Yuvavahini

ಬಜಪೆ

ಸಂಗೀತ ಕ್ಷೇತ್ರದ ಸಾಧಕಿ ಗ್ರೀಷ್ಮಾಇವರಿಗೆ ಅಭಿನಂದನೆ

ಬಜಪೆ : ಯುವವಾಹಿನಿ (ರಿ) ಬಜಪೆ ಘಟಕದ ಸದಸ್ಯರಾದ ಕುಮಾರಿ ಗ್ರೀಷ್ಮ ಇವರ ಸಂಗೀತ ಕ್ಷೇತ್ರದ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ದಿನಾಂಕ 27.08.2018 ರಂದು ಬ್ರಹ್ಮಶ್ರೀ ನಾರಾಯಣಗುರುವರ್ಯರ ೧೬೪ ನೆೇ ಜನ್ಮ ದಿನಾಚರಣೆಯು ಶುಭ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಆಶ್ರಯದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ನಾರಾಯಣ ಗುರು ಸಂದೇಶ ಕಾಲ್ನಡಿಗೆ ಜಾಥಾ

ಬಜಪೆ : ಬ್ರಹ್ಮ ಶ್ರೀ ನಾರಾಯಣ ಸಮಾಜ ಸೇವಾ ಸಂಘ ಬಜಪೆ -ಕರಂಬಾರು ,ಯುವವಾಹಿನಿ (ರಿ) ಬಜಪೆ ಘಟಕ ,ಯುವವಾಹಿನಿ (ರಿ) ಕರಂಬಾರು -ಕೆಂಜಾರು ಘಟಕ ಹಾಗೂ ಬಿರುವೆರ್ ಕುಡ್ಲ (ರಿ) ಬಜಪೆ ಘಟಕದ ಸಹಯೋಗದಲ್ಲಿ ದಿನಾಂಕ 27.08.2018 ರಂದು ಸುಂಕದಕಟ್ಟೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ ಬಜಪೆ ನಾರಾಯಣ ಗುರು ಮಂದಿರದ ವರೆಗೆ ಶ್ರೀ ನಾರಾಯಣ ಗುರು ಸಂದೇಶ ಕಾಲ್ನಡಿಗೆ ಜಾಥಾ ಬಹಳ ವಿಜೃಂಭಣೆಯಿಂದ ನಡೆಯಿತು. ಸುಂಕದಕಟ್ಟೆ ಅನ್ನಪೂರ್ಣೆಶ್ವರಿ ದೇವಸ್ಥಾನದ ಮೊಕ್ತೇಸರರು ಹಾಗೂ ಮುಲ್ಕಿ ಮೂಡಬಿದ್ರಿ ಕ್ಷೇತ್ರದ […]

Read More

ಬಡ ಕುಟುಂಬದ ಹೆಣ್ಣು ಮಗಳ ಮದುವೆಗೆ ಧನಸಹಾಯ

ಬಜ್ಪೆಯಲ್ಲಿ ವಾಸವಾಗಿರುವ ದಿ| ಮನೋಜ್ ಕುಮಾರ್ ಮತ್ತು ಶ್ರೀಮತಿ ಶಾಲಿನಿಯವರ ಪುತ್ರಿ ಕುಮಾರಿ ದಿವ್ಯ ಇವರ ಮದುವೆ ಖರ್ಚಿನ ಸಹಾಯಾರ್ಥವಾಗಿ ದಿನಾಂಕ 17.08.2017ರಂದು ಯುವವಾಹಿನಿ (ರಿ) ಬಜ್ಪೆ ಘಟಕದ ವತಿಯಿಂದ ಧನ ಸಹಾಯ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಜೋಕಟ್ಟೆ, ಯುವವಾಹಿನಿ ಬಜ್ಪೆ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಆಟಿದ ನೆಂಪು ಯುವ ಜನಾಂಗದಲ್ಲಿ ಜಾಗ್ರತಿ ಮೂಡಿಸಿದೆ : ಪ್ರಭಾಕರ ನೀರುಮಾರ್ಗ

