
22-09-2017, 9:38 AM
ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ನೇ ಸಾಲಿನ ಅಧ್ಯಕ್ಷರಾಗಿ ಯಶವಂತ್ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಸುವರ್ಣ ಬಿ.ಸಿ.ರೋಡ್, ಉಪಾಧ್ಯಕ್ಷರಾಗಿ ಜಯಂತ ನಡುಬೈಲು ಹಾಗೂ ನರೇಶ್ ಕುಮಾರ್ ಸಸಿಹಿತ್ಲು, ಕೋಶಾಧಿಕಾರಿಯಾಗಿ ಹರೀಶ್ ಕೆ.ಸನಿಲ್, ಜತೆ ಕಾರ್ಯದರ್ಶಿಯಾಗಿ ಚೇತನ್ ಕುಮಾರ್ ಮುಲ್ಕಿ., ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಭುವನೇಶ್ ಪಚ್ಚಿನಡ್ಕ, ವಾರ್ಷಿಕ ಸಮಾವೇಶ ನಿರ್ದೇಶಕರಾಗಿಹರೀಶ್ ಕೆ.ಪೂಜಾರಿ ಕ್ರೀಡೆ ಮತ್ತು ಆರೋಗ್ಯನಿರ್ದೇಶಕರಾಗಿಸುಜಿತ್ ರಾಜ್ ಐ. ಸುರತ್ಕಲ್ , ಸಮಾಜ ಸೇವೆ ನಿರ್ದೇಶಕರಾಗಿ ಭಾಸ್ಕರ ಸಾಲ್ಯಾನ್ ಅಗರಮೇಲು, […]
Read More

17-09-2017, 3:27 PM
ಯುವವಾಹಿನಿ (ರಿ) ಕೊಲ್ಯ ಘಟಕದ ಕುಟುಂಬ ಸದಸ್ಯರ ಪುಣ್ಯ ಕ್ಷೇತ್ರಗಳ ಒಂದು ದಿನದ ಪ್ರವಾಸ ದಿನಾಂಕ 17.09.2017 ರಂದು ಜರುಗಿತು. 58 ಸದಸ್ಯರ ಯುವವಾಹಿನಿ ಕೊಲ್ಯ ಘಟಕದ ಕುಟುಂಬ ಸದಸ್ಯರು ಬಪ್ಪನಾಡು ಕ್ಷೇತ್ರ, ಹಲವು ಮಕ್ಕಳ ತಾಯಿ ದೇವಸ್ಥಾನ, ಹಟ್ಟಿಯಂಡಿ ಗಣಪತಿ, ಕೊಲ್ಲೂರು ಮೂಕಾಂಬಿಕಾ, ಮುರುಡೇಶ್ವರ ಮುಂತಾದ ಪ್ರಸಿದ್ಧ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡರು. ಈ ಪ್ರವಾಸದ ಕ್ಷಣ ಕ್ಷಣದ ಸವಿನೆನಪು ಎಲ್ಲರಲ್ಲೂ ಮನದಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿತು.
Read More

17-09-2017, 1:24 PM
ಸಮಾಜ ವನ್ನು ಕಟ್ಟಬೇಕಾಗಿರುವುದು ಹಣದಿಂದಲ್ಲ. ಬದಲಾಗಿ ನಂಬಿಕೆ ವಿಶ್ವಾಸ ಮತ್ತು ಪ್ರೀತಿಯಿಂದ. ಈ ಮೂರರ ಬಂಧನ ಕಳಚಲಾಗದ್ದು. ಅಂತಹ ಬೆಸುಗೆಯನ್ನು ಯುವವಾಹಿನಿ ಬೆಸೆಯುತ್ತಿದೆ ಎಂದು ಚಿಂತಕ, ಯುವ ಸಂಘಟಕ ಸುನೀಲ್ ಕುಮಾರ್ ಬಜಾಲ್ ತಿಳಿಸಿದರು ಅವರು ದಿನಾಂಕ 17.09.2017 ರಂದು ಬಂಟ್ವಾಳ ತಾಲೂಕಿನ ಮಾಣಿ ನಾರಾಯಣಗುರು ಸಮುದಾಯಭವನದಲ್ಲಿ ಜರುಗಿದ ಯುವವಾಹಿನಿಯ 26ನೇ ನೂತನ ಘಟಕ ಯುವವಾಹಿನಿ (ರಿ) ಮಾಣಿ ಘಟಕದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷರಾದ ಸಂಪತ್ ಬಿ.ಸುವರ್ಣ […]
Read More

