
03-06-2018, 2:27 AM
ಅಡ್ವೆ : ಒಗ್ಗಟ್ಟಿನಿಂದ ದುಡಿದರೆ ಸಾದನೆಗೆ ಅಸಾಧ್ಯವಾದುದು ಏನಿಲ್ಲ, ನಮ್ಮ ಯುವಕರಲ್ಲಿ ಉತ್ಸಾಹ ಹೆಚ್ಚಿಸಬೇಕು. ಆ ಮೂಲಕ ಆತ್ಮವಿಶ್ವಾಸ ಬೆಳೆಸಬೇಕು ಆತ್ಮವಿಶ್ವಾಸಕ್ಕಿಂತ ಹೆಚ್ಚಿನ ಶಕ್ತಿ ಇನ್ನೊಂದು ಇಲ್ಲ. ಹಾಗೆಯೇ ಯುವವಾಹಿನಿ ಸಂಘಟನೆಯ ಮೂಲಕ ನಾವೆಲ್ಲರೂ ಒಗ್ಗಾಟ್ಟಾದರೆ ಇನ್ನಷ್ಟು ಹೆಚ್ಚಿನ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸಲು ಸಾಧ್ಯ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 03-06-2018 ನೇ ಭಾನುವಾರ ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ […]
Read More

27-05-2018, 5:15 PM
ಮಂಗಳೂರು : ತಾಯಿ ಮನುಕುಲದ ಶಾಲೆಗೆ ಗುರುವಾಗಿದ್ದಾಳೆ, ಮನೆ ಎಂಬ ಪಾಠಶಾಲೆ ಹಾಗೂ ಪಾಕಶಾಲೆಗೆ ಶೋಧನೆ, ಸಂಶೋಧನೆಯ ಜ್ಞಾನಿ ವಿಜ್ಞಾನಿಯಾಗಿರುತ್ತಾಳೆ, ಪ್ರೀತಿಯ ಮುತ್ತಿಟ್ಟು, ಅನ್ನದ ತುತ್ತಿಟ್ಟು ಉಣಿಸಿ ತಣಿಸುವ ಅನ್ನಪೂರ್ಣೆ, ನಿದ್ದೆಗೆ ಲಾಲಿ ಜೋಗುಳ ಹಾಡಿ ಮಲಗಿಸುವ ಸಂಗೀತಗಾರ್ತಿ ಅಮ್ಮ, ಹೀಗೆ ಸಮಗ್ರ ಶಕ್ತಿಗೆ ಚೇತನದ ಅಮೃತದ ಸೆಲೆಯಾಗಿ ಸರ್ವರ ಹೃದಯದ ಆರಾಧನಾ ಮೂರ್ತಿಯಾಗಿರುತ್ತಾಳೆ ಎಂದು ಮುಲ್ಕಿ ನಾರಾಯಣಗುರು ಕಾಲೇಜಿನ ಉಪನ್ಯಾಸಕರಾದ ಕೇಶವ ಎಚ್ ತಿಳಿಸಿದರು. ಅವರು ದಿನಾಂಕ 27.05.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ […]
Read More

27-05-2018, 4:15 PM
ಕೂಳೂರು : ನಮ್ಮ ದೃಷ್ಟಿ ಎತ್ತರಕ್ಕೆ ಇದ್ದಾಗ ಮತ್ತು ಧೃಡ ಚಿತ್ತ ಇದ್ದಾಗ ತಲುಪುವ ಗುರಿ ಹತ್ತಿರವಾಗುತ್ತದೆ ಸಂಘಟನೆಯ ಶಕ್ತಿ ಯುವಸಮುದಾಯದಲ್ಲಿದೆ ಮತ್ತು ಸಮಾನತೆಯಲ್ಲಿದೆ ಹಾಗಾದಾಗ ಯಶಸು ಲಭಿಸುತ್ತದೆ . ನಾಯಕತ್ವಕ್ಕೆ ಅಡಿಪಾಯ ಮುಖ್ಯ ಈ ದಿಶೆಯಲ್ಲಿ ಕೂಳೂರು ಘಟಕದ ಪರಿಶ್ರಮ ಅಭಿನಂದನೀಯ ಮಹಿಳೆಯರಿಗೆ ಅವಕಾಶ ಹೆಚ್ಚಾಗಬೇಕು ಎನ್ನುವ ಕೂಗು ಎಲ್ಲ ಕಡೆ ಇದೆ ಕೂಳೂರು ಘಟಕ ಅದನ್ನು ಅನುಸರಿಸಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು. ಅವರು ದಿನಾಂಕ […]
Read More

