Yuvavahini

ಮೂಲ್ಕಿ

ಮೂಲ್ಕಿ ಯುವವಾಹಿನಿಯಿಂದ ವನಮಹೋತ್ಸವ

ಯುವವಾಹಿನಿ (ರಿ) ಮೂಲ್ಕಿ ಘಟಕ ಆಶ್ರಯದಲ್ಲಿ ಮೂಲ್ಕಿ ವಿಜಯಾ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಹಾಗೂ ಈವಗ್ರೀನ್ ಇದರ ಜಂಟಿ ಸಹಯೋಗದಲ್ಲಿ ದಿನಾಂಕ 07-07-2017ರಂದು ಮೂಲ್ಕಿ ವಿಜಯ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.. ಅಕಾಡಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲ ಇದರ ಆಡಳಿತಾಧಿಕಾರಿಯಾದ ಡಾll ಹೆಚ್. ಶಾಂತರಾಮ್ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮೂಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲರಾದ ಡಾll […]

Read More

ಮೂಲ್ಕಿ ಯುವವಾಹಿನಿಯಿಂದ ಧಾರ್ಮಿಕ ಸೇವಾ ಕಾರ್ಯ

ದಿನಾಂಕ 30.04.2017 ರಿಂದ 05.05.2017 ರವರಗೆ ಮೂಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಲೋಕಕಲ್ಯಾಣರ್ಥವಾಗಿ ಜರುಗಿದ ಶ್ರೀ ಶತಚಂಡಿಕಾದ್ವರದಲ್ಲಿ ಹೊರೆ ಕಾಣಿಕೆಯನ್ನು ಮೂಲ್ಕಿ ಯುವವಾಹಿನಿ ವತಿಯಿಂದ ಸಮರ್ಪಿಸಲಾಯಿತು. ಹಾಗೂ ಆರು ದಿನಗಳ ಕಾಲ ಜರುಗಿದ ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ವಿಯಾಗಲು ಯುವವಾಹಿನಿ ಸದಸ್ಯರು ಸಹಕಾರ ನೀಡಿದರು ಮೂಲ್ಕಿ ಯುವವಾಹಿನಿ ಅದ್ಯಕ್ಷ ಚೇತನ್ ಕುಮಾರ್, ಪದಾದಿಕಾರಿಗಳು,ಮಾಜಿ ಅಧ್ಯಕ್ಷರುಗಳು ಸದಸ್ಯರು ಉಪಸ್ಥಿತರಿದ್ದರು

Read More

ಮೂಲ್ಕಿ ಯುವವಾಹಿನಿಯಿಂದ ಸ್ವಚ್ಛತಾ ಅಭಿಯಾನ

ಮೂಲ್ಕಿ ಬಪ್ಪನಾಡು ದೇವಸ್ಥಾನದಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದವರೆಗೆ ವಿವಿಧ ಸಂಘ ಸಂಸ್ಥೆಗಳ ಜೊತೆ ಸೇರಿ ಯುವವಾಹಿನಿ ಮೂಲ್ಕಿ ಘಟಕವು ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಭಾಗವಹಿಸಿತು. ದಿನಾಂಕ 26.03.2017 ರಂದು ಜರುಗಿದ ಈ ಸ್ವಚ್ಚತಾ ಅಭಿಯಾನದಲ್ಲಿ ಮೂಲ್ಕಿ ಯುವವಾಹಿನಿ ಅದ್ಯಕ್ಷರಾದ ಚೇತನ್ ಕುಮಾರ್, ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು,ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Read More

ಮೂಲ್ಕಿ ಯುವವಾಹಿನಿ : ಸ್ನೇಹ ಮಿಲನ

ಯುವವಾಹಿನಿ ಮುಲ್ಕಿ ಘಟಕದ ಕುಟುಂಬ ಸದಸ್ಯರ ಸ್ನೇಹ ಮಿಲನವು ದಿನಾಂಕ 19-03-2017 ರಂದು ಪ್ರಕೃತಿಯ ರಮಣೀಯ ಸ್ಥಳ ಮೂಲ್ಕಿ ಸಮೀಪದ ಮಟ್ಟು ನದಿ ತೀರದಲ್ಲಿ ಯಶಸ್ವಿಯಾಗಿ ಜರುಗಿತು. ತೆಂಗಿನಕಾಯಿ ಒಡೆಯುವ ಮೂಲಕ ಸ್ನೇಹ ಮಿಲನದ ಉದ್ಘಾಟನೆ ವಿಶಿಷ್ಟವಾಗಿ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಸದಸ್ಯರಿಗೆ ವಿವಿದ ಮನೋರಂಜನಾ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆಗಳು ಆಯೇೂಜಿಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಿ ಔತಣಕೂಟದೊಂದಿಗೆ ಸ್ನೇಹ ಮಿಲನ ಸಮಾಪ್ತಿಯಾಯಿತು.

