24-01-2026, 1:00 PM
ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು, ಮೂಲ್ಕಿ ಇವರ ಸಹಯೋಗದಲ್ಲಿ ದಿನಾಂಕ 24.01.2026 ರಂದು ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಶೈಕ್ಷಣಿಕ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಯಿತು. ರಾಷ್ಟ್ರೀಯ ತರಬೇತುದಾರರಾದ ಜೆ.ಸಿ. ರಾಜೇಂದ್ರ ಭಟ್ ಅವರು ಶಿಬಿರ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಹರೀಂದ್ರ ಸುವರ್ಣ ಅವರು ಉದ್ಘಾಟಿಸಿದರು. ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ವಿನಯ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ […]
Read More
12-12-2025, 7:22 AM
14/11/2025 ಮಕ್ಕಳ ಭವಿಷ್ಯ ರೂಪಿಸುವಲ್ಲಿ ಯುವವಾಹಿನಿಯ ಪಾತ್ರ ಅನನ್ಯ – ಲೋಕೇಶ್ ಕೋಟ್ಯಾನ್ ಹೆಜಮಾಡಿ ವಿದ್ಯೆಗೆ ಬಹಳಷ್ಟು ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆ ಯುವವಾಹಿನಿ. ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಹೀಗೆ ಹಲವಾರು ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳ ಭವಿಷ್ಯ ರೂಪಿಸುವಲ್ಲಿಯುವವಾಹಿನಿ ಸಂಸ್ಥೆ ಪಾತ್ರ ಅನನ್ಯ ಎಂದು ಹೇಳಿದರು. ಇವರು ಘಟಕದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು. ಮುಖ್ಯ ಅತಿಥಿ ಯುವವಾಹಿನಿ ರಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷ ಅಶೋಕ್ […]
Read More
04-12-2025, 6:01 PM
ದಿನಾಂಕ 04-09-2025ರಂದು ನಾರಾಯಣ ಗುರು ವಿದ್ಯಾ ಸಂಸ್ಥೆ ಸಹಕಾರದೊಂದಿಗೆ ಶಿಕ್ಷಕರ ದಿನಾಚರಣೆ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ವಿನಯ್ ಕುಮಾರ್ ಮಟ್ಟು ವಹಿಸಿದ್ದರು. ಶಾಲಾ ಸಂಚಾಲಕರಾದ ಹರೀoದ್ರ ಸುವರ್ಣ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಎಳವೆಯಲ್ಲಿ ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ ಸಂಸ್ಕಾರಯುತರನ್ನಾಗಿ ಮಾಡುವ ಕಾರ್ಯ ಅಭಿನಂದನೀಯ ಎಂದರು. ಮುಖ್ಯ ಅತಿಥಿಗಳಾಗಿ ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ರು ಲೋಕೇಶ್ ಕೋಟ್ಯಾನ್, ಶಾಲಾ ಕಾರ್ಯದರ್ಶಿ, ಬಾಲಚಂದ್ರ ಸನಿಲ್, ಮಂಜುಳ ಕೆ. ವಿ., ಯತೀಶ್ […]
Read More
04-12-2025, 5:56 PM
ತಾರೀಕು 25-09-2025 ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮಹಾ ನವಮಿ ಪ್ರಯುಕ್ತ ನಡೆಯುವ ಅನ್ನ ಪ್ರಸಾದ ವಿತರಣೆ ಯಲ್ಲಿ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.
Read More
04-12-2025, 5:51 PM
ಶ್ರೀ ಕ್ಷೇತ್ರ ಕುದ್ರೋಳಿ ಯ ಮಂಗಳೂರು ದಸರಾದ ಪ್ರಯುಕ್ತ ಯುವವಾಹಿನಿಯ ಮುಖೇನ ನಡೆಯುವ ಒಂದು ದಿನದ ಅನ್ನ ದಾನಕ್ಕೆ ನಮ್ಮ ಘಟಕದ ಸದಸ್ಯರ ಸಹಕಾರದಿಂದ ದೇಣಿಗೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ನೀಡಲಾಯ್ತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ರು , ಮಾಜಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. ತಾರೀಕು 01-10-2025
