Yuvavahini

ಕಂಕನಾಡಿ

ಯುವವಾಹಿನಿ (ರಿ.) ಕಂಕನಾಡಿ ಘಟಕ…

ವ್ಯಕ್ತಿತ್ವ ವಿಕಸನ *ಮಕ್ಕಳು ಮೊಬೈಲ್ ಹಾಗೂ ಕಾನೂನುಬಾಹಿರ ಚಟಕ್ಕೆ ಬೀಳದೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ಉತ್ತಮ ಗುರಿಯನ್ನಿಟ್ಟು ತಮ್ಮ ಜೀವನವನ್ನೇ ಮಕ್ಕಳಿಗಾಗಿ ತ್ಯಾಗ ಮಾಡುತ್ತಿರುವ ಪೋಷಕರು ಹಾಗೂ ನಿಮ್ಮ ಬಗ್ಗೆ ಇತರರು ಹೆಮ್ಮೆ ಪಡುವಂತಹ ಆಕರ್ಷಕ ವ್ಯಕ್ತಿತ್ವ ನಿಮ್ಮದಾಗಬೇಕು .ಮಕ್ಕಳು ಈ ದೇಶದ ಅತ್ಯಮೂಲ್ಯ ಸಂಪತ್ತು. ಮಕ್ಕಳಿಗೆ ಯಾರಿಂದಲಾದರೂ ದೈಹಿಕವಾಗಿ ಅಥವಾ ಮಾನಸಿಕವಾಗಿ ತೊಂದರೆಯಾದಲ್ಲಿ ನಮ್ಮ ಕಾನೂನು ಖಂಡಿತಾ ಸಹಿಸುವುದಿಲ್ಲ. ತಕ್ಷಣವೇ ಮಕ್ಕಳು ತಮ್ಮ ಹೆತ್ತವರ, ಶಿಕ್ಷಕರ ಗಮನಕ್ಕೆ ತರಬೇಕು ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ […]

Read More

ಯುವವಾಹಿನಿ (ರಿ.) ಕಂಕನಾಡಿ ಘಟಕ : ಕಾರ್ಮಿಕ ದಿನಾಚರಣೆ

ದಿನಾಂಕ 15-05-2025 : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಕಾರ್ಮಿಕ ದಿನಾಚರಣೆ ಆಯೋಜಿಸಲಾಗಿತ್ತು.ಕಾರ್ಮಿಕ ದಿನಾಚರಣೆ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಭಗವಾನ್ ದಾಸ್. ಬಿ. ಎನ್. ನಿಕಟ ಪೂರ್ವ ಉಪಾಧ್ಯಕ್ಷರು,ಭಾರತೀಯ ಮಜ್ದೂರ್ ಸಂಘ. ಕರ್ನಾಟಕ.ಕಾರ್ಯಧ್ಯಕ್ಷರು, ಕೇಂದ್ರೀಯ ಸಮಿತಿ, ಕುದುರೆಮುಖ ಮಜ್ದೂರ್ ಸಂಘ. ಮಂಗಳೂರು ಇವರು ಆಗಮಿಸಿದ್ದರು. ಭಗವಾನ್ ದಾಸ್ ಬಿ. ಎನ್ . ಮಾತನಾಡಿ ಭಾರತೀಯ ಮಜ್ದೂರ್ ಸಂಘದ ಚಿಂತನೆ ವಸುದೈವ ಕುಟುಂಬಕಂ ಅಂದರೆ ವಿಶ್ವದ ಕಾರ್ಮಿಕರೇ ಒಗ್ಗಟ್ಟಾಗಿ ಎಂದು ಇಲ್ಲಿ ಕಾರ್ಮಿಕರ ಸ್ವಾರ್ಥ ಇರುವುದಿಲ್ಲ […]

Read More

ಸಾಮಾಜಿಕ ಪೀಡೆಗಳನ್ನು ತೊಲಗಿಸಿ ಲೋಕಕ್ಕೆ ಗುರುವಾದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಸಂದೇಶಗಳು ಪ್ರಸ್ತುತ ಕಾಲಕ್ಕೆ ಪೂರಕವಾಗಿವೆ : ಸ್ಮಿತೇಶ್ ಎಸ್.ಬಾರ್ಯ