27-05-2018, 1:43 PM
ಕೊಲ್ಯ : ಯುವವಾಹಿನಿ (ರಿ)ಕೊಲ್ಯ ಘಟಕದ ಸದಸ್ಯರು ತಾ 27-05-2018ನೇ ಆದಿತ್ಯವಾರದಂದು “ದೇಗುಲ ದರ್ಶನ” ಎಂಬ ಒಂದು ದಿನದ ಪುಣ್ಯ ಕ್ಷೇತ್ರ ಪ್ರವಾಸ ಕಾರ್ಯಕ್ರಮವನ್ನು ಆಯೋಜಿಸಿದ್ದರು.ಬೆಳಿಗ್ಗೆ 6ಗಂಟೆಗೆ ಕೊಲ್ಯ ಬ್ರಹ್ಮ ಶ್ರೀ ನಾರಾಯಣಗುರು ಮಂದಿರದಲ್ಲಿ ಗುರುವರ್ಯರಿಗೆ ಪೂಜೆ ಸಲ್ಲಿಸಿ ಹೊರಟ 54 ಪ್ರವಾಸಿಗರನ್ನೊಳಗೊಂಡ ತಂಡವು ಉಡುಪಿ ಶ್ರೀ ಕೃಷ್ಣ ಮಠ,ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನ ಗಳಿಗೆ ಭೇಟಿ ನೀಡಿ ಶ್ರೀ ದೇವರ ದರ್ಶನ […]
Read More

20-05-2018, 3:56 PM
ಉಡುಪಿ : ಯುವವಾಹಿನಿ ಸಂಘಟನೆಯ ಪ್ರತಿಷ್ಠಿತ ಘಟಕ ಯುವವಾಹಿನಿ(ರಿ) ಉಡುಪಿ ಘಟಕದ ಯುವವಾಹಿನಿ ಸಭಾಂಗಣ ಮತ್ತು ಕಛೇರಿಯ ಉದ್ಘಾಟನೆಯನ್ನು ಉಡುಪಿ ಜಿಲ್ಲೆಯ ಉದ್ಯಾವರ ಬಲಾಯಿಪಾದೆಯ ನಾಗಪ್ಪ ಕಾಂಪ್ಲೆಕ್ಸ್ ನಲ್ಲಿ ಮಾಲಕ ಅಶೋಕ್ ಎನ್.ಪೂಜಾರಿ ಉದ್ಘಾಟಿಸಿ ಶುಭ ಹಾರೈಸಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ಯುವವಾಹಿನಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡುತ್ತಾ ಉಡುಪಿ ಜಿಲ್ಲೆಯನ್ನು ಕೇಂದ್ರವಾಗಿರಿಸಿಕೊಂಡು ಯುವವಾಹಿನಿ ಬೆಳವಣಿಗೆಗೆ ಉಡುಪಿ ಘಟಕದ ಸಭಾಂಗಣ ಸಹಕಾರಿಯಾಗಿದೆ. ಇದುವರೆಗೆ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡುವ ಕಾರ್ಯ ನಡೆಸುತ್ತಾ […]
Read More

10-05-2018, 3:17 AM
ಕೂಳೂರು : ಎಲ್ಲಾ ಬಾಂಧವ್ಯ ಸಂಬಂಧಗಳನ್ನು ಮೀರಿದವಳು ತಾಯಿ, ತಾನು ಎಲ್ಲಾ ಕಡೆ ಇರಲಾರೆ ಎಂಬ ಕಾರಣಕ್ಕಾಗಿ ದೇವರು ತಾಯಿಯನ್ನು ಸೃಷ್ಟಿಸಿದ ಎಂಬ ಮಾತನ್ನು ಅಕ್ಷರಶಃ ರುಜುವಾತು ಮಾಡಿಕೊಟ್ಟವಳು. ಹೆಜ್ಜೆಯಿಡಲು ಕಲಿಸಿದವಳು, ಕೈ ತುತ್ತು ನೀಡಿದವಳು, ಕರುಳಕುಡಿಯ ಜೀವನಕ್ಕಾಗಿ ತನ್ನ ಜೀವವನ್ನು ಸವೆಸಿದವಳು, ಕಂದನ ಪ್ರತಿ ಯಶಸ್ಸಿನಲ್ಲೂ ಆಕೆಯ ಪಾಲಿದೆ ಪ್ರತಿ ಕಷ್ಟದಲ್ಲೂ ಆಕೆಯ ಸಾಂತ್ವನವಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 10.05.2018 ರಂದು ಯುವವಾಹಿನಿ (ರಿ) […]
Read More

