Yuvavahini

ಕೂಳೂರು

ಹಳ್ಳಿಡೊಂಜಿ ದಿನ

ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 08.09.19 ರಂದು ಹಳ್ಳಿಡೊಂಜಿ ದಿನ ಕಾರ್ಯಕ್ರಮವು ಘಟಕದ ಸದಸ್ಯರಾದ *ಪ್ರಸಾದ್ ಈದು ಬಟ್ಟೇಣಿ ಇವರ ಊರು ಈದು ಬಟ್ಟೇಣಿ, ಕಾರ್ಕಳ* ಇಲ್ಲಿ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಘಟಕದ 50 ಸದಸ್ಯರು ಕೂಳೂರಿನಿಂದ ಹೊರಟು 10.30 ಕ್ಕೆ ಶಿರ್ತಾಡಿ ತಲುಪಿ ಘಟಕದ ಸದಸ್ಯರಾದ *ಜಯ ಬಂಗೇರ* ಅವರ ಮನೆಯಲ್ಲಿ ಉಪಹಾರ ಮುಗಿಸಿ ನಂತರ ಅಲ್ಲಿಂದ ಹೊಸ್ಮಾರು ಆಶ್ರಮಕ್ಕೆ ಭೇಟಿ ನೀಡಿ, *ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ದರ್ಶನ […]

Read More

ಸೇವಾ ನಿಧಿ ಯೋಜನೆಯ 2ನೇ ಸಹಾಯ ಹಸ್ತ

ಯುವವಾಹಿನಿ ಕೂಳೂರು ಘಟಕದ ಸೇವಾ ನಿಧಿ ಯೋಜನೆಯ 2ನೇ ಸಹಾಯ ಹಸ್ತ ಅಶೋಕ್ ಪೂಜಾರಿ ಗಂಜಿಮಠ ಇವರು ಕೆಲಸ ಮಾಡುವ ಸಂದರ್ಭದಲ್ಲಿ ದೊಡ್ಡ ರೀಲ್ ಇರ ಕಾಲಿನ ಮೇಲೆ ಬಿದ್ದು ತೀವ್ರ ಗಾಯಗೊಂಡು ಕೊನೆಗೆ ಅವರ ಒಂದು ಕಾಲನ್ನೇ ಕತ್ತರಿಸಿ ತೆಗೆಯಲಾಗಿದೆ. ಇವರ ಕುಟುಂಬಕ್ಕೆ ಇವರೇ ಆಧಾರಸ್ತಂಭ ಆಗಿದ್ದರು. ಈಗ ಇವರಿಗೆ ಹೀಗಾಗಿದ್ದು ಇವರ ಕುಟುಂಬಕ್ಕೆ ದಿಕ್ಕೇ ತೋಚದಾಗಿದೆ. ಇವರ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ರೂ. 10,000 ದ ಚೆಕ್ ನ್ನು ದಿನಾಂಕ 04.09.19 ರ ಸಂಜೆ […]

Read More

ಮಂಜನಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ನೆರವು

ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ಅಂಗನವಾಡಿ ಕೇಂದ್ರ ಮಂಜನಗುಡ್ಡೆ ಇಲ್ಲಿನ ಕಾರ್ಯಕರ್ತೆಯ ಮನವಿಯ ಮೇರೆಗೆ ಅಂಗನವಾಡಿಯ ಅಡುಗೆ ಕೋಣೆ ರಿಪೇರಿ ಕೆಲಸ ಮಾಡಿಕೊಡಲಾಯಿತು. ಇದರ ಹಸ್ತಾಂತರವನ್ನು ದಿನಾಂಕ 30.08.2019 ರಂದು ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಮಾಡಲಾಯಿತು. ಈ ಸಂಧರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮಾತನಾಡಿ ಅತಿ ಶೀಘ್ರದಲ್ಲಿ ನಮ್ಮ ಮನವಿಗೆ ಸ್ಪಂದಿಸಿ ಕೆಲಸ ಮಾಡಿಕೊಟ್ಟ ಯುವವಾಹಿನಿ(ರಿ.) ಕೂಳೂರು ಘಟಕಕ್ಕೆ ತಮ್ಮ ಧನ್ಯವಾದ ಸಲ್ಲಿಸಿದರು. ಈ ಸಂಧರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್, ಗೌರವ ಸಲಹೆಗಾರರಾದ ನೇಮಿರಾಜ್, ಉಪಾಧ್ಯಕ್ಷರಾದ […]

Read More

ಯುವವಾಹಿನಿಯಂತಹ ಸಂಘಟನೆಯಿಂದಾಗಿ, ದೇಶಕ್ಕಾಗಿ ಪ್ರಾಣ ಕೊಟ್ಟ ಯೋಧರು ಅಮರರಾಗುತ್ತಾರೆ.-ಲೆಫ್ಟಿನೆಂಟ್ ಕರ್ನಲ್ ಗ್ರೇಶಿಯಸ್ ಸೀಕ್ವೇರಾ

