
21-04-2018, 4:07 PM
ಯುವವಾಹಿನಿ(ರಿ) ಕೆಂಜಾರು-ಕರಂಬಾರು ಘಟಕದ ನೇತ್ರತ್ವದಲ್ಲಿ ದಿನಾಂಕ 21/04/2018 ರಿಂದ 24/04/2018 ರ ವರೆಗೆ ಶಿವಗಿರಿಯಾತ್ರೆಯು ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಯವರ ಮಾರ್ಗದರ್ಶನದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಯಾತ್ರೆಯಲ್ಲಿ ಒಟ್ಟು 41 ಸದಸ್ಯರು ಯಾತ್ರಿಗಳು ಭಾಗವಹಿಸಿದ್ದರು. ಯಾತ್ರೆಯು ಶಿವಗಿರಿ, ಗುರು ಜನ್ಮಸ್ಥಳ ಚಂಬಳಂತಿ, ಅರವೀಪುರ, ಕನ್ಯಾಕುಮಾರಿ, ಮರತ್ತಮಲೆ ಬೆಟ್ಟ ಹಾಗೂ ತಿರುವನಂತಪುರ ಅನಂತಪದ್ಮನಾಭ ದೇವಸ್ಥಾನಗಳನ್ನು ಒಳಗೊಂಡಿತ್ತು. ಘಟಕದ ಕಾರ್ಯದರ್ಶಿ ಜೀತೇಶ್ ಸಾಲ್ಯಾನ್, ಕೋಶಾದಿಕಾರಿ ಯಶವಂತ್ ಬಿ., ಸಂಚಾಲಕರಾದ ಶೇಖರ್ ಪೂಜಾರಿ ಹಾಗೂ ಸಂದೀಪ್ […]
Read More

21-04-2018, 8:30 AM
ಯುವವಾಹಿನಿಯು ಪ್ರೀತಿ, ವಾತ್ಸಲ್ಯವನ್ನು ಯುವ ಮನಸುಗಳಿಗೆ ರವಾನಿಸುವ ಕಾರ್ಯವನ್ನು ಸಮಾಜದಲ್ಲಿ ಮಾಡುತ್ತುದೆ. ಯುವ ಪ್ರತಿಭೆಗಳಿಗೆ ವೇದಿಕೆಯಾಗಿ, ರೋಗಿಗಳಿಗೆ ಸಂಜೀವಿನಿಯಾಗಿ, ವಿದ್ಯಾರ್ಥಿಗಳಿಗೆ ಸರಸ್ವತಿಯಾಗಿ, ಅಮಾಯಕರಿಗೆ ಕರುಣಾಮಯಿಯಾಗಿ ಯುವವಾಹಿನಿ ಎಲ್ಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 21.04.2018 ರಂದು ಯಡ್ತಾಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಯುವವಾಹಿನಿ (ರಿ) ಯಡ್ತಾಡಿ ಘಟಕದ 2018-19 ನೇ ಸಾಲಿನ ಪದಸ್ವೀಕಾರ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಕೋಟ ಹೊಬಳಿಯ ಬಿಲ್ಲವ ಒಕ್ಕೂಟದ […]
Read More

15-04-2018, 3:30 PM
ಬಜ್ಪೆ : ಜಾಗತೀಕರಣದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಸಂಪ್ರದಾಯಗಳು ನಶಿಸಿಹೋಗುವ ಕಾಲಘಟ್ಟದಲ್ಲಿ ಯುವವಾಹಿನಿಯು ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸುವ ಮೂಲಕ ಮುಂದಿನ ಯುವಜನತೆಗೆ ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸಿದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಹಬ್ಬಗಳು ದಾರಿದೀಪವಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 15.04.2018 ರಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಜರುಗಿದ ಬಿಸು ಪರ್ಬ ಕಾರ್ಯಕ್ರಮದಲ್ಲಿ ಮುಖ್ಯ […]
Read More

