Yuvavahini

ಕಂಕನಾಡಿ

ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು

ಮಂಗಳೂರು, ಮೇ 28: ಯುವವಾಹಿನಿ (ರಿ.) ಕಂಕನಾಡಿ ಘಟಕವು ತನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳ ಅಂಗವಾಗಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಂಗಳೂರಿನ ಉಜ್ಜೋಡಿ ನಿವಾಸಿ ರಾಜೇಶ್ ಅವರಿಗೆ ಆರ್ಥಿಕ ನೆರವು ನೀಡಿದೆ. ರಾಜೇಶ್ ಅವರ ವೈದ್ಯಕೀಯ ಚಿಕಿತ್ಸೆಗೆ ಸಹಕಾರಿಯಾಗುವ ಉದ್ದೇಶದಿಂದ ಘಟಕದ ಸದಸ್ಯರು ಮತ್ತು ಹಿತೈಷಿಗಳ ಸಹಯೋಗದೊಂದಿಗೆ ಸಂಗ್ರಹಿಸಲಾದ Rs. 30,000/- ಮೊತ್ತದ ಧನಸಹಾಯವನ್ನು 28-05-2026 ರಂದು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ರಾಜೇಶ್ ಅವರು ಶೀಘ್ರವಾಗಿ ಸಂಪೂರ್ಣ ಆರೋಗ್ಯವನ್ನು […]

Read More

ಕ್ಯೂಆರ್ ಕೋಡ್ ಆಧಾರಿತ ಶಿಕ್ಷಣ ಸಂಪನ್ಮೂಲಗಳ ಪರಿಚಯ

ಕಂಕನಾಡಿ ಮೇ 14 : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಮೇ 14, 2026ರಂದು ನಡೆದ ಸಭೆಯಲ್ಲಿ ಘಟಕದ ಸದಸ್ಯರಾದ ಮೋಹನ್ ಅಮೀನ್ ಅವರು ಕ್ಯೂಆರ್ ಕೋಡ್ ಆಧಾರಿತ ಶಿಕ್ಷಣ ಸಂಪನ್ಮೂಲಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅವರು ಭಗವದ್ಗೀತೆಯನ್ನು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ದೃಶ್ಯ-ಶ್ರವ್ಯ ಮಾಧ್ಯಮದ ಸಹಾಯದಿಂದ ಸುಲಭವಾಗಿ ಅಧ್ಯಯನ ಮಾಡಬಹುದಾದ ಪುಸ್ತಕವನ್ನು ಪರಿಚಯಿಸಿದರು. ಅಲ್ಲದೆ, ಎಜುಟೆಕ್ ಸಂಸ್ಥೆ ಪ್ರಕಟಿಸಿರುವ 8ನೇ ಹಾಗೂ 9ನೇ ತರಗತಿಯ ಗಣಿತ ಮತ್ತು ವಿಜ್ಞಾನ […]

Read More

ಪ್ರೇಕ್ಷಕರ ಮನಸೂರೆಗೊಂಡ ಯುವವಾಹಿನಿ (ರಿ) ಕಂಕನಾಡಿ ಘಟಕದ ಕಲಾ ಪ್ರದರ್ಶನ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಕಂಕನಾಡಿ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ ಘಟಕಗಳ ಸಹಯೋಗದಲ್ಲಿ ಭಜನಾ ಸೇವೆ

ಮಂಗಳೂರು: ದಿನಾಂಕ 09-03-2026 ನೇ ಸೋಮವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯನ್ನು ಯುವವಾಹಿನಿ (ರಿ.) ಕಂಕನಾಡಿ ಘಟಕದ ಸಹಯೋಗದೊಂದಿಗೆ ಭಕ್ತಿಭಾವದಿಂದ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಮಕ್ಕಳಲ್ಲಿ ಸಂಸ್ಕೃತಿ, ಸಂಪ್ರದಾಯದ ಜಾಗೃತಿ ಮೂಡಿಸುವುದು ಮಹಿಳೆಯರ ಕರ್ತವ್ಯ: ಪ್ರೇಮ ಪ್ರಭಾಕರ್

