
31-01-2017, 11:25 AM
ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 31-01-2017 ರಂದು ಶ್ರೀ ನಾರಾಯಣಗುರು ಸಂಯುಕ್ತ ಪದವಿಪೂರ್ವ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಶಾಲಾ ಮಂಡಳಿಯ ಕಾರ್ಯದರ್ಶಿ ಬಾಲಚಂದ್ರ ಸನಿಲ್ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೇಸಿಐ. ರಾಷ್ಟ್ರೀಯ ತರಬೇತುದಾರರಾದ ಜೇಸಿ. ರಾಜೇಂದ್ರ ಭಟ್ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸುಮಾರು 3 ಗಂಟೆಗಳ ಕಾಲ ತರಬೇತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಅಡ್ವೆ ರವೀಂದ್ರ ಪೂಜಾರಿ, ಪ್ರಾಂಶುಪಾಲರಾದ ಯತೀಶ್ ಅಮೀನ್, ಘಟಕದ […]
Read More

22-01-2017, 11:42 AM
ಶ್ರೀ ನಾರಾಯಣಗುರು ಸೇವಾದಳ, (ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ, ಯುವವಾಹಿನಿ (ರಿ) ಮೂಲ್ಕಿ ಘಟಕದ ಹಾಗೂ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ದಿನಾಂಕ 22-01-2017 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿರುತ್ತದೆ. ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಖ್ಯಾತ ಹೃದಯರೋಗ ತಜ್ಞ ಡಾ| ಸುಬ್ರಹ್ಮಣ್ಯಮ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಿನಾಥ ಪಡಂಗ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದರು. […]
Read More

19-12-2016, 11:37 AM
ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 19-12-2016 ರಂದು ಸರಕಾರಿ ಪ್ರೌಢಶಾಲೆ ಸದಾಶಿವ ನಗರ ಇಲ್ಲಿ ಹೆಣ್ಣು ಮಕ್ಕಳ ಆತ್ಮರಕ್ಷಣೆ ಮತ್ತು ತರಬೇತಿ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಶಾಲಾ ಸಹಶಿಕ್ಷಕರಾದ ಅಶೋಕ್ ಜಂಬಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಕಾರ್ತಿಕ್ ಎಸ್. ಕಟೀಲ್ರವರು ಸುಮಾರು ಒಂದೂವರೆ ಗಂಟೆಗಳ ಕಾಲ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಾತ್ಯಕ್ಷತೆಯ ಮೂಲಕ ಉತ್ತಮ ತರಬೇತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಚೇತನ್ ಕುಮಾರ್ರವರು ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ […]
Read More

20-11-2016, 6:06 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016ನೇ ಆದಿತ್ಯವಾರ ಜರಗಿತು. ಯುವವಾಹಿನಿ ಮೂಲ್ಕಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕ್ರತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More

30-10-2016, 6:01 AM
ದಿನಾಂಕ 30-10-2016 ರಂದು ಮೂಲ್ಕಿ ಘಟಕದ ವತಿಯಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ 14 ನೇ ವರ್ಷದ ತುಳುವೆರೆ ತುಡರ್ ಪರ್ಬ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಂಘ ಮುಲ್ಕಿ ಇದರ ಅಧ್ಯಕ್ಷ ಗೋಪಿನಾಥ ಪಡಂಗ, ಶ್ರೀ ಹೊಳೆ ಬದಿ ಮಸೀದಿ ಇದರ ಅಧ್ಯಕ್ಷ ಅಬ್ಬಾಸ್ ಹಾಜಿ, ರೋಟರಿ ವಿದ್ಯಾಸಂಸ್ಥೆ ಮೂಡಬಿದ್ರೆ ಇದರ ಪ್ರಾಂಶುಪಾಲರಾದ ವಿನ್ಸೆಂಟ್ ಡಿ’ ಕೋಸ್ತಾ ಭಾಗವಹಿಸಿದ್ದರು. ಅತಿಥಿ ಗಣ್ಯರೆಲ್ಲ ಸೇರಿ […]
Read More

05-09-2016, 5:26 AM
ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆ ಮುಲ್ಕಿ ಹಾಗೂ ಯುವವಾಹಿನಿ (ರಿ) ಮೂಲ್ಕಿ ಘಟಕ ಇವರ ಜಂಟಿ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆಯನ್ನು ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರಗಿತು. ಯುವವಾಹಿನಿ(ರಿ) ಕೇಂದ್ರ ಸಮಿತಿ ಅಧ್ಯಕ್ಷ ಪದ್ಮನಾಭ ಮರೋಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ನಾರಾಯಣಗುರು ವಿದ್ಯಾಸಂಸ್ಥೆಯ ಹಿರಿಯ ಶಿಕ್ಷಕರಾದ ಹೇಮರಾಜ್ ಹಾಗೂ ಶ್ರೀಮತಿ ಜಯಶ್ರೀ ಇವರನ್ನು ಶಿಕ್ಷಕ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಯಿತು. ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಿನಾಥ ಪಡಂಗರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಾರಾಯಣ ಗುರು ವಿದ್ಯಾಸಂಸ್ಥೆಯ ಸಂಚಾಲಕ […]
Read More