11-04-2018, 4:31 PM
ಮಂಗಳೂರು : ಪ್ರೀತಿ, ಅಕ್ಕರೆ ಹಾಗೂ ಕೌಟುಂಬಿಕ ಚೌಕಟ್ಟಿನ ಮೂಲಕ ಯುವವಾಹಿನಿ ಯುವಕರಿಗೆ ಪ್ರೇರಣೆ ನೀಡಿದೆ. 30 ವರ್ಷಗಳ ಇತಿಹಾಸವಿರುವ ಯುವವಾಹಿನಿಯ ಸಾಧನೆ ಯಾವುದೇ ಕಲ್ಮಶವಿಲ್ಲದೆ ಬಿಳಿ ಹಾಳೆಯಂತಿದೆ. ಯುವವಾಹಿನಿಯ ಆರಂಭದ ದಿನಗಳಿಂದಲೂ ತೀರಾ ಹತ್ತಿರದಿಂದ ಯುವವಾಹಿನಿಯನ್ನು ಕಂಡ ತನಗೆ ಯುವವಾಹಿನಿಯೇ ತನ್ನ ಮೊದಲ ಮಗು ಎಂದು ಗೋಕರ್ಣನಾಥ ಕೊ ಅಪರೇಟಿವ್ ಬ್ಯಾಂಕ್ ನ ಶಾಖಾ ಪ್ರಬಂಧಕರಾದ ನಿರ್ಮಲಾ ಸಂಜೀವ್ ತಿಳಿಸಿದರು. ಅವರು ದಿನಾಂಕ 11.04.2018 ರಂದು ಮಂಗಳೂರು ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) […]
Read More

11-04-2018, 3:44 PM
ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಶ್ಮಿ ಸಿ.ಕರ್ಕೇರಾ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ರಶ್ಮಿ ಸಿ.ಕರ್ಕೇರಾ ಉಪಾಧ್ಯಕ್ಷರು : ಉಮಾವತಿ ಶ್ರೀಕಾಂತ್ ಕಾರ್ಯದರ್ಶಿ : ರವಿಕಲಾ ವೈ.ಅಮೀನ್ ಜತೆ ಕಾರ್ಯದರ್ಶಿ : ಶಕೀಲಾ ದಾಮೋದರ್ ಕೋಶಾಧಿಕಾರಿ : ಕುಶಾಲಾಕ್ಷಿ ಯಶವಂತ್ ಸಂಘಟನಾ ಕಾರ್ಯದರ್ಶಿ : ಸುನೀತಾ ನಿರ್ದೇಶಕರು : ಸಮಾಜ ಸೇವೆ : ಲಲಿತಾ ವ್ಯಕ್ತಿತ್ವ ವಿಕಸನ : ರೇಖಾ ಗೋಪಾಲ್ ಕಲೆ ಮತ್ತು ಸಾಹಿತ್ಯ : ಅಮಿತಾ, ಪ್ರತಿಭಾ ನಾರಾಯಣಗುರು ತತ್ವ […]
Read More

08-04-2018, 4:56 PM
ಸಖ್ಯ ಸುಖಕೆ ಪರಿಧಿ ಇದೆಯೇ? ಅಂತರಂಗದಲಿ ತಣ್ಣಗೆ ಹರಿದಾಡಿ ಮುದಗೊಳಿಸಿ,ಹಿತಾನುಭವ ಜೊತೆಜೊತೆಗೆ ಭದ್ರತೆಯ ಭಾವ ಉಣಿಸಿ ಸಮೃದ್ಧಗೊಳಿಸುವುದು.ಅಂತೇ ಸಖಿ- ಸಖ ಪದಗಳು ಪಂಚೇಂದ್ರಿಯಗಳ ಮುಟ್ಟಿದರೆ ಉಲ್ಲಾಸ. ತಂಗಾಳಿ ಸ್ಪರ್ಶಿಸಿದಂತೆ. ಈ ಭಾವ ನೆನಕೆಗೆ ದಿನಾಂಕ08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನೆನಪಿನಲ್ಲಿ ” ಸಖೀ ಸಂವಾದ” ಅರಳಿಸುವ ಜವಾಬ್ದಾರಿಯನ್ನ ನಿಭಾಯಿಸಿತ್ತು. ಹೆಸರಿನಲ್ಲೇ ಹೂವಿನಲಿ ಅಡಗಿಹ ಗಂಧದ ಸೆಳೆತ […]
Read More

08-04-2018, 2:20 AM
ಉಡುಪಿ : ಬದುಕಿನ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ ಹಾಗೂ ತನ್ನ ಸಾಧನೆಯ ಹಿಂದೆ ಕಷ್ಟದ ದಿನಗಳಿದ್ದವು ಅವೆಲ್ಲವನ್ನು ಸವಾಲಾಗಿ ಸ್ವೀಕರಿಸಿ ಬದುಕಿನಲ್ಲಿ ಯಶಸ್ವೀಯಾಗಿದ್ದೇನೆ ಎಂದು ಶಾಲಾ ಮಕ್ಕಳ ಮಹಿಳಾ ವಾಹನ ಚಾಲಕಿ ಸುಮತಿ ತಿಳಿಸಿದರು. ಅವರು ದಿನಾಂಕ 08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ಜರುಗಿದ ತೊಟ್ಟಿಲು ತೂಗಿದ ಕೈ ಎಲ್ಲದಕ್ಕೂ ಸೈ ಎಂದು ತೋರಿಸಿಕೊಟ್ಟ ಸಾಧಕಿಯರೊಂದಿಗೆ ಸಖೀ […]
Read More

