ಅಧ್ಯಕ್ಷರಾಗಿ ಗೀತಾ ಪೂಜಾರಿ ಆಯ್ಕೆ
25-04-2019, 5:03 PM
ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಗೀತಾ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ನಿತೇಶ್ ಪೂಜಾರಿ ಆಯ್ಕೆಯಾಗಿದ್ದಾರೆ
25-04-2019, 5:03 PM
ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಗೀತಾ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ನಿತೇಶ್ ಪೂಜಾರಿ ಆಯ್ಕೆಯಾಗಿದ್ದಾರೆ
25-04-2019, 4:41 PM
ಯಡ್ತಾಡಿ : ಯುವವಾಹಿನಿ(ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ ಐದು ದಿನಗಳ ಕಾಲ ನಡೆಸಿದ ಬೇಸಿಗೆ ಶಿಬಿರ, ವಿಕಸನ 2019 (ಅರಿವಿನ ತಂಗಾಳಿ) ರ ಅಂಗವಾಗಿ, ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಮಾಡಿಸಿ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಸಫಲತೆಯೊಂದೇ ಸಾಧನೆಯ ಮಾನದಂಡವಾಗಿ ರೂಪುಗೊಳ್ಳುತ್ತಿದ್ದು, ಇದು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಕಳವಳಕಾರಿಯಾದ ಅಂಶವಾಗಿದೆ. ಶೈಕ್ಷಣಿಕ ಸಾಧನೆಗೆ ಹೊರತಾಗಿಯೂ ಶ್ರಮವಹಿಸಿ ದುಡಿದರೆ ಸಮಾಜದಲ್ಲಿ ಶ್ರೇಷ್ಠ ಸಾಧನೆ ಮಾಡಬಹುದೆಂಬ ವಿಷಯ ಮನವರಿಕೆ ಮಾಡಲು ಪ್ರತಿ […]
25-04-2019, 4:33 PM
ಯಡ್ತಾಡಿ : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಇತರ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಾಗ ಮಾತ್ರ ಅವರ ಜೀವನಕ್ಕೆ ನಿಜವಾದ ಅಡಿಪಾಯ ಸಿಗುತ್ತದೆ. ಯುವವಾಹಿನಿ (ರಿ) ಯಡ್ತಾಡಿ ಘಟಕ ಸಾಮಾಜಿಕ ಚಟುವಟಿಕೆಗಳ ಜೊತೆಗೆ ಮಕ್ಕಳ ಬೌದ್ಧಿಕ ಚಿಂತನೆ ಹೆಚ್ಚಿಸುವ ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಯೋಜಿಸಿರುವುದು ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಜಯಂತ್ ನಡುಬೈಲು ತಿಳಿಸಿದರು. ಅವರು 25.04.2019 ರಂದು ಸಂಜೆ ೬:೦೦ ಘಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡ್ತಾಡಿಯಲ್ಲಿ ಜರುಗಿದ […]
21-04-2019, 3:41 PM
ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಸಾರಥ್ಯದಲ್ಲಿ ವಿದ್ಯಾರ್ಥಿಗಳಿಗಾಗಿ ಸತತವಾಗಿ 7ನೇ ವರ್ಷದ ಐದು ದಿನಗಳ ಮಕ್ಕಳ ಉಚಿತ ಬೇಸಿಗೆ ಶಿಬಿರ, ವಿಕಸನ – 2019, ಅರಿವಿನ ತಂಗಾಳಿ ಕಾರ್ಯಕ್ರಮ ದಿನಾಂಕ 21-04-2019 ರಿಂದ 25-04-2019 ರವರೆಗೆ ಅತ್ಯಂತ ಯಶಸ್ವಿಯಾಗಿ ಜರಗಿತು. ನರೇಂದ್ರ ಕುಮಾರ್ ಕೋಟಾ ನಿರ್ದೇಶನದಲ್ಲಿ ನಡೆದ ಈ ಶಿಬಿರದಲ್ಲಿ ಏಳು ಜನ ಸಂಪನ್ಮೂಲ ವ್ಯಕ್ತಿಗಳು 83 ಜನ ವಿದ್ಯಾರ್ಥಿಗಳನ್ನು ವಿವಿಧ ರೀತಿಯ ಚಟುವಟಿಕೆಗಳಿಂದ ರಂಜಿಸುವ ಜೊತೆ ಅವರ ವ್ಯಕ್ತಿತ್ವ ವಿಕಸನದಲ್ಲಿ ಪರಿಣಾಮಕಾರಿಯಾದ […]
20-01-2019, 3:29 PM
ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಆರಂಭಿಸಿದ ‘ನಮ್ಮ ನಡೆ’ಯ ಮೂರನೇ ಕಾರ್ಯಕ್ರಮವನ್ನು, ‘ವಿಶುಕುಮಾರ್ ನೆನಪಿಗಾಗಿ’ ಸೈಬ್ರಕಟ್ಟೆ ದಾಳಾಡಿಮನೆ ನರಸಿಂಹ ಪೂಜಾರಿಯವರ ಮನೆಯಲ್ಲಿ 20-1-2019 ರಂದು ನಡೆಸಲಾಯಿತು. ನರಸಿಂಹ ಪೂಜಾರಿಯವರು ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿಯವರು ನೆರೆದ ಜನರಿಗೆ ಅರ್ಥವಾಗುವ ರೀತಿಯಲ್ಲಿ ಫೆಬ್ರುವರಿ ೩ನೇ ತಾರೀಕಿನಂದು ನಡೆಯಲಿರುವ ಬಿಲ್ಲವ ಸಮಾವೇಶದ ಅಗತ್ಯ ಹಾಗೂ ಔಚಿತ್ಯದ ಬಗ್ಗೆ ವಿವರವಾಗಿ ಮನವರಿಕೆ ಮಾಡಿದರು. ಅವರನ್ನು ಯುವವಾಹಿನಿ(ರಿ) […]
07-12-2018, 4:04 PM
ಯಡ್ತಾಡಿ : ಬದುಕು ಒಂದೊಮ್ಮೆ ತೀರಾ ಸಂಕಷ್ಟಕ್ಕೆ ತುತ್ತಾಗುತ್ತದೆ. ಕಷ್ಟ ಬಂದವರಿಗೆ ಮರಳಿ ಮರಳಿ ನೋವು ಬರುತ್ತೆ. ಯಡ್ತಾಡಿ ಗ್ರಾಮದಲ್ಲಿ ವಾಸವಾಗಿರುವ ಸ.ಹಿ.ಪ್ರಾ. ಶಾಲೆ ಯಡ್ತಾಡಿಯ 7ನೇ ತರಗತಿ ವಿದ್ಯಾರ್ಥಿ ರಾಜೇಂದ್ರ ಎಂಬ ಹುಡುಗನ ಕರುಣಾಜನಕ ಕಥೆ ಇದು. ಕಡು ಬಡತನದಲ್ಲಿ ಹುಟ್ಟಿದ ಈ ಹುಡುಗನಿಗೆ ಹುಟ್ಟಿನಿಂದಲೇ ಒಂದು ಕಿಡ್ನಿಯಲ್ಲಿ ಸಮಸ್ಯೆ ಇತ್ತು. ಆದರೂ ಚಿಕಿತ್ಸೆಯ ಮೂಲಕ ಒಂದೇ ಕಿಡ್ನಿಯಲ್ಲಿ ಲವ ಲವಿಕೆಯ ಜೀವನ ಸಾಗಿಸುತ್ತಿದ್ದ. ಆದರೆ ಇತ್ತೀಚಿಗೆ ಇನ್ನೊಂದು ಕಿಡ್ನಿಯಲ್ಲೂ ಸಮಸ್ಯೆ ಕಾಣಿಸಿ ಹಲವಾರು ದಿನಗಳಿಂದ […]
21-10-2018, 3:37 PM
ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಒಂದಿಷ್ಟು ಮನರಂಜನೆಗೆ, ಒಂದಿಷ್ಟು ಸಂಘಟನೆಗೆ ಎಂಬ ಉದ್ದೇಶವನ್ನು ಮುಂದಿರಿಸಿಕೊಂಡು ಯುವವಾಹಿನಿ (ರಿ) ಯಡ್ತಾಡಿ ಘಟಕ ಆರಂಭಿಸಿದ ನಮ್ಮ ನಡೆಯ ಎರಡನೇ ಕಾರ್ಯಕ್ರಮ ನಮ್ಮ ನಡೆ, ಕಂಬಳಕಟ್ಟು ಕಡೆ, ಅಧ್ಯಕ್ಷರಾದ ಸತೀಶ ಪೂಜಾರಿಯವರ ಮನೆಯಲ್ಲಿ ದಿನಾಂಕ 21-10-2018 ರಂದು ನಡೆಸಲಾಯಿತು. ಸ್ವಯಂ ಪ್ರೇರಣೆಯಿಂದ ಸದಸ್ಯರು ಭಾಗವಹಿಸದೇ ಇದ್ದರೆ ಯಾವುದೇ ಸಂಘಟನೆಯನ್ನು ಮುನ್ನಡೆಸುವುದು ಕಷ್ಟ ಸಾಧ್ಯ. ಅದೂ ಅಲ್ಲದೆ ಅದು ವ್ಯರ್ಥ ಕೂಡ. ಈ ನಿಟ್ಟಿನಲ್ಲಿ ಹೊಸ ಚಿಂತನೆಯೊಂದಿಗೆ ಯುವವಾಹಿನಿ ಪ್ರಾರಂಭಿಸಿದ ಕಾರ್ಯಕ್ರಮ […]
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
15-08-2018, 2:11 PM
ಯಡ್ತಾಡಿ : ಸ್ವಾತಂತ್ರ್ಯ ದಿನದಂದು ಕೇವಲ ಧ್ವಜ ಹಾರಿಸಿ ಸಿಹಿ ತಿಂಡಿ ತಿಂದು ಮನೆಗೆ ಮರಳುವ ಬದಲು, ನಾಲ್ಕು ಜನರಿಗೆ ಉಪಯೋಗವಾಗುವ ಅರ್ಥಪೂರ್ಣ ಕಾರ್ಯಕ್ರಮವನ್ನು ಮಾಡುವುದು, ಯುವವಾಹಿನಿ (ರಿ) ಯಡ್ತಾಡಿ ಘಟಕದ ಪ್ರತಿ ವರುಷದ ಕಾರ್ಯಕ್ರಮ. ಈ ಬಾರಿ ಮಾಡಲೇ ಬೇಕಾದ ಕೆಲಸ ಎಲ್ಲರ ಕಣ್ಣೆದುರೇ ಇದ್ದರೂ, ಯಾರಿಗೂ ಈ ಮೊದಲು ಅನುಕೂಲಕರ ಸಮಯ ಒದಗಿ ಬಂದಿರಲಿಲ್ಲ. ಯಡ್ತಾಡಿಯಿಂದ ಕಂಬಳಗದ್ದೆಗೆ ಹೋಗುವ ಕಾಂಕ್ರೀಟ್ ರೋಡಿನ ಎರಡು ಬದಿಗಳಲ್ಲಿ ಹಬ್ಬಿದ ಗಿಡ ಮರ ಹಾಗು ಕಸ ಕಡ್ಡಿಗಳು, ಅದಾಗಲೇ […]
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]