04-12-2025, 5:56 PM
ತಾರೀಕು 25-09-2025 ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮಹಾ ನವಮಿ ಪ್ರಯುಕ್ತ ನಡೆಯುವ ಅನ್ನ ಪ್ರಸಾದ ವಿತರಣೆ ಯಲ್ಲಿ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.
Read More
04-12-2025, 5:51 PM
ಶ್ರೀ ಕ್ಷೇತ್ರ ಕುದ್ರೋಳಿ ಯ ಮಂಗಳೂರು ದಸರಾದ ಪ್ರಯುಕ್ತ ಯುವವಾಹಿನಿಯ ಮುಖೇನ ನಡೆಯುವ ಒಂದು ದಿನದ ಅನ್ನ ದಾನಕ್ಕೆ ನಮ್ಮ ಘಟಕದ ಸದಸ್ಯರ ಸಹಕಾರದಿಂದ ದೇಣಿಗೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ನೀಡಲಾಯ್ತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ರು , ಮಾಜಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. ತಾರೀಕು 01-10-2025
Read More
04-12-2025, 5:42 PM
ಕತ್ತಲೆಯನ್ನು ಹೋಗಲಾಡಿಸುವ ದೀಪಾವಳಿ ಪರ್ವ ಕಾಲದಲ್ಲಿ ಯುವ ಜನತೆ ಹಿಂದಿನ ಕಾಲದ ಸಂಸ್ಕಾರ ಹಾಗೂ ಸಂಸ್ಕೃತಿ ಯನ್ನು ಜೀವನದಲ್ಲಿ ಅಳವಡಿಸಿ ಕೊಂಡು ಜೀವನ ಸಾಗಿಸಬೇಕು ಎಂದು ಯುವವಾಹಿನಿ ಕೇಂದ್ರ ಸಮಿತಿ ಯ ಗೌರವ ಸಲಹೆಗಾರರಾದ ಶ್ರೀ ಎನ್ ಟಿ ಅಂಚನ್ ಹೇಳಿದರು. ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಘಟಕದ 23 ನೇ ವರ್ಷದ ತುಳುವೆರೆ ತುಡರ ಪರ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿ ಉಡುಪಿಯ ನ್ಯಾಯವಾದಿ ಹಮ್ಜತ್ ರವರು ಮಾತನಾಡಿ ನಮ್ಮ ಹಿರಿಯರ ಆಚಾರ […]
Read More
19-09-2025, 8:40 AM
ತಾರೀಕು27/07/2025 ರಂದು 23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ಆಧುನಿಕ ಯುಗದ ಪಿಜ್ಜಾ ಬರ್ಗರ್ ತಿಂಡಿಗಳನ್ನು ಬದಿಗೆ ಸರಿಸಿ ಹಿಂದಿನ ಕಾಲದ ತಿಂಡಿ ತಿನಿಸುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಹಿಂದಿನ ಕಾಲದಲ್ಲಿ ಹಿರಿಯರು ಕೃಷಿ ಕಾರ್ಯದಲ್ಲಿ ಪಟ್ಟ ಶ್ರಮ ವನ್ನೂ ತಿಳಿ ಹೇಳುವ ಕಾರ್ಯವಾಗಬೇಕು ಎಂದು ಪುತ್ತೂರು ಅಕ್ಷಯ ಕಾಲೇಜಿನ ಮುಖ್ಯಸ್ಥ ಜಯಂತ್ ನಡುಬೈಲು ಹೇಳಿದರು. ಮುಲ್ಕಿ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಮುಲ್ಕಿ ಯುವವಾಹಿನಿ 23 ನೇ ವರ್ಷದ […]
Read More
19-09-2025, 7:42 AM
ತಾರೀಕು 27/08/2025 ರಿಂದ 31/08/2025ರ ವರೆಗೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಸಂಭ್ರಮ ವು ಯಶಸ್ವಿಯಾಗಿ ವಿಜೃಂಭಣೆಯಿಂದ ಜರಗಿತು. ಸಮಾರಂಭದ ಐದು ದಿವಸದ ಸಭಾ ವೇದಿಕೆಯ ನಿರ್ವಹಣೆ ಯನ್ನು ನಮ್ಮ ಘಟಕವು ಅಚ್ಚುಕಟ್ಟಾಗಿ ನಿರ್ವಹಿಸಿತು.
