Yuvavahini

ಕೂಳೂರು

ಆಧ್ಯಾತ್ಮಿಕ ಕ್ಷೇತ್ರದರ್ಶನ ಯಾತ್ರೆ

ಕೂಳೂರು, ಜುಲೈ 5: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸದಸ್ಯರು ಹಾಗೂ ಅವರ ಕುಟುಂಬದವರಿಗಾಗಿ ಜುಲೈ 5ರಂದು ಉಡುಪಿ ಜಿಲ್ಲೆಯ ವಿವಿಧ ಪ್ರಸಿದ್ಧ ದೇವಾಲಯಗಳಿಗೆ ಆಧ್ಯಾತ್ಮಿಕ ಕ್ಷೇತ್ರದರ್ಶನ ಯಾತ್ರೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಬೆಳಿಗ್ಗೆ ಕೂಳೂರಿನಿಂದ ನಾಲ್ಕು ಬಸ್‌ಗಳಲ್ಲಿ ಸುಮಾರು 200ಕ್ಕೂ ಅಧಿಕ ಸದಸ್ಯರು ವಿವಿಧ ತಂಡಗಳಾಗಿ ಹೊರಟು ವೇಣುಗೋಪಾಲ ದೇವಸ್ಥಾನ (ಮಣಿಪಾಲ), ಗುಡ್ಡಟ್ಟು ಶ್ರೀ ವಿನಾಯಕ ದೇವಸ್ಥಾನ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ವೀರಕಲ್ಲುಟಿಗ ದೇವಸ್ಥಾನ, ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಬ್ರಾಹ್ಮಿ […]

Read More

“ವಿದ್ಯೆ, ಉದ್ಯೋಗ, ಸಂಪರ್ಕ – ಕಲಿಯೋಣ, ಬೆಳೆಯೋಣ, ಸಮಾಜದ ಸೇವೆಗೆ ಕೈಜೋಡಿಸೋಣ!”

ಪರಪಾದೆ, ಜೂನ್ 30: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಪರಪಾದೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 135 ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊಡೆಗಳನ್ನು ವಿತರಿಸುವ ಸಮಾಜಮುಖಿ ಸೇವಾ ಕಾರ್ಯಕ್ರಮ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆ ಗೀತಾ ವಸಂತ್ ವಹಿಸಿದ್ದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ವಂದೀಪ್, ಕಾರ್ಯಕ್ರಮದ ಸಂಚಾಲಕಿ ಹಾಗೂ ವಿದ್ಯಾರ್ಥಿ ಸಂಘಟನೆ ನಿರ್ದೇಶಕಿ ವೀಣಾ ಭಾಸ್ಕರ್, ಮಾರ್ಗದರ್ಶಕರಾದ ಜಯಾನಂದ ಅಮೀನ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ರೇಖಾ […]

Read More

66ನೇ ಮನೆ-ಮನೆ ಭಜನೆ

ಕೂಳೂರು ಜೂನ್ 23: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 66ನೇ ಮನೆ-ಮನೆ ಭಜನೆ ಕಾರ್ಯಕ್ರಮವು ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಅವರ “ಅನುಗೃಹ” ನಿವಾಸದಲ್ಲಿ ಮಂಗಳವಾರ ಭಕ್ತಿಭಾವದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಭಾಸ್ಕರ್ ಕೋಟ್ಯಾನ್ ಅವರ ಮಾತೃಶ್ರೀಯವರನ್ನು ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ ಅವರು ಶಾಲು ಹೊದಿಸಿ, ಫಲಪುಷ್ಪ ಹಾಗೂ ಸ್ಮರಣಿಕೆ […]

Read More

ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕೂಳೂರು, ಜೂನ್ 21 : ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಬೆಳಿಗ್ಗೆ 6 ಗಂಟೆಗೆ ಕೂಳೂರಿನ ಫಲ್ಗುಣಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ನಾರಾಯಣಗುರು ದೇವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ಪತಂಜಲಿ ಯೋಗ ಪ್ರತಿಷ್ಠಾನದ ಖ್ಯಾತ ಯೋಗ ಶಿಕ್ಷಕರಾದ ವಿಶು ಕುಮಾರ್ ಹಾಗೂ ರೇಖಾ ಸಂದೀಪ್ ಅವರು ಘಟಕದ ಸದಸ್ಯರಿಗೆ ಯೋಗಾಸನ ಮತ್ತು ಪ್ರಾಣಾಯಾಮದ ತರಬೇತಿಯನ್ನು ನೀಡಿದರು. ಯೋಗಾಭ್ಯಾಸದ ಮಹತ್ವ, ದೈಹಿಕ ಮತ್ತು […]

Read More

ದಕ್ಷಿಣ ಕಾಶಿ ಪುಣ್ಯಕ್ಷೇತ್ರ ತೀರ್ಥಯಾತ್ರೆ

ಕೂಳೂರು : ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಮಹಾದೇವ ದೇವಸ್ಥಾನವು ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ತನ್ನ ಆಧ್ಯಾತ್ಮಿಕ ಮಹತ್ವದಿಂದ ಭಕ್ತರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿದೆ. ಈ ಪುಣ್ಯಕ್ಷೇತ್ರಕ್ಕೆ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ವಿಶೇಷ ತೀರ್ಥಯಾತ್ರೆಯನ್ನು ಆಯೋಜಿಸಲಾಯಿತು. ಜೂನ್ 6, 2026ರಂದು ರಾತ್ರಿ 10.00 ಗಂಟೆಗೆ ಕೂಳೂರಿನಿಂದ ಬಸ್ಸಿನ ಮೂಲಕ ಯಾತ್ರೆ ಆರಂಭಗೊಂಡಿತು. ಈ ಯಾತ್ರೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 40 ಮಂದಿ […]

