Yuvavahini

ವಿದ್ಯಾನಿಧಿ ಟ್ರಸ್ಟ್

ವಿದ್ಯಾರ್ಥಿ ವೇತನ ದಾನವಲ್ಲ, ಸಮಾಜ ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯ ಸಂಕೇತ : ಪದ್ಮರಾಜ್ ಪೂಜಾರಿ

ಮಂಗಳೂರು : ಅಂಕಗಳೊಂದೇ ವಿದ್ಯಾರ್ಥಿಯ ಮೌಲ್ಯವಲ್ಲ, ಅವನೊಳಗಿನ ಶಿಸ್ತು, ಶ್ರಮ ಮತ್ತು ಸತ್ಪ್ರವೃತ್ತಿಯೇ ನಿಜವಾದ ಮಾನದಂಡ. ಹೆತ್ತವರ ಕನಸುಗಳನ್ನು ಗೌರವದಿಂದ ಹೊತ್ತು ಮುಂದೆ ಸಾಗುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ವಿದ್ಯಾರ್ಥಿ ವೇತನ ದಾನವಲ್ಲ, ಸಮಾಜ ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯ ಸಂಕೇತ. ಈ ಅವಕಾಶವನ್ನು ಜ್ಞಾನಾರ್ಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೂ ಬಳಸಿ. ಇಂದು ಪಡೆದ ನೆರವು ನಾಳೆ ಸಮಾಜಕ್ಕೆ ಕೊಡುಗೆಯಾಗುವ ಶಕ್ತಿಯಾಗಲಿ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ […]

Read More

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ ವಿದ್ಯಾನಿಧಿ ಟ್ರಸ್ಟ್ ಸಂಜೀವಿನಿಯಾಗಿದೆ ಎಂದು ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಇವರು ತಿಳಿಸಿದರು. ಅವರು ದಿನಾಂಕ 13 ಡಿಸೆಂಬರ್ 2022ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಗ್ಲಾಸ್ […]

Read More

ಶೈಕ್ಷಣಿಕ ದತ್ತು ಸ್ವೀಕಾರ – ಪ್ರತಿಭಾ ಪುರಸ್ಕಾರ ‘ಪ್ರೇರಣಾ -2019’

    ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್‌ನಿಂದ ಶೈಕ್ಷಣಿಕ ದತ್ತು ಸ್ವೀಕಾರ – ಪ್ರತಿಭಾ ಪುರಸ್ಕಾರ ‘ಪ್ರೇರಣಾ -2019’ ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶೈಕ್ಷಣಿಕ ದತ್ತು ಸ್ವೀಕಾರ ವಿದ್ಯಾರ್ಥಿ ವೇತನ ವಿತರಣೆ ಅಕ್ಷರ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರ – ಪ್ರೇರಣಾ -2019 ಕಾರ್ಯಕ್ರಮವು ನ.11 ರಂದು ನಡೆಯಿತು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಸಲಹೆಗಾರರಾದ  ಲೋಕಯ್ಯ ಪೂಜಾರಿಯವರು ಕಾರ್‍ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ವಿದ್ಯಾನಿದಿ ಟ್ರಸ್ಟ್ […]

Read More

ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) : ಪ್ರೇರಣಾ -2018

ಮಂಗಳೂರು : ದಿನಾಂಕ 16-09-2018ರ ಆದಿತ್ಯವಾರದಂದು ಸರ್ವಮಂಗಳೆ ಸಭಾಂಗಣ, ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕಂಕನಾಡಿ, ಮಂಗಳೂರು ಇಲ್ಲಿ ನಡೆದ “ಶೈಕ್ಷಣಿಕ ದತ್ತು ಸ್ವೀಕಾರ, ವಿದ್ಯಾರ್ಥಿ ವೇತನ ವಿತರಣೆ, ಗೌರವ ಅಭಿನಂದನೆ ಮತ್ತು ಅಕ್ಷರ ಪ್ರತಿಭಾ ಪುರಸ್ಕಾರ – ಪ್ರೇರಣಾ -2018” ಕಾರ್ಯಕ್ರಮದ ವರದಿ. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಪೂರ್ವಾಹ್ನ ಗಂಟೆ 9.45ಕ್ಕೆ ಸರಿಯಾಗಿ ಆರಂಭವಾಯ್ತು. ಚಿತ್ತರಂಜನ್, ಅಧ್ಯಕ್ಷರು, ಶ್ರೀ ಬ್ರಹ್ಮಬೈದರ್ಕಳ ಗರೋಡಿ, ಕಂಕನಾಡಿ ಇವರು ಉದ್ಘಾಟಕರಾಗಿಯೂ, ಶ್ರೀ ಧರ್ಮಪಾಲ್, ಅಧ್ಯಕ್ಷರು-ಬಿಲ್ಲವ ಸೇವಾ ಸಮಾಜ ಕಂಕನಾಡಿ ಇವರು […]

