Yuvavahini

ಕೂಳೂರು

ಮುಗ್ಧ ಮನಸ್ಸಿನ ಸಮ್ಮಿಲನ – 2017

ಕೂಳೂರು : ಯುವವಾಹಿನಿ( ರಿ) ಕೂಳೂರು ಘಟಕದ ‘ಮಕ್ಕಳ ದಿನಾಚರಣೆ’ ೨೦೧೭ ಮುಗ್ಧ ಮನಸ್ಸಿನ ಸಮ್ಮಿಲನ ಕಾರ್ಯಕ್ರಮ ದಿನಾಂಕ 14.11.2017 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಮಂದಿರ ಕೂಳೂರು ಇಲ್ಲಿ ಏರ್ಪಡಿಸಲಾಯಿತು. ಮೊದಲಿಗೆ ,ಬಾಲ ಪ್ರತಿಭೆ ಕುಮಾರಿ ಶ್ರೀಕ ಆರ್ ಸಾಲಿಯಾನ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ನಂತರ ೩ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಛದ್ಮವೇಷ ಸ್ವರ್ಧೆ,ಅಭಿನಯ ಗೀತೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು ಛಧ್ಮವೇಷ ಹಾಗೂ ಅಭಿನಯ ಗೀತೆ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಯುವವಾಹಿನಿ […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ಬಡ ಕುಟುಂಬಗಳಿಗೆ ಸಹಾಯಹಸ್ತ

ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದಿನಾಂಕ‌15.10.2017 ರಂದು ಮೂರು ಬಡ ಕುಟುಂಬಗಳಿಗೆ ಒಂದು ತಿಂಗಳಿಗೆ ಬೇಕಾಗುವಷ್ಟು ದಿನಸಿ ಸಾಮಗ್ರಿಗಳನ್ನು ನೀಡಲಾಯಿತು ಈ ಸಂದರ್ಭದಲ್ಲಿ  ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ತುಕರಾಮ್ ಎನ್ ,ಕುಳೂರು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಅಧ್ಯಕ್ಷರಾದ ಜಯನಂದ ಅಮೀನ್ ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಪುಷ್ಪ ರಾಜ್, ಸಂಚಾಲಕರಾದ ಪವಿತ್ರ ಕೆ ಹಾಗೂ ಯುವವಾಹಿನಿ ಕೂಳೂರು ಘಟಕದ ಸದಸ್ಯರು ಉಪಸ್ಥಿತರಿದ್ದರು.

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ವಿಶೇಷ ಚೇತನ ಮಕ್ಕಳ ಜೊತೆ ಗುರುಜಯಂತಿ

ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮದಿನಾಚರಣೆ ಪ್ರಯುಕ್ತ ಸಾನಿದ್ಯ ವಿಶೇಷ ಚೇತನ ಮಕ್ಜಳ ಜೊತೆ ಗುರುವರ್ಯರ ಜನ್ಮದಿನಾಚರಣೆ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.ಸಾನಿದ್ಯದಲ್ಲಿರುವ 160 ಮಕ್ಕಳ ಯೋಗಕ್ಷೇಮ ವಿಚಾರಿಸಿದ ಕೂಳೂರು ಯುವವಾಹಿನಿ ಸದಸ್ಯರು ಅವರೊಂದಿಗೆ ಮಕ್ಜಳಂತೆ ಬೆರೆತರು.ಮಕ್ಕಳಿಗೆ ಸಿಹಿತಿಂಡಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಲಾಯಿತು.ಈ ಸಂದರ್ಭದಲ್ಲಿ ಕುಳೂರು ಯುವವಾಹಿನಿ ಅಧ್ಯಕ್ಷರಾದ ಪುಷ್ಪರಾಜ್, ಕಾರ್ಯದರ್ಶಿ ವಿನೀತ್, ನಿಕಟ ಪೂರ್ವ ಅಧ್ಯಕ್ಷರಾದ ಸುಜಿತ್ ರಾಜ್, ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು

Read More

ಕೌಟುಂಬಿಕ ಸಾಮರಸ್ಯ, ಸತತ ಪ್ರಯತ್ನ ,ಇಚ್ಛಾಶಕ್ತಿ, ಇವೇ ಯುವವಾಹಿನಿ ಸಾಧನೆಯ ಹಿಂದಿರುವ ಶಕ್ತಿ :- ಸಂಕಮಾರ್

ಕೌಟುಂಬಿಕ ಸಾಮರಸ್ಯ,ಇಚ್ಛಾಶಕ್ತಿ, ಆತ್ಮ ಶಕ್ತಿ, ಸತತ ಪ್ರಯತ್ನ, ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಕೇವಲ 9 ತಿಂಗಳಲ್ಲಿ ಮೌಲ್ಯಯುತ 24 ಕಾರ್ಯಕ್ರಮಗಳನ್ನು ನೀಡಿದ ಕೂಳೂರು ಯುವವಾಹಿನಿ ಘಟಕವು ಯುವ ಜನಾಂಗಕ್ಕೆ ಮಾದರಿಯಾಗಿದೆ, ಕ್ರಿಯಾಶೀಲ ಯೋಜನೆ ಯೋಚನೆಗಳಿಂದ ಕೂಡಿದ ಅಂತರಾಷ್ಟ್ರೀಯ ಸಂಸ್ಥೆ ಗೆ ಸರಿಸಮನಾಗಿರುವ ಪದಗ್ರಹಣ ಸಮಾರಂಭವು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕರಾದ ಡಾ.ಗಣೇಶ್ ಅಮೀನ್ ಸಂಕಮಾರ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 25.06.2017ನೇ ಆದಿತ್ಯವಾರ ಕೂಳೂರು ಚರ್ಚ್ ಹಾಲ್ […]