10-08-2016, 7:42 AM
ಆಟಿ ತಿಂಗಳ ಆಚರಣೆಯು ಪರಿಪೂರ್ಣವಾದ ವೈಜ್ಞಾನಿಕ ವಿಷಯಗಳಿಂದ ಕೂಡಿದ್ದು, ಇದರ ಬಗ್ಗೆ ಜನರಲ್ಲಿರುವ ಮೌಢ್ಯವನ್ನು ಸೂಕ್ತ ತಿಳಿವಳಿಕೆ ನೀಡುವ ಮೂಲಕ ನಿವಾರಿಸ ಬೇಕು. ಅದರಲ್ಲಿರುವ ಉತ್ತಮ ಅಂಶಗಳನ್ನು ಬೆಳೆಸಿಕೊಂಡು ಬರುವುದು ಒಳಿತು ಎಂದು ಹಿರಿಯ ಶಿಕ್ಷಕ ಹಾಗೂ ಪತ್ರಕರ್ತ ವಾಮನ ಇಡ್ಯಾ ಹೇಳಿದರು. ಅವರು ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಜರಗಿದ 14 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಆಚರಣೆಯಲ್ಲಿ ಅಡಗಿರುವ ಮೌಢ್ಯಗಳ ಅಂಶಗಳನ್ನು ಸರಿಪಡಿಸಿಕೊಂಡು ಮುಖ್ಯವಾಗಿ ಯುವಜನರಲ್ಲಿ ತಿಳುವಳಿಕೆಯನ್ನು ಮೂಡಿಸಿ ತುಳು […]
Read More

26-06-2016, 7:32 AM
ಇಪ್ಪತ್ತನೇ ಶತಮಾನದ ಪ್ರಾರಂಭದಲ್ಲಿ ಕೇರಳ ಹಾಗೂ ಕರ್ನಾಟಕದಲ್ಲಿ ಅಸ್ಪೃಶ್ಯತೆ, ಮೂಢನಂಬಿಕೆ, ಬಡತನ, ಅಜ್ಞಾನ ಹಾಗೂ ಜಾತೀಯತೆ ತಾಂಡವಾಡುತ್ತಿದ್ದು, ಸಂಪೂರ್ಣ ಕೇರಳವೇ ಒಂದು ಭ್ರಾಂತಾಲಯವೆಂದು ಸ್ವಾಮಿ ವಿವೇಕಾನಂದರಿಂದ ಕರೆಯಲ್ವಟ್ಟ ದಿನಗಳವು, ಬಿಡುಗಡೆ ಇಲ್ಲದ ಬೇಡಿಯಿಂದ ಶತಮಾನಗಳಿಂದಲು ಅಸ್ಪೃಶ್ಯರು ಮೇಲ್ವರ್ಗದವರೆಂದು ಗುರುತಿಸಲ್ಪಟ್ಟ ಜನರಿಂದ ತುಳಿತಕ್ಕೊಳಪಟ್ಟಿದ್ಟರು. ಜಾತಿಬೇಧದ ಬೇರುಗಳ ಜೊತೆ ದಾಸ್ಯದ ಭೀಕರತೆ ಜನಜೀವನದಲ್ಲಿ ಬಹಳ ಆಳಕ್ಕೆ ಇಳಿದಿತ್ತು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅದ್ಯಕ್ಷ ರಾಜೀವ್ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ […]
Read More

07-10-2011, 4:42 AM
ಪ್ರಕೃತಿಯು ಯಾರ ಸೊತ್ತೂ ಅಲ್ಲ. ಮನುಷ್ಯನ ನಿಜವಾದ ನೋವು ಪ್ರಕೃತಿಗೆ ತಿಳಿದಿರುತ್ತದೆ. ಇಂತಹ ಸಂದರ್ಭದಲ್ಲಿ ದೇವರು ಮಹಾ ಗುರು ಒಬ್ಬನನ್ನು ಅವತಾರ ಪುರುಷನನ್ನಾಗಿಯೋ, ಮಹಾತ್ನನನ್ನಾಗಿಯೋ ಭೂಮಿಗೆ ಕಳುಹಿಸುತ್ತಾನೆ. ಇಂತಹವರು ಧರ್ಮದ ಪರಿಪಾಲನೆಗಾಗಿ ಬಹಳ ಶ್ರಮಿಸುತ್ತಿರುವುದರಿಂದ ಮನುಷ್ಯನು ಸುಖವನ್ನು ಕಾಣುತ್ತಾನೆ. ತನ್ನಂತೆ ಎಲ್ಲಾ ಮಾನವ ಜೀವಿಗಳಲ್ಲಿ ಭಗವಂತನನ್ನು ಕಂಡು ಎಲ್ಲರಿಗೂ ಬದುಕುವ ದಾರಿಯನ್ನು ತೋರಿಸುತ್ತಾನೆ. ನೂರ ಐವತ್ತೇಳು ವರ್ಷಗಳ ಹಿಂದೆ ಅಸ್ಪೃಶ್ಯತೆಯ ಕರಿ ನೆರಳು ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರಿದಾಗ ದೇವರು ನಾರಾಯಣ ಗುರುಗಳನ್ನು ಅವತಾರ ಪುರುಷರನ್ನಾಗಿ […]
Read More