09-09-2017, 1:56 PM
ಕೃಷಿಕರಿಗೆ ಸೋಣ ತಿಂಗಳು ಸಂಭ್ರಮದ ತಿಂಗಳು ಆಗಿರುವುದರಿಂದ ಈ ಕಾರ್ಯಕ್ರಮದ ಶೀರ್ಷಿಕೆ ಅರ್ಥಪೂರ್ಣವಾಗಿದೆ.ತಂತ್ರಜ್ಞಾನದಿಂದ ಮನಸ್ಸಿನ ಬದಲಾವಣೆ ಆಗಬಹುದೇ ಹೊರತು ಸಂಸ್ಕೃತಿ, ಸಂಸ್ಕಾರ ಹಾಗೂ ಜೀವನ ಪಾಠವನ್ನು ಕಲಿಸುವುದಿಲ್ಲ ಹಾಗಾಗಿ ಸಂಸ್ಕಾರದ ಜತೆಗೆ ಜೀವನ ಮೌಲ್ಯವನ್ನು ಅಳವಡಿಸುವುದು ಇಂದು ತೀರಾ ಅಗತ್ಯವಾಗಿದೆ ಎಂದು ಮಂಗಳೂರು ಮಹಿಳಾ ಮಂಡಲಗಳ ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ಕೆ.ಎ.ರೋಹಿಣಿ ಅಭಿಪ್ರಾಯ ಪಟ್ಟರು.ಅವರು ದಿನಾಂಕ 09.09.2017 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಜರುಗಿದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ […]
Read More

07-09-2017, 1:27 PM
ಸುದೀರ್ಘ 30 ವರ್ಷಗಳ ಕಾಲ ವಿದ್ಯೆಗೆ ಪ್ರೋತ್ಸಾಹ ನೀಡುತ್ತಿರುವ ಯುವವಾಹಿನಿಯ ಅಧ್ಬುತ ಸಾಧನೆ ಶ್ಲಾಘನೀಯವಾದುದು, ಈ ನಿಟ್ಟಿನಲ್ಲಿ ಯುವವಾಹಿನಿ ಎಲ್ಲರಿಗೂ ಪ್ರೇರಕ ಶಕ್ತಿ .ನಮ್ಮ ಸಂಪಾದನೆಯ ಒಂದಂಶವನ್ನು ಸಮಾಜಕ್ಕೆ ನೀಡಬೇಕು ಎನ್ನುವ ಭಾವನೆ ನಮ್ಮಲ್ಲಿರಬೇಕು, ಪರಸ್ಪರ ಸಹಕಾರದಿಂದ ಸದೃಢ ಸಮಾಜದ ನಿರ್ಮಾಣ ಮಾಡೋಣ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ತಿಳಿಸಿದರು. ಅವರು ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರು ಮಂಗಳಾ ಮ್ಯೂಸಿಕ್ ಕ್ಲಬ್ ಹಾಗೂ ಕನ್ನಡ ಹಾಗೂ ಸಂಸ್ಕ್ರತಿ ಇಲಾಖೆಯ ಸಹಯೋಗದೊಂದಿಗೆ ಯುವವಾಹಿನಿ […]
Read More

06-09-2017, 9:24 AM
ಯುವವಾಹಿನಿ (ರಿ) ಅಡ್ವೆ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಜಯಂತಿ ಪ್ರಯುಕ್ತ ದಿನಾಂಕ 06.09.2017 ರಂದು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ತದನಂತರ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಹಿರಿಯ ಕೃಷಿಕರು ಹಾಗೂ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಬಹಳ ಹಿಂದಿನಿಂದಲೂ ಸೇವೆ ಮಾಡಿಕೊಂಡು ಬಂದಿರುವ ಶ್ರೀ ಸಂಕಪ್ಪ ಪೂಜಾರಿಯವರನ್ನು ಗೌರವಿಸಲಾಯಿತು.
Read More

30-08-2017, 10:46 AM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಕೀಲರ ಸಂಘ ಬೆಳ್ತಂಗಡಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ,ಯುವವಾಹಿನಿ ಸಂಚಾಲನ ಸಮಿತಿ ವೇಣೂರು ಇದರ ಸಹಯೋಗದೊಂದಿಗೆ ದಿನಾಂಕ 30.08.2017 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ನಡೆದ ಕಾನೂನು ಮಾಹಿತಿ ಶಿಬಿರವನ್ನು ಬೆಳ್ತಂಗಡಿ JMFC ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾದ ಸತೀಶ್ ಉದ್ಘಾಟಿಸಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗುರುನಾರಾಯಣ ಸ್ವಾಮೀ ಸೇವಾ ಸಂಘದ ಮಾಜಿ ನಿರ್ದೇಶಕ, ಕೊಕ್ರಾಡಿ SDMC ಅಧ್ಯಕ್ಷ ಸೂರ್ಯನಾರಾಯಣ ಡಿ.ಕೆ.ವಹಿಸಿ ಸತತ ಮೂರು ವರ್ಷಗಳಿಂದ ಕಾನೂನು […]
Read More