. ಬಜ್ಪೆ: ವ್ಯವಸಾಯ ಮತ್ತು ಕೃಷಿಯೊಂದಿಗೆ ಆಟಿ ತಿಂಗಳಿಗೆ ಅತೀ ಹತ್ತಿರದ ಸಂಭಂದವಿದೆ. ಆಹಾರ ಅನುಷ್ಠಾನಗಳಲ್ಲಿ ಪ್ರತಿ ತಿಂಗಳಿಗೆ ಅದರದ್ದೇ ಆದ ಮಹತ್ವವಿದೆ. ಅದರಲ್ಲೂ ಪ್ರಕೃತಿ, ಭೂಮಿ ಮತ್ತು ನಮ್ಮ ಈ ಜೀವ, ದೇಹದ ನಡುವೆ ಅತೀಯಾದ ಸಂಭಂದವಿರುವುದು ಆಟಿ ತಿಂಗಳಲ್ಲಿ. ಈ ತಿಂಗಳಲ್ಲಿ ನಾವೇನನ್ನ ಆಹಾರ ಪಥ್ಯಗಳಾಗಿ ಸ್ವೀಕರಿಸುತ್ತೇವೆ, ಪ್ರಕೃತಿ ಭೂಮಿಗೂ ಅದನ್ನು ಉಣಬಡಿಸಿ ಸಮ ತೋಲನವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಈ ಹಿಂದಿನ ದಿನ ಮಾನಗಳಲ್ಲಿ ಅವಶ್ಯವಾಗಿ ಆಟಿ ತಿಂಗಳಲ್ಲಿ ಸೇವಿಸಬೇಕಾದ ಆಹಾರವು ಔಷಧವಾಗಿ ಇಡೀ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಕಣ್ಣಿನ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಬಜ್ಪೆ: ವಿದ್ಯೆ ಉದ್ಯೋಗ ಸಂಪರ್ಕವೆನ್ನುವ ಮಹತ್ತರವಾದ ಆಶಯವನ್ನಿರಿಸಿಕೊಂಡು, ಸಮಾಜಮುಖಿಯಾಗಿ ಕಾರ್ಯೋನ್ಮುಖವಾಗಿರುವ ಯುವವಾಹಿನಿ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲೂ ತನ್ನನ್ನು ಬಹುವಾಗಿ ಅನ್ವಯಿತಗೊಳಿಸಿಕೊಂಡಿರುವ ಕಾರಣವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮಡಿಗೇರಿಸಿಕೊಂಡಿರುವುದು ಕಡಿಮೆ ಸಾಧನೆಯೇನಲ್ಲ. ಯುವವಾಹಿನಿ ಕೇಂದ್ರ ಸಮಿತಿಯ ಪಡಿನೆಳಲಲ್ಲಿ ತನ್ನ ಪ್ರತಿಭೆಯನ್ನು ವಿಸ್ತಾರಗೊಳಿಸಿಕೊಂಡಿರುವ ಘಟಕಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ. 14.07.2018 ರಂದು ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯ(SEZ) ಇದರ ಸಹಭಾಗಿತ್ವದಲ್ಲಿ, ಪ್ರಸಾದ್ ನೇತ್ರಾಲಯ […]

Read More

ಮುಂಡಾರು ಹಿಂದೂ ರುದ್ರ ಭೂಮಿಯಲ್ಲಿ ವಿಶ್ವ ಪರಿಸರ ದಿನ‌ ಆಚರಣೆ.

