28-04-2026, 8:00 PM
ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಸುಂಕದಕಟ್ಟೆ, ಬಜಪೆ ಇಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಭಜನಾ ಸಂಕೀರ್ತನೆ ಕಾರ್ಯಕ್ರಮವು ಭಕ್ತಿ ಭಾವದಿಂದ ನೆರವೇರಿತು. ದಿನಾಂಕ 28-04-2026, ಮಂಗಳವಾರ ಸಂಜೆ 5.00ರಿಂದ 8.00 ಗಂಟೆಯವರೆಗೆ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ, ಭಜನಾ ಸಂಚಾಲಕರಾದ ದಿವ್ಯ ಸುನಿಲ್, ಸಹ ಸಂಚಾಲಕರಾದ ವಿನೋದ ಪೂಜಾರಿ, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದು […]
Read More
26-04-2026, 1:00 PM
ಬಜಪೆ: ಯುವವಾಹಿನಿ ಬಜಪೆ ಘಟಕವು ಹತ್ತು ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವುದರ ಜೊತೆಗೆ ಪ್ರತಿ ವರ್ಷವೂ ಹಿಂದೂ ಸಂಪ್ರದಾಯದ ಬಿಸು ಹಬ್ಬವನ್ನು ಆಚರಿಸುತ್ತ ಬರುತ್ತಿರುವುದು ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ತಿಳಿಸುವಲ್ಲಿ ಉತ್ತೇಜನ ನೀಡುವಂತಾಗಿದೆ. ಬಿಸು ಪರ್ಬದಂತಹ ಹಬ್ಬಗಳು ನಮ್ಮ ಪರಂಪರೆಯನ್ನು ಜೀವಂತವಾಗಿರಿಸುತ್ತವೆ ಎಂದು ಬಜಪೆ ಶನೀಶ್ವರ ದೇವಸ್ಥಾನದ ಅರ್ಚಕರಾದ ಅಭಿಜಿತ್ ಆನಂದ್ ಅವರು ಹೇಳಿದರು. ಅವರು ಏಪ್ರಿಲ್ 26, 2026 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಬಜಪೆ ಇಲ್ಲಿ ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ […]
Read More
19-04-2026, 8:02 PM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಬಜಪೆ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.
Read More
10-04-2026, 9:00 PM
ಕೆಂಜಾರು: ಪೇಜಾವರ ಮಾಗಣೆ ಶ್ರೀ ಸಾರಬಳಿ ಧೂಮಾವತಿ ದೈವಸ್ಥಾನದಲ್ಲಿ ಜೀರ್ಣೋದ್ಧಾರಗೊಂಡ ನೂತನ ಸನ್ನಿಧಿಯಲ್ಲಿ ಜುಮಾದಿ ಬಂಟ ಹಾಗೂ ಸಪರಿವಾರ ದೈವಗಳ ಪುನರ್ ಪ್ರತಿಷ್ಠಾಪನೆ ಹಾಗೂ ಕಲಶೋತ್ಸವವು ಏಪ್ರಿಲ್ 10ರಂದು ಭಕ್ತಿಭಾವದಿಂದ ನಡೆಯಿತು. ಊರ-ಪರವೂರ ಭಕ್ತರ ಸಹಕಾರದಿಂದ ವಿಜೃಂಭಣೆಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಬಜಪೆ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು. ಬಳಿಕ ದೈವಗಳ ಪ್ರಸಾದವನ್ನು ಸ್ವೀಕರಿಸಿ ಕೃಪೆಗೆ ಪಾತ್ರರಾದರು.
Read More
06-04-2026, 9:00 PM
ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಏಪ್ರಿಲ್ ತಿಂಗಳ ‘ಮನೆ ಮನೆ ಭಜನಾ ಸಂಕೀರ್ತನೆ’ ಕಾರ್ಯಕ್ರಮವು ದಿನಾಂಕ 06-04-2026 ರಂದು ಸೋಮವಾರ ಸಂಜೆ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಜರುಗಿತು. ಘಟಕದ ಸಮಾಜ ಸೇವಾ ನಿರ್ದೇಶಕರಾದ ಜಯರಾಮ ಪೂಜಾರಿ ಅವರ ನೂತನ ಗೃಹ ಪ್ರವೇಶದ ಪ್ರಥಮ ವರ್ಷದ ಆಚರಣೆಯ ಪ್ರಯುಕ್ತ, ಅವರ ನಿವಾಸದಲ್ಲಿ ಈ ಭಜನಾ ಸೇವೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ 6.30 ರಿಂದ 7.30 ರವರೆಗೆ ನಡೆದ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಪಾಲ್ಗೊಂಡರು.ಕಾರ್ಯಕ್ರಮದಲ್ಲಿ ಬಜಪೆ ಘಟಕದ […]
Read More
05-04-2026, 1:00 PM
