ಯುವವಾಹಿನಿಯ 24ನೇ ನೂತನ ಕೊಲ್ಯ ಘಟಕದ ಉದ್ಘಾಟನೆ
26-02-2017, 10:48 AM
ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ 24ನೇ ನೂತನ ಘಟಕ ಯುವವಾಹಿನಿ(ರಿ) ಕೊಲ್ಯ ಘಟಕವು 26 ಫೆಬ್ರವರಿ 2017ನೇ ಆದಿತ್ಯವಾರ ಮಂಗಳೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಉದ್ಘಾಟನೆಗೊಂಡಿತು. ಕೊಲ್ಯ ಬಿಲ್ಲವ ಸಮಾಜ ಸೇವಾ ಸಂಘದ ಗೌರವಾದ್ಯಕ್ಷ ಡಾ.ಪಿ ರಾಮಾನುಜಂ ದೀಪ ಬೆಳಗುವುದರ ಮೂಲಕ ಕೊಲ್ಯ ಘಟಕವನ್ನು ಉದ್ಗಾಟಿಸಿ ಶುಭ ಹಾರೈಸಿದರು. ನಮ್ರತಾಭಾವ ಉನ್ನತಿಗೆ ಕಾರಣವಾಗುತ್ತದೆ. ಅಹಂಭಾವ ತೊರೆದು ಹಿರಿಯರಿಗೆ ಸಮಾಜಕ್ಕೆ ತಗ್ಗಿ ಬಗ್ಗಿ ನಡೆಯುವ ಸುಸಂಸ್ಕೃತ ಗುಣ ಹೊಂದಿರುವ ಸ್ವಾರ್ಥರಹಿತ ನಿಷ್ಪಕ್ಷಪಾತ ಶಿಸ್ತುಬದ್ದ ಯುವಕರ […]



