Yuvavahini

ಮೂಲ್ಕಿ

ಯುವ ಸಮುದಾಯಕ್ಕೆ ಯುವವಾಹಿನಿಯೇ ದಾರೀ ದೀಪ : ಸುಮಲತಾ ಸುವರ್ಣ

ಮೂಲ್ಕಿ: ಇಂದು ಯುವ ಸಮುದಾಯವು ಹಾದಿ ತಪ್ಪುತ್ತಿದ್ದಾರೆ ಎಂದು ಹೇಳುವ ಬದಲು ಅವರನ್ನು ಯುವವಾಹಿನಿಯಂತಹ ಸಮಾಜ ಮುಖಿ ಚಿಂತನೆಯ ಸಂಘಟನೆಯಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜವನ್ನು ಸೃಷ್ಟಿಸುವಲ್ಲಿ ಪ್ರಯತ್ನ ನಡೆಸಬೇಕು. ಹೆಣ್ಣು ಮಕ್ಕಳು ವಿದ್ಯೆಯ ಮೂಲಕ ಸದೃಢರಾಗುತ್ತಿರುವ ಇಂದಿನ ದಿನದಲ್ಲಿ ಯುವಕರು ಯಾಕಾಗಿ ಹಿನ್ನೆಡೆಯಾಗಿದ್ದಾರೆ ಎಂದು ಹೆತ್ತವರು ಚಿಂತಿಸಬೇಕಾಗಿದೆ ಎಂದು ಮಂಗಳೂರು ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಮೂಲ್ಕಿ ಯುವವಾಹಿನಿ ಘಟಕದ […]

Read More

ಬಡ ಕುಟುಂಬಕ್ಕೆ ಯುವವಾಹಿನಿ ಆಸರೆ

ಮುಲ್ಕಿ : ಇತ್ತೀಚೆಗೆ ಸುರಿದ ಗಾಳಿ ಮಳೆಯಿಂದಾಗಿ ಮುಲ್ಕಿ ಸಮೀಪದ ಕೊಳಚಿಕಂಬ್ಳದ ಕೇಶವ ಪೂಜಾರಿ ಹಾಗೂ ಮೀನಾಕ್ಷಿ ದಂಪತಿಗಳ ಬಡ ಕುಟುಂಬದ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಈ ಮನೆಯಲ್ಲಿ ವಾಸಿಸಲು‌ ಸಾಧ್ಯವಾಗದೆ ಕೇಶವ ಪೂಜಾರಿ ಯವರ ಬಡ ಕುಟುಂಬಕ್ಕೆ ದಿಕ್ಕೇ ತೋಚದಂತಾಯಿತು. ಈ‌ ಸಂದರ್ಭದಲ್ಲಿ ‌ಯುವವಾಹಿನಿ‌ ಮುಲ್ಕಿ ಘಟಕವು ಸುಮಾರು ‌ರೂಪಾಯಿ‌ 60,000/- ವೆಚ್ಚದಲ್ಲಿ ಈ ಮನೆಯನ್ನು ರಿಪೇರಿಗೊಳಿಸಿ‌ ವಾಸಿಸಲು ಯೋಗ್ಯವಾಗುವಂತೆ ಮಾಡಿ ದಿನಾಂಕ‌ ‌15.06.2018 ರಂದು‌ ಮನೆಯನ್ನು ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ […]

Read More

ಅಧ್ಯಕ್ಷರಾಗಿ ಕುಶಲಾ ಎಸ್.ಕುಕ್ಯಾನ್ ಆಯ್ಕೆ

ಯುವವಾಹಿನಿ (ರಿ) ಮುಲ್ಕಿ ಘಟಕದ 2018-19 ನೇ ಸಾಲಿನ‌ ಅಧ್ಯಕ್ಷರಾಗಿ ಕುಶಲಾ ಎಸ್.ಕುಕ್ಯಾನ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು – ಕುಶಲಾ ಎಸ್.ಕುಕ್ಯಾನ್ ಉಪಾಧ್ಯಕ್ಷರು   :  ಸತೀಶ್ ಕಿಲ್ಪಾಡಿ , ರಾಜೀವಿ ವಿಶ್ವನಾಥ್ ಕಾರ್ಯದರ್ಶಿ  :  ಚರೀಷ್ಮಾ ಜತೆ ಕಾರ್ಯದರ್ಶಿ  :  ಭರತೇಶ್ ಮಟ್ಟು ಕೋಶಾಧಿಕಾರಿ  :  ದಿವಾಕರ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ  :  ಸುಲೋಚನಾ ಜಿ.ಅಂಚನ್ ನಿರ್ದೇಶಕರು : ಕ್ರೀಡೆ ಮತ್ತು ಆರೋಗ್ಯ  :  ನಿಖಿಲ್ ಕುಮಾರ್ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ  :  ಮನೋಜ್ ಸುವರ್ಣ […]