Read More

ಸಂಕಷ್ಟದಲ್ಲಿದ್ದ ಯುವಕನಿಗೆ ಆರ್ಥಿಕ ನೆರವು

ಕೂಳೂರು : ಸಮಾಜಮುಖಿ ಮತ್ತು ಜನಪರ ಕಾರ್ಯಕ್ರಮಗಳ ಮೂಲಕ ಸದಾ ಮುಂಚೂಣಿಯಲ್ಲಿರುವ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಮತ್ತೊಂದು ಶ್ಲಾಘನೀಯ ಸೇವಾ ಕಾರ್ಯ ನಡೆದಿದೆ. ಘಟಕದ 26ನೇ ಸೇವಾನಿಧಿ ಯೋಜನೆಯಾದ ಸಹಾಯಹಸ್ತ ಕಾರ್ಯಕ್ರಮದಡಿ, ಇತ್ತೀಚೆಗೆ ಸಂಭವಿಸಿದ ಭೀಕರ ವಾಹನ ಅಪಘಾತದಿಂದ ತೀವ್ರ ತೊಂದರೆಗೆ ಒಳಗಾಗಿದ್ದ ಕಾರ್ಕಳದ ಈದು ನಿವಾಸಿ ದಯಾನಂದ ಪೂಜಾರಿ (26) ಅವರ ಕುಟುಂಬಕ್ಕೆ ತುರ್ತು ಚಿಕಿತ್ಸಾ ವೆಚ್ಚಕ್ಕಾಗಿ ರೂ.16,000/-ಧನಸಹಾಯವನ್ನು ನೀಡಲಾಯಿತು.ದಿನಾಂಕ 27-05-2026ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ, ಘಟಕದ ಅಧ್ಯಕ್ಷೆ ಗೀತಾ ವಸಂತ್ […]

Read More

ಯುವವಾಹಿನಿ ಕೂಳೂರು ಘಟಕದ 66ನೇ ಮನೆ-ಮನೆ ಭಜನೆ ಕಾರ್ಯಕ್ರಮ

ಕೂಳೂರು, ಮೇ 15: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾದ 66ನೇ ಮನೆ-ಮನೆ ಭಜನೆ ಕಾರ್ಯಕ್ರಮವು 15-05-2026 ರಂದು ಘಟಕದ ಮಾರ್ಗದರ್ಶಕರಾದ ಜಯಾನಂದ ಅಮೀನ್ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನೆರವೇರಿತು.ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಭಕ್ತಿಗೀತೆಗಳ ಮೂಲಕ ಆಧ್ಯಾತ್ಮಿಕ ವಾತಾವರಣ ನಿರ್ಮಿಸಿದರು. ಈ ಸಂದರ್ಭದಲ್ಲಿ ಆತಿಥ್ಯ ವಹಿಸಿದ್ದ ಜಯಾನಂದ ಅಮೀನ್ ದಂಪತಿಗಳನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ ಅವರು ಶಾಲು ಹೊದಿಸಿ, […]

Read More

ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು.

Read More

ಡೆನ್ನಾನ ಡೆನ್ನಾನ, ಡೆನ್ನಾನ ಡೆನ್ನಾನ : ಗೀತಾ ವಸಂತ್

ಬಂಟ್ವಾಳ ; ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಕವನ ಸ್ಪರ್ಧೆಯಲ್ಲಿ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ ಡೆನ್ನಾನ ಡೆನ್ನಾನ ಕವನ ದ್ವಿತೀಯ ಬಹುಮಾನ ಪಡೆಯಿತು ಡೆನ್ನಾನ ಡೆನ್ನಾನ, ಡೆನ್ನಾನ ಡೆನ್ನಾನ ಡೆನ್ನಾನ ಡೆನ್ನಾನ, ಡೆನ್ನಾನರಿ ಡೆನ್ನಾನ ಡೆನ್ನಾನ ಡೆನ್ನಾನಡೋಲು ನಗಾರಿ ತೂಯನ ಸೇರ್ದ್ ಒಟ್ಟುಗು ಬೊಟ್ಟುಗನಾ ಬಪ್ಪನಾಡ್‌ದ ಡೋಲು ಸಬ್ದ ಡೆನ್ನಾನ – ಡೆನ್ನಾನಗುಡ್ಡೆ ಬೈಲ್‌ಡ್ ಇರೆ ಕೊಡಿ ಮರ್ದ್‌ಡ್ಸೀಕ್ ಸಂಕಡ ಇಜ್ಜಾಂಡತ್ತ ಡೆನ್ನಾನ|| ಕೊಡಿ ಮರ್ದ್ ಪೋದು, […]

Read More

ಯುವವಾಹಿನಿ (ರಿ.) ಕೂಳೂರು ಘಟಕದಿಂದ 64ನೇ ‘ಮನೆ ಮನೆ ಭಜನೆ’ ಕಾರ್ಯಕ್ರಮ

ಮಂಗಳೂರು: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ ನಿರಂತರ ‘ಮನೆ ಮನೆ ಭಜನೆ’ ಸರಣಿಯ 64ನೇ ಕಾರ್ಯಕ್ರಮವು ಇತ್ತೀಚೆಗೆ ಘಟಕದ ಪ್ರಥಮ ಉಪಾಧ್ಯಕ್ಷರಾದ ಮುಖೇಶ್ ಕುಮಾರ್ ಅವರ ನಿವಾಸದಲ್ಲಿ ಅತ್ಯಂತ ಭಕ್ತಿ-ಶ್ರದ್ಧೆಗಳಿಂದ ನೆರವೇರಿತು. ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮತ್ತು ಮಹೇಶ್ ದಂಪತಿಗಳನ್ನು ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!