08-10-2017, 4:42 PM
ಮಹಾ ಮಾನವತಾವಾದಿ ಮೇರು ಸಂದೇಶ ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುವರ್ಯರು ಸಮಾಜದ ಒಳಿತಿಗಾಗಿ ದುಡಿದವರು. ಸಮಸ್ತ ಮಾನವ ಜನಾಂಗಕ್ಕೆ ಹೊಸ ಹಾದಿ ತೋರಿದ ಅವರ ಸಂದೇಶದ ಅನುಷ್ಠಾನದ ಜತೆಗೆ ಅವರು ತೋರಿದ ಹಾದಿಯಲ್ಲಿ ಸಂಘಟಿತ ಸಮಾಜ ನಿರ್ಮಾಣಕ್ಕೆ ಯತ್ನಿಸಬೇಕು ಎಂದು ಮಂಗಳೂರಿನ ಖ್ಯಾತ ವಕೀಲರು ಹಾಗು ಕಾಂತಾವರದ ಅಲ್ಲಮ ಪ್ರಭು ಪೀಠದ ಅಧ್ಯಕ್ಷರಾದ ಶ್ರೀ ಯಶೋಧರ ಪಿ. ಕರ್ಕೇರರವರು ತಿಳಿಸಿದರು ಅವರು ಯುವವಾಹಿನಿ(ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜಯಂತಿಯ ಪ್ರಯುಕ್ತ ದಿನಾಂಕ […]
Read More
30-09-2017, 3:15 AM
ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]
Read More
10-09-2017, 3:10 AM
ಯವವಾಹಿನಿಯ (ರಿ) ಕಂಕನಾಡಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜನ್ಮದಿನದ ಪ್ರಯುಕ್ತ ದಿನಾಂಕ 10.09.2017ರಂದು ಗೋರಿಗುಡ್ಡೆ ಕಿಟ್ಟೆಲ್ ಮೆಮೋರಿಯಲ್ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ ಪೂಜಾರಿ, ಉದಯಶಂಕರ್ ಮತ್ತು ರೇವತಿ ಟೀಚರ್ ಇವರು ತೀರ್ಪುಗಾರರಾಗಿ ಭಾಗವಹಿಸಿದರು ಹಾಗೂ ಈ ಸ್ಪರ್ಧೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಹಾಗೂ ಯುವವಾಹಿನಿ ಕಂಕನಾಡಿ ಘಟಕದ ಸದಸ್ಯರಿಗೆ ಅಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕಂಕನಾಡಿ […]
Read More
19-08-2017, 9:21 AM
ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಆಯೋಜಿಸಲ್ಪಟ್ಟ 6ತಿಂಗಳ ಉಚಿತ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ದಿನಂಕ 19-08-2017ರಂದು ಉಜ್ಜೋಡಿ ಗೋರಿಗುಡ್ಡೆಯಲ್ಲಿ ನಡೆಯಿತು. ಸಮಾರಂಭದ ಅದ್ಯಕ್ಷತೆಯನ್ನು ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಗೋಪಾಲ.ಎಂ ಪೂಜಾರಿ ವಹಿಸಿದ್ದರು. ಕೆ.ಪಿ.ಟಿಯ Co-ordinator ಆದ ಗೀತಾಜೈನ್ ರವರು ಹಾಗೂ ಹೊಲಿಗೆ ತರಬೇತಿ ನೀಡಿದ ಶಿಕ್ಷಕಿಯಾದ ಶ್ರೀಮತಿ ಕಾಂತಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ತರಬೇತಿ ಪಡೆದ ಮಹಿಳಾ ಸದಸ್ಯರು ಹಾಗೂ ಘಟಕದ ಮಾಜಿ ಅಧ್ಯಕ್ಷರು, ನಿಕಟಪೂರ್ವ ಅಧ್ಯಕರು, ಉಪಾಧ್ಯಕ್ಷರು ಹಾಗೂ ಸದಸ್ಯರು ಭಾಗವಾಹಿಸಿದರು. ಹೊಲಿಗೆ ತರಬೇತಿ ನಡೆನಲು, 6 […]
Read More
10-08-2017, 9:07 AM
ಸಹೋದರ ಸಹೋದರಿಯ ಪವಿತ್ರ ಸಂಬಂಧ ಬೆಸೆಯುವ ರಕ್ಷಾ ಬಂಧನದ ಮಹತ್ವ ಹಾಗೂ ದೇಶದ ರಕ್ಷಣೆಯಲ್ಲಿ ಪ್ರತಿ ಪ್ರಜೆಗಳ ಪಾತ್ರ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಕಾರ್ಯವಹ ರಾಜೇಶ್ ಉಪನ್ಯಾಸ ನೀಡಿದರು.ಅವರು ದಿನಾಂಕ 10.08.2017ರಂದು ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಜರುಗಿದ ರಕ್ಷಾಬಂಧನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಗೋಪಾಲ ಪೂಜಾರಿ ಸಭೆಯ ಅದ್ಯಕ್ಷತೆಯನ್ನು ವಹಿಸಿದ್ದರು.ವೇದಿಕೆಯಲ್ಲಿ ಘಟಕದ ಸಲಹೆಗಾರರಾದ ಪರಮೇಶ್ವರ ಪೂಜಾರಿ, ನಿಕಟಪೂರ್ವ […]
Read More
15-06-2017, 2:25 PM
“ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಟಾಪರ್ಸ್ ಎಲ್ಲಿದ್ದಾರೆ? ಜೀವನದಲ್ಲಿ ಯಶಸ್ವಿಗೊಂಡರೇ.? ಟಾಪರ್ಸ್ ಎನಿಸಿಕೊಂಡಿರುವ ಕರಾವಳಿಯ ವಿದ್ಯಾರ್ಥಿಗಳು ನಮ್ಮ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿಲ್ಲ. ಐಎಎಸ್, ಐಪಿಎಸ್, ಇನ್ನಿತರ ಸಮಾಜದ ಉನ್ನತ ವiಟ್ಟದ ಕ್ಷೇತ್ರಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಯೋಚಿಸುವ ಅಗತ್ಯವಿದೆ” ಎಂದು ನಗರದ ಶ್ರೀ ನಾರಾಯಣಗುರು ಕಾಲೇಜಿನ ಉಪನ್ಯಾಸಕರಾದ ಕೇಶವ ಬಂಗೇರರವರು ಅಭಿಪ್ರಾಯ ವ್ಯಕ್ತ ಪಡೆಸಿದರು. ಅವರು ದಿನಾಂಕ ಮಂಗಳೂರು ಉಜ್ಜೋಡಿಯ ಶ್ರೀ ಮಹಾಂಕಾಳಿ ದೈವಸ್ಥಾನ ವಠಾರದಲ್ಲಿ ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ […]
Read More
20-05-2017, 7:31 AM
ಯವವಾಹಿನಿ (ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೋಂದಿಗೆ 19.05.2017 ,ಮತ್ತು 20.05.2017 ಎರಢು ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಕಂಕನಾಡಿ ಯುವವಾಹಿನಿ ಅಧ್ಯಕ್ಷರಾದ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. […]
Read More
18-04-2017, 2:17 PM
ಯುವವಾಹಿನಿ (ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಮಹಿಳೆಯರಿಗಾಗಿ ವೈವಿಧ್ಯಮಯ ಹಾಗೂ ವಿಶಿಷ್ಟ ವಿನ್ಯಾಸದ ಕೇಶ ವಿನ್ಯಾಸ ಕಾರ್ಯಾಗಾರ ದಿನಾಂಕ 18.04.2017 ರಂದು ಜರುಗಿತು. ಯುವವಾಹಿನಿ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷೆ ಹಾಗೂ ಬ್ಯುಟಿಷೀಯನ್ ಶ್ರೀಮತಿ ವಿದ್ಯಾ ರಾಕೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಹಾಗೂ ಈ ಸಂದರ್ಭದಲ್ಲಿ ಸರಳ ವಿಧಾನಗಳ ಮೂಲಕ ಮಹಿಳೆಯರ ಸೌಂದರ್ಯ ಹೆಚ್ಚಿಸುವ ಮೇಕಪ್ ವಿಧಾನದ ಬಗ್ಗೆ ಮಾಹಿತಿ ನೀಡಿದರು. ಮಂಗಳೂರಿನ ಗೋರಿಗುಡ್ಡದಲ್ಲಿ ಜರುಗಿದ ಈ ಕಾರ್ಯಾಗಾರದಲ್ಲಿ 50 ಕ್ಕೂ ಹೆಚ್ಚು ಮಹಿಳೆಯರು […]
Read More
26-03-2017, 10:35 AM
ಯುವವಾಹಿನಿ(ರಿ) ಕಂಕನಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 26.03.2017 ನೇ ಆದಿತ್ಯವಾರ ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿತು. ಗೋಪಾಲ ಪೂಜಾರಿ ನೇತೃತ್ವದ 21 ಸದಸ್ಯರ ತಂಡವು ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. 2017-18 ನೇ ಸಾಲಿನ ಕಾರ್ಯಕಾರಿ ಸಮಿತಿ : ಅಧ್ಯಕ್ಷರು : ಗೋಪಾಲ ಪೂಜಾರಿ ಉಪಾಧ್ಯಕ್ಷರು : ಭವಿತ್ ರಾಜ್ ಕಾರ್ಯದರ್ಶಿ : ಮೋಹನ್ ಜಿ.ಅಮೀನ್ ಜತೆ ಕಾರ್ಯದರ್ಶಿ : ಶ್ರೀಮತಿ ನಯನಾ ಕೋಶಾಧಿಕಾರಿ […]
Read More
26-03-2017, 10:24 AM
ಆಧುನಿಕ ಸಮಾಜದಲ್ಲಿ ಬದಲಾಗುತ್ತಿರುವ ಜೀವನ ಕ್ರಮದಲ್ಲಿ ಯುವವಾಹಿನಿ ಸಮಾಜಕ್ಕೆ ಅನಿವಾರ್ಯವಾಗಿದೆ. ಕಳೆದ 30 ವರ್ಷಗಳಿಂದ ಯುವವಾಹಿನಿ ಬಿಲ್ಲವ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದೆ ಎಂದು ಬೆಂಗಳೂರಿನ ಖ್ಯಾತ ವಕೀಲರಾದ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ(ರಿ) ಕಂಕನಾಡಿ ಘಟಕ 2017-18 ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವ್ಯಕ್ತಿತ್ವ ವಿಕಸನ, ಸಾಮಾಜಿಕ ಸ್ಥಾನಮಾನ, ನಾಯಕತ್ವದ ಬೆಳವಣಿಗೆ ಹಾಗೂ ಸಹಸ್ರಾರು ಜನರ ವ್ಯಕ್ತಿತ್ವವನ್ನು ರೂಪಿಸುವಂತಹ ಕಾರ್ಯವನ್ನು ಯುವವಾಹಿನಿ […]
Read More