Read More

ಕೋಟಿ ಚೆನ್ನಯ ನಾಟಕಕ್ಕೆ ಹೊಸ ಛಾಪು ಮೂಡಿಸಿದ ಯುವವಾಹಿನಿ ಕಲಾವಿದರು

ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್‌ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್‌ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]

Read More

ಬಪ್ಪನಾಡು ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಯುವವಾಹಿನಿ ಸೇವೆ

ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 22.03.2018 ರಂದು ಮುಲ್ಕಿ ಬಪ್ಪನಾಡು ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಸ್ವಯಂಸೇವಕರಾಗಿ ಭಾಗವಹಿಸಿದ್ದರು

Read More

ಮುಲ್ಕಿ ಸರಕಾರಿ ಶಾಲೆಗೆ ಧನಸಹಾಯ ವಿತರಣೆ

ದಿನಾಂಕ 15.03.2018 ರಂದು ದಿ. ಸೋಮಪ್ಪ ಸುವರ್ಣ ರವರ ಸ್ಮರಣಾರ್ಥ ವಾಗಿ ಯುವವಾಹಿನಿ (ರಿ ) ಮುಲ್ಕಿ ಘಟಕದದಿಂದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ (ಬೋರ್ಡ್ ಶಾಲೆ) ಗೆ ರೂ 5000/ – ಧನಸಹಾಯ ನೀಡಲಾಯಿತು . ಈ ಸಂದರ್ಭದಲ್ಲಿ ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಕೋಟ್ಯಾನ್ ಮಾಜಿ ಅಧ್ಯಕ್ಷರಾದ ವಿಜಯಕುಮಾರ್ ಕುಬೆವೂರು , ಹರೀಂದ್ರ ಸುವರ್ಣ, ಉದಯ ಅಮೀನ್ ಮಟ್ಟು . ಪ್ರಕಾಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು

Read More

ಭೂಮಿಕಾ : ಮಾರ್ಗದರ್ಶನದೊಂದಿಗೆ ಸ್ತ್ರೀ ಸಂವೇದನೆ

ಹಕ್ಕು ಮತ್ತು ಸ್ವಾತಂತ್ರ್ಯ ವನ್ನು ಕಾಯ್ದುಕೊಳ್ಳುವಲ್ಲಿ ಬದುಕಿನ ಅನಿವಾರ್ಯ ಪರಿಸ್ಥಿತಿಗಳಲ್ಲಿ ಕುಟುಂಬದ ಪ್ರೀತಿ ಮತ್ತು ಜವಾಬ್ದಾರಿಯಿಂದ ಮಹಿಳೆ ವಂಚಿತಳಾಗುತ್ತಿದ್ದಾಳೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಸಂದ್ಯಾ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 10.03.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ , ಮುಲ್ಕಿ ಬಿಲ್ಲವ ಸಂಘದಲ್ಲಿ ಜರುಗಿದ ಭೂಮಿಕಾ – ಮಾರ್ಗದರ್ಶನದೊಂದಿಗೆ ಸ್ತ್ರೀ ಸಂವೇದನೆ , ಸಾಂಸ್ಕೃತಿಕದೊಂದಿಗೆ ಸನ್ಮಾನ ಗೌರವ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ […]

Read More

ಬಡ ಕುಟುಂಬಕ್ಕೆ ಉಚಿತ ವಿದ್ಯುತ್ ಸಂಪರ್ಕ

ಸರಕಾರ ಮಾಡುವ ಕೆಲಸವನ್ನು ಯುವವಾಹಿನಿ ಮಾಡುತ್ತಿದೆ, ಉಚಿತ ವಿದ್ಯುತ್ ಕಲ್ಪಿಸುವ ಮೂಲಕ ಬಡವರ ಬಾಳಿಗೆ ಬೆಳಕು ನೀಡಿದಂತಾಗಿದೆ, ಎಂದು ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ತಿಳಿಸಿದರು. ಅವರು ದಿನಾಂಕ 09.03.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿಯ ಚಿತ್ರಾಪು ನಿವಾಸಿ ದೇವದಾಸ್ ಮನೆಯ ಉಚಿತ ವಿದ್ಯುತ್ ಸಂಪರ್ಕವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ […]

Read More

ಶಿವಗಿರಿ ಯಾತ್ರೆ

ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 10.02.2018 ರಿಂದ 13.02.2018 ರವರೆಗೆ ಮೂರು ದಿನಗಳ ಕಾಲ ಶಿವಗಿರಿ ಪ್ರವಾಸ ಕೈಗೊಂಡರು. ಈ ಸಂದರ್ಭದಲ್ಲಿ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಮಾರ್ಗದರ್ಶನ ನೀಡಿದರು

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!