ಕೂಳೂರು : ಯುವವಾಹಿನಿಯಂತಹ ಸಂಘಟನೆ ಇರುವುದರಿಂದ ದೇಶಕ್ಕಾಗಿ ಪ್ರಾಣ ಕೊಟ್ಟ ಯೋಧರು ಅಮರರಾಗುತ್ತಾರೆ. ನಾನು ಸತ್ತರೆ ಸೈನಿಕನಾಗಿಯೇ ಸಾಯುತ್ತೇನೆ ಎಂದು ಲೆಫ್ಟಿನೆಂಟ್ ಕರ್ನಲ್ ಗ್ರೇಶಿಯಸ್ ಸಿಕ್ವೇರ ಹೇಳಿದರು. ಅವರು ದಿನಾಂಕ 31.07.19 ರಂದು ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ನಡೆದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು. ಇನ್ನೋರ್ವ ಅತಿಥಿ ಸುಬೇದಾರ್ ಜೋಧಾ ಸಿಂಗ್ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ […]

Read More

ಆಟಿ ಆಚರಣೆ ಮೂಢನಂಬಿಕೆಯಲ್ಲ ಅದು ತುಳುವರ ಮೂಲನಂಬಿಕೆ-ವಿದ್ವಾನ್ ರಾಜೇಶ್ವರಿ

ಕೂಳೂರು : ನಮ್ಮ ಪೂರ್ವಜರು ಆಟಿ ತಿಂಗಳಲ್ಲಿ ಬರುವ ರೋಗ ರುಜಿನಗಳನ್ನು ತಡೆಗಟ್ಟಲು ಹಲವಾರು ಆಚರಣೆಗಳನ್ನು ಕಾರ್ಯ ರೂಪಕ್ಕೆ ತಂದು ಅದನ್ನು ಆಚರಿಸುತ್ತಿದ್ದರು. ನಿಜವಾಗಿಯೂ ಆಟಿ ಆಚರಣೆಯು ಮೂಢನಂಬಿಕೆಯಲ್ಲ ಅದು ತುಳುವರ ಮೂಲನಂಬಿಕೆ ಎಂದು ಬೆಸೆಂಟ್ ಕಾಲೇಜಿನ ಉಪನ್ಯಾಸಕಿ ರಾಜೇಶ್ವರಿ ತಿಳಿಸಿದರು. ಅವರು ದಿನಾಂಕ 21.07.19 ರಂದು ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ನಡೆದ ಆಟಿದ ಪೊರ್ಲು-2019 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿಯ ಮುಖ್ಯ ಧ್ಯೇಯ ಸಂಪರ್ಕದ ನೆಲೆಯಲ್ಲಿ ಕಾರ್ಯಕ್ರಮವು ಘಟಕದ ಸದಸ್ಯರಾದ […]

Read More

ಐ. ಎ. ಎಸ್, ಕೆ. ಎ. ಎಸ್ ಪ್ರೇರಣಾ ಶಿಬಿರ

ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 13.07.19 ರಂದು ಐ. ಎ. ಎಸ್, ಕೆ. ಎ. ಎಸ್ ಪ್ರೇರಣಾ ಶಿಬಿರ ಕಾರ್ಯಕ್ರಮವು ಸರ್ಕಾರಿ ಪದವಿ ಪೂರ್ವ ಕಾಲೇಜು, ಕಾವೂರು ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಡೆಸಿಕೊಡಲು ಸರ್ವಜ್ಞ ಐ. ಎ. ಎಸ್ ಅಕಾಡೆಮಿಯ ತರಬೇತುದಾರರಾದ ಸುರೇಶ್.ಎಮ್.ಎಸ್ ರವರು ಆಗಮಿಸಿದ್ದರು. ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಪ್ರಾರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ತಾರಾ. ಯು. ರಾವ್ ರವರು ಮಾತನಾಡಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಆಶಿಸಿದರು. […]

Read More

ಯುವವಾಹಿನಿ ಕೂಳೂರು ಘಟಕದ ವತಿಯಿಂದ ಗಿಡ ಬೆಳೆಸಿ ಮರ ಉಳಿಸೋಣ-ವನಮಹೋತ್ಸವ ನಾಡಿನ ಜೀವೋತ್ಸವ

ಕೂಳೂರು : ಮಾನವನ ದೇಹದಲ್ಲಿ ಸಮತೋಲನ ಎಷ್ಟು ಮುಖ್ಯವೋ ಅದೇ ರೀತಿ ಭೂಮಿಯ ಸಮತೋಲನವೂ ತುಂಬಾ ಮುಖ್ಯ ಎಂದು ಮಂಗಳೂರು ಸರ್ಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಪ್ರೊಫೆಸರ್ ರಾಧಾಕೃಷ್ಣ ತಿಳಿಸಿದರು ಇವರು ದಿನಾಂಕ 07.07.19 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ ಗಿಡ ಬೆಳೆಸಿ ಮರ ಉಳಿಸೋಣ-ವನಮಹೋತ್ಸವ ನಾಡಿನ ಜೀವೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ರವರು ವಹಿಸಿದ್ದರು. ಕಾರ್ಯಕ್ರಮವನ್ನು ಅತಿಥಿಗಳು ಸೇರಿ ಗಿಡಗಳಿಗೆ […]