Read More

ಯುವ ಪ್ರೇರಣಾ – 2017

ಮಂಗಳೂರು : ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ), ಮಂಗಳೂರು- ಇದರ ವತಿಯಿಂದ ವಿದ್ಯಾರ್ಥಿಗಳ ಯುವ ಪ್ರೇರಣಾ -೨೦೧೭ ಎಂಬ ಕಾರ್ಯಕ್ರಮವು ದಿನಾಂಕ 26.11.2017 ನೇ ರವಿವಾರದಂದು ಬೆಳಿಗ್ಗೆ 09.30 ರಿಂದ ಮಧ್ಯಾಹ್ನ 11.30 ರ ವರೆಗೆ ಯುವವಾಹಿನಿ (ರಿ) ಕೇಂದ್ರ ಸಮಿತಿ, ರಘು ಬಿಲ್ಡಿಂಗ್, ಉರ್ವಸ್ಟೋರ್, ಮಂಗಳೂರು ಇಲ್ಲಿ ಜರಗಿತು. ಪ್ರಸ್ತುತ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಿರುವ, ವಿದ್ಯಾಭ್ಯಾಸವನ್ನು ಮುಗಿಸಿ ಉದ್ಯೋಗವನ್ನು ಪಡೆದುಕೊಂಡವರು ಒಟ್ಟು ಸುಮಾರು ೨೫ ವಿದ್ಯಾರ್ಥಿಗಳು ಈ ಸಂವಹನವನ್ನು ಒಳಗೊಂಡ ಯುವಪ್ರೇರಣಾ-2017  ಶಿಬಿರದಲ್ಲಿ ಪಾಲ್ಗೊಂಡಿದ್ದರು. ಯುವವಾಹಿನಿ (ರಿ) […]

Read More

ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ.) 2016-17ನೇ ಸಾಲಿನ ವಾರ್ಷಿಕ ವರದಿ

ಬಂಧುಗಳೇ, ಯುವವಾಹಿನಿಯ ಮೂರು ಮುಖ್ಯ ಧ್ಯೇಯಗಳಲ್ಲಿ ಒಂದಾದ “ವಿದ್ಯೆ”ಗೆ ಪೂರಕವಾಗಿ ಸ್ಥಾಪಿಸಲ್ಪಟ್ಟು ಕಾರ್ಯಚರಿಸುತ್ತಿರುವ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ.), ಯುವವಾಹಿನಿ ಕೇಂದ್ರ ಸಮಿತಿಯ ಮಹತ್ವಾಕಾಂಕ್ಷೆಯ ಒಂದು ಯೋಜನೆ. ನಮ್ಮ ಸಮಾಜದ ವಿದ್ಯಾರ್ಥಿಗಳು ಆರ್ಥಿಕ ಕೊರತೆಯಿಂದಲೋ, ಮಾಹಿತಿಯ ಅಭಾವದಿಂದಲೋ ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಪೋಷಿಸುವ ಕೆಲಸವನ್ನು ಯುವವಾಹಿನಿ ಕಳೆದ ಹಲವು ವರ್ಷಗಳಿಂದ ನಿರ್ವಹಿಸುತ್ತಾ ಬಂದಿದೆ. ಪದವಿ, ಸ್ನಾತಕೋತ್ತರ ಪದವಿ, ವಿವಿಧ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ನಮ್ಮ ವಿದ್ಯಾನಿಧಿಯಿಂದ ಆರ್ಥಿಕ ಧನಸಹಾಯ ಪಡೆದು ತಮ್ಮ ವಿದ್ಯಾರ್ಜನೆಯನ್ನು […]

Read More

ಯುವವಾಹಿನಿಯ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಇದರ ವಿದ್ಯಾನಿಧಿ ಟ್ರಸ್ಟ್ ವತಿಯಿಂದ ದಿನಾಂಕ 30.07.2017ನೇ ರವಿವಾರ ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಇಲ್ಲಿ ನಡೆಯಿತು. 9.30ಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ ಪೋಟೋ ಎದುರು ಟ್ರಸ್ಟಿಗಳಾದ ಸಂಜೀವ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಬೆಳಗ್ಗಿನ ಕಾರ್ಯಗಾರಕ್ಕೆ ಚಾಲನೆ ನೀಡಿದರು. ನಂತರ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ರವರಿಗೆ ಪುಷ್ಪ ನೀಡಿ ತರಬೇತಿಗೆ ಆಹ್ವಾನ ನೀಡಲಾಯಿತು. ನಂತರ 2.30 ತಾಸುಗಳನ್ನು ರಾಜೇಂದ್ರ ಭಟ್ ರವರು ವಿದ್ಯಾರ್ಥಿ-ವಿದ್ಯಾರ್ಥಿನಿಯರೊಂದಿಗೆ ತನ್ನ ಅದ್ಬುತವಾದ ಮಾತುಗಳಿಂದ ಕಾರ್ಯಗಾರವನ್ನು ನಡೆಸಿಕೊಟ್ಟರು. ಮಧ್ಯಾಹ್ನ […]