Read More

ಮೂಲ್ಕಿ ಯುವವಾಹಿನಿಯ ಹೊರೆಕಾಣಿಕೆ ಸೇವೆ

ಕಾಂತಬಾರೆ ಬೂದಬಾರೆ ಜನ್ಮಕ್ಷೇತ್ರ ಕೊಲ್ಲೂರು ಇದರ ಚತುಷ್ಪವಿತ್ರ  ನಾಗಬ್ರಹ್ಮಮಂಡಲ ಸೇವೆಯ ಪ್ರಯುಕ್ತ  ಒಂಬತ್ತು ಮಾಗಣೆಯ ಭಕ್ತಾಧಿಗಳಿಂದ ದಿನಾಂಕ 15-03-2017ರಂದು ಹೊರೆಕಾಣಿಕೆ ಸಮರ್ಪಿಸಲಾಯಿತು. ಈ ಸಂಧರ್ಭದಲ್ಲಿ ಮೂಲ್ಕಿ ಯುವವಾಹಿನಿಯ ವತಿಯಿಂದ ಹೊರೆಕಾಣಿಕೆಯನ್ನು ಸಮರ್ಪಿಸಿ ಶ್ರೀ ಕ್ಷೇತ್ರದಲ್ಲಿ ಮೂಲ್ಕಿ ಯುವವಾಹಿನಿ ಸದಸ್ಯರು   ಸ್ವಯಂಸೇವಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Read More

ಮೂಲ್ಕಿ: ಪರೀಕ್ಷಾ ಪೂರ್ವ ತರಬೇತಿ ಶಿಬಿರ

ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 31-01-2017 ರಂದು ಶ್ರೀ ನಾರಾಯಣಗುರು ಸಂಯುಕ್ತ ಪದವಿಪೂರ್ವ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಶಾಲಾ ಮಂಡಳಿಯ ಕಾರ್ಯದರ್ಶಿ ಬಾಲಚಂದ್ರ ಸನಿಲ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೇಸಿಐ. ರಾಷ್ಟ್ರೀಯ ತರಬೇತುದಾರರಾದ ಜೇಸಿ. ರಾಜೇಂದ್ರ ಭಟ್ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸುಮಾರು 3 ಗಂಟೆಗಳ ಕಾಲ ತರಬೇತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಅಡ್ವೆ ರವೀಂದ್ರ ಪೂಜಾರಿ, ಪ್ರಾಂಶುಪಾಲರಾದ ಯತೀಶ್ ಅಮೀನ್, ಘಟಕದ […]

Read More

ಮೂಲ್ಕಿ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಶ್ರೀ ನಾರಾಯಣಗುರು ಸೇವಾದಳ, (ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ, ಯುವವಾಹಿನಿ (ರಿ) ಮೂಲ್ಕಿ ಘಟಕದ ಹಾಗೂ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ದಿನಾಂಕ 22-01-2017 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿರುತ್ತದೆ. ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಖ್ಯಾತ ಹೃದಯರೋಗ ತಜ್ಞ ಡಾ| ಸುಬ್ರಹ್ಮಣ್ಯಮ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಿನಾಥ ಪಡಂಗ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದರು. […]

Read More

ಹೆಣ್ಣು ಮಕ್ಕಳ ಆತ್ಮರಕ್ಷಣೆ ಮತ್ತು ತರಬೇತಿ ಕಾರ್ಯಕ್ರಮ

ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 19-12-2016 ರಂದು ಸರಕಾರಿ ಪ್ರೌಢಶಾಲೆ ಸದಾಶಿವ ನಗರ ಇಲ್ಲಿ ಹೆಣ್ಣು ಮಕ್ಕಳ ಆತ್ಮರಕ್ಷಣೆ ಮತ್ತು ತರಬೇತಿ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಶಾಲಾ ಸಹಶಿಕ್ಷಕರಾದ ಅಶೋಕ್ ಜಂಬಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಕಾರ್ತಿಕ್ ಎಸ್. ಕಟೀಲ್‌ರವರು ಸುಮಾರು ಒಂದೂವರೆ ಗಂಟೆಗಳ ಕಾಲ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಾತ್ಯಕ್ಷತೆಯ ಮೂಲಕ ಉತ್ತಮ ತರಬೇತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಚೇತನ್ ಕುಮಾರ್‌ರವರು ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ […]

Read More

ಮೂಲ್ಕಿ ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016ನೇ ಆದಿತ್ಯವಾರ ಜರಗಿತು. ಯುವವಾಹಿನಿ ಮೂಲ್ಕಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕ್ರತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!