05-05-2018, 4:25 PM
ಮಂಗಳೂರು : ಕೌಟುಂಬಿಕ ವಲಯದಲ್ಲಿರುವ ವ್ಯಕ್ತಿಗಳಿಗೆ ಹೆಣ್ಣು ಆಸಕ್ತಿಯ, ಆತ್ಮ ಸಂಗಾತದ ವಿಷಯ. ತಾಯಿಯಾಗಿ, ತಂಗಿಯಾಗಿ, ಅಕ್ಕನಾಗಿ, ಹೆಂಡತಿಯಾಗಿ, ನಾದಿನಿಯಾಗಿ, ಅತ್ತಿಗೆಯಾಗಿ, ಅತ್ತೆಯಾಗಿ, ಗೆಳತಿಯಾಗಿ, ಪ್ರೇಮಿಯಾಗಿ ಆಕೆ ನಿರ್ವಹಿಸುವ ಪಾತ್ರಗಳು ಅದ್ಬುತ, ವರ್ಣನಾತೀತ. ಏಕೆಂದರೆ ಸ್ತ್ರೀ ಒಂದು ಸಮುದಾಯವನ್ನು ಸಮರ್ಥವಾಗಿ ಪ್ರತಿನಿಧಿಸುವ ಸಾಮರ್ಥ್ಯ ಹೊಂದಿರುವಂತಹವಳು. ಕೌಟುಂಬಿಕ ವಲಯದ ಸ್ತ್ರೀ ಕುಟುಂಬದ ಕಟ್ಟುಪಾಡುಗಳಿಗೆ ಒಳಗಾಗಿ ಜೀವನ ನಡೆಸುತ್ತಿದ್ದಾಳೆ ಹಾಗೂ ಆಕೆ ತನ್ನ ಕುಟುಂಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದಳಾಗಿರುತ್ತಾಳೆ ಎಂದು ಅನುಪಮಾ ಮಹಿಳಾ ಮಾಸಿಕ ಪತ್ರಿಕೆಯ ಸಂಪಾದಕರು, ಹಾಗೂ ಸಾಹಿತಿ […]
Read More

02-05-2018, 2:08 PM
ದಿನಾಂಕ : 02/05/2018 ರಂದು ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ಕಿಲೆಂಜಾರು ಗ್ರಾಮದ ನಿವಾಸಿಯಾದ,ನಡೆದಾಡಲು ಅಸಾಧ್ಯವಾಗಿ ಹಾಸಿಗೆ ಹಿಡಿದಿರುವ ರವೀಂದ್ರ ಇವರಿಗೆ ವೀಲ್ ಚೇರ್ ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೋಟ್ಟು , ಉಪಾಧ್ಯಕ್ಶರಾದ ಅಜೇಯ್ ಅಮೀನ್ ನಾಗಂದದಿ, ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ಲ್ , ವಿನಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು
Read More

30-04-2018, 4:04 PM
ಯುವವಾಹಿನಿ (ರಿ) ಸುರತ್ಕಲ್ ಹಾಗೂ ಪಣಂಬೂರು ಘಟಕದ ಆಶ್ರಯದಲ್ಲಿ ದಿನಾಂಕ 30.04.2018 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಜಿ.ಎಸ್.ಟಿ.ತರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸೋಪ್ಟ್ ಲಿಂಕ್ ಸಂಸ್ಥೆಯ ಮೆನೇಜರ್ ಬಾಲಕೃಷ್ಣ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಯುವವಾಹಿನಿ ಪಣಂಬೂರು ಘಟಕದ ಅಧ್ಯಕ್ಷರಾದ ಉದಯ ಕುಮಾರ್ ಯುವವಾಹಿನಿ ಸುರತ್ಕಲ್ ಘಟಕದ ಸಲಹೆಗಾರರಾದ ಸಾಧು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಸುರತ್ಕಲ್ […]
Read More

28-04-2018, 2:08 PM
ಮೂಡಬಿದ್ರೆ: ದಿನಾಂಕ 28.04.2018 ರಂದು ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ವತಿಯಿಂದ ಕಿಡ್ನಿ ವೈಫಲ್ಯ ದಿಂದ ಬಳಲುತ್ತಿರುವ, ಮಂಗಳೂರು ತಾಲೂಕು ದರೆಗುಡ್ಡೆ ಕೆಲ್ಲಪುತ್ತಿಗೆಯ ಮೇಲಿನ ಮನೆಯ ಡೊಂಬಯ್ಯ ಪೂಜಾರಿ ಎಂಬವರ ಮಗಳು ಬಡ ಕುಟುಂಬದ ಪೂಜಾ ಪೂಜಾರಿ ಇವರಿಗೆ ವೈದ್ಯಕೀಯ ನೆರವು ರೂ 15,000/- ಹಸ್ತಾಂತರಿಸಲಾಯಿತು. ಹಾಗೂ ಮಂಗಳೂರು ತಾಲೂಕಿನ ನೆಲ್ಲಿಕಾರ್ ನಿವಾಸಿ ಮನೋಜ್ ಪೂಜಾರಿ ಕಡು ಬಡತನದಲ್ಲಿ ಬದುಕುತ್ತಿರುವ ಇವರಿಗೆ ರೂ 5,000/- ವೈದ್ಯಕೀಯ ನೆರವು ನೀಡಲಾಯಿತು.
Read More