Read More
15-09-2025, 4:03 PM
ಕಾರ್ಗಿಲ್ ಯುದ್ಧ ದ ಒಂದೊಂದು ದಿನಗಳು ಕೂಡಾ ನಮಗೆ ಮರೆಯಲು ಸಾಧ್ಯವಿಲ್ಲ. ನಮ್ಮ ಕಣ್ಣೆದುರು ಅದೆಷ್ಟೂ ಯೋಧರು ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಈ ಕಾರ್ಗಿಲ್ ವಿಜಯ ದಿನಾಚರಣೆ ಹುತಾತ್ಮ ಯೋಧರು ಹಾಗೂ ಅವರ ಕುಟುಂಬಕ್ಕೆ ನೀಡುವ ಗೌರವ ವಾಗಿದೆ . ಮುಲ್ಕಿ ಘಟಕದ ದೇಶದ ಮೇಲಿನ ಅಭಿಮಾನದ ಈ ಕಾರ್ಯಕ್ರಮ ಶ್ಲಾಘನೀಯ ಎಂದು ನಿವೃತ್ತ ಯೋಧ ಹಾಗು ಮುಲ್ಕಿ ಆರಕ್ಷಕ ಉಪ ನಿರೀಕ್ಷಕ ಉಮೇಶ್ ಕುಮಾರ್ ಹೇಳಿದರು. ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಂಘದಲ್ಲಿ ಜರಗಿದ […]
Read More
15-09-2025, 3:24 PM
ಅದೆಷ್ಟೋ ಬಲಿದಾನ, ನಿರಂತರ ಹೋರಾಟದ ಪ್ರತಿಫಲವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು, ಸ್ವಾತಂತ್ರ್ಯೋತ್ಸವ ಆಚರಣೆ ಯ ಸಂದರ್ಭದಲ್ಲಿ ಅಂಥ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮುಲ್ಕಿ ಬಿಲ್ಲವ ಸಂಘದ ಉಪಾಧ್ಯಕ್ಷೆ ಸೀತಾ ಗೋಪಾಲ್ ಹೇಳಿದರು. ಘಟಕದ ಆಶ್ರಯದಲ್ಲಿ ಯೂನಿಯನ್ ಕ್ಲಬ್ ನಲ್ಲಿ ನಡೆದ 79 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕಾಧ್ಯಕ್ಷ ವಿನಯ್ ಕುಮಾರ್ ಮಟ್ಟು ವಹಿಸಿದ್ದರು. ಸಮಾರಂಭದಲ್ಲಿ ನಿವೃತ್ತ ಯೋಧ ಹಾಗೂ ಘಟಕದ ಮಾಜಿ ಅಧ್ಯಕ್ಷ ಮಾಧವ್ […]
Read More
14-09-2024, 4:33 PM
ಮುಲ್ಕಿ : ದಿನಾಂಕ 14 -09-2024 ರಂದು ಶನಿವಾರ ಸಂಜೆ 5:30ಕ್ಕೆ ಮುಲ್ಕಿಯ ಬ್ರಹ್ಮಶ್ರೀ ನಾರಾಯಣ ಗುರು ವರ್ಯರ ಸಾನಿಧ್ಯದಲ್ಲಿ ಮಂದಿರದ ಅರ್ಚಕರಾದ ಕೃಷ್ಣನ್ ಶಾಂತಿಯವರ ನೇತೃತ್ವದಲ್ಲಿ ಶ್ರೀಗುರುವರ್ಯರಿಗೆ ವಿಶೇಷ ಪ್ರಾರ್ಥನೆ ಯನ್ನು ಸಲ್ಲಿಸಿ, ಘಟಕದ ಅಧ್ಯಕ್ಷರಾದ ರಿತೇಶ್ ಅಂಚನ್ ಇವರ ಮನೆಯಲ್ಲಿ ಭಜನಾ ಸಂಕೀರ್ತನೆ ಜರಗಿತು. ಘಟಕದ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಪಾಲ್ಗೊಂಡರು. ಈ ಕಾರ್ಯಕ್ರಮದ ನೆನಪಿಗಾಗಿ ಬ್ರಹ್ಮಶ್ರೀ ಗುರುವರ್ಯರ ಚರಿತ್ರೆಯ ಪುಸ್ತಕವನ್ನು ಘಟಕದ ವತಿಯಿಂದ ನೀಡಲಾಯಿತು.
Read More
09-08-2024, 3:50 AM
ಮುಲ್ಕಿ : ಕಳೆದ 22 ವರ್ಷದ ಹಿಂದೆ ಆರಂಭಗೊಂಡ ಆಟಿಡೊಂಜಿ ದಿನ ಕಾರ್ಯಕ್ರಮ ಇಂದು ವಿಶ್ವವ್ಯಾಪಿಯಾಗಿದ್ದು ವಿಶೇಷವಾಗಿದೆ ಎಂದು ಭಾರತ್ ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಹೇಳಿದರು. ಅವರು ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಮುಲ್ಕಿ ಘಟಕದ 22ನೇ ವರ್ಷದ ಆಟಿದೊಂಜಿ ದಿನ ಕಾರ್ಯಕ್ರಮದ ವೇದಿಕೆಯಲ್ಲಿ ನಿರ್ಮಿಸಿದ ಬಾವಿಯಿಂದ ನೀರು ಸೇದುವ ಮೂಲಕ ವಿಶೇಷವಾಗಿ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ (ರಿ) ಮುಲ್ಕಿ ಘಟಕದ ಅಧ್ಯಕ್ಷರು ರಿತೇಶ್ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಗತಿಪರ […]
Read More
14-06-2024, 5:07 PM
ಮೂಲ್ಕಿ: ಯುವವಾಹಿನಿ(ರಿ.) ಮೂಲ್ಕಿ ಘಟಕದ 2024-25 ರ ಸಾಲಿನ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಿ 14-06-2024 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿತು. ಮೂಲ್ಕಿ ಯುವವಾಹಿನಿ(ರಿ.) ಘಟಕದ ನೂತನ ಅಧ್ಯಕ್ಷರು ರಿತೇಶ್ ಅಂಚನ್ ಅವರ ನೂತನ ತಂಡಕ್ಕೆ ಪ್ರತಿಜ್ಞಾ ವಿಧಿ ಭೋದಿಸಿ, ಯುವವಾಹಿನಿ(ರಿ) ಕೇಂದ್ರ ಸಮಿತಿ ಅಧ್ಯಕ್ಷರು ಹರೀಶ್ ಕೆ. ಪೂಜಾರಿ ಮೂಲ್ಕಿ ಘಟಕವು ಶೈಕ್ಷಣಿಕ, ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ಒತ್ತು ನೀಡುತ್ತಿರುವುದು ಶ್ಲಾಘನಿಯ ಎಂದು […]
Read More