Read More

ಅತ್ಯುತ್ತಮ ಆರಂಭ, ಅಂತ್ಯ, ನಡುವೆ ಹೂರಣ ಅದೇ ಪರಿಣಾಮಕಾರಿ ಭಾಷಣ : ಸುಧಾಕರ್ ಕಾರ್ಕಳ

ಕೂಳೂರು : ಒಳ್ಳೆಯ ಆರಂಭ, ಒಳ್ಳೆಯ ಅಂತ್ಯ, ನಡುವೆ ಹೂರಣ ಅದೇ ಭಾಷಣ. ಎಂದು ಅಂತರರಾಷ್ಟ್ರೀಯ ಮಟ್ಟದ ಜೆಸಿಎ ತರಬೇತುದಾರರಾದ ಸುಧಾಕರ್ ಕಾರ್ಕಳ ತಿಳಿಸಿದರು. ಅವರು ದಿನಾಂಕ 23.06.19 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ ನಡೆದ ಯುವಚೈತನ್ಯ- 2019-20 ಈ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು ಬಿಲ್ಲವ ಸಮುದಾಯದ ಉದ್ಧಾರಕ್ಕಾಗಿ ತಾನು ಇಂತಹ ತರಬೇತಿ ಕಾರ್ಯಕ್ರಮ ನಡೆಸಿಕೊಂಡು ಬಂದಿರುವುದಾಗಿಯೂ, ಮುಂದಿನ ದಿನಗಳಲ್ಲಿ ನಮ್ಮ ಸಮುದಾಯದವರೂ ಉತ್ತಮ ತರಬೇತುದಾರರಾಗಬೇಕು ಎಂದು ಆಶಿಸಿದರು. ಇವರ ಜೊತೆ ಇನ್ನೋರ್ವ ಜೆಸಿಎ ತರಬೇತುದಾರರಾದ […]

Read More

ವಿದ್ಯಾರ್ಥಿಗಳಿಗೆ ರೂ 60,000/- ಮೊತ್ತದ ಪುಸ್ತಕ ವಿತರಣೆ

ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ಕಿಟ್ಟೆಲ್ ಪ್ರೌಢಶಾಲೆ ಗೋರಿಗುಡ್ಡೆ ಇಲ್ಲಿಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ದಿನಾಂಕ 13.06.19 ರಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಶಾಲೆಯಲ್ಲಿ ನಡೆಯಿತು. ಶಾಲಾ ಪ್ರಾಂಶುಪಾಲರು ವಿಠ್ಠಲ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ ಯುವವಾಹಿನಿ ಎಂಬುದು ಅತ್ಯುತ್ತಮ ಸಂಘಟನೆಯಾಗಿದ್ದು, ಅತ್ಯುತ್ತಮ ಸಮಾಜಮುಖಿ ಕಾರ್ಯಗಳ ಮೂಲಕ ಯುವಜನತೆಯಲ್ಲಿ ಸ್ಪೂರ್ತಿ ನೀಡಿದೆ. ಹಾಗೂ ಶಾಲಾ ಮಕ್ಕಳಿಗೆ ಮಾದರಿಯಾಗಿದೆ ಎಂದರು.ಮುಂದಿನ ದಿನಗಳಲ್ಲಿ ಯುವವಾಹಿನಿ ಕೂಳೂರು ಘಟಕವು ಸಾಧನೆಯ […]

Read More

ರುದ್ರಭೂಮಿಯಲ್ಲಿ ಸ್ವಚ್ಛತಾ ಅಭಿಯಾನ

ಕೂಳೂರು ; ಯುವವಾಹಿನಿ ಕೂಳೂರು ಘಟಕದ ವತಿಯಿಂದ 11ನೇ ಸ್ವಚ್ಛತಾ ಅಭಿಯಾನ ದಿನಾಂಕ 09.06.2019 ರಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಕೂಳೂರು ರುದ್ರಭೂಮಿಯಲ್ಲಿ ನಡೆಯಿತು. ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 20 ಸದಸ್ಯರನ್ನು ಒಳಗೊಂಡ ತಂಡವು ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯ ತನಕ ಸ್ವಚ್ಛತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಈ ಅಭಿಯಾನದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಅಮೀನ್, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!