ಬಜಪೆ : ಯುವವಾಹಿನಿ ಸಂಸ್ಥೆಯ ಬೆಳವಣಿಗೆಗೆ ಬೈಲಾ (ಉಪನಿಬಂಧನೆ) ಮಹತ್ವದ ಆಧಾರವಾಗಿದ್ದು, ಪ್ರತಿಯೊಬ್ಬ ಸದಸ್ಯರೂ ತನ್ನ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಸ್ಪಷ್ಟವಾಗಿ ಅರಿತು ಕಾರ್ಯನಿರ್ವಹಿಸಿದಾಗ ಮಾತ್ರ ಸಂಘಟನೆ ಮತ್ತಷ್ಟು ಬಲಿಷ್ಠವಾಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ಹೇಳಿದರು. ಅವರು ಯುವವಾಹಿನಿ ಬಜಪೆ ಘಟಕದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಯುವವಾಹಿನಿ ಸಂಘಟನೆಯ ಹಿನ್ನೆಲೆ, ಅದರ ಉದ್ದೇಶಗಳು ಹಾಗೂ ಘಟಕದ ಪದಾಧಿಕಾರಿಗಳು, ನಿರ್ದೇಶಕರು ಮತ್ತು […]
Read More
18-03-2026, 9:00 PM
ಬಜಪೆ: ಸಂಸ್ಕೃತಿಗಳು ನಿಧಾನವಾಗಿ ನಶಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ, ಯುವಜನತೆಗೆ ಮಾದರಿಯಾಗುವ ಕಾರ್ಯವನ್ನು ಯುವವಾಹಿನಿ (ರಿ) ಬಜಪೆ ಘಟಕ ಕೈಗೊಂಡಿದೆ. ಪ್ರತಿ ವರ್ಷ ಹಿರಿಯರನ್ನು ಗೌರವಿಸುವ ಮೂಲಕ ಸಂಸ್ಕೃತಿ ಮತ್ತು ಸಂಸ್ಕಾರಗಳ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿರುವ ಘಟಕವು, ಈ ವರ್ಷವೂ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿತು. ದಿನಾಂಕ 18-03-2026 ರಂದು ಬಜಪೆಯ ಅಂಬಿಕಾ ನಗರದಲ್ಲಿರುವ “ಶ್ರೀ ವೈಭವ ಲಕ್ಷ್ಮಿ” ನಿವಾಸಕ್ಕೆ ಭೇಟಿ ನೀಡಿದ ಘಟಕದ ಸದಸ್ಯರು, 82 ವರ್ಷ ಪ್ರಾಯದ ಹಿರಿಯರಾದ ಸುಮತಿ […]
Read More
15-03-2026, 11:00 AM
ಮಂಗಳೂರು :ಯುವವಾಹಿನಿ (ರಿ.) ಬಜಪೆ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬಜಪೆ ಪಟ್ಟಣ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಆಳ್ವಾಸ್ ಆಸ್ಪತ್ರೆ, ಮೂಡಬಿದ್ರೆ ಇವರ ಸಹಯೋಗದೊಂದಿಗೆ ಮಾರ್ಚ್ 15, 2026 ರಂದು ಬಜಪೆ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ-ಕರಂಬಾರು ಅಧ್ಯಕ್ಷ ಶಿವರಾಮ್ ಪೂಜಾರಿ ದೀಪ ಪ್ರಜ್ವಲನೆ ಮಾಡುವ ಮೂಲಕ ಶಿಬಿರ […]
Read More
08-03-2026, 2:00 PM
ಬಜಪೆ : ಯುವವಾಹಿನಿ (ರಿ.) ಬಜಪೆ ಘಟಕದ 12ನೇ ವರ್ಷದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಮಾರ್ಚ್ 8, 2026 ರಂದು ಬಜಪೆಯ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಿತು ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣಗುರುಗಳ ಪೂಜೆಯೊಂದಿಗೆ ಆರಂಭಗೊಂಡು . ಘಟಕದ 11ನೇ ವರ್ಷದ ಸವಿ ನೆನಪಿಗಾಗಿ ಸಭಾಭವನಕ್ಕೆ ಕೊಡುಗೆಯಾಗಿ ನೀಡಲಾದ ಶುದ್ಧ ಬಿಸಿ ಮತ್ತು ತಂಪು ನೀರಿನ ಘಟಕವನ್ನು ಎಲ್.ವಿ. ಅಮೀನ್ ಉದ್ಘಾಟಿಸಿದರು.ಸಭಾ ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡು, ಕಾರ್ಯದರ್ಶಿ ಶರ್ಮಿಳಾ ಚಂದ್ರಶೇಖರ್ ಅವರು ಘಟಕದ ಕಳೆದ […]
Read More
08-03-2026, 10:00 AM
ಬಜ್ಪೆ : ಯುವವಾಹಿನಿ(ರಿ) ಬಜ್ಪೆ ಘಟಕದ 2026 -27ನೇ ಸಾಲಿನ ಅಧ್ಯಕ್ಷರಾಗಿ ರೋಹಿತ್ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಪೂಜಾ ಕಿರಣ್ ಅತ್ತೋಳಿಗೆ ದ್ವಿತೀಯ ಉಪಾಧ್ಯಕ್ಷರು : ಶರ್ಮಿಳಾ ಚಂದ್ರಶೇಖರ್ ಕಾರ್ಯದರ್ಶಿ : ಸುಚಿತಾ ದೇವರಾಜ್ ಜೊತೆ ಕಾರ್ಯದರ್ಶಿ : ದಿವ್ಯಾ ಸುನಿಲ್ ಕೋಶಾಧಿಕಾರಿ : ಸಂದೀಪ್ ಪೂಜಾರಿ ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಸಂಧ್ಯಾ ಸುನಿಲ್ ವ್ಯಕ್ತಿತ್ವ ವಿಕಸನ ನಿರ್ದೇಶಕರು : ದಯಾನಂದ್ ಅಮೀನ್ ಮಹಿಳಾ ಸಂಘಟನಾ ನಿರ್ದೇಶಕರು : […]
Read More