ಮಂಗಳೂರು : ಶ್ರೀ ನಾರಾಯಣ ಗುರುಗಳ ಸಂದೇಶಗಳು ಇಂದಿನ ಕಾಲಘಟ್ಟಕ್ಕೆ ಪೂರಕವಾಗಿದ್ದು ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಇಂದಿನ ಜನತೆ ಮುಂದಾಗಬೇಕು. ನಾವು ಕಷ್ಟದಲ್ಲಿರುವಾಗ ನಮಗೆ ಯಾರೂ ಸಹಾಯ ಮಾಡಲಾರರು ಎನ್ನುವುದನ್ನು ಅರಿತು ಸ್ವಾವಲಂಬಿಯಾಗಿ ಬದುಕಬೇಕು ಎಂದು ಚಲನಚಿತ್ರ ನಿರ್ದೇಶಕ, ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಸ್ಮಿತೇಶ್ ಎಸ್.ಬಾರ್ಯ ತಿಳಿಸಿದರು. ಅವರು 16-09-2024 ರವಿವಾರದಂದು ಯುವವಾಹಿನಿ (ರಿ) ಕಂಕನಾಡಿ ಘಟಕ ಆಯೋಜಿಸಿದ್ದ ಗುರು ಸ್ಮರಣೆ – ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿದರು. […]

Read More

ಗುರುವಂದನ ಕಾರ್ಯಕ್ರಮ

ಕಂಕನಾಡಿ: ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ದಿನಾಂಕ 12-09-2024 ರಂದು ಘಟಕದ ಕಛೇರಿಯಲ್ಲಿ ಸಂಜೆ ಗಂಟೆ 6:30ಕ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನ ಕಾರ್ಯಕ್ರಮ ಆಚರಿಸಲಾಯಿತು. ಅಧ್ಯಕ್ಷರಾದ ರಾಹುಲ್ ಸನಿಲ್ ಇವರು ಸಭೆಗೆ ಬಂದ ಎಲ್ಲಾ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಸ್ವಾಗತಿಸಿದರು. ಘಟಕದ ಮತ್ತು ಪರಿಸರದ 3 ಶಿಕ್ಷಕರನ್ನು ಸನ್ಮಾನಿಸುವ ಮೂಲಕ ಗುರುವಂದನೆಯನ್ನು ಸಲ್ಲಿಸಲಾಯಿತು. ಸನ್ಮಾನ ಸ್ವೀಕರಿಸಿದ ಶಿಕ್ಷಕಿ ಶ್ರೀಮತಿ ಶೀಲಾ ಟೀಚರ್ ರವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ಪಡಿಸಿದರು. ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ […]

Read More

ಸಂಘಟನೆಯಿಂದ ಸಾಮಾಜಿಕ ಬಲವರ್ಧನೆ ಸಾಧ್ಯವಿದ್ದು, ಸಂಘಟನೆಯೊಂದು ಸಮಾಜಮುಖಿಯಾದ ತನ್ನ ಚಿಂತನೆಗಳಲ್ಲಿ ರಚನಾತ್ಮಕತೆಯನ್ನು ಅಳವಡಿಸಿಕೊಂಡಾಗ ಅದು ಸರ್ವಮಾನ್ಯತೆಯನ್ನು ಪಡೆದುಕೊಳ್ಳುತ್ತದೆ : ಉದ್ಯಮಿ ಲೋಕೇಶ್ ಪೂಜಾರಿ