01-04-2018, 3:34 PM
ಅಡ್ವೆ : ಸ್ವ-ಉದ್ಯೋಗದ ಮೂಲಕ ತಾನು ಬೆಳೆಯುವುದರೊಂದಿಗೆ ಇತರರ ಬೆಳವಣಿಗೆಗೆ ಸಹಕಾರಿಯಾಗಿದೆ.ಸ್ವ ಉದ್ಯೋಗದಿಂದ ಸಮಾಜದ ಹಿತ ಅಡಗಿದೆ ಸಾವಿರಾರು ಉದ್ಯೋಗದ ಸ್ರಷ್ಟಿಯಾಗಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಜಯಂತ ನಡುಬೈಲು ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿ(ರಿ) ಅಡ್ವೆ ಘಟಕದ ಆಶ್ರಯದಲ್ಲಿ ಅಡ್ವೆಆನಂದಿ ಸಭಾಭವನದಲ್ಲಿ ಜರುಗಿದ ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು . ಯುವವಾಹಿನಿ ಸದಸ್ಯರು ಸ್ವಾವಲಂಬಿಯಾಗಿ ಬದುಕಲು ಕಲಿಯಿರಿ, ಅದಕ್ಕೆ ಬೇಕಾದ […]
Read More

01-04-2018, 8:23 AM
ಕಂಕನಾಡಿ: ಯುವವಾಹಿನಿ ಸ್ವಾಭಿಮಾನದ ಸ್ಪೂರ್ತಿ, ಸಮಾಜದಲ್ಲಿ ಸಂಘಟನೆಯ ಅರಿವು ಮೂಡಿಸಿದೆ, ಆತ್ಮವಿಶ್ವಾಸವನ್ನು ಬಿಟ್ಟು ಮಿಕ್ಕೆಲ್ಲವನ್ನೂ ಕಳಕೊಂಡರೂ ಚಿಂತೆ ಇಲ್ಲ ಎಂಬ ಗುರುವರ್ಯರ ಸಂದೇಶದಂತೆ ನಾವು ಕೀಳರಿಮೆ ಬಿಟ್ಟು ಕತ್ತಲೆಯಿಂದ ಜ್ಞಾನದ ಬೆಳಕಿನೆಡೆ ಮುನ್ನಡೆಯೋಣ , ಯುವವಾಹಿನಿಯ ನಡೆ ಜಾಗೃತ ಸಮಾಜದ ಕಡೆ ಮುಖ ಮಾಡಿದೆ ಇದು ನಿರಂತರ ಪ್ರಕ್ರಿಯೆಯಾಗಲಿ ಹಾಗೂ ಯುವವಾಹಿನಿ ಕಂಕನಾಡಿ ಘಟಕವು ಶ್ರೇಷ್ಠ ಘಟಕವಾಗಿ ಹೊರಹೊಮ್ಮಲಿ ಎಂದು ಮೆಸ್ಕಾಮ್ ಕಾರ್ಯಪಾಲಕ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 01.04.2018 ರಂದು ಉಜ್ಜೋಡಿ ಶ್ರೀ […]
Read More

01-04-2018, 7:55 AM
ಕುಪ್ಪೆಪದವು : ಸತ್ ಚಿಂತನೆಯನ್ನು ರೂಪಿಸಿಕೊಳ್ಳುವ ಮೂಲಕ ಯುವ ಸಮುದಾಯದ ಶಕ್ತಿ ಸಾರ್ಥಕತೆಯನ್ನು ಪಡೆಯುತ್ತದೆ, ಸಮಾಜಮುಖಿ ಕಾರ್ಯಗಳ ಮೂಲಕ ಶೋಷಿತ ಜನಾಂಗವನ್ನು ಮುಖ್ಯ ವಾಹಿನಿಗೆ ತರುವಂತಹ ಯುವವಾಹಿನಿ ಸಮಾಜದ ಆಶ್ರಯ ವಾಹಿನಿಯಾಗಿದೆ, ಬಿಲ್ಲವ ಸಮಾಜದ ಆದರ್ಶದ ದಾರಿದೀಪವಾಗಿದೆ ಎಂದು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿಯ 30 ನೇ ನೂತನ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಅಕ್ಷರಶಃ ಪಾಲಿಸುತ್ತಿರುವ […]
Read More