Read More

ವಿದ್ಯಾನಿಧಿ ಟ್ರಸ್ಟ್ ವತಿಯಿಂದ ’ಪ್ರೇರಣ-2017’

ದಿನಾಂಕ 8-01-2017 ನೇ ರವಿವಾರದಂದು ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ವೃತ್ತಿ ಮಾರ್ಗದರ್ಶನ ಹಾಗೂ ಯುವಜನತೆಗೆ ಮತ್ತು ಪೋಷಕರಿಗೆ ಉಪಯೋಗವಾಗುವ ಕಾರ್ಯಕ್ರಮವಾಗಿ ಪ್ರೇರಣ-2017’ ಎನ್ನುವ ಕಾರ್ಯಕ್ರಮವು ಶ್ರೀಗೋಕರ್ಣನಾಥೇಶ್ವರ ಕಾಲೇಜು, ಗಾಂಧಿನಗರ, ಮಂಗಳೂರು ಇಲ್ಲಿ ಜರಗಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ರವರು ಪ್ರೇರಣಾ ಶಿಬಿರವನ್ನು ಉದ್ಘಾಟಿಸಿ, ಶುಭಕೋರಿದರು. ಯುವ ವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀ ಪದ್ಮನಾಭ ಮರೋಳಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಗೋಕರ್ಣನಾಥ ಕಾಲೇಜು ಮಂಗಳೂರು ಇದರ […]

Read More

ಯುವವಾಹಿನಿ ವಿದ್ಯಾನಿಧಿ ವರದಿ -2014

ಜಗತ್ತಿನ ಸಕಲ ಜೀವಚರಗಳಿಗಿಂತ ಮನುಷ್ಯ ಹೆಚ್ಚು ಬುದ್ದಿವಂತ ಎಣಿಸಿಕೊಳ್ಳುತ್ತಾನೆ ಎಂದರೆ ಅದಕ್ಕೆ ಮುಖ್ಯ ಕಾರಣ ಆತ ವಿದ್ಯಾವಂತ ಜ್ಞಾನದ ಮೂಲಕ ಮನಸ್ಸು ಪರಿವರ್ತನೆಗೊಳಿಸಿ ಆ ಮೂಲಕ ಪ್ರಗತಿಯನ್ನು ಕಾಣುವ ಕಾರಣದಿಂದಲೇ ಮನುಷ್ಯ ಭಿನ್ನ ಎಣಿಸಿಕೊಳ್ಳುತ್ತಾನೆ. ಶೀಲ ಮತ್ತು ಸಚ್ಚಾರಿತ್ರ್ಯವನ್ನು ಹುಟ್ಟುಹಾಕದ ಶಿಕ್ಷಣ ಶಿಕ್ಷಣವೇ ಅಲ್ಲ ಎನ್ನುತ್ತಾರೆ ಜಗತ್ತಿನ ತತ್ವಜ್ಞಾನಿಗಳು. ಅದೇ ಮಾತನ್ನು ಬ್ರಹ್ಮಶ್ರೀ ನಾರಾಯಣ ಗುರುಗಳೂ “ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ” ಎನ್ನುವ ಮಾತುಗಳಿಂದ ಪುನರುಚ್ಚರಿಸಿದ್ದಾರೆ. ವಿದ್ಯೆ ನಮ್ಮನ್ನು ಸ್ವತಂತ್ರರನ್ನಾಗಿಸಬೇಕು ಯಾರ ಮತ್ತು ಯಾವುದರ ಹಂಗೂ ಇಲ್ಲದೆ […]

Read More

ಯುವವಾಹಿನಿ ವಿದ್ಯಾನಿಧಿ -2013

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಉಪಸಮಿತಿ “ವಿದ್ಯಾನಿಧಿ” ಸಮಿತಿಯು ಮೂಲಧ್ಯೇಯಕ್ಕೆ ಅನುಗುಣವಾಗಿ, ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಬಡತನದ ಕಾರಣದಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಆರ್ಥಿಕ ಸಹಾಯವನ್ನು ನೀಡುವುದರ ಜೊತೆಗೆ ಅವರ ವ್ಯಕ್ತಿತ್ವ ವಿಕಸನ, ಶೈಕ್ಷಣಿಕ ಮಾಹಿತಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಇದಲ್ಲದೆ ಈ ವಿದ್ಯಾರ್ಥಿಗಳ ಪೋಷಕರಿಗೂ ಉಪಯುಕ್ತವಾದ ಮಾಹಿತಿ ಶಿಬಿರಗಳನ್ನು ನಡೆಸುತ್ತಾ ಬಂದಿದೆ. ಈ ಹಿನ್ನೆಲೆಯೊಂದಿಗೆ ಯುವವಾಹಿನಿ (ರಿ) ವಿದ್ಯಾನಿಧಿ ಉಪಸಮಿತಿಯ 2012-13ನೇ ಸಾಲಿನ ಕಾರ್ಯಕ್ರಮಗಳ ಸಂಕ್ಷಿಪ್ತ ವಿವರ ಈ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!