Yuvavahini

ಮೂಲ್ಕಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಫಲವೇ ಸ್ವಾತಂತ್ರ್ಯ : ಶಶಿಕಲಾ ವೈ. ಅಮೀನ್

ಮುಲ್ಕಿ, ಆಗಸ್ಟ್ 15: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ ಎಂದು ಶ್ರೀ ನಾರಾಯಣಗುರು ಮಹಿಳಾ ಮಂಡಳಿ ಅಧ್ಯಕ್ಷೆ ಶಶಿಕಲಾ ವೈ. ಅಮೀನ್ ಹೇಳಿದರು. ಅವರು ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ ಯೂನಿಯನ್ ಕ್ಲಬ್, ಮುಲ್ಕಿಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹಿರಿಯರ ತ್ಯಾಗವನ್ನು ಸದಾ ಸ್ಮರಿಸುವುದು ನಮ್ಮ ಕರ್ತವ್ಯ ಎಂದರು. […]

Read More

ಆಷಾಢದ ಕಷಾಯ ಸೇವನೆಯಿಂದ ಆರೋಗ್ಯದ ರಕ್ಷಣೆ : ಚರೀಷ್ಮಾ ಶ್ರೀನಿವಾಸ್

ಮುಲ್ಕಿ, ಆಗಸ್ಟ್ 12: ತುಳುನಾಡಿನ ಸಂಪ್ರದಾಯ, ಆಚರಣೆಗಳ ಹಿಂದೆ ವೈಜ್ಞಾನಿಕ ಹಾಗೂ ಆರೋಗ್ಯದ ಮಹತ್ವ ಅಡಗಿದೆ. ಆಷಾಢ ಮಾಸದ ಅಮಾವಾಸ್ಯೆಯಂದು ತುಳುವರು ಸೇವಿಸುವ ಔಷಧೀಯ ಗುಣವುಳ್ಳ ಕಷಾಯವು ಆರೋಗ್ಯದ ದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ಯುವವಾಹಿನಿ (ರಿ.) ಮುಲ್ಕಿ ಘಟಕದ ಅಧ್ಯಕ್ಷೆ ಚರೀಷ್ಮಾ ಶ್ರೀನಿವಾಸ್ ಹೇಳಿದರು. ಅವರು ಆಗಸ್ಟ್ 12ರಂದು ಮುಲ್ಕಿ ಬಸ್ ನಿಲ್ದಾಣದ ಬಳಿ ಯುವವಾಹಿನಿ (ರಿ.) ಮುಲ್ಕಿ ಘಟಕದ ಸಂಯೋಜನೆಯಲ್ಲಿ ಲಯನ್ಸ್ ಕ್ಲಬ್ ಮುಲ್ಕಿ, ಲಿಯೋ ಕ್ಲಬ್, ರೋಟರಿ ಕ್ಲಬ್ ಮುಲ್ಕಿ ಹಾಗೂ ನವದುರ್ಗ ಯುವಕ […]

Read More

ಕಾರ್ಗಿಲ್ ವಿಜಯ ದಿನಾಚರಣೆ ಹುತಾತ್ಮ ಯೋಧರಿಗೆ ಸಲ್ಲಿಸುವ ಗೌರವ: ವೈ.ಎನ್. ಸಾಲ್ಯಾನ್

ಮುಲ್ಕಿ, ಆ. 2: ಕಾರ್ಗಿಲ್ ವಿಜಯ ದಿನಾಚರಣೆಯು ಕೇವಲ ವಿಜಯದ ಸಂಭ್ರಮವಲ್ಲ, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹುತಾತ್ಮ ಯೋಧರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಗೌರವ ಸಲಹೆಗಾರ ವೈ.ಎನ್. ಸಾಲ್ಯಾನ್ ಹೇಳಿದರು. ಅವರು ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಂಘದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕಾರ್ಗಿಲ್ ವಿಜಯ ಸುಲಭವಾಗಿ ದೊರೆತ ಗೆಲುವಲ್ಲ. ನಮ್ಮ ಯೋಧರು ತಮ್ಮ […]

Read More

ಆಟಿ ಕೂಟಗಳಿಗೆ ಯುವವಾಹಿನಿಯೇ ಪ್ರೇರಣೆ: ದಯಾನಂದ್ ಹೆಜ್ಮಾಡಿ

ಮುಲ್ಕಿ, ಜುಲೈ 26: “ಇಂದು ದೇಶ-ವಿದೇಶಗಳಲ್ಲಿ ಆಟಿಡೊಂಜಿ ದಿನದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದರೆ, ಅದಕ್ಕೆ ಮೂಲ ಪ್ರೇರಣೆಯೇ ಯುವವಾಹಿನಿ (ರಿ.) ಮುಲ್ಕಿ ಘಟಕ” ಎಂದು ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ್ ಹೆಜ್ಮಾಡಿ ಹೇಳಿದರು. ಅವರು ಜುಲೈ 26ರಂದು ಮುಲ್ಕಿ ಬಿಲ್ಲವ ಸಂಘದ ಸಭಾಭವನದಲ್ಲಿ ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಆಯೋಜಿಸಲಾದ 24ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಹಿಂದಿನ ಕಾಲದ ಚಿಮಿನಿ ದೀಪ ಬೆಳಗಿಸುವ ಮೂಲಕ ವಿಶಿಷ್ಟವಾಗಿ ಉದ್ಘಾಟಿಸಿ ಮಾತನಾಡಿದರು. ತುಳುನಾಡಿನ […]