Read More

ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾಗಿ ಪುಷ್ಪರಾಜ್

  ನಾನು ನನ್ನದು,ನನ್ನಿಂದ ಎನ್ನುವ ಮಾತಿನಿಂದ ಸ್ವಲ್ಪ ಹೊರಗೆ ಬಂದು ನಾವು ನಮ್ಮದು, ನಮ್ಮೆಲ್ಲರ ಎನ್ನುವ ವಿಶಾಲ ಮನೋಭಾವ ಬೆಳೆಸಿಕೊಂಡರೆ ಆತ್ಮವಿಶ್ವಾಸ ಒಂದನ್ನುಳಿದು ಮಿಕ್ಕೆಲ್ಲವನ್ನೂ ಕಳೆದುಕೊಂಡರೂ ಚಿಂತೆ ಇಲ್ಲ ಎನ್ನುವ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಮುಂದಿಟ್ಟುಕೊಂಡು ಮುನ್ನಡೆದರೆ ನಾವು ಖಂಡಿತಾ ಯಶಸ್ವಿಯಾಗುತ್ತೇವೆ.ಗುರುಗಳ ತತ್ವದಡಿಯಲ್ಲಿ ಹಿರಿಯ ಸದಸ್ಯರ ಮಾರ್ಗದರ್ಶನ ಪಡೆದು ಯುವವಾಹಿನಿ ಕೂಳೂರು ಘಟಕದಿಂದ ಇನ್ನೂ ಉತ್ತಮ ಕಾರ್ಯಕ್ರಮ ನಡೆಸುವಲ್ಲಿ ಶ್ರಮವಹಿಸುತ್ತೇನೆ ಎಂದು ಯುವವಾಹಿನಿ (ರಿ) ಕೂಳೂರು ಘಟಕದ. 2017-18 ನೇ ಸಾಲಿನ ನೂತನ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ […]

Read More

100ಮೀ ಓಟದಲ್ಲಿ ಚಿನ್ನ ಗೆದ್ದ ಕೊಲ್ಯ ಯುವವಾಹಿನಿಯ ಸ್ವಸ್ತಿಕ್ ಪೂಜಾರಿ

ಯುವವಾಹಿನಿ (ರಿ)  ಕೊಲ್ಯಘಟಕದ ಸದಸ್ಯ ಸ್ವಸ್ತಿಕ್ ಅವರು ದಿನಾಂಕ 19.05.2017 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ  ಜರುಗಿದ ಅತ್ಲೆಟಿಕ್ ಸ್ಪರ್ಧೆಯಲ್ಲಿ 100 ಮೀ ಓಟವನ್ನು 10.83 ಸೆಕೆಂಡುಗಳಲ್ಲಿ ಕ್ರಮಿಸಿ ಚಿನ್ನದ ಪದಕ ತನ್ನ ಮುಡಿಗೇರಿಸಿಕೊಂಡಿದ್ದಾರೆ ಸ್ವಸ್ತಿಕ್ ಅವರು ಚಿನ್ನದ ಪದಕ ಗಳಿಸುವುದರ ಮೂಲಕ ಉತ್ತರಪ್ರದೇಶದ ಲಕ್ನೊದಲ್ಲಿ 2017 ಜೂನ್ 11 ರಿಂದ 15 ರವರಗೆ ಜರುಗುವ ಫೆಡರೇಶನ್ ಕಪ್ ನಾಷನಲ್ ಜೂನಿಯರ್ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.ಕೊಲ್ಯ ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಸಂದೀಪ್ ರಾಜ್ […]

Read More

ಕೂಳೂರು ಯುವವಾಹಿನಿ : ಅಭಿವ್ಯಕ್ತಿ ಅಭಿಪ್ರಾಯಗಳ ನಿರೂಪಣೆ

ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಅಭಿವ್ಯಕ್ತಿ – ಅಭಿಪ್ರಾಯಗಳ ನಿರೂಪಣೆ ಕಾರ್ಯಕ್ರಮವು ದಿನಾಂಕ 12.03.2017 ನೇ ಆದಿತ್ಯವಾರ ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದಲ್ಲಿ ಜರುಗಿತು. ಅಭಿಪ್ರಾಯಗಳ ನಿರೂಪಣೆ ಮಾಡಿದ ಸಹನಾ ಕುಂದರ್ – ಈ ಜಗತ್ತು ಗಂಡು ಹೆಣ್ಣು ಇಬ್ಬರನ್ನೂ ಅವಲಂಬಿಸಿದೆ. ಟಿವಿ ಸೀರಿಯಲ್­ಗಳ ಭ್ರಮೆಯಿಂದ ಮಹಿಳೆಯರು ಹೊರ ಬರಬೇಕು. ನಮ್ಮ ರಕ್ತದಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದೆ. ಪಾಶ್ಚಾತ್ಯ ಸಂಸ್ಕೃತಿಗೆ ನಾವು ಬಲಿಯಾಗಿದ್ದೇವೆ. ಮಹಿಳೆಯರು ಸಂಸ್ಕೃತಿ ಸಂಸ್ಕಾರದ ಬಗ್ಗೆ ಜಾಗೃತರಾದಾಗ […]

Read More

ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ

ದಿನಾಂಕ 1-3-2017 ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕ ಮತ್ತು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಇವುಗಳ ಜಂಟಿ ಆಶ್ರಯದಲ್ಲಿ ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಳೂರು ಘಟಕದ ಉಪಾಧ್ಯಕ್ಷ ಪುಷ್ಪರಾಜ್ ಕುಮಾರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾವೂರು ಪೊಲೀಸ್ ಠಾಣೆಯ ಪಿಎಸ್‌ಐ ಉಮೇಶ್ ಕುಮಾರ್ ಅವರು ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!