ಮಂಗಳೂರು: “ಒಬ್ಬ ಸುಸಂಸ್ಕೃತ ಮಹಿಳೆ ತನ್ನ ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ದೇಶ ಮತ್ತು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಹೆಣ್ಣು ತಾನು ಹುಟ್ಟಿದ ಮನೆ ಹಾಗೂ ಸೇರಿದ ಗಂಡನ ಮನೆಯ ಹಿತ ಬಯಸುವವಳು,” ಎಂದು ಡಿವೈನ್ ಪಾರ್ಕ್‌ನ ಮಹಿಳಾ ಮೇಲ್ಮೈ ಅಧಿಕಾರಿ ಪ್ರೇಮ ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.​ಅವರು ದಿನಾಂಕ 08-03-2026 ರಂದು ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. […]

Read More

ಗೆಜ್ಜೆಗಿರಿ ಜಾತ್ರಾ ಮಹೋತ್ಸವ: ಯುವವಾಹಿನಿ ಕಂಕನಾಡಿ ಘಟಕದಿಂದ ಸ್ವಯಂ ಸೇವೆ ಮತ್ತು ಅನ್ನದಾನ ದೇಣಿಗೆ

ಮಂಗಳೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಇತ್ತೀಚೆಗೆ ಜರುಗಿದ ಜಾತ್ರಾ ಮಹೋತ್ಸವದ ಪುಣ್ಯ ಸಂದರ್ಭದಲ್ಲಿ, ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ವಿಶೇಷ ಸ್ವಯಂ ಸೇವೆ ಹಾಗೂ ಅನ್ನದಾನ ಸೇವೆಗಳನ್ನು ಸಲ್ಲಿಸಲಾಯಿತು. ​ದಿನಾಂಕ 28-02-2026ರ ಮಡಿಲು ಸೇವೆಯ ಪವಿತ್ರ ದಿನದಂದು ಕಂಕನಾಡಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದಲ್ಲಿ ಉಪಸ್ಥಿತರಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದರು. ಕ್ಷೇತ್ರದ ಶಿಸ್ತು ಮತ್ತು ವ್ಯವಸ್ಥಿತ ನಿರ್ವಹಣೆಯಲ್ಲಿ ಪಾಲ್ಗೊಂಡು ಸೇವೆಯನ್ನು ಅರ್ಪಿಸಿದರು.​ಅನ್ನದಾನಕ್ಕೆ ಧನಸಹಾಯ:ಯುವವಾಹಿನಿಯ ಸಾಮಾಜಿಕ ಬದ್ಧತೆಯ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ […]

Read More

ಹಿರಿಯರ ಮಾರ್ಗದರ್ಶನವೇ ದಾರಿದೀಪ : ಅಶೋಕ್ ಕುಮಾರ್ ಪಡ್ಪು

ಮಂಗಳೂರು : ಸೇವಾ ಮನೋಭಾವ, ಸಂಘಟನಾ ಶಕ್ತಿ ಮತ್ತು ಸಮಾಜಮುಖಿ ಚಿಂತನೆಯ ದಶಕದ ಪಯಣವನ್ನು ಸ್ಮರಿಸುವಂತೆ, ಯುವವಾಹಿನಿ (ರಿ.) ಕಂಕನಾಡಿ ಘಟಕದ ದಶಮಾನೋತ್ಸವ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ದಿನಾಂಕ 25-01-2026ರ ಆದಿತ್ಯವಾರ ಕಂಕನಾಡಿ ಗರೋಡಿ ಸಮೀಪದ ಸಮೃದ್ಧಿ ಭವನದಲ್ಲಿ ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಮಾತನಾಡಿ,“ಹಿರಿಯರು ನಡೆದು ಬಂದ ತತ್ವಾದರ್ಶಗಳೇ ಸಂಘಟನೆಯ ನೆಲೆ. ಆ ಮಾರ್ಗದರ್ಶನವಿಲ್ಲದೆ ಹೊಸಬರ ಹೆಜ್ಜೆಗಳು […]