ಮಂಗಳೂರು : ಯುವವಾಹಿನಿ (ರಿ) ಕಂಕನಾಡಿ ಘಟಕದ ಸಹಯೋಗದಲ್ಲಿ ದಿನಾಂಕ 08-09-2024 ಗರೋಡಿ ಸಮೃದ್ಧಿ ಸಭಾಭವನದಲ್ಲಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿದ ಲೋಕೇಶ್ ಪೂಜಾರಿ, ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ ಕಂಕನಾಡಿ ಘಟಕವು ಹಮ್ಮಿಕೊಂಡಿರುವ ಸಮಾಜಮುಖಿ ಹತ್ತು ಹಲವು ಕಾರ್ಯಕ್ರಮವು ಸರ್ವಸ್ಪರ್ಶಿ ಉದ್ದೇಶವನ್ನು ಹೊಂದಿದ್ದು, ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿವೆ ಎಂದು ನುಡಿದರು. ಯುವವಾಹಿನಿ (ರಿ) ಕಂಕನಾಡಿ ಘಟಕ ಅಧ್ಯಕ್ಷ ಲೋಕೇಶ್ ಅಮೀನ್ ಅಧ್ಯಕ್ಷತೆ ವಹಿಸಿ, […]

Read More

ಬೆಂಕಿ ರಹಿತ ಅಡುಗೆ ಸ್ಪರ್ದೆ

ಮಂಗಳೂರು : ಕಂಕನಾಡಿ ಘಟಕದ ಸದಸ್ಯರಿಗೆ 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ 04-08-2024ನೇ ಆದಿತ್ಯವಾರ ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ಘಟಕದ ಕಚೇರಿಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾದ ಮಾನ್ಯ ಸುಂದರ್ ಸುವರ್ಣರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆದೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 14 ಜನ ಸದಸ್ಯರು ಏಳು ತಂಡವಾಗಿ ಭಾಗವಹಿಸಿದ್ದರು ಹಾಗೂ ತೀರ್ಪುಗಾರರಾಗಿ ಕೊಡಿಯಲ್ ಬೈಲ್ ಶಾರದ ವಿದ್ಯಾಲಯದ ಶಿಕ್ಷಕಿ ಉಜ್ವಲ್ ಹಾಗೂ ಅಂಚನ್ ಕ್ಯಾಟರಿಂಗ್ […]

Read More

ಕಿರು ಪ್ರವಾಸ

ಕಂಕನಾಡಿ: ಬ್ರಹ್ಮಾವರದ ಕಿಂಗ್ ಆಫ್ ಕಿಂಗ್ಸ್ ರೆಸಾರ್ಟ್ ನಲ್ಲಿ ಒಂದು ದಿನದ ಕಿರುಪ್ರವಾಸ ಕಾರ್ಯಕ್ರಮವನ್ನು ದಿನಾಂಕ 02-06-2024ರ ಆದಿತ್ಯವಾರ ಹಮ್ಮಿಕೊಳ್ಳಲಾಗಿತ್ತು. ಪ್ರವಾಸ ಸಂಚಾಲಕರಾದ ಹರಿಣಿ ಹಾಗೂ ಬೇಬಿ ಗೋಪಾಲ್ ಇವರ ಮಾರ್ಗದರ್ಶನದಲ್ಲಿ ಘಟಕದ ಅಧ್ಯಕ್ಷರಾದ ಶ್ರೀಯುತ ಲೋಕೇಶ್ ಅಮೀನ್, ಕಾರ್ಯದರ್ಶಿ ಮಮತಾ ತೇಜ್ ಪಾಲ್ ಇವರುಗಳ ಮುಂದಾಳತ್ವದಲ್ಲಿ ಸದಸ್ಯರು ತಮ್ಮ ಕುಟುಂಬದ ಜೊತೆಗೂಡಿ ಒಟ್ಟು 51 ಮಂದಿ ಪ್ರವಾಸಿಗರು ಬಸ್ಸಿನಲ್ಲಿ ಪ್ರಯಾಣ ಹೊರಟು ರೆಸಾರ್ಟ್ ತಲುಪಿ ಅಲ್ಲಿ ಉಪಾಹಾರವನ್ನು ಸೇವಿಸಿ ನಂತರ ಬೋಟಿನಲ್ಲಿ ಪ್ರಯಾಣಿಸಿ ಸುತ್ತಲೂ ನೀರಿನಿಂದ […]