Read More
04-12-2025, 5:42 PM
ಕತ್ತಲೆಯನ್ನು ಹೋಗಲಾಡಿಸುವ ದೀಪಾವಳಿ ಪರ್ವ ಕಾಲದಲ್ಲಿ ಯುವ ಜನತೆ ಹಿಂದಿನ ಕಾಲದ ಸಂಸ್ಕಾರ ಹಾಗೂ ಸಂಸ್ಕೃತಿ ಯನ್ನು ಜೀವನದಲ್ಲಿ ಅಳವಡಿಸಿ ಕೊಂಡು ಜೀವನ ಸಾಗಿಸಬೇಕು ಎಂದು ಯುವವಾಹಿನಿ ಕೇಂದ್ರ ಸಮಿತಿ ಯ ಗೌರವ ಸಲಹೆಗಾರರಾದ ಶ್ರೀ ಎನ್ ಟಿ ಅಂಚನ್ ಹೇಳಿದರು. ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಘಟಕದ 23 ನೇ ವರ್ಷದ ತುಳುವೆರೆ ತುಡರ ಪರ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿ ಉಡುಪಿಯ ನ್ಯಾಯವಾದಿ ಹಮ್ಜತ್ ರವರು ಮಾತನಾಡಿ ನಮ್ಮ ಹಿರಿಯರ ಆಚಾರ […]
Read More
19-09-2025, 8:40 AM
ತಾರೀಕು27/07/2025 ರಂದು 23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ಆಧುನಿಕ ಯುಗದ ಪಿಜ್ಜಾ ಬರ್ಗರ್ ತಿಂಡಿಗಳನ್ನು ಬದಿಗೆ ಸರಿಸಿ ಹಿಂದಿನ ಕಾಲದ ತಿಂಡಿ ತಿನಿಸುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಹಿಂದಿನ ಕಾಲದಲ್ಲಿ ಹಿರಿಯರು ಕೃಷಿ ಕಾರ್ಯದಲ್ಲಿ ಪಟ್ಟ ಶ್ರಮ ವನ್ನೂ ತಿಳಿ ಹೇಳುವ ಕಾರ್ಯವಾಗಬೇಕು ಎಂದು ಪುತ್ತೂರು ಅಕ್ಷಯ ಕಾಲೇಜಿನ ಮುಖ್ಯಸ್ಥ ಜಯಂತ್ ನಡುಬೈಲು ಹೇಳಿದರು. ಮುಲ್ಕಿ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಮುಲ್ಕಿ ಯುವವಾಹಿನಿ 23 ನೇ ವರ್ಷದ […]
Read More
19-09-2025, 7:42 AM
ತಾರೀಕು 27/08/2025 ರಿಂದ 31/08/2025ರ ವರೆಗೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಸಂಭ್ರಮ ವು ಯಶಸ್ವಿಯಾಗಿ ವಿಜೃಂಭಣೆಯಿಂದ ಜರಗಿತು. ಸಮಾರಂಭದ ಐದು ದಿವಸದ ಸಭಾ ವೇದಿಕೆಯ ನಿರ್ವಹಣೆ ಯನ್ನು ನಮ್ಮ ಘಟಕವು ಅಚ್ಚುಕಟ್ಟಾಗಿ ನಿರ್ವಹಿಸಿತು.
Read More
15-09-2025, 4:03 PM
ಕಾರ್ಗಿಲ್ ಯುದ್ಧ ದ ಒಂದೊಂದು ದಿನಗಳು ಕೂಡಾ ನಮಗೆ ಮರೆಯಲು ಸಾಧ್ಯವಿಲ್ಲ. ನಮ್ಮ ಕಣ್ಣೆದುರು ಅದೆಷ್ಟೂ ಯೋಧರು ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಈ ಕಾರ್ಗಿಲ್ ವಿಜಯ ದಿನಾಚರಣೆ ಹುತಾತ್ಮ ಯೋಧರು ಹಾಗೂ ಅವರ ಕುಟುಂಬಕ್ಕೆ ನೀಡುವ ಗೌರವ ವಾಗಿದೆ . ಮುಲ್ಕಿ ಘಟಕದ ದೇಶದ ಮೇಲಿನ ಅಭಿಮಾನದ ಈ ಕಾರ್ಯಕ್ರಮ ಶ್ಲಾಘನೀಯ ಎಂದು ನಿವೃತ್ತ ಯೋಧ ಹಾಗು ಮುಲ್ಕಿ ಆರಕ್ಷಕ ಉಪ ನಿರೀಕ್ಷಕ ಉಮೇಶ್ ಕುಮಾರ್ ಹೇಳಿದರು. ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಂಘದಲ್ಲಿ ಜರಗಿದ […]
Read More
15-09-2025, 3:24 PM
ಅದೆಷ್ಟೋ ಬಲಿದಾನ, ನಿರಂತರ ಹೋರಾಟದ ಪ್ರತಿಫಲವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು, ಸ್ವಾತಂತ್ರ್ಯೋತ್ಸವ ಆಚರಣೆ ಯ ಸಂದರ್ಭದಲ್ಲಿ ಅಂಥ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮುಲ್ಕಿ ಬಿಲ್ಲವ ಸಂಘದ ಉಪಾಧ್ಯಕ್ಷೆ ಸೀತಾ ಗೋಪಾಲ್ ಹೇಳಿದರು. ಘಟಕದ ಆಶ್ರಯದಲ್ಲಿ ಯೂನಿಯನ್ ಕ್ಲಬ್ ನಲ್ಲಿ ನಡೆದ 79 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕಾಧ್ಯಕ್ಷ ವಿನಯ್ ಕುಮಾರ್ ಮಟ್ಟು ವಹಿಸಿದ್ದರು. ಸಮಾರಂಭದಲ್ಲಿ ನಿವೃತ್ತ ಯೋಧ ಹಾಗೂ ಘಟಕದ ಮಾಜಿ ಅಧ್ಯಕ್ಷ ಮಾಧವ್ […]
Read More