Read More

ಗಿಡ ನೆಟ್ಟು ಪೋಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಕರುಣಾಕರ್ ಪೂಜಾರಿ

ಮೂಲ್ಕಿ, ಜುಲೈ 16: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ವನಮಹೋತ್ಸವದಂತಹ ಕಾರ್ಯಕ್ರಮಗಳ ಮೂಲಕ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಕೊಯ್ಯರ್ ಫ್ರೆಂಡ್ಸ್ ಅಧ್ಯಕ್ಷ ಕರುಣಾಕರ್ ಪೂಜಾರಿ ಹೇಳಿದರು. ಅವರು ಯುವವಾಹಿನಿ (ರಿ.) ಮೂಲ್ಕಿ ಘಟಕದ ವತಿಯಿಂದ ಬಬ್ಬು ಸ್ವಾಮಿ ದೈವಸ್ಥಾನದ ಪರಿಸರದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಬ್ಬು ಸ್ವಾಮಿ ದೈವಸ್ಥಾನದ ಅರ್ಚಕ ಗಣೇಶ್ ಕೊಯ್ಯರ್ ಮಾತನಾಡಿ, ಯುವವಾಹಿನಿ ಮೂಲ್ಕಿ ಘಟಕವು ದೈವಸ್ಥಾನದ ಪರಿಸರದಲ್ಲಿ ವನಮಹೋತ್ಸವ […]

Read More

ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ

ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 13, 2026ರಂದು ಸಂಜೆ 6 ಗಂಟೆಗೆ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬ್ರಹ್ಮಶ್ರೀ ನಾರಾಯಣಗುರು ದೇವರ ಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಘಟಕದ ಸದಸ್ಯೆ ರಾಜೇಶ್ವರಿ ನಿತ್ಯಾನಂದ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಲ್ಕಿ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ಸತೀಶ್ ಅಂಚನ್ ಮಾತನಾಡಿ, ಯುವ ಸಮಾಜವು ಶೈಕ್ಷಣಿಕ, […]

Read More

ಅಧ್ಯಕ್ಷರಾಗಿ ಚರಿಷ್ಮಾ ಶ್ರೀನಿವಾಸ್

ಮುಲ್ಕಿ : ಯುವವಾಹಿನಿ (ರಿ) ಮುಲ್ಕಿ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಚರಿಷ್ಮಾ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ ಕಾರ್ಯಕಾರಿ ಸಮಿತಿಅಧ್ಯಕ್ಷರು : ಚರಿಷ್ಮಾ ಶ್ರೀನಿವಾಸ್ಪ್ರಥಮ ಉಪಾಧ್ಯಕ್ಷರು : ಲತೀಶ್ ಸಾಲ್ಯಾನ್, ಕಾರ್ನಾಡುದ್ವಿತೀಯ ಉಪಾಧ್ಯಕ್ಷರು : ವರುಣ್, ಚಿತ್ರಾಪುಕಾರ್ಯದರ್ಶಿ : ವೇದಾ ಜಯ ಕುಬೇರ್ಜೊತೆ ಕಾರ್ಯದರ್ಶಿ : ಮಹೇಶ್ ಕುಮಾರ್ಕೋಶಾಧಿಕಾರಿ : ಭವಿಷ್ ಬಿ. ಸಾಲ್ಯಾನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಕವನ್‌ರಾಜ್, ಕುಬೆವೂರುಕ್ರೀಡಾ ನಿರ್ದೇಶಕರು : ವಂಶಿ ಟಿ. ಸಾಲ್ಯಾನ್ಆರೋಗ್ಯ ನಿರ್ದೇಶಕರು : ಕೃತಿಕಾಸಮಾಜ ಸೇವಾ ನಿರ್ದೇಶಕರು : […]

Read More

ಸ್ನೇಹ ಸಮ್ಮಿಲನ

ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕದ ಆಶ್ರಯದಲ್ಲಿ ಘಟಕದ ಸದಸ್ಯರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ದಿನಾಂಕ 30.05.2026ರಂದುಕಕ್ವ ಕೊಕ್ರಾಣಿ ಡಾನ್ ಬಾಸ್ಕೋ ರೆಸಾರ್ಟ್‌ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಘಟಕದ 35 ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಜಯಕುಮಾರ್ ಕುಬೆವೂರು ಅವರು ವಿವಿಧ ಮನರಂಜನಾ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಘಟಕದ ಅಧ್ಯಕ್ಷರಾದ ವಿನಯಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ರೆಸಾರ್ಟ್‌ನ ಮಾಲಕರಾದ ಕ್ಯಾನಿ ಡಿ’ಸೋಜಾ […]

Read More

ಉಚಿತ ಕಿವಿ ಶ್ರವಣ ತಪಾಸಣೆ ಹಾಗೂ ಶ್ರವಣ ಯಂತ್ರ ಸಹಾಯಧನ ವಿತರಣೆ

ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕ, ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ, ಬಿರುವೆರ್ ಕುಡ್ಲ (ರಿ.) ಮೂಲ್ಕಿ ಘಟಕ, ಪ್ರೆಸ್ ಕ್ಲಬ್ ಮೂಲ್ಕಿ ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಇವರ ಸಂಯುಕ್ತ ಆಶ್ರಯದಲ್ಲಿ, ಟೀಮ್ ಈಶ್ವರ್ ಮಲ್ಪೆ ಅವರ ಸಹಯೋಗದೊಂದಿಗೆ ಉಚಿತ ಕಿವಿ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮವು ಏಪ್ರಿಲ್ 13, 2026 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!