ಬಜ್ಪೆ : ತಾ. 10.06.18 ಭಾನುವಾರ ಯುವವಾಹಿನಿ(ರಿ) ಬಜ್ಪೆ ಘಟಕದ ಸದಸ್ಯರಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಜ್ಪೆ ಸಮೀಪದ ಮುಂಡಾರು ಇಲ್ಲಿರುವ ಹಿಂದೂ ರುದ್ರ ಭೂಮಿಯ ಪರಿಸರ ಸ್ವಚ್ಛಗೊಳಿಸಿ, ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ಶ್ರೀಯುತ ರಾಘವೇಂದ್ರ ಆಚಾರ್, ಮಾಲಕರು, ಶಾಂತಿ ಭವನ ಬಜ್ಪೆ ಮತ್ತು ಡಾ|| ಜಯರಾಮ್ ಶೆಟ್ಟಿ, ಖ್ಯಾತ ಮಕ್ಕಳ ತಜ್ಞರು, ಬಜ್ಪೆ ಇವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 20 ವಿವಿಧ ಜಾತಿಯ ಸುಮಾರು 100 ಗಿಡಗಳನ್ನು […]

Read More

ಸಮಾಜದಲ್ಲಿ ಪ್ರೀತಿ, ವಿಶ್ವಾಸ ,ಶಾಂತಿಯನ್ನು ಬಲಪಡಿಸುವಲ್ಲಿ ಹಬ್ಬಗಳು ದಾರಿದೀಪ : ಯಶವಂತ ಪೂಜಾರಿ

  ಬಜ್ಪೆ : ಜಾಗತೀಕರಣದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಸಂಪ್ರದಾಯಗಳು ನಶಿಸಿಹೋಗುವ ಕಾಲಘಟ್ಟದಲ್ಲಿ ಯುವವಾಹಿನಿಯು ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸುವ ಮೂಲಕ ಮುಂದಿನ ಯುವಜನತೆಗೆ ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸಿದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಹಬ್ಬಗಳು ದಾರಿದೀಪವಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ‌ 15.04.2018 ರಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಜರುಗಿದ ಬಿಸು ಪರ್ಬ ಕಾರ್ಯಕ್ರಮದಲ್ಲಿ ಮುಖ್ಯ […]

Read More

ಕೋಟಿ ಚೆನ್ನಯ ನಾಟಕಕ್ಕೆ ಹೊಸ ಛಾಪು ಮೂಡಿಸಿದ ಯುವವಾಹಿನಿ ಕಲಾವಿದರು

ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್‌ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್‌ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]

Read More

ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ರಂಗ ಪ್ರಜ್ಞೆ ತರಬೇತಿ ಕಾರ್ಯಕ್ರಮ:

ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ತಾ. 18.03.2018 ಭಾನುವಾರದಂದು ಬಜ್ಪೆ ಬಿಲ್ಲವ ಸಂಘದ ಸಭಾ ಭವನದಲ್ಲಿ ರಂಗ ಕ್ರಿಯೆ – ರಂಗ ಪ್ರಜ್ಞೆಯ ಬಗ್ಗೆ ಸ್ಪಷ್ಟ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಘಟಕದ ಸದಸ್ಯರುಗಳಿಗೆ, ಅವರ ಮಕ್ಕಳಿಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ತಜ್ಞ ಜಗನ್‌ಪವಾರ್ ಬೇಕಲ್ ಇವರು ಸಂಗೀತ ನಾಟಕ, ದೃಶ್ಯ, ಬೀದಿ ನಾಟಕ ಮುಂತಾದ ಪ್ರಕಾರಗಳ ವಿಶಿಷ್ಟ ಹೊಲ ಹೊರ ಹೂರಣಗಳನ್ನು ಪ್ರಯೋಗಿಕವಾಗಿ ಉಣಬಡಿಸಿ, ಫಲಾನುಭವಿಗಳನ್ನು ಜೀತೋಹಾರಿಯಾಗಿಸಿದರು. ಸದಸ್ಯರುಗಳಿಗೆ ನಟನಾ ಕೌಶಲ್ಯದ ಸೂಕ್ಷ್ಮತೆಯನ್ನು ತಿಳಿಹೇಳಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!