Read More

ಪುಣ್ಯ ಕ್ಷೇತ್ರ ದರ್ಶನ

ಕಂಕನಾಡಿ: ಯುವವಾಹಿನಿ(ರಿ.) ಕಂಕನಾಡಿ ಘಟಕದ ಸದಸ್ಯರ ಮತ್ತು ಕುಟುಂಬ ಸದಸ್ಯರ ನಡುವೆ ಬಾಂಧವ್ಯ ವೃದ್ಧಿಗಾಗಿ ಪುಣ್ಯಕ್ಷೇತ್ರ ದರ್ಶನ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡು ದಿನಾಂಕ 26-04-2024 ಶುಕ್ರವಾರದಂದು ಹಮ್ಮಿಕೊಂಡಿದ್ದರು. ಮಂಗಳೂರು ರೈಲ್ವೆ ನಿಲ್ದಾಣದಿಂದ ರಾತ್ರಿ 9:00ಕ್ಕೆ ಹೊರಟು ಮರುದಿನ ತಾರೀಕು 27-04-2024 ಶನಿವಾರ ಸಾಯಂಕಾಲ 5:30 ಗಂಟೆಗೆ MANMAD ರೈಲ್ವೇ ಸ್ಟೇಷನ್ ತಲುಪಿ ಅಲ್ಲಿಂದ ಶಿರಡಿಯಲ್ಲಿ ವಸತಿ ಗೃಹಕ್ಕೆ ತೆರಳಿ, ಸ್ನಾನಾದಿ ಮುಗಿಸಿ ನಂತರ ರಾತ್ರಿ 9 ಗಂಟೆಗೆ ಶಿರಡಿ ಕ್ಷೇತ್ರ ದರ್ಶನ ಮಾಡಿ ವಿಶ್ರಾಂತಿ ಪಡೆದರು. 28-04-2024ನೇ ಆದಿತ್ಯವಾರ ಶನಿ […]

Read More

ಸ್ತ್ರೀ.. ಸಹನೆ, ತಾಳ್ಮೆ, ಸಂಯಮದ ರಾಯಭಾರಿ: ಕುಸುಮಾ ಅಜಯ್

ಮಂಗಳೂರು: ಸ್ತ್ರೀ.. ಸಹನೆ, ತಾಳ್ಮೆ, ಸಂಯಮದಿಂದ ಜೀವನದುದ್ದಕ್ಕೂ ಅದೆಷ್ಟೋ ಪಾತ್ರ ನಿರ್ವಹಿಸುವ ಯಶಸ್ವಿ ರಾಯಭಾರಿ. ಹೆಣ್ಣು ಅಗತ್ಯವಾಗಿ ಸ್ವಾವಲಂಬಿ.. ಶಿಕ್ಷಿತ.. ಉದ್ಯೋಗಸ್ಥ.. ಸಬಲೆ.. ಸಂಘಟಿತಳಾಗಿ ಸಂಸಾರದಲ್ಲಿ, ಸಮಾಜದಲ್ಲಿ ನಾನಾ ರೀತಿಯ ಸಂಬಂಧ ನಿಭಾಯಿಸಿಕೊಂಡು.. ಹೇಗೆ.. ಏಕೆ.. ಹೊಂದಾಣಿಕೆಯಿಂದ ಸಂಸಾರದ ಗುಟ್ಟು ಕಾಪಾಡಬೇಕು. ಪುರುಷ ಸಮಾಜವ ಜರಿಯದೆ.. ಅವರೊಟ್ಟಿಗೆ ಹೇಗೆ ಒಗ್ಗೂಡಬೇಕು.. ಪ್ರಸ್ತುತ ಸಮಾಜಕ್ಕೆ ಇದರ.. ಅಗತ್ಯತೆ ಏನು? ಕೂಡು ಕುಟುಂಬ, ಅವಿಭಕ್ತ ಕುಟುಂಬ ಎರಡಕ್ಕೂ ಸಮಾನತೆಯ ಅಗತ್ಯವಿದೆ.. ಮಹಿಳೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಬಗ್ಗೆಲ್ಲ ಒತ್ತು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!