಾರ ; ಸಾಟಿ ಇಲ್ಲದ ಸಾಧನೆಯ ಕು| ಏಳ್ಮುಡಿ ವರ್ಷಾ ಪಿ.

IAS ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು, IISC ಬೆಂಗಳೂರಿನಲ್ಲಿ ಕಲಿಯುವುದು ಇದು ಹೆಚ್ಚಿನ ಜನರಿಗೆ ನನಸಾಗದ ಕನಸು. ಯುವ ಜನರಿಗಂತೂ ಇದು ಕನಸಿನ ಲೋಕದ ಸಾಧನೆ. ಸುಲಭದಲ್ಲಿ ನಿಲುಕುವಂಥದಲ್ಲ. ಆದರೆ ಇಂದು ಬಿಲ್ಲವ ಸಮುದಾಯ ಇಡೀ ಅಭಿಮಾನಪಡತಕ್ಕ ಸಾಧನೆಯ ಹಾದಿಯಲ್ಲಿದೆ. ಬಿಲ್ಲವ ಕುವರಿ ಪುತ್ತೂರಿನ ಏಳ್ಮುಡಿ ಮನೆ ಶ್ರೀ ರಮೇಶ್ ಪೂಜಾರಿ ಶ್ರೀಮತಿ ಯಶೋಧ ದಂಪತಿಗಳ ಸುಪುತ್ರಿ ಕು| ವರ್ಷಾ ಪಿ. ಪಿ.ಯು.ಸಿಯಲ್ಲಿ ಎಲ್ಲ 4 ಐಚ್ಚಿಕ ವಿಷಯಗಳಲ್ಲಿ 100% (ಒಟ್ಟು 600/591) ಅಂಕ ಗಳಿಸಿ ಕರ್ನಾಟಕದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ […]

Read More

ಶ್ರೇಷ್ಠ ನಾಯಕತ್ವದ ಹಾದಿಯಲ್ಲಿ ರಜತ್ ಕುಮಾರ್ ಎನ್.ಎಸ್.

ಬದುಕಿನಲ್ಲಿ ಸುನಿಶ್ಚಿತ ಗುರಿಯುಳ್ಳ ಇತ್ಯಾತ್ಮಕ ಸಾಧನೆಯ ಮುಂಚೂಣಿ ಮತ್ತು ಮುನ್ನಗ್ಗುವ ಎದೆಗಾರಿಕೆಯುಳ್ಳ ಯುವಜನರಲ್ಲಿ ಕೆಲವೇ ಕೆಲವರು ವಿದ್ಯಾರ್ಥಿ ಜೀವನದಲ್ಲಿ ಸ್ವಯಂಪ್ರೇರಿತವಾಗಿ ಉತ್ತಮ ನಾಯಕತ್ವದ ಲಕ್ಷಣಗಳನ್ನು ಮೈಗೂಡಿಸಿಕೊಂಡು ಯಶಸ್ವೀ ನಾಯಕರಾಗುತ್ತಾರೆ. ಇಂತಹದ್ದೇ ಒಂದು ಮನೋಧರ್ಮದವರಾಗಿದ್ದು ರಾಷ್ಟ್ರ ಚಿಂತನೆಯ ಹಾದಿಯಲ್ಲಿ ಸಾಗುತ್ತಾ ಕರ್ನಾಟಕ ರಾಜ್ಯಪಾಲರಿಂದ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂ ಸೇವಕ ರಾಜ್ಯ ಪ್ರಶಸ್ತಿ (2014-15 ರಲ್ಲಿ) ಬಾಚಿಕೊಂಡ ಓರ್ವ ವಿದ್ಯಾರ್ಥಿಯ ಯಶೋಗಾಥೆ ಇದು. ಆತ ಬೇರಾರೂ ಅಲ್ಲ; ಪುತ್ತೂರಿನ ಶ್ರೀ N. ಶೀನಪ್ಪ ಪೂಜಾರಿ- ರೇಖಾ ದಂಪತಿಗಳ ಹೆಮ್ಮೆಯ […]

Read More

ರಾಷ್ಟ್ರಪತಿ ಪುರಸ್ಕಾರ ಪಡೆದ ಕು| ತೃಪ್ತಿ ಆನಂದ್

ಸಮುದಾಯ ಸೇವೆಗೆ ಗೈಡ್ ಸಂಸ್ಥೆ ಹೆಸರುವಾಸಿಯಾಗಿದ್ದು ಅತ್ಯಂತ ಉತ್ಕೃಷ್ಠ ರಾಷ್ಟ್ರಪತಿಗೈಡ್ಸ್ ಪುರಸ್ಕಾರ ಪಡೆಯುವ ಅರ್ಹತೆ ಲಕ್ಷದಲ್ಲೊಬ್ಬರಿಗೆ ಬರಬಹುದು. ರಾಷ್ಟ್ರಮಟ್ಟದಲ್ಲಿ ಇಂತಹ ಮಹೋನ್ನತ ಗೈಡ್ಸ್ ಪುರಸ್ಕಾರ ಪಡೆದು ಬಿಲ್ಲವ ಸಮುದಾಯಕ್ಕೆ ಕಿರೀಟ ಸದೃಶ ಕೀರ್ತಿ ತಂದ ಕು. ತೃಪ್ತಿ ಆನಂದ್ ಮಂಗಳೂರಿನ K.S Hegde ವೈದ್ಯಕೀಯ ಕಾಲೇಜಿನ ಪೊಫೆಸರ್ ಡಾ. ಆನಂದ ಬಂಗೇರ ಹಾಗೂ ಅಲ್ಲೇ ಪ್ರೊಫೆಸರ್ ಆಗಿರುವ ಡಾ. ವಸಂತಿ ಕೋಟ್ಯಾನ್‌ರವರ ಸುಪುತ್ರಿ St. ತೆರೆಸಾ ಶಾಲೆ, ಬೆಂದೂರಿನಲ್ಲಿ 10ನೇ ತರಗತಿವರೆಗೆ ಓದಿ ಮೌಲ್ಯ ಶಿಕ್ಷಣ (Value […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!