Yuvavahini

ಮೂಲ್ಕಿ

ಮನೆ ಮನೆ ಭಜನೆ

ಯುವವಾಹಿನಿ ಸದಸ್ಯರೊಳಗೆ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ನಾವು ಹಮ್ಮಿಕೊಂಡ ಮನೆ ಮನೆ ಭಜನೆ ಕಾರ್ಯಕ್ರಮ ದಿನಾಂಕ 02-03-2024 ಶನಿವಾರ ಘಟಕದ ಮಾಜಿ ಅಧ್ಯಕ್ಷರು ಯೋಗೀಶ್ ರಕ್ಷಿತಾ ಕೋಟ್ಯಾನ್ ರವರ ಮನೆಯಲ್ಲಿ ಭಜನಾ ಸಂಕೀರ್ತನೆ ನೆರವೇರಿತು. ಈ ಕಾರ್ಯಕ್ರಮದ ನೆನಪಿಗಾಗಿ ಘಟಕದ ವತಿಯಿಂದ ಶ್ರೀ ನಾರಾಯಣ ಗುರು ಚರಿತ್ರೆ ಪುಸ್ತಕವನ್ನು ನೀಡಲಾಯಿತು. ಭಜನಾ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು ,ಮಾಜಿ ಅಧ್ಯಕ್ಷರು ಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Read More

ಏಕಾಗ್ರತೆಯಿಂದ ಯಶಸ್ಸು ಸಾಧ್ಯ: ಜಯಶ್ರೀ

ಮುಲ್ಕಿ: ನಿರಂತರ ಅಭ್ಯಾಸ, ಆತ್ಮವಿಶ್ವಾಸ, ಏಕಾಗ್ರತೆಯ ಮೂಲಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ ಎಂದು ತರಬೇತುದಾರರಾದ ಜಯಶ್ರೀ ತಿಳಿಸಿದರು. ಅವರು ಯುವವಾಹಿನಿ(ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ದಿನಾಂಕ 28-01-2024 ರಂದು ಮುಲ್ಕಿ ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿಗಳಿಗೆ ಜರುಗಿದ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಸಂಚಾಲಕರಾದ ಹರಿಂದ್ರ ಸುವರ್ಣರವರು ದೀಪ ಬೆಳಗಿಸಿ ಕಾರ್ಯಾಗಾರ ಉದ್ಘಾಟಿಸಿದರು. […]

Read More

ಮನೆ ಮನೆ ಭಜನೆ

ಮುಲ್ಕಿ:  ಯುವವಾಹಿನಿ ಸದಸ್ಯರೊಳಗೆ ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ಮನೆ ಮನೆ ಭಜನೆ ಕಾರ್ಯಕ್ರಮವು ದಿನಾಂಕ 27-01-2024 ಶನಿವಾರ  ಸಂಜೆ 6 ರಿಂದ 7 ರ ವರೆಗೆ ಮುಲ್ಕಿ ಘಟಕದ ಮಾಜಿ ಅಧ್ಯಕ್ಷರಾದ ಜಯ ಕುಮಾರ್ ಕುಬೇವೂರುರವರ ಮನೆಯಲ್ಲಿ ಭಜನಾ ಸಂಕೀರ್ತನೆ ನಡೆಯಿತು.ಈ ಕಾರ್ಯಕ್ರಮದ ನೆನಪಿಗಾಗಿ ಘಟಕದ ವತಿಯಿಂದ ಶ್ರೀ ನಾರಾಯಣ ಗುರು ಚರಿತ್ರೆ ಪುಸ್ತಕವನ್ನು ನೀಡಲಾಯಿತು. ಭಜನಾ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಈ ಸಂಧರ್ಬದಲ್ಲಿ ಉಪಸ್ಥಿತರಿದ್ದರು.