Read More

ಯುವವಾಹಿನಿ ಕಂಕನಾಡಿ ಘಟಕದಿಂದ ಕಿರು ಪ್ರವಾಸ

ಕಂಕನಾಡಿ : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಮಂಗಳೂರು ಮೋರ್ಗನ್ಸ್ ಗೇಟ್‌ನಲ್ಲಿರುವ ಕ್ರೂಸ್ ಆ್ಯಂಡ್ ಡೈನ್ ಕೇಂದ್ರಕ್ಕೆ ಒಂದು ದಿನದ ಕಿರು ಪ್ರವಾಸವನ್ನು ದಿನಾಂಕ 11-01-2026 ರಂದು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ನಡೆದ ಈ ಪ್ರವಾಸದಲ್ಲಿ ಘಟಕದ ಸದಸ್ಯರು ಹಾಗೂ ಅವರ ಬಂಧು–ಮಿತ್ರರು ಉತ್ಸಾಹಭರಿತವಾಗಿ ಭಾಗವಹಿಸಿ ಸಂತಸದ ಕ್ಷಣಗಳನ್ನು ಕಳೆಯಿದರು. ಬೆಳಿಗ್ಗೆ ಚಹಾ–ತಿಂಡಿಯೊಂದಿಗೆ ಆರಂಭವಾದ ಪ್ರವಾಸ, ಬೋಟಿನಲ್ಲಿ ಸಾಗುವ ಮೂಲಕ ಸುತ್ತಮುತ್ತಲಿನ ಮನೋಹರ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುವ ಅನುಭವವನ್ನು ನೀಡಿತು. […]

Read More

ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವರ್ಷಾವಧಿ ಉತ್ಸವದಲ್ಲಿ ಯುವವಾಹಿನಿ ಕಂಕನಾಡಿ ಘಟಕದ ಸ್ವಯಂಸೇವೆ

ಮಂಗಳೂರು: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ನಡೆದ ವರ್ಷಾವಧಿ ಉತ್ಸವದ ಅಂಗವಾಗಿ ದಿನಾಂಕ 02-01-2026 ಹಾಗೂ 05-01-2026ರಂದು ಸ್ವಯಂಸೇವಾ ಕಾರ್ಯಗಳನ್ನು ನಡೆಸಲಾಯಿತು.ಉತ್ಸವದ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಸ್ವಯಂಸೇವೆಯಲ್ಲಿ ತೊಡಗಿ ವಿವಿಧ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಅಲ್ಲದೆ, ಘಟಕದ ಸದಸ್ಯರಿಂದ ಸಂಗ್ರಹಿಸಲಾದ ರೂ.12,500 ಮೊತ್ತದ ದೇಣಿಗೆಯನ್ನು ಅನ್ನದಾನ ಸೇವೆಗೆ ಸಮರ್ಪಿಸಲಾಯಿತು.ಈ ಸ್ವಯಂಸೇವಾ ಕಾರ್ಯವು ಯುವವಾಹಿನಿ ಕಂಕನಾಡಿ ಘಟಕದ ಸೇವಾ ಮನೋಭಾವ, ಸಂಘಟನಾ ಶಕ್ತಿ ಹಾಗೂ […]

Read More

ಬೆಳಕಿನ ಚಿತ್ತಾರ-ಯುವವಾಹಿನಿ (ರಿ.) ಕಂಕನಾಡಿ ಘಟಕ

ನಾವು ಬಹಳ ವಿಜೃಂಭಣೆಯಿಂದ ಆಚರಿಸುವ ದೀಪಗಳ ಹಬ್ಬ ತುಳಸಿ ಪೂಜೆಯ ಪ್ರಯುಕ್ತ ಘಟಕದ ಸದಸ್ಯರಿಗೆ ” ಬೆಳಕಿನ ಚಿತ್ತಾರ” ಎಂಬ ಸಾಂಪ್ರದಾಯಿಕ ಗೂಡು ದೀಪ ಹಾಗೂ ” ತಮಸೋಮಾ ಜ್ಯೋತಿರ್ಗಮಯ” ಎಂಬ ಮಣ್ಣಿನ ಹಣತೆಯಿಂದ ಬೆಳಗಿದ ಮನೆಯಂಗಳ ಹಾಗೂ ತುಳಸಿ ಪೂಜೆಯ ಪ್ರಯುಕ್ತ ಘಟಕದ ಸದಸ್ಯರಿಗೆ ರಂಗೋಲಿ ಬಿಡಿಸಿ ಹೂವಿನ ಅಲಂಕಾರವನ್ನು ಮಾಡಿ ಮಣ್ಣಿನ ಹಣತೆ ಬೆಳಗಿದ ಅಂದ ಚೆಂದದ ತುಳಸಿಯ ಛಾಯಾಚಿತ್ರದ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಶ್ರೀಮತಿ ಸುಫ್ರಿಯಾ ಸುಂದರ್ ಸಾಲಿಯಾನ್ ಹಾಗೂ ಶ್ರೀಮತಿ ಸೌಮ್ಯವಾಣಿ‌‌‌ ಸಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!