26-08-2017, 9:06 AM
ಬೆಳ್ತಂಗಡಿ ತಾಲೂಕಿನ ಹಳೇಕೋಟೆ ಬಾರ್ಯ ನಿವಾಸಿ ಶ್ರೀಮತಿ ರತ್ನ ಹಾಗೂ ಶ್ರೀ ಸುಂದರ ಬಂಗೇರ ದಂಪತಿಗಳ ಹೆಮ್ಮೆಯ ಸುಪುತ್ರರಾದ ಸ್ಮಿತೇಶ್ ಎಸ್. ಬಾರ್ಯ ಇವರು ನಾಟಕರಂಗ ಮತ್ತು ಸಾಂಸ್ಕ್ರತಿಕ ರಂಗದಲ್ಲಿ ಸಾಧನೆಗೈದು ಎಲ್ಲರ ಗಮನ ಸೆಳೆದವರು.Msc. In Psychology ಪದವಿ ಗಳಿಸಿರುವ ಇವರು ಪ್ರಸ್ತುತ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ಉಪನ್ಯಾಸಕರಾಗಿದ್ದಾರೆ. 500ರಕ್ಕೂ ಮಿಕ್ಕಿ ಸಾಂಸ್ಕ್ರತಿಕ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಇವರದು. 25ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯ ಹಾಗೂ 20ಕ್ಕೂ ಮಿಕ್ಕಿ ನಾಟಕಗಳ ನಿರ್ದೇಶನ ಮಾಡಿರುವ ಇವರು […]
Read More

19-08-2017, 9:21 AM
ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಆಯೋಜಿಸಲ್ಪಟ್ಟ 6ತಿಂಗಳ ಉಚಿತ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ದಿನಂಕ 19-08-2017ರಂದು ಉಜ್ಜೋಡಿ ಗೋರಿಗುಡ್ಡೆಯಲ್ಲಿ ನಡೆಯಿತು. ಸಮಾರಂಭದ ಅದ್ಯಕ್ಷತೆಯನ್ನು ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಗೋಪಾಲ.ಎಂ ಪೂಜಾರಿ ವಹಿಸಿದ್ದರು. ಕೆ.ಪಿ.ಟಿಯ Co-ordinator ಆದ ಗೀತಾಜೈನ್ ರವರು ಹಾಗೂ ಹೊಲಿಗೆ ತರಬೇತಿ ನೀಡಿದ ಶಿಕ್ಷಕಿಯಾದ ಶ್ರೀಮತಿ ಕಾಂತಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ತರಬೇತಿ ಪಡೆದ ಮಹಿಳಾ ಸದಸ್ಯರು ಹಾಗೂ ಘಟಕದ ಮಾಜಿ ಅಧ್ಯಕ್ಷರು, ನಿಕಟಪೂರ್ವ ಅಧ್ಯಕರು, ಉಪಾಧ್ಯಕ್ಷರು ಹಾಗೂ ಸದಸ್ಯರು ಭಾಗವಾಹಿಸಿದರು. ಹೊಲಿಗೆ ತರಬೇತಿ ನಡೆನಲು, 6 […]
Read More

18-08-2017, 7:39 AM
ಯುವವಾಹಿನಿ(ರಿ) ಸುಳ್ಯ ಘಟಕ ವತಿಯಿಂದ ಸೊಳ್ಳೆ ಗಳಿಂದ ಹರಡುವ ರೋಗಗಳ ಮಾಹಿತಿ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕರಪತ್ರಗಳ ಬಿಡುಗಡೆ ಕಾರ್ಯಕ್ರಮ ಸುಳ್ಯದ ಕಲ್ಕುಡ ದೈವಸ್ಥಾನದ ವಠಾರದಲ್ಲಿ ದಿನಾಂಕ 18-8-2017ರ ಶುಕ್ರವಾರ ನಡೆಯಿತು. ಸುಳ್ಯ ನಗರ ಪಂಚಾಯತ್ ನ ಆರೋಗ್ಯ ನಿರೀಕ್ಷಕರಾದ ರವಿ ಕೃಷ್ಣ .ಡಿ ರವರು ಕರ ಪತ್ರ ಬಿಡುಗಡೆಗೊಳಿಸಿದರು. ಯುವವಾಹಿನಿ(ರಿ) ಸುಳ್ಯ ಘಟಕದ ಅಧ್ಯಕ್ಷರಾದ ಶಿವಪ್ರಸಾದ್. ಕೆ.ವಿ ಸ್ವಾಗತಿಸಿದರು, ರವಿಕುಮಾರ್. ಎಚ್, ರವಿಕಿರಣ್ , ರಂಜಿತ್ ಪೂಜಾರಿ , ಭರತ್ ಶಾಂತಿನಗರ , ಸುಂದರ […]
Read More