Read More

ಯುವವಾಹಿನಿ ಯುವ ಸಾಧನಾ ಪುರಸ್ಕಾರ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವ ಸಾಧನಾ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು. ಈ ಸಾಲಿನ ಯುವ ಸಾಧನಾ ಪುರಸ್ಕಾರವನ್ನು ಏಕಲವ್ಯ ಪ್ರಶಸ್ತಿ ಪುರಸ್ಕೃತರು, ಅಂತರಾಷ್ಟ್ರೀಯ ಕ್ರೀಡಾಪಟು ನಿತಿನ್ ಪೂಜಾರಿ ವಿಟ್ಲ , ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಪದಕ ವಿಜೇತರಾದ ಕು| ರಶ್ಮಿ ಜಿ. ಅಂಚನ್ ಕುಳಾಯಿ ಮತ್ತು ಚರ್ಮ ಶಾಸ್ತ್ರ […]

Read More

ಸಚಿವ ವಿ. ಸುನೀಲ್ ಕುಮಾರ್ ಇವರಿಗೆ ಯುವವಾಹಿನಿ ಅಭಿಮಾನದ ಗೌರವ

ಮುಲ್ಕಿ :- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶವು ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ ಅರ್ಪಣ ತೆರೆದ ಸಭಾಂಗಣದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟುರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ಇವರಿಗೆ ಯುವವಾಹಿನಿ ಅಭಿಮಾನದ ಗೌರವ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ, ಶ್ರೀ ನಾರಾಯಣ […]

Read More

ಯುವವಾಹಿನಿ ಮುಖವಾಣಿ ಯುವಸಿಂಚನ ವಾರ್ಷಿಕ ವಿಶೇಷಾಂಕ ಬಿಡುಗಡೆ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಮುಖವಾಣಿ ಯುವಸಿಂಚನ ವಾರ್ಷಿಕ ವಿಶೇಷಾಂಕವನ್ನು ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ರಥದ ಮೂಲಕ ಕಳಶದಿಂದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ, ಶ್ರೀ ನಾರಾಯಣ ಗುರು ಕಾಲೇಜು ಕುದ್ರೋಳಿ ಇದರ […]

Read More

ಯುವವಾಹಿನಿ ಗೌರವ ಅಭಿನಂದನೆ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ವಿವಿಧ ಕ್ಷೇತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಸಮಾಜದ ಬಂಧುಗಳಿಗೆ ಗೌರವ ಅಭಿನಂದನಾ ಸಮಾರಂಭ ನಡೆಯಿತು. ಪ್ರಸ್ತುತ ಸಾಲಿನಲ್ಲಿ ಡಾಕ್ಟರೇಟ್ ಪದವಿ ಪಡೆದ ಲಾವಣ್ಯ ಡಿ. ಕಟೀಲು , ಡಾ. ಪ್ರವೀಣ್ ಸುವರ್ಣ , ಡಾ.ನೇಹಾ ಅಭಿನಂದನ್ , ಡಾ. ಮೀರಾ ದೇವಿ , ಡಾ.ವರುಣ್ ವೆಂಕಟೇಶ್ ಮತ್ತು […]

Read More

ರಾಜ್ ಕುಮಾರ್ ಬೆಹರೈನ್ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್ ಕುಮಾರ್ ಬೆಹರೈನ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ […]

Read More

ಡಾ.ಸದಾನಂದ ಪೂಜಾರಿ ಇವರಿಗೆ ಯುವವಾಹಿನಿ ವಿಶೇಷ ಪುರಸ್ಕಾರ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ವಿಶೇಷ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ವಿಶೇಷ ಪುರಸ್ಕಾರವನ್ನು ಭಾರತೀಯ ವೈದ್ಯಕೀಯ ಸಂಘದ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿ ಪುರಸ್ಕೃತರಾದ ಡಾ.ಸದಾನಂದ ಪೂಜಾರಿ ಇವರಿಗೆ ವಿಶೇಷ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ […]

Read More

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022 ಡಿಸೆಂಬರ್ 25 ರಂದು ಭಾನುವಾರದಂದು ಅರ್ಪಣ ತೆರೆದ ಸಭಾಂಗಣ ವಿಜಯಾ ಕಾಲೇಜು ಮುಲ್ಕಿನಲ್ಲಿ ಸಂಪನ್ನಗೊಂಡಿತು. ಯುವಸಮುದಾಯದ ಪ್ರೇರಕ ಶಕ್ತಿಯಾಗಿರುವ ಯುವವಾಹಿನಿಗೆ ಅರ್ಹವಾಗಿಯೇ ಪ್ರಶಸ್ತಿ ಲಭಿಸಿದೆ : ವಿ.ಸುನೀಲ್